Home Archive by category ಕರಾವಳಿ (Page 183)

ಚಾರ್ಮಾಡಿ ಘಾಟಿ : ಜಲಪಾತ ವೀಕ್ಷಿಸುತ್ತಿರುವ ಮಂದಿ, ವಾಹನ ಸಂಚಾರಕ್ಕೆ ತೊಡಕು

ಚಾರ್ಮಾಡಿ ಘಾಟಿ ಪರಿಸರದಲ್ಲಿ ಕಳೆದ ಎರಡು ದಿನಗಳಿಂದ ಹಗಲಲ್ಲೂ ದಟ್ಟ ಮಂಜಿನ ವಾತಾವರಣ ಕಂಡುಬರುತ್ತಿದ್ದು, ವಾಹನ ಸವಾರರು ಪರದಾಟ ನಡೆಸುತ್ತಾ ಚಾಲನೆ ಮಾಡಬೇಕಾದ ಪರಿಸ್ಥಿತಿ ಇದೆ. ಕಳೆದ ಕೆಲವು ದಿನಗಳಿಂದ ನಿರಂತರ ಮಳೆ ಸುರಿದಿದ್ದು, ಪ್ರಸ್ತುತ ಬಿಟ್ಟು ಬಿಟ್ಟು ಮಳೆಯಾಗುತ್ತಿದೆ. ಈ ಸಮಯ ಘಾಟಿಯಲ್ಲಿ ದಟ್ಟವಾದ ಮಂಜಿನ ವಾತಾವರಣ ಏರ್ಪಟ್ಟು ವಾಹನಗಳ ಹೆಡ್ಲೈಟ್

ಬೆಳ್ಳಾರೆ ಗೃಹ ರಕ್ಷಕ ಘಟಕದ ಹಿರಿಯ ಗೃಹ ರಕ್ಷಕ ಹೂವಪ್ಪ ವಿಧಿವಶ

ಬೆಳ್ಳಾರೆ ಗೃಹ ರಕ್ಷಕ ಘಟಕದ ಹಿರಿಯ ಗೃಹ ರಕ್ಷಕ ಕೇನ್ಯ ಗ್ರಾಮದ ಕಣ್ಕಲ್ ಹೂವಪ್ಪರು ಜು. 25ರಂದು ನರ ಸಂಬಂಧಿ ಕಾಯಿಲೆಯಿಂದ ಪುತ್ತೂರಿನ ಸರಕಾರಿ ಆಸ್ಪತ್ರೆಯಲ್ಲಿ ನಿಧನರಾದರು. ಇವರಿಗೆ ಅಂದಾಜು 55 ವರ್ಷ ವಯಸ್ಸಾಗಿತ್ತು. ಮುಖ್ಯ ಮಂತ್ರಿ ಚಿನ್ನದ ಪದಕಕ್ಕೆ ಭಾಜನರಾಗಿದ್ದ ಹೂವಪ್ಪರ ನಿಧನಕ್ಕೆ ದ.ಕ ಜಿಲ್ಲಾ ಗೃಹ ರಕ್ಷಕ ದಳದ ಸಮಾದೇಷ್ಟರಾದ ಡಾ ಮುರಲಿ ಮೋಹನ್ ಚೂಂತಾರು ಸಂತಾಪ ವ್ಯಕ್ತಪಡಿಸಿಹೂವಪ್ಪರು ನಿಷ್ಠಾವಂತ, ಪ್ರಾಮಾಣಿಕ ಮತ್ತು ಮಾದರಿ ಗೃಹರಕ್ಷಕರಾಗಿದ್ದರೆಂದು

ಸುಳ್ಯ ತಾಲೂಕು ಪಂಚಾಯತ್ ಕಾರ್ಯನಿರ್ವಾಕ ಅಧಿಕಾರಿ ಭವಾನಿಶಂಕರ್ ವರ್ಗಾವಣೆ

ಸುಳ್ಯ ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿಯಾಗಿ ಎನ್.ಭವಾನಿಶಂಕರ್ ಅವರಿಗೆ ವರ್ಗಾವಣೆಗೊಂಡಿದ್ದಾರೆ. ಎಂಟು ವರ್ಷಗಳಿಂದ ಸುಳ್ಯ ತಾಲೂಕು ಪಂಚಾಯತ್ನಲ್ಲಿ ಕಾರ್ಯನಿರ್ವಹಿಸುತ್ತಿರುವ ಭವಾನಿಶಂಕರ್ ಅವರು 4 ವರ್ಷಗಳ ಕಾಲ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕರಾಗಿ ಮತ್ತು 4 ವರ್ಷಗಳಿಂದ ಸುಳ್ಯ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸುಳ್ಯಕ್ಕೆ ಬಂಟ್ವಾಳ ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಣಾಧಿಕಾರಿ ರಾಜಣ್ಣ

ಉಜಿರೆ ಎಸ್.ಡಿ.ಎಂ. ಕಾಲೇಜಿನ ಕಚೇರಿ ಅಧೀಕ್ಷಕರಾಗಿ ದಿವಾಕರ ಪಟವರ್ಧನ್ ನೇಮಕ

ಉಜಿರೆ, ಜು.17: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಕಚೇರಿ ಅಧೀಕ್ಷಕರಾಗಿ ದಿವಾಕರ ಪಟವರ್ಧನ್ ಮುಂಡಾಜೆ ಅವರು ಪದೋನ್ನತಿ ಹೊಂದಿದ್ದಾರೆ. ಯುವರಾಜ್ ಪೂವಣಿ ಅವರು ಹುದ್ದೆಯಿಂದ ಸೇವಾನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ ಈ ನೇಮಕಾತಿ ನಡೆದಿದೆ. ಪಟವರ್ಧನ್ ಅವರು ಕಳೆದ 20 ವರ್ಷಗಳಿಂದ ಕಾಲೇಜಿನಲ್ಲಿ ಸೀನಿಯರ್ ಅಕೌಂಟ್ ಅಸಿಸ್ಟೆಂಟ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಜು.14ರಂದು ಕಚೇರಿ ಅಧೀಕ್ಷಕರಾಗಿ

ಕಿರುಚಿತ್ರ ಸ್ಪರ್ಧೆಯಲ್ಲಿ ಎಸ್ ಡಿ ಎಂ ಕಾಲೇಜಿಗೆ ದ್ವಿತೀಯ ಪ್ರಶಸ್ತಿ

ಉಜಿರೆ: ತುಮಕೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಆಯೋಜಿಸಿದ ‘ಇಂಪ್ರೆಶನ್ – 2023’ ರಾಜ್ಯ ಮಟ್ಟದ ಮಾಧ್ಯಮ ಸ್ಪರ್ಧೆಯ ಕಿರುಚಿತ್ರ ವಿಭಾಗದಲ್ಲಿ ಉಜಿರೆಯ ಎಸ್ ಡಿ ಎಂ ಸ್ನಾತಕೋತ್ತರ ಕೇಂದ್ರದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳು ನಿರ್ಮಿಸಿದ ಕಿರುಚಿತ್ರ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ‘ನಾದ’ ಎಂಬ ಶೀರ್ಷಿಕೆಯಡಿ ಈ ಕಿರುಚಿತ್ರವು ಮೂಡಿಬಂದಿದೆ. ಈ ಕಿರುಚಿತ್ರವು ಕಿರಣ್

ಕುಂದಾಪುರ : ನಮ್ಮ ಭೂಮಿ ನಮ್ಮ ಹಕ್ಕು, ಕೃಷಿ ಭೂಮಿಗಾಗಿ ಹಕ್ಕೊತ್ತಾಯ

ಕುಂದಾಪುರ: ಕೊರಗರಿಗೆ ಕೃಷಿ ಭೂಮಿ ಇಲ್ಲದಿರುವುದರಿಂದ ಅವರು ಕೃಷಿಕರಾಗದೇ ಇಂದಿಗೂ ದಯನೀಯ ಸ್ಥಿತಿಯಲ್ಲಿ ಇದ್ದಾರೆ. ಹಲವು ಸರ್ಕಾರಗಳು ನಾನಾ ಯೋಜನೆಗಳನ್ನು ತಂದರೂ ಕೊರಗರಿಗೆ ಕೃಷಿ ಮಾಡಿಕೊಳ್ಳಲು ತುಂಡು ಭೂಮಿಯನ್ನೂ ಕೊಟ್ಟಿಲ್ಲ. ಕೊರಗ ಸಮುದಾಯದ ಮನವಿಗಳು ಕೇವಲ ಕುಂದು ಕೊರತೆ ಸಭೆಗೆ ಮಾತ್ರವೇ ಸೀಮಿತವಾಗಬಾರದು. ಅದು ಕಾರ್ಯರೂಪಕ್ಕೂ ಬರಬೇಕು ಎಂದು ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟದ ಅಧ್ಯಕ್ಷೆ ಸುಶೀಲಾ ನಾಡ ಹೇಳಿದರು. ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ

‘ಭಿನ್ನ ಯೋಚನೆ ಸೃಜನಶೀಲತೆಗೆ ಆಧಾರ’

‘ಭಿನ್ನ ಯೋಚನೆ ಸೃಜನಶೀಲತೆಗೆ ಆಧಾರ’ ಉಜಿರೆ: ವಿಭಿನ್ನವಾಗಿ ಆಲೋಚಿಸುವ ಸಾಮರ್ಥ್ಯ ಮತ್ತು ಕೌಶಲ್ಯಪೂರ್ಣ ಅಭಿವ್ಯಕ್ತಿಯ ಮಾದರಿಗಳೊಂದಿಗೆ ಗುರುತಿಸಿಕೊಂಡಾಗ ಮಾತ್ರ ಮಾಧ್ಯಮರಂಗ ನಿರೀಕ್ಷಿಸುವ ಸೃಜನಶೀಲತೆಯನ್ನು ರೂಪಿಸಿಕೊಳ್ಳಲು ಸಾಧ್ಯ ಎಂದು ಬೆಂಗಳೂರು ಆಕಾಶವಾಣ ಯ ಹಿರಿಯ ಉದ್ಘೋಷಕಿ, ಕಂಟೆಂಟ್ ಬರಹಗಾರ್ತಿ ಬಿ.ಕೆ ಸುಮತಿ ಅಭಿಪ್ರಾಯಪಟ್ಟರು. ಉಜಿರೆಯ ಶ್ರೀ.ಧ.ಮಂ ಸ್ನಾತಕೋತ್ತರ ಕೇಂದ್ರದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗವು ರೇಡಿಯೋ ಬರಹ ಮತ್ತು

ಕೊಲ್ಲೂರು : ನೀರುಪಾಲಾದ ಯುವಕನಿಗಾಗಿ ಮುಂದುವರೆದ ಶೋಧ

ಬೈಂದೂರು ತಾಲ್ಲೂಕಿನ ಕೊಲ್ಲೂರು ಬಳಿಯ ಅರಶಿನಗುಂಡಿ ಜಲಪಾತ ವೀಕ್ಷಣೆಗೆ ಬಂದಿದ್ದ ಯುವಕ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ನೀರಿನಲ್ಲಿ ಕೊಚ್ಚಿ ಹೋಗಿದ್ದು, ಯುವಕನಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಭದ್ರಾವತಿ ಮೂಲದ ಶರತ್ ಕುಮಾರ್ (23) ಜಲಪಾತದಲ್ಲಿ ಕೊಚ್ಚಿಹೋದ ಯುವಕ. ಬಂಡೆಯ ತುದಿಯಲ್ಲಿ ನಿಂತು ಹತ್ತಿರದಿಂದ ಜಲಪಾತ ವೀಕ್ಷಣೆ ಮಾಡುವಾಗ ಈ ದುರ್ಘಟನೆ ಸಂಭವಿಸಿದೆ. ಯುವಕನ ಪತ್ತೆಗೆ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಅಗ್ನಿಶಾಮಕ ದಳ, ಪೊಲೀಸ್ ಇಲಾಖೆ

ಜವಾಬ್ದಾರಿ ಮೆರೆದ ಪತ್ರಕರ್ತರು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಕಡಬ, ಸುಬ್ರಹ್ಮಣ್ಯ ಭಾಗದಲ್ಲಿ ಅತೀ ಹೆಚ್ಚಿನ ಅನಾಹುತಗಳು ನಡೆದಿದೆ. ಮಂಜೇಶ್ವರ ಸುಬ್ರಹ್ಮಣ್ಯ ನಡುವಿನ ರಾಜ್ಯ ಹೆದ್ದಾರಿಯಲ್ಲಿ ಹಲವೆಡೆ ನದಿ ನೀರು ರಸ್ತೆಗೆ ಬಂದು ಸಂಚಾರ ಸ್ಥಗಿತಗೊಂಡಿದೆ. ಸುಬ್ರಹ್ಮಣ್ಯ ಸಮೀಪದ ಪರ್ವತಮುಖಿಯಿಂದ ಯಾವುದೇ ವಾಹನಗಳು ಮುಂದಕ್ಕೆ ಸಾಗುವಂತಿಲ್ಲ. ಕಳೆದ ಎರಡು ದಿನಗಳಿಂದ ಇದೇ ಪರಿಸ್ಥಿತಿ ಇದ್ದು ಈ ರಸ್ತೆಯಲ್ಲಿ ಸಾಗುವವರು ಬಳ್ಪ ಗ್ರಾಮದಿಂದ ಗುತ್ತಿಗಾರು ಮಾರ್ಗವಾಗಿ

ಮುಡಿಪು : ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ

ಉಳ್ಳಾಲ: ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿರುವ ಘಟನೆ ಮುಡಿಪು ಜಂಕ್ಷನ್ನಿನಲ್ಲಿ ಸಂಭವಿಸಿದೆ. ಘಟನೆಯಲ್ಲಿ ಕಾರು ಚಾಲಕ ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದಾರೆ. ಮಂಗಳೂರಿನಿಂದ ಬಿ.ಸಿ ರೋಡಿನತ್ತ ತೆರಳುತ್ತಿದ್ದ ಎನ್.ಎಸ್ ಟ್ರಾವೆಲ್ಸ್ ಬಸ್ಸು ಮುಡಿಪು ಜಂಕ್ಷನ್ನಿನಲ್ಲಿ ತಿರುಗುವ ಸಂದರ್ಭ , ಭಾರತಿ ಶಾಲೆ ಕಡೆಯಿಂದ ಬರುತ್ತಿದ್ದ ಝೆನ್ ಕಾರಿಗೆ ಮುಖಾಮುಖಿ ಢಿಕ್ಕಿ ಹೊಡೆದಿದೆ. ಬಸ್ಸು ಮುಂಭಾಗಕ್ಕೆ ಕಾರು ಒಳನುಗ್ಗಿದ್ದು, ಕಾರು ಚಾಲಕ ಪವಾಡಸದೃಶ