ರಾಜ್ಯ ಸರಕಾರ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.ದಕ್ಷಿಣ ಕನ್ನಡಕ್ಕೆ ದಿನೇಶ್ ಗುಂಡೂರಾವ್, ಉಡುಪಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ. ಬೆಂಗಳೂರು ನಗರಕ್ಕೆ ಡಿಕೆ ಶಿವಕುಮಾರ್, ತುಮಕೂರು ಜಿಲ್ಲೆಗೆ ಡಾ. ಜಿ ಪರಮೇಶ್ವರ್, ಗದಗ ಜಿಲ್ಲೆಗೆ ಹೆಚ್.ಕೆ ಪಾಟೀಲ್, ಬೆಂಗಳೂರು ಗ್ರಾಮಾಂತರಕ್ಕೆ ಕೆ.ಹೆಚ್
ಉಡುಪಿ : ಕೇಂದ್ರ ಸಚಿವಾಲಯ ಗ್ರಂಥಾಲಯದ ಹಿರಿಯ ಅಧಿಕಾರಿ, ದೆಹಲಿ ಶಿಕ್ಷಣ ಕನ್ನಡ ಸಂಸ್ಥೆಯ ಉಪಾಧ್ಯಕ್ಷ ಡಾ. ಅವನೀಂದ್ರನಾಥ್ ರಾವ್ ಅವರು ಸಂಕಲಿಸಿದ ವಸ್ತು ಸಂಗ್ರಹಾಲಯ ಕುರಿತ ಸಚಿತ್ರ ಗ್ರಂಥಸೂಚಿಯನ್ನು ಕೇಂದ್ರ ಸಂಸ್ಕೃತಿ ಸಚಿವ ಕಿಶನ್ ಜಿ. ರೆಡ್ಡಿ ಅವರು ಇತ್ತೀಚಿಗೆ ಬಿಡುಗಡೆಗೊಳಿಸಿದರು. ಕೊಲ್ಕತ್ತದ ಕೇಂದ್ರ ಸಂದರ್ಭ ಗ್ರಂಥಾಲಯ ಈ ವಿಶೇಷ ಗ್ರಂಥಸೂಚಿಯನ್ನು ಪ್ರಕಟಿಸಿದೆ. ವಸ್ತು ಸಂಗ್ರಹಾಲಯ ಕುರಿತ ಜಾಗತಿಕ ಮಹಾಮೇಳ ಇಂಟರ್ನ್ಯಾಷನಲ್ ಮ್ಯೂಸಿಯಂ ಎಕ್ಷಪೊ-2023
ಉಡುಪಿ : ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮರ್ಪಕ ವಿತರಣೆಗಾಗಿ ಮೂರು ದಿನಕ್ಕೊಮ್ಮೆ ನೀರು ಸರಬರಾಜು ಮಾಡಲು ರೇಷನಿಂಗ್ ವ್ಯವಸ್ಥೆಯನ್ನು ಪ್ರಾರಂಭಿಸಲಾಗಿದ್ದು, ಪ್ರಸ್ತುತ ಬಜೆ ಡ್ಯಾಂನಲ್ಲಿ ಕುಡಿಯುವ ನೀರಿನ ಶೇಖರಣೆ ತೀರಾ ಕಡಿಮೆ ಇರುವುದರಿಂದ 5 ದಿನಗಳಿಗೊಮ್ಮೆ , ಜೂನ್ 9, 14 ಮತ್ತು 19 ರಂದು ಪರ್ಕಳ, ಸೆಟ್ಟಿಬೆಟ್ಟು, ಅನಂತನಗರ, ಈಶ್ವರನಗರ, ವಿದ್ಯಾರತ್ನ ನಗರ, ಶೀಂಬ್ರ ಭಾಗಕ್ಕೆ, ಜೂನ್ 10, 15 ಮತ್ತು 20 ರಂದು ಇಂದಿರಾನಗರ ಟ್ಯಾಂಕ್,
ಉಡುಪಿ : ಉಡುಪಿ ಜಿಲ್ಲೆಯ ಕಾರ್ಕಳದ ಬೈಲೂರು ಕೆಳಪೇಟೆಯಲ್ಲಿ ಬಸ್ ಮತ್ತು ಸ್ಕೂಟಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಜೂ.8 ರಂದು ರಾತ್ರಿ ನಡೆದಿದೆ. ಮೃತಪಟ್ಟ ವ್ಯಕ್ತಿ ಜಾರ್ಕಳದ ಕಾರ್ತಿಕ್ (26) ಎಂದು ಗುರುತಿಸಲಾಗಿದೆ. ಕಲ್ಲಿನ ಕೆಲಸ ಮಾಡುತ್ತಿದ್ದ ಕಾರ್ತಿಕ್ ಕೆಲಸ ಮುಗಿಸಿ ಮನೆಕಡೆಗೆ ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಕಾರ್ಕಳದಿಂದ ಉಡುಪಿಗೆ ಹೋಗುತ್ತಿದ್ದ ಖಾಸಗಿ ಬಸ್ ಹಾಗೂ
ಉಳ್ಳಾಲ: ಗೃಹಪ್ರವೇಶ ನಡೆಸಿ ಐದೇ ದಿನದಲ್ಲಿ ನೂತನ ಮನೆಯಲ್ಲೇ ಯುವತಿ ನೇಣಿಗೆ ಶರಣಾದ ಪ್ರಕರಣ ತಿರುವು ಪಡೆದುಕೊಂಡಿದ್ದು, ಮನೆ ಖರೀದಿಸಿದ ಮಹಿಳೆಯೊಬ್ಬಳಿಗೆ ನಗದು ನೀಡಿ ಒಂದೆಡೆ ಮೋಸಕ್ಕೊಳಗಾಗಿದ್ದರೆ, ಇನ್ನೊಂದೆಡೆ ಮನೆಯ ಬ್ಯಾಂಕ್ ಸಾಲ ಮರುಪಾವತಿಗೆ ಗೃಹಪ್ರವೇಶದಂದೇ ಬ್ಯಾಂಕ್ ಸಿಬ್ಬಂದಿ ಮನೆಗೆ ಬಂದು ಮುಜುಗರಕ್ಕೀಡಾದ ಯುವತಿ ಮನನೊಂದು ನೇಣಿಗೆ ಕೊರಳೊಡ್ಡಿರುವುದಾಗಿ ತಾನು ಬರೆದಿಟ್ಟಿರುವ 15 ಪುಟಗಳ ಡೆತ್ ನೋಟ್ ಮೂಲಕ ಬಹಿರಂಗವಾಗಿದೆ. ಮೂಲತ: ಫರಂಗಿಪೇಟೆಯ
ಉಡುಪಿ : ರಾಜ್ಯ ಸರ್ಕಾರದಿಂದ ಪಠ್ಯ ಬದಲಾವಣೆ ವಿಚಾರವಾಗಿ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಮಾಧ್ಯಮದೊಂದಿಗೆ ಮಾತನಾಡಿ, ಸರ್ಕಾರ ಯಾವಾಗಲೂ ವ್ಯಕ್ತಿಗಳ ಆಧಾರದಲ್ಲಿ ನಡೆಯುವುದಿಲ್ಲ. ಬದಲಾಗಿ ಸರ್ಕಾರ ನಡೆಯುವುದು ಶಾಸನದ ಆಧಾರದಲ್ಲಿ. ಒಂದು ಸರ್ಕಾರ ಮಾಡಿದ ನಿರ್ಧಾರವನ್ನು ಮತ್ತೊಂದು ಸರಕಾರ ಪರಿಶೀಲನೆ ಮಾಡದೆ ಬದಲು ಮಾಡುವುದು ಸರಿಯಲ್ಲ. ಸಾರ್ವಜನಿಕವಾಗಿ ಇಂತಹ ಬೆಳವಣಿಗೆಗಳು ಗೌರವ ತರುವುದಿಲ್ಲ. ಬನ್ನಂಜೆ ಗೋವಿಂದಾಚಾರ್ಯರ ಪಾಠವನ್ನು ವಾಪಸ್ಸು
ಬ್ರಹ್ಮಾವರ ಹಳೆ ಪೊಲೀಸ್ ಠಾಣೆ ಬಳಿ ಕಾರ್ಯನಿರ್ವಯಿಸುತ್ತಿದ್ದ ಬ್ರಹ್ಮಾವರ ತಾಲೂಕು ಕಛೇರಿ ಒಂದು ವಾರದಲ್ಲಿ ನೂತನವಾಗಿ ರಾಷ್ಟ್ರೀಯ ಹೆದ್ದಾರಿ 66 ಬಳಿ ನಿರ್ಮಾಣಗೊಂಡ ಮಿನಿ ವಿಧಾನ ಸೌಧಕ್ಕೆ ವರ್ಗಾವಣೆಯಾಗಲಿದೆ. ಚುನಾವಣಾ ಪೂರ್ವದಲ್ಲಿ ವಿವಿಧ ಅಧಿಕಾರಿಗಳು ಜನಪ್ರತಿನಿಧಿಗಳಿಂದ ಮಿನಿವಿಧಾನ ಸೌಧ ಉದ್ಘಾಟನೆಗೊಂಡರೂ ಬಳಿಕ ನೀತಿ ಸಂಹಿತೆ ಜಾರಿಯಾದ ಬಳಿಕ ಕಂದಾಯ ಇಲಾಖೆಯ ಸಿಬ್ಬಂದಿಗಳು ಚುನಾವಣಾ ಕಾರ್ಯದಲ್ಲಿ ತೊಡಗಿಕೊಂಡಿದ್ದರು. ಕಳೆದ ಕೆಲವು ದಿನದಿಂದ ಕಂದಾಯ
ಪವರ್ ಫ್ರೆಂಡ್ಸ್ ಬೆದ್ರ ಸೇವಾ ಯೋಜನೆಯಡಿ ಇರುವೈಲು ಗ್ರಾಮದ ಕಲ್ಲಾಡಿ ಎಂಬಲ್ಲಿನ ಬಡ ಕುಟುಂಬಕ್ಕೆ ಮನೆ ನಿರ್ಮಿಸಲಾಗಿದ್ದು, ಹಸ್ತಾಂತರ ಕಾರ್ಯಕ್ರಮ ಜೂನ್ 11ರಂದು ನಡೆಯಲಿದೆ ಎಂದು ಪವರ್ ಫ್ರೆಂಡ್ಸ್ ಬೆದ್ರ ಅಧ್ಯಕ್ಷ ವಿನಯ ಕುಮಾರ್ ತಿಳಿಸಿದರು. ಅವರು ಮೂಡುಬಿದರೆಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಕಲ್ಲಾಡಿಯ ನೋಣಯ್ಯ ಪರವ ಎಂಬವರ ಬಡ ಕುಟುಂಬವು ಸಣ್ಣದಾದ ಮನೆಯಲ್ಲಿ ವಾಸವಾಗಿದ್ದರು. ಯಾವುದೇ ಮೂಲಭೂತ ಸೌಕರ್ಯಗಳು ಇರಲಿಲ್ಲ. ಇದನ್ನು ಮನಗಂಡು ಪವರ್
ದಕ್ಷಿಣ ಕನ್ನಡ ಜಿಲ್ಲೆಯ ಇತಿಹಾಸ ಪ್ರಸಿದ್ದವಾದ ಧಾರ್ಮಿಕ ದತ್ತಿ ಇಲಾಖೆಯ ಆಡಳಿತಕ್ಕೊಳಪಟ್ಟ ರಾಜ್ಯದಲ್ಲಿ ಕೋಟಿಗೂ ಮಿಕ್ಕಿ ಆದಾಯವನ್ನು ಒಳಗೊಂಡಿರುವ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳದಲ್ಲಿ ಈ ಬಾರಿ ಜಲಕ್ಷಾಮ ಕಂಡು ಬಂದಿದೆ. ಪ್ರತಿದಿನ ಸುಮಾರು 15000 ಕ್ಕೂ ಮಿಕ್ಕಿ ಆಗಮಿಸುವ ಭಕ್ತರಿಗೆ ಹಾಗೂ ದೇವಳದಿಂದ ನಡೆಸಲ್ಪಡುತ್ತಿರುವ ಶಿಕ್ಷಣ ಸಂಸ್ತೆಗೆ ಸಮಸ್ಯೆ ಉಂಟಾಗಿದ್ದು ಶಿಕ್ಷಣ ಸಂಸ್ತೆಗೆ ಮಧ್ಯಾಹ್ನದ ಬಳಿಕ ರಜೆಯನ್ನು ನಿಡಲಾಗುತ್ತಿದೆ. ಕಟೀಲು ಶ್ರೀ
ಶ್ರೇಷ್ಠ ವ್ಯಕ್ತಿಗಳಲ್ಲಿ ದೇವರಂತಹ ಹೃದಯವಿರುತ್ತದೆ. ಆದ್ದರಿಂದ ಉದಯ್ ಶೆಟ್ಟಿ ಮುನಿಯಾಲು ಎಲ್ಲರ ಗೌರವಕ್ಕೆ ಪಾತ್ರರಾಗುತ್ತಾರೆ ಎಂದು ಕೆಮಾರು ಸಾಧನ ಆಶ್ರಮದ ಶ್ರೀ ಈಶ ವಿಠಲದಾಸ ಸ್ವಾಮೀಜಿ ಅಭಿಪ್ರಾಯಸಿದ್ದಾರೆ. ಉದಯ ಶೆಟ್ಟಿ ಮುನಿಯಲು ಅಭಿಮಾನಿ ಬಳಗ ಮತ್ತು ಬ್ಲಾಕ್ ಕಾಂಗ್ರೆಸ್ ಹೆಬ್ರಿ ಮತ್ತು ಕಾರ್ಕಳದ ವತಿಯಿಂದ ಉದಯ ಶೆಟ್ಟಿ ಮುನಿಯಾಲು ಇವರ 50ನೇ ಹುಟ್ಟು ಹಬ್ಬದ ಸಂದರ್ಭ ಪುಲ್ಕೇರಿ ಲಕ್ಷ್ಮೀದೇವಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ರಕ್ತದಾನ ಶಿಬಿರ ಮತ್ತು