Home Archive by category ಕರಾವಳಿ (Page 121)

ಉಳ್ಳಾಲ: ಬಸ್-ಸ್ಕೂಟರ್ ಗಳ ಸರಣಿ ಅಪಘಾತ, ಕೃಷ್ಣ ಶೆಟ್ಟಿ ತಾಮಾರ್ ಗೆ ಗಾಯ, ಆಸ್ಪತ್ರೆಗೆ ದಾಖಲು

ಉಳ್ಳಾಲ: ಕರ್ನಾಟಕ ಸಾರಿಗೆ ಬಸ್ ಹಾಗೂ ಸ್ಕೂಟರ್‍ಗಳ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಅಡ್ಕ ನಿವಾಸಿ ಕೃಷ್ಣ ಶೆಟ್ಟಿ ತಾಮಾರ್ ಎಂಬವರು ಗಂಭೀರ ಗಾಯಗೊಂಡಿರುವ ಘಟನೆ ಕೋಟೆಕಾರು ಬೀರಿ ಜಂಕ್ಷನ್ ನಲ್ಲಿ ಇಂದು ಸಂಜೆ ವೇಳೆ ಸಂಭವಿಸಿದೆ. ಕೋಟೆಕಾರು ಗ್ರಾಮದ ಕಾರಣೀಕ ಸ್ಥಳ ಕೊಂಡಾಣ ಪಿಲಿಚಾಮುಂಡಿ, ಬಂಟ, ಮುಂಡತ್ತಾಯ ದೈವಸ್ಥಾನದ ವ್ಯವಸ್ಥಾಪನಾ ಸಮಿತಿ

ಬೆಳ್ತಂಗಡಿ: ಅರಣ್ಯ ಭೂಮಿ ಅತಿಕ್ರಮಣಕ್ಕೆ ಸಂಬಂಧಿಸಿದ ಕಳೆಂಜದ ವಿವಾದಿತ ಜಾಗದಲ್ಲಿ ಸರ್ವೆ ಕಾರ್ಯ ಆರಂಭ

ಅರಣ್ಯ ಭೂಮಿ ಅತಿಕ್ರಮಣಕ್ಕೆ ಸಂಬಂಧಿಸಿದಂತೆ ವಿವಾದಕ್ಕೆ ಕಾರಣವಾಗಿದ್ದ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಸರ್ವೇ ನಂಬರ್ 309ರ ಅಂದರೆ ನಿಡ್ಲೆ ವಿಸ್ತೃತ ಬ್ಲಾಕ್ 2ರ ಮತ್ತು ಕಳೆಂಜ ವಿಸ್ತೃತ ಬ್ಲಾಕ್ ನ ಜಂಟಿ ಸರ್ವೆ ಕಾರ್ಯವು ಆರಂಭಗೊಳ್ಳಲಿದೆ. ತಾಲೂಕು ತಹಶೀಲ್ದಾರ್, ಉಪ್ಪಿನಂಗಡಿ ವಲಯ ಅಧಿಕಾರಿ, ಕಂದಾಯ ಅಧಿಕಾರಿಗಳು, ಸರ್ವೆ ಅಧಿಕಾರಿಗಳ ಸಹಭಾಗಿತ್ವದಲ್ಲಿ ಎಡಿಎಲ್ಆರ್ ಸರ್ವೆ ಮೂಲಕ ಸುಮಾರು 8,446 ಎಕರೆಯಷ್ಟು ಪ್ರದೇಶವನ್ನು ಸರ್ವೆ ಮಾಡಲಾಗುವುದು ಎಂದು

ಉಳ್ಳಾಲ: ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತ್ಯು

ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ರಾ.ಹೆ.೬೬ರ ನೇತ್ರಾವತಿ ಸೇತುವೆಯಲ್ಲಿ ನಡೆದಿದೆ. ಮೃತ ಸವಾರನನ್ನು ಮೂಲತಃ ಉಳ್ಳಾಲದ ಪ್ರಸಕ್ತ ಕೋಟೆಕಾರ್‌ನಲ್ಲಿ ನೆಲೆಸುತ್ತಿದ್ದ ಹನೀಫ್ ಎಂಬವರ ಪುತ್ರ ಅಝ್‌ವೀನ್ (21) ಎಂದು ಗುರುತಿಸಲಾಗಿದೆ. ದಕ್ಕೆಗೆ ಮೀನುಗಾರಿಕೆಯ ಕೆಲಸಕ್ಕೆಂದು ಅಝ್‌ವೀನ್ ೩:೩೦ರ ವೇಳೆಗೆ ತೊಕ್ಕೊಟ್ಟಿನಿಂದ ಮಂಗಳೂರು ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದಾಗ ನೇತ್ರಾವತಿ ಸೇತುವೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡರು

ಸುರತ್ಕಲ್: ಸುರತ್ಕಲ್ ರೈಲ್ವೇ ಸೇತುವೆ ಅಕ್ಕಪಕ್ಕದ ರಸ್ತೆ ಗುಂಡಿ ಮುಚ್ಚುವಂತೆ ಡಿವೈಎಫ್‍ಐ ಆಗ್ರಹ

ಸುರತ್ಕಲ್ ರೈಲ್ವೇ ಸೇತುವೆ ಅಕ್ಕಪಕ್ಕದ ರಸ್ತೆ ಗುಂಡಿ ಮುಚ್ಚಿ ವಾಹನ ಸಂಚಾರಕ್ಕೆ ಯೋಗ್ಯ ರಸ್ತೆ ನಿರ್ಮಿಸಲು ಒತ್ತಾಯಿಸಿ ಹಾಗೂ ಟ್ರಾಫಿಕ್ ಸಮಸ್ಯೆಗೆ ಕಾರಣವಾಗುತ್ತಿರುವ ಕೊಂಕಣ ರೈಲ್ವೆ ರೋರೋ ಘಟಕವನ್ನು ಶೀಘ್ರ ಸ್ಥಳಾಂತರಕ್ಕೆ ಆಗ್ರಹಿಸಿ ಡಿವೈಎಫ್‍ಐ ಸುರತ್ಕಲ್ ಘಟಕದಿಂದ ಪ್ರತಿಭಟನೆ ನಡೆಸಿದರು. ಡಿವೈಎಫ್‍ಐ ಜಿಲ್ಲಾ ಅಧ್ಯಕ್ಷರಾದ ಬಿ.ಕೆ ಇಮ್ತಿಯಾಜ್ ಅವರು ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿ, ಸುರತ್ಕಲ್ ಭಾಗದಲ್ಲಿ ರಸ್ತೆ ಹೊಂಡ

ಕುಂದಾಪುರ: ಸೇನಾಪುರ ರೈಲ್ವೇ ನಿಲ್ದಾಣದಲ್ಲಿ ಎಕ್ಸ್‍ಪ್ರೆಸ್ ರೈಲು ನಿಲುಗಡೆಗೆ ಹೋರಾಟ ಸಮಿತಿಯಿಂದ ಆಗ್ರಹ

ಕುಂದಾಪುರದ ಸೇನಾಪುರ ನಿಲ್ದಾಣದಲ್ಲಿ ಎಕ್ಸ್‍ಪ್ರೆಸ್ ರೈಲು ನಿಲುಗಡೆ ಹೋರಾಟ ಸಮಿತಿ ನೇತೃತ್ವದಲ್ಲಿ ಸೇನಾಪುರ ನಿಲ್ದಾಣದಲ್ಲಿ ಎಕ್ಸ್‍ಪ್ರೆಸ್ ರೈಲು ನಿಲುಗಡೆ ಆಗ್ರಹಿಸಿ ಚಲೋ ಸೇನಾಪುರ ಬೃಹತ್ ಪ್ರತಿಭಟನೆ ನಡೆಸಿದರು. ಬೃಹತ್ ಪ್ರತಿಭಟನೆ ಮೆರವಣಿಗೆ ನಾಡಾ ಗ್ರಾಮ ಪಂಚಾಯತ್‍ನಿಂದ ಆರಂಭಗೊಂಡು ಸೇನಾಪುರ ರೈಲ್ವೇ ನಿಲ್ದಾಣದವರೆಗೆ ಸಾಗಿಬಂದು, ಬಳಿಕ ರೈಲ್ವೇ ನಿಲ್ದಾಣದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಹೋರಾಟ ಸಮಿತಿಯ ಸಂಚಾಲಕ ರಾಜೀವ್

ಉಡುಪಿ: ಕೋಟ ಶಿವರಾಮ ಕಾರಂತರ ಜನ್ಮದಿನೋತ್ಸವ: ಸಂಗೀತ ಲೋಕದ ದಿಗ್ಗಜ ಡಾ. ವಿದ್ಯಾಭೂಷಣರಿಗೆ ಹುಟ್ಟೂರ ಪ್ರಶಸ್ತಿ ಪ್ರದಾನ

ಕೋಟದ ಕಾರಂತ ಥೀಮ್ ಪಾರ್ಕ್‍ನಲ್ಲಿ ಡಾ. ಕೋಟ ಶಿವರಾಮ ಕಾರಂತರ ಜನ್ಮದಿನೋತ್ಸವದ ಅಂಗವಾಗಿ ಸಂಗೀತ ಲೋಕದ ದಿಗ್ಗಜ ಡಾ. ವಿದ್ಯಾಭೂಷಣರಿಗೆ ಹುಟ್ಟೂರ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು. ಕೋಟತಟ್ಟು ಗ್ರಾಮ ಪಂಚಾಯತ್, ಡಾ.ಶಿವರಾಮ ಕಾರಂತ ಟ್ರಸ್ಟ್ ಉಡುಪಿ, ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ ಇವರ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ವಿಶೇಷವಾಗಿ ಆಗಮಿಸಿದ್ದ ರಾಜ್ಯಪಾಲ ಥಾವರ್‍ಚಂದ್ ಗೇಹಲೋಟ್‍ರವರಿಗೆ

ಕುಂದಾಪುರ: ಕೊಲ್ಲೂರು ಕ್ಷೇತ್ರಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ವಿಶೇಷ ಪೂಜೆ ಸಲ್ಲಿಕೆ

ಕುಂದಾಪುರ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ ರಾಜ್ಯಪಾಲ ಥ್ಯಾವರ್ ಚಂದ್ ಗೆಹ್ಲೋಟ್ ಅವರು ದೇವರ ದರ್ಶನ ಪಡೆದುಕೊಂಡು ವಿಶೇಷ ಪೂಜೆ ಸಲ್ಲಿಸಿದರು. ದೇಗುಲಕ್ಕೆ ಭೇಟಿ ನೀಡಿದ ರಾಜ್ಯಪಾಲರನ್ನು ಪೂರ್ಣಕುಂಭ ಸ್ವಾಗತದೊಂದಿಗೆ ಬರಮಾಡಿಕೊಳ್ಳಲಾಯಿತು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆರಾಡಿ ಚಂದ್ರಶೇಖರ ಶೆಟ್ಟಿ ಅವರು ರಾಜ್ಯಪಾಲರನ್ನು ಗೌರವಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಗುರುರಾಜ್

ಪಡುಬಿದ್ರಿ: ಕೇವಲ ಸ್ಪರ್ಶದಿಂದಲೇ ನೋವು ನಿವಾರಣೆ ಮಾಡುವ ಶೇಷಾನಂದ..!!

ಕಾಲುಗಳಿಗಿಲ್ಲ ತನ್ನ ಬೇಕು ಬೇಡಗಳನ್ನು ಪೂರೈಸುವ ಶಕ್ತಿ… ಆದರೆ ಜನರ ಉದ್ಧಾರಕ್ಕೂ ಎಂಬಂತೆ ತನ್ನೆಲ್ಲಾ ಸುಖ ಸಂತೋಷಗಳನ್ನು ಬದಿಗೊತ್ತಿ,.. ತನ್ನಲ್ಲಿ ಅಡಕವಾಗಿರುವ ನೋವುಗಳನ್ನು ಮರೆತು ಜನರ ಕಷ್ಟ ಕಾರ್ಪಣ್ಯಗಳಿಗೆ ಸ್ಪಂದಿಸುತ್ತಾರೆ. ಇದೀಗ ಪಡುಬಿದ್ರಿಯ ಸುಜ್ಲಾನ್ ಕಾಲೋನಿಯ ಒಂದು ಮನೆಯಲ್ಲಿ ಜನರ ಸೇವೆಗೆ ಲಭ್ಯವಿದ್ದಾರೆ. ಕೇರಳ ಮೂಲದ “ಶೇಷಾನಂದ” ವಯಸ್ಸು ಕೇವಲ ಮೂವತ್ತ ನಾಲ್ಕು, ವಿದ್ಯಾಭ್ಯಾಸ ರಹಿತವಾಗಿರುವ ಇವರು ಕನ್ನಡ, ಹಿಂದಿ, ಮಲಯಾಳಂ ಸಹಿತ

ಪಿಲಿಪರ್ಬ ಆಮಂತ್ರಣ ಪತ್ರಿಕೆ ಬಿಡುಗಡೆ

ಮಂಗಳೂರಿನ ಕಲೆ, ಸಂಸ್ಕೃತಿಯನ್ನು ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ಆರಂಭವಾಗಿರುವ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಇದರ ಎರಡನೇ ವರ್ಷದ ಪಿಲಿಪರ್ಬದ ಆಮಂತ್ರಣ ಪತ್ರಿಕೆಯನ್ನು ಪ್ರತಿಷ್ಠಾನದ ಮಾರ್ಗದರ್ಶಕರೂ, ಸಂಸದರೂ, ಭಾಜಪಾ ರಾಜ್ಯಾಧ್ಯಕ್ಷರೂ ಆಗಿರುವ ನಳಿನ್ ಕುಮಾರ್ ಕಟೀಲ್ ಮಂಗಳೂರಿನಲ್ಲಿ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಮಂಗಳೂರಿನ ಕೇಂದ್ರ ಮೈದಾನದಲ್ಲಿ ಅಕ್ಟೋಬರ್ 21 ರಂದು ನಡೆಯುವ ಪಿಲಿಪರ್ಬ ಈ ವರ್ಷವೂ ಆದ್ದೂರಿಯಾಗಿ ನಡೆಯಲಿದೆ.

ಇಸ್ರೇಲ್‍ನಲ್ಲಿದ್ದ ಕರಾವಳಿಗರ ರಕ್ಷಣೆಯ ಕೆಲಸ ಸರ್ಕಾರ ಮಾಡಲಿದೆ: ಸಂಸದ ನಳಿನ್ ಕುಮಾರ್ ಕಟೀಲ್

ಇಸ್ರೇಲ್ ನಲ್ಲಿರುವ ಕರಾವಳಿಯ ಜನರನ್ನು ಸುರಕ್ಷಿತವಾಗಿ ಕರೆತರುವ ಕೆಲಸವನ್ನು ಕೇಂದ್ರ ಸರಕಾರ ಮಾಡುತ್ತದೆ. ಯಾರೂ ಭಯ ಪಡುವ ಅಗತ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಈ ಕುರಿತು ಮಾಧ್ಯಮದೊಂದಿಗೆ ಮಾತನಾಡಿದ ನಳಿನ್ ಕುಮಾರ್ ಕಟೀಲ್ ಅವರು, ಯಾರು ಭಯ ಪಡಬೇಕಾಗಿಲ.್ಲ ಇಸ್ರೇಲ್‍ನಲ್ಲಿ ಐದು ಸಾವಿರ ದ.ಕ ಜಿಲ್ಲೆಯ ಜನರು ಇದ್ದಾರೆಂಬ ಮಾಹಿತಿ ಇದೆ. ಈಗಾಗಲೇ ವಿದೇಶಾಂಗ ಇಲಾಖೆ ಸಚಿವರಿಗೆ ಪತ್ರ ಬರೆದಿದ್ದೇನೆ, ಯಾರಿಗೂ