ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಅವರು ಇಂದು ನಾಮಪತ್ರ ಸಲ್ಲಿಸಿದ್ದು, ಅದಕ್ಕೂ ಮುಂಚಿತವಾಗಿ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಾಮಪತ್ರಕ್ಕೆ ಪೂಜೆಯನ್ನು ಸಲ್ಲಿಸಿದರು. ನಂತರ ನಗರದ ಜಿಲ್ಲಾಧಿಕಾರಿ ಕಚೇರಿ ವರೆಗೆ ಮೆರವಣಿಗೆಯಲ್ಲಿ ಸಾಗಿ ಬಂದು ಜಿಲ್ಲಾಧಿಕಾರಿಗೆ ನಾಮಪತ್ರ ಸಲ್ಲಿಸಿದರು. ಈ ವೇಳೆ ಜಿಲ್ಲಾ ಉಸ್ತುವಾರಿ
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಏಪ್ರಿಲ್ 3ರಂದು ಉಮೇದುವಾರಿಕೆ ಸಲ್ಲಿಸಲಿದ್ದಾರೆ. ಲೋಕಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿ ಕೆ.ಜೆ. ಜಾರ್ಜ್ ನಾಮಪತ್ರ ಸಲ್ಲಿಕೆಯ ನೇತೃತ್ವ ವಹಿಸಲಿದ್ದಾರೆ. ಚಿಕ್ಕಮಗಳೂರಿನ ಕಾಂಗ್ರೆಸ್ ಶಾಸಕರಾದ ಹೆಚ್. ಡಿ ತಮ್ಮಯ್ಯ, ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ, ಶೃಂಗೇರಿ ಟಿಡಿ ರಾಜೇಗೌಡ, ತರೀಕೆರೆ ಶಾಸಕ ಜಿ.ಹೆಚ್ ಶ್ರೀನಿವಾಸ್, ಎರಡು ಜಿಲ್ಲೆಯ ಜಿಲ್ಲಾಧ್ಯಕ್ಷರುಗಳು , ಸ್ಥಳೀಯ
ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಏ.3ರಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಕೇಂದ್ರ ಮಾಜಿ ಸಚಿವ, ಹಿಂದೂ ಫೈರ್ ಬ್ರಾಂಡ್ ಬಸನಗೌಡ ಪಾಟೀಲ್ ಯತ್ನಾಳ್, ಸಿಟಿ ರವಿ, ಸುನೀಲ್ ಕುಮಾರ್ ಈ ಸಂದರ್ಭದಲ್ಲಿ ಭಾಗಿಯಾಗಲಿದ್ದಾರೆ. ಉಡುಪಿ ಶಾಸಕ ಯಶ್ ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಗುರುರಾಜ್ ಗಂಟಿಹೊಳೆ, ಚಿಕ್ಕಮಗಳೂರಿನ ನಾಲ್ವರು ಮಾಜಿ ಶಾಸಕರು ಕಾರ್ಯಕರ್ತರ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ನಾಮಪತ್ರ
ಬಂಟ್ವಾಳ: ದ.ಕ.ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಸಮಿತಿ ಉಪಾಧ್ಯಕ್ಷ, ಸಾಮಾಜಿಕ ಹಾಗೂ ಆರ್ಟಿಐ ಕಾರ್ಯಕರ್ತ ಪದ್ಮನಾಭ ಸಾವಂತ ಅವರ ಸಾವು ಮೇಲ್ನೋಟಕ್ಕೆ ಆತ್ಮಹತ್ಯೆಯಂತೆ ಕಂಡು ಬಂದರೂ ಸರಿಯಾಗಿ ಪರಿಶೀಲಿಸಿದರೆ ಇದೊಂದು ಕೊಲೆ ಎನ್ನುವ ಅನುಮಾನ ವ್ಯಕ್ತವಾಗುತ್ತಿದೆ ಎಂದು ಕೆಪಿಸಿಸಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಆರೋಪಿಸಿದ್ದಾರೆ.ಬಿ.ಸಿ.ರೋಡಿನ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಪದ್ಮನಾಭ ಸಾಮಂತ್ ಆರ್ಟಿಐ
ಮೂಡುಬಿದಿರೆ: ಸುಮಾರು 800 ವರ್ಷಗಳ ಇತಿಹಾಸವನ್ನು ಹೊಂದಿರುವ ತಾಲೂಕಿನ ವಿಶೇಷವಾದ ಕ್ಷೇತ್ರ ಶ್ರೀ ಕ್ಷೇತ್ರ ಬನ್ನಡ್ಕದಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಬ್ರಹ್ಮಕಲಶೋತ್ಸವ ಮತ್ತು ವರ್ಷಾವಧಿ ನೇಮೋತ್ಸವವು ಸಂಭ್ರಮದಿಂದ ನಡೆಯಲಿದೆ.ವೇದಮೂರ್ತಿ ಅನಂತ ಪದ್ಮನಾಭ ಅಸ್ರಣ್ಣರ ನೇತ್ರತ್ವದಲ್ಲಿ ಏ.2 ರಂದು ಬೆಳಿಗ್ಗೆ ನೂತನ ಧ್ವಜಸ್ತಂಭ ಪ್ರತಿಷ್ಠೆ, ತೋರಣ ಮುಹೂರ್ತ, ಉಗ್ರಾಣ ಮುಹೂರ್ತ, ಪುಣ್ಯಯ ಗಣಹೋಮ ನಡೆಯಲಿದೆ ಎಂದು ಸಮಿತಿಯ
ಮೂಡುಬಿದಿರೆ: ದ.ಕ.ಜಿಲ್ಲೆಯಲ್ಲಿ ಕಳೆದ 32 ವರ್ಷಗಳಿಂದ ಬಿಜೆಪಿಯ ಸಂಸದರಿದ್ದರು. ಆದರೆ ಜಿಲ್ಲೆಯಲ್ಲಿ ಏನು ಅಭಿವೃದ್ಧಿ ಆಗಿದೆ. ಮನು ಸಂಸ್ಕೃತಿಯನ್ನು ಪ್ರತಿಪಾದಿಸುವ ಬಿಜೆಪಿಯು ಅಧಿಕಾರಕ್ಕೆ ಬರಬಾರದು ಆದ್ದರಿಂದ ನಾವು ಕಾಂಗ್ರೆಸ್ ನ ಪದ್ಮರಾಜ್ ಗೆ ಮತವನ್ನು ಹಾಕಿ ಬಿಜೆಪಿಯನ್ನು ಸೋಲಿಸಬೇಕು ಎಂದು ಸಿಪಿಐಎಂನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯಾದವ ಶೆಟ್ಟಿ ಕರೆ ನೀಡಿದರು. ಅವರು ಸಮಾಜ ಮಂದಿರದಲ್ಲಿ ನಡೆದ ಸಿಪಿಐಎಂ ಪಕ್ಷದ ಮೂಡುಬಿದಿರೆ ತಾಲೂಕು ಮಟ್ಟದ ರಾಜಕೀಯ
ಪುತ್ತೂರು: ಪುತ್ತೂರು ದರ್ಬೆ ಸಂತೃಪ್ತಿ ಹೋಟೆಲ್ ಹಿಂಬದಿ ಹರ್ಷ ಶೋರೂಮ್ ಗೋದಾಮ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಕೋಟ್ಯಾಂತರ ಮೌಲ್ಯದ ಸೊತ್ತುಗಳು ಹಾನಿಗೊಂಡಿವೆ. ಅಗ್ನಿ ಶಾಮಕದಳದವರು ಬೆಂಕಿಯನ್ನು ನಂದಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ.ಪುತ್ತೂರು ನಗರ ಪೊಲೀಸರು ಸಹಕರಿಸುತ್ತಿದ್ದಾರೆ.
ಪ್ರತಿ ವರ್ಷ ಏಪ್ರಿಲ್ ಎರಡರಂದು ವಿಶ್ವದಾದ್ಯಂತ ವಿಶ್ವ ಆಟಿಸಂ ದಿನ ಆಚರಿಸಲಾಗುತ್ತದೆ. ಆಟಿಸಂ ರೋಗದ ಬಗ್ಗೆ ಇರುವ ತಪ್ಪು ಕಲ್ಪನೆಗಳು ಮತ್ತು ಮೂಢನಂಬಿಕೆಗಳನ್ನು ತೊಡೆದು ಹಾಕಿ ಜನರಲ್ಲಿ ಈ ರೋಗದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಈ ಆಚರಣೆಯನ್ನು 2007ರಲ್ಲಿ ಯುನೈಟೆಡ್ ಜನರಲ್ ಅಸೆಂಬ್ಲಿ ಜಾರಿಗೆ ತಂದಿತು. ಕಳೆದ ೧೬ ವರ್ಷಗಳಲ್ಲಿ ಸಾವಿರಾರು ಇಂತಹ ಜಾಗೃತಿ ಕಾರ್ಯಕ್ರಮಗಳು ಜಗತ್ತಿನಾದ್ಯಂತ ನಡೆದು, ಜನರಲ್ಲಿ ಈ ರೋಗದ ಬಗ್ಗೆ ಜಾಗೃತಿ ಮೂಡಿಸುವಲ್ಲಿ
ಹಲ್ಲು ನಮ್ಮ ದೇಹದ ಅತ್ಯಂತ ಪ್ರಾಮುಖ್ಯವಾದ ಅಂಗ. ಸುಂದರ ದಂತ ಪಂಕ್ತಿಗಳಿಂದ ಕೂಡಿದ ನಗು ಎಂತವರನ್ನು ಮಂತ್ರ ಮುಗ್ಧವಾಗಿಸುತ್ತದೆ. ಹಲ್ಲು ನಮ್ಮ ದೇಹದ ಮುಂಭಾಗದಲ್ಲಿ ಇರುವ ಕಾರಣದಿಂದಲೇ ಯಾವುದೇ ಆಟೋಟಗಳಲ್ಲಿ, ಹೊಡೆದಾಟದಲ್ಲಿ, ಅಪಘಾತದಲ್ಲಿ ಬಿದ್ದು ಹೋಗುವ ಸಾಧ್ಯತೆ ಹೆಚ್ಚಾಗಿರುತ್ತದೆ. ಸಾಮಾನ್ಯವಾಗಿ ಮಕ್ಕಳಲ್ಲಿ ಇದು ಸರ್ವೆ ಸಾಮಾನ್ಯವಾಗಿರುತ್ತದೆ. ಹೀಗೆ ತಮಗರಿಯುವ ಮುನ್ನವೇ ಹಲ್ಲು ತುಂಡಾದಾಗ ಮತ್ತು ಹಲ್ಲು ಹಲ್ಲಿನ ಸಾಕೆಟ್ನಿಂದ ಹೊರಬಿದ್ದಾಗ ಏನು ಮಾಡಬೇಕು
ಲೋಕಸಭಾ ಚುನಾವಣೆಯಲ್ಲಿ ಶ್ರೀ ನಾರಾಯಣ ಗುರು ವಿಚಾರ ವೇದಿಕೆಯ ಸಭೆಯಲ್ಲಿ ಕೈಗೊಳ್ಳಲಾದ ನಿರ್ಣಯದಂತೆ ಬಿಲ್ಲವ ಸಮಾಜಕ್ಕೆ ಶಕ್ತಿ ತುಂಬುವ ನಿಟ್ಟಿನಲ್ಲಿ ದ.ಕ., ಉಡುಪಿ- ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವ ಬಿಲ್ಲವ ಅಭ್ಯರ್ಥಿಗಳನ್ನು ಬೆಂಬಲಿಸಲಿದೆ ಎಂದು ಎಸ್ಎನ್ಜಿವಿ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್ ಹೇಳಿದ್ದಾರೆ. ಅವರು ನಗರದ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ, ಟೀಂ ಸತ್ಯಜಿತ್ ಸುರತ್ಕಲ್ನಲ್ಲಿ