ಮೂಡುಬಿದಿರೆ: ರೋಟರಿ ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟ್ಸ್ ಗೈಡ್ಸ್ ಘಟಕ, ಇಂಟರಾಕ್ಟ್ ಕ್ಲಬ್, ಶಾಲಾ ಸಂಸತ್ತು ಹಾಗೂ ಮೂಡುಬಿದಿರೆ ಪುರಸಭೆಯ ಸಂಯುಕ್ತ ಆಶ್ರಯದಲ್ಲಿ ಪ್ಲಾಸ್ಟಿಕ್ ಮುಕ್ತ ಪರಿಸರ ಸಂರಕ್ಷಣಾ ಅಭಿಯಾನ ಮೂಡುಬಿದಿರೆ ಮಾರುಕಟ್ಟೆ ಸಮೀಪ ನಡೆಯಿತು. ಪುರಸಭಾ ಮುಖ್ಯಾಧಿಕಾರಿ ಶಿವ ನಾಯಕ್ ಅಭಿಯಾನಕ್ಕೆ ಚಾಲನೆ ನೀಡಿ ಪ್ಲಾಸ್ಟಿಕ್ ನ ದುಷ್ಪರಿಣಾಮಗಳ ಬಗ್ಗೆ
ಕುಂದಾಪುರ; ಬೈಂದೂರಿನ ಬಾರ್ವೂಂದರ ಮುಂಭಾಗದಲ್ಲಿ ಕಂಠಪೂರ್ತಿ ಕುಡಿದು ಪುಡಿ ರೌಡಿಗಳ ತಂಡ ಅಟ್ಟಹಾಸ ಮೆರೆದಿರುವ ಘಟನೆ ಬೈಂದೂರಿನಲ್ಲಿ ನಡೆದಿದೆ. ವಾಹನ ಅಡ್ಡ ಬಂದ ಕಾರಣ ಆರಂಭವಾದ ವಾಗ್ವಾದ, ಪರಸ್ಪರ ಹಲ್ಲೆ ನಡೆಸಿದ್ದಾರೆ. ಟಾಟಾ ಏಸ್ ವಾಹನದಲ್ಲಿದ್ದ ರಮೇಶ್ ದೇವಾಡಿಗ ಹಾಗೂ ರವಿ ಪೂಜಾರಿ ಮೇಲೆ ಪುಡಿ ರೌಡಿಗಳಿಂದ ಹಲ್ಲೆ ನಡೆದಿದೆ ಪಾರ್ಕಿಂಗ್ ನಿಲ್ಲಿಸಿದ ವಾಹನದ ಗಾಜನ್ನು ಹೆಲ್ಮೆಟ್ ಮತ್ತು ಸೋಡಾ ಬಾಟಲಿಗಳಿಂದ ಜಖಂಗೊಳಿಸಿದ್ದಾರೆ. ಪ್ರಕರಣದ ದೃಶ್ಯಾವಳಿ
ಪುತ್ತೂರು : ಮಳೆಗಾಲ ಬಂತಂದ್ರೆ ಸಾಕು ರಸ್ತೆಗಳೆಲ್ಲ ಹದಗೆಡೋದನ್ನ ನೋಡ್ಬೋದು ಆದ್ರೆ ಈ ಊರಲ್ಲಿ ಮಳೆ ಬಂದ್ರೂ ಅದೇ ಕಥೆ ಮಳೆ ಬರದಿದ್ರೂ ಅದೇ ವ್ಯಥೆ… ಹೌದು..ಕಬಕ ಗ್ರಾಮದ ಕಬಕಬೈಲು ಎಂಬಲ್ಲಿ 10ವರ್ಷದಿಂದ ಇದೇ ಸಮಸ್ಯೆ…ಮಣ್ಣಿನ ರಸ್ತೆಯಿದ್ದು ಮಳೆಯಿದ್ದಾಗಂತು ಹೇಳೋದೆ ಬೇಡ ಇಡೀ ರಸ್ತೆ ಕೆಸರುಮಯ.. ವಾಹನ ಸವಾರರಂತೂ ಎದ್ದೂ ಬಿದ್ದು ಹೋಗೋ ಪರಿಸ್ಥಿತಿ. ಅದೆಷ್ಟೋ ಬಾರಿ ವಾಹನಗಳು ಕೆಸರಿಗೆ ಜಾರಿದ ಉದಾಹರಣೆಗಳು ಕೂಡಾ ಇದೆ. ಇನ್ನು ನಿತ್ಯ ಪಾದಚಾರಿಗಳ ಪರಿ ಕೇಳೋದೇ
ಪುತ್ತೂರು; ದಲಿತ ಸಂಘಟನೆಯೊಂದರ ಮುಖಂಡರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ನಡೆಸುವುದರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಜಿಲ್ಲಾ ದಲಿತ್ ಸೇವಾಸಮಿತಿ ಈ ಬಗ್ಗೆ ಕಾನೂನು ಸಮರ ನಡೆಸಲು ತೀರ್ಮಾನಿಸಿದ್ದು, ಕಾನೂನು ಹೋರಾಟಕ್ಕೆ ಬೆಲೆ ಸಿಗದಿದ್ದರೆ ಬೀದಿಗಿಳಿದು ಹೋರಾಟ ನಡೆಸುವ ಎಚ್ಚರಿಕೆ ನೀಡಿದೆ. ಪುತ್ತೂರು ಪತ್ರಿಕಾಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಸಮಿತಿ ಕಾರ್ಯಾಧ್ಯಕ್ಷ ಚಂದ್ರಶೇಖರ್ ವಿಟ್ಲ ಮಾತನಾಡಿ, ನೆಲ್ಯಾಡಿ ಭಾಗದಲ್ಲಿ ಜಮೀನಿನ
ಮಂಗಳೂರು ನಗರದಾದ್ಯಂತ ಮಾದಕ ವಸ್ತುವಾದ ಎಂಡಿಎಂಎಯನ್ನು ಮಾರಾಟ ಮಾಡುತ್ತಿದ್ದ ಮೂವರು ಕುಖ್ಯಾತ ಡ್ರಗ್ ಪೆಡ್ಲರ್ಗಳನ್ನು ಸಿಸಿಬಿ ಪೊಲೀಸರ ಯಶಸ್ವಿ ಕಾರ್ಯಾಚರಣೆ ಮೂಲಕ ಬಂಧಿಸಲಾಗಿದೆ. ಸುಮಾರು 9ಲಕ್ಷದ ಮೌಲ್ಯದ ಎಂಡಿಎಂಎ ಡ್ರಗ್ಸ್ ಹಾಗೂ ಪಿಸ್ತೂಲ್ , ಡ್ರಾಗನ್ ಚೂರಿ ವಶಕ್ಕೆ ಪಡೆಯಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಹೇಳಿದ್ದಾರೆ. ಅವರು ಮಂಗಳೂರಿನ ಕಮೀಷನರ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಉಳ್ಳಾಲ ತಾಲೂಕು ತಲಪಾಡಿ
ಇತ್ತೀಚೆಗೆ ನಡೆದ ಎರಡು ನೈತಿಕ ಪೊಲೀಸ್ಗಿರಿ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಮೂವರು ಹಿಂದೂಪರ ಸಂಘಟನೆ ಕಾರ್ಯಕರ್ತರಿಗೆ ಗಡಿಪಾರು ನೋಟಿಸ್ ನೀಡಲಾಗಿದೆ. ಕಳೆದ ಒಂದು ವರ್ಷದಲ್ಲಿ 60 ಇಂತಹ ರೌಡಿ ಶೀಟರ್ ಗಳನ್ನು ಗಡಿಪಾರು ಮಾಡಲು ಕ್ರಮ ವಹಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮಗೆ ಆರೋಪಿಗಳು ಯಾವ ಸಂಘಟನೆ ಅನ್ನೋದು ನಮಗೆ ಬೇಡ. ನಿರಂತರ ಸಮಾಜ ವಿರೋಧಿ ಚಟುವಟಿಕೆಗಳನ್ನು
ಕರುನಾಡ ರತ್ನ ಪ್ರಶಸ್ತಿಗೆ ಕೆ.ಎಂ.ಖಲೀಲ್ ಆಯ್ಕೆ ಕಾರ್ಕಳ: ಸುಮಾರು 40 ವರ್ಷಗಳಿಂದ ಛಾಯಾಗ್ರಾಹಕ ಹಾಗೂ ವಿಡಿಯೋ ಗ್ರಾಫರ್ ಆಗಿ ದುಡಿಯುತ್ತಿರುವ ಅದರ ಜೊತೆಗೆ 17 ವರ್ಷಗಳಿಂದ ಮಂಗಳೂರಿನ ಪ್ರತಿಷ್ಠಿತ v4 ಸುದ್ದಿವಾಹಿನಿಯಕಾರ್ಕಳ ತಾಲೂಕಿನ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಎಂ.ಖಲೀಲ್ ಅವರ ಮಾಧ್ಯಮ ಕ್ಷೇತ್ರದ ಸಾಧನೆಗಾಗಿ ಈ ವರ್ಷದ ಕರುನಾಡ ರತ್ನ ಪ್ರಶಸ್ತಿ ನೀಡಲಾಗುತ್ತಿದೆ ಎಂದು ಸಂಘಟಕ ಡಾ.ಬಿ.ಎನ್.ಹೊರಪೇಟಿ ತಿಳಿಸಿದ್ದಾರೆ. ಬೆಂಗಳೂರಿನ ಸುಚಿತ್ರ
ನಗರದ ಕಾರ್ ಸ್ಟ್ರೀಟ್ನಲ್ಲಿರುವ ಮನೋಹರ್ ಶೇಠ್ ಮಾಲೀಕತ್ವದ ಅಂಗಡಿ ಮತ್ತು ಉತ್ತರ ಪ್ರದೇಶ ಮೂಲದ ಬೆಚನ್ ಸೋನಾರ್ ಅವರ ಮಾಲೀಕತ್ವದ ಫಳ್ನೀರ್ನಲ್ಲಿರುವ ಮತ್ತೊಂದು ಅಂಗಡಿಯಿಂದ ಚಾಕೊಲೇಟ್ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಡ್ರಗ್ಸ್ ಲೇಪಿತ ಚಾಕೊಲೇಟ್ಗಳ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಮಂಗಳೂರು ದಕ್ಷಿಣ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಮಾದಕ ದ್ರವ್ಯ ಮಿಶ್ರಿತ ಚಾಕೊಲೇಟ್ಗಳನ್ನು ‘ಬ್ಯಾಂಗ್’ ಚಾಕೊಲೇಟ್ಗಳ
ಪುತ್ತೂರು ತಾಲೂಕಿನ ಕೊಳ್ತಿಗೆ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಪಾಲ್ತಾಡು ಶಾಖಾ ವ್ಯವಸ್ಥಾಪಕರಾದ ಜಯರಾಮ ಗೌಡ ಅವರು ಇತ್ತೀಚೆಗೆ ನಿಧನರಾಗಿದ್ದು, ಅವರಿಗೆ ನುಡಿನಮನ ಕಾರ್ಯಕ್ರಮವು ಪೆರ್ಲಂಪಾಡಿಯ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಸಮಾಜಕ್ಕೆ ಸ್ಫೂರ್ತಿಯ ಚಿಲುಮೆಯಾಗಿದ್ದಂತಹ ಜಯರಾಮ ಗೌಡ ಅವರ ಅಗಲಿಕೆ ಇಡೀ ಕುಟುಂಬಕ್ಕೆ, ಬಂಧು ಮಿತ್ರರಿಗೆ ತುಂಬಲಾರದ ನಷ್ಟ. ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಕಾರ್ಯಕ್ರಮವು ಪೆರ್ಲಂಪಾಡಿಯ ಅಂಬೇಡ್ಕರ್ ಭವನದಲ್ಲಿ ನಡೆಯಿತು.
ನಿಟ್ಟೆ ಲೆಮಿನಾ ಫೌಂಡ್ರಿ ಸಂಸ್ಥೆಯ ಕಾರ್ಮಿಕರೂ,CITU ಸದಸ್ಯರಾದ ಉಮೇಶ್ ಪೂಜಾರಿಯವರು ತಾ.17-07-2023ರಂದು ರಾತ್ರಿ ಪಾಳಯದಲ್ಲಿ ಕಂಪೆನಿಯಲ್ಲಿ ದುಡಿಯುತ್ತಿದ್ದಾಗ,ಅವಘಡ ಸಂಭವಿಸಿದ್ದು,ಕೂಡಲೇ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಕೊಡಿಸಲಾಯಿತು. ಬಳಿಕ ಮನೆಗೆ ತೆರಳಿದ ಉಮೇಶ್ ರವರು ಮಂಗಳವಾರ ದಿನವಿಡೀ ಮನೆಯಲ್ಲಿ ವಿಶ್ರಾಂತಿ ಪಡೆದು ಬುಧವಾರ ಮತ್ತೆ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದು ಮನೆಗೆ ವಾಪಸಾಗುತ್ತಾರೆ.ಕಾಲಿಗೆ ಸಂಪೂರ್ಣವಾಗಿ ಬ್ಯಾಂಡೇಜ್ ಹಾಕಿದ್ದರಿಂದ