Home Archive by category ಕರಾವಳಿ (Page 246)

ನೈಋತ್ಯ ರೈಲ್ವೆ ವಲಯದ ಸದಸ್ಯರಾಗಿ ರಾಜೇಶ್ ಪುದುಶೇರಿ ನೇಮಕ

ಬೆಳ್ತಂಗಡಿ: ನೈಋತ್ಯ ರೈಲ್ವೆ ವಲಯದ ಸದಸ್ಯರಾಗಿ ರಾಜೇಶ್ ಪುದುಶೇರಿ ಆಯ್ಕೆಯಾಗಿದ್ದಾರೆ. ಸಾಮಾಜಿಕ ಹಾಗೂ ಧಾರ್ಮಿಕ ಸೇವಾ ಚಟುವಟಿಕೆಗಳಲ್ಲಿ ಮುಂಚೂಣಿಯಲ್ಲಿದ್ದ ಇವರ ಸೇವೆಯನ್ನು ಗುರುತಿಸಿ ರಾಜ್ಯ ಸಭಾ ಸದಸ್ಯರು ಹಾಗೂ ಇತರ ನಾಯಕರ ಶಿಫಾರಸ್ಸಿನಂತೆ ಭಾರತ ಸರ್ಕಾರವು ನೈಋತ್ಯ ರೈಲ್ವೆ ವಲಯದ ಸದಸ್ಯರಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ. ರಾಜೇಶ್ ಪುದುಶೇರಿ ಅವರು

“ದೇವತಾ”ಕಲಾ ಪ್ರದರ್ಶನ : ವಿದುಷಿ ಪ್ರವೀಣ ಮೋಹನ್ ಅವರಿಂದ ವಿಭಿನ್ನ ಕಲಾಕೃತಿಗಳ ಪ್ರದರ್ಶನ

ಉಡುಪಿಯ ಅದಿತಿ ಗ್ಯಾಲರಿ ವತಿಯಿಂದ “ದೇವತಾ” ವಿಭಿನ್ನ ಕಲಾ ಪ್ರದರ್ಶನ ಮೇ 26 ರಿಂದ 28 ರವರೆಗೆ ಪ್ರತೀದಿನ ಬೆಳಗ್ಗೆ 11 ಗಂಟೆಯಿಂದ ಸಂಜೆ 7 ಗಂಟೆ ತನಕ ಉಡುಪಿಯ ಕುಂಜಿಬೆಟ್ಟುವಿನಲ್ಲಿರುವ ಅದಿತಿ ಗ್ಯಾಲರಿನಲ್ಲಿ ಪ್ರದರ್ಶನಗೊಳ್ಳಲಿದೆ. ಈ ಪ್ರದರ್ಶನದ ಉದ್ಘಾಟನಾ ಸಮಾರಂಭವು ಮೇ 25, 2023 ರಂದು ಸಂಜೆ 5:15 ಕ್ಕೆ ಅದಿತಿ ಗ್ಯಾಲರಿನಲ್ಲಿ ಜರುಗಲಿದೆ. ಈ ಸಮಾರಂಭದಲ್ಲಿ ಮೂಡುಬಿದರೆಯ ಆಳ್ವಾಸ್ ಫೌಂಡೇಶನ್ ಅಧ್ಯಕ್ಷರಾದ ಡಾ. ಎಂ ಮೋಹನ್ ಆಳ್ವ, ಉಜ್ವಲ್ ಗ್ರೂಪ್‌ನ

ಸರ್ಕಾರದ ಯೋಜನೆಗಳನ್ನು ಪ್ರತಿ ಮನೆ ಮನೆಗೆ ತಲುಪಿಸಬೇಕು : ಉದಯ ಶೆಟ್ಟಿ ಮುನಿಯಾಲು

ಸರ್ಕಾರದ ಯೋಜನೆಗಳನ್ನು ಪ್ರತಿ ಮನೆ ಮನೆಗೆ ತಲುಪಿಸುವ ಕಾರ್ಯ ನಾವು ಮಾಡಬೇಕಾಗಿದೆ. ಎಂದು ಉದಯ ಶೆಟ್ಟಿ ಮುನಿಯಾಲು ಹೇಳಿದರು. ರಾಜ್ಯದಲ್ಲಿ ಕಾಂಗ್ರೆಸ್ ಬಹುಮತದ ದೊರೆತ ಹಿನ್ನೆಲೆಯಲ್ಲಿ ಕಾರ್ಕಳದಲ್ಲಿ ನಡೆದ ವಿಜಯೋತ್ಸವ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಮುಂಬರುವ ತಾಲೂಕ್ ಪಂಚಾಯತ್, ಜಿಲ್ಲಾ ಪಂಚಾಯತ್ ಚುನಾವಣೆಗೆ ನಾವು ಇಂದಿನಿಂದಲೇ ಸಿದ್ಧತೆ ನಡೆಸಬೇಕಾಗಿದೆ ಗೆಲುವಿಗಾಗಿ ಪ್ರತಿ ಬೂತ್ ಮಟ್ಟದಲ್ಲಿ ಕಾರ್ಯಕರ್ತರು ತಂಡವಾಗಿ ಕಾರ್ಯನಿರ್ವಹಿಸಬೇಕಾಗಿದೆ.

ಜೂಜಾಟಗಾರರ ಜತೆ ಶಾಮೀಲು ಆರೋಪ – ಉಳ್ಳಾಲ ಠಾಣೆ ಎಸ್.ಬಿ ಅಮಾನತು

ಉಳ್ಳಾಲ: ಇಲ್ಲಿನ ಪೊಲೀಸ್ ಠಾಣೆಯಲ್ಲಿ ಸ್ಪೆಷಲ್ ಬ್ರಾಂಚ್ ಕಾನ್ಸ್ ಟೇಬಲ್ ಆಗಿದ್ದ ವಾಸುದೇವ ಚೌಹಾಣ್ ಅವರನ್ನು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಅಮಾನತು ಮಾಡಿದ್ದಾರೆ.ಇತ್ತೀಚೆಗೆ ತಲಪಾಡಿ ಗಡಿಭಾಗದಲ್ಲಿ ಜೂಜಾಟ ನಡೆಸುತ್ತಿದ್ದ ತಂಡವನ್ನು ಎಸಿಪಿ ನೇತೃತ್ವದ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದರು. ಆದರೆ ಈ ಬಗ್ಗೆ ಉಳ್ಳಾಲ ಎಸ್ ಬಿ ಆಗಿದ್ದ ವಾಸುದೇವ್ ಗೆ ಮಾಹಿತಿಗಳಿದ್ದವು. ಅಲ್ಲದೆ, ಆರೋಪಿಗಳ ಜೊತೆ ವಾಸುದೇವ ಶಾಮೀಲಾಗಿದ್ದ ಎನ್ನುವ ಆರೋಪಗಳಿದ್ದವು. ಈ ಬಗ್ಗೆ

ಆರ್ ಎಸ್ ಎಸ್ ಪುತ್ತೂರು ಜಿಲ್ಲಾ ಸಂಘ ಚಾಲಕ ಕೊಡ್ಮಾಣ್ ಕಾಂತಪ್ಪ ಶೆಟ್ಟಿ ಇನ್ನಿಲ್ಲ

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪುತ್ತೂರು ಜಿಲ್ಲಾ ಸಂಘ ಚಾಲಕ, ಸಾಮಾಜಿಕ, ಧಾರ್ಮಿಕ,ಸಹಕಾರಿ ನೇತಾರ ಕೊಡ್ಮಾಣ್ ಕಾಂತಪ್ಪ ಶೆಟ್ಟಿ ( 61)ಅವರು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಸೋಮವಾರ ನಿಧನರಾದರು. ಸದಾ ನಗುಮುಖ, ಗಂಭೀರ ವ್ಯಕ್ತಿತ್ವ,ನೇರ ನಡೆ ನುಡಿಯವರಾಗಿದ್ದ ಕೆಲ ಸಮಯಗಳಿಂದ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು,ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸೋಮವಾರ ಮಧ್ಯಾಹ್ನ 12 ಗಂಟೆಯ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು

ಗ್ಯಾರಂಟಿ ಕಾರ್ಡ್ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಗಿಲ್ಲ : ಐವನ್ ಡಿಸೋಜಾ ಕಿಡಿ

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಕಾರ್ಡ್ ಬಗೆ ಮಾತನಾಡುವ ನೈತಿಕತೆ ಬಿಜೆಪಿಗಿಲ್ಲ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಕಿಡಿಕಾರಿದರು. ಅವರು ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಸಚಿವ ಸಂಪುಟದಲ್ಲಿ ಅನುಮೋದನೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಆಯ್ಕೆ ಪ್ರಕ್ರಿಯೆ ನಡೆದು, ಫಲಾನುಭವಿಗಳಿಗೆ ಯೋಜನೆಗಳು ಸಿಗಲಿದೆ ಎಂದರು. ಗ್ಯಾರಂಟಿ ಕಾರ್ಡ್ ವಿಚಾರದಲ್ಲಿ ಜನರು ಯಾವುದೇ ಗೊಂದಲ ಪಡುವ

ಪುತ್ತೂರು ಪೊಲೀಸ್ ದೌರ್ಜನ್ಯ ಪ್ರಕರಣ – ಆಸ್ಪತ್ರೆಗೆ ದಿ. ಹರ್ಷನ ಸಹೋದರಿ ಅಶ್ವಿನಿ ಭೇಟಿ

ಪುತ್ತೂರಿನಲ್ಲಿ ಪೊಲೀಸ್ ದೌರ್ಜನ್ಯಕ್ಕೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿಂದೂ ಕಾಯಕರ್ತರ ಆರೋಗ್ಯವನ್ನು ಶಿವಮೊಗ್ಗದ ದಿವಂಗತ ಹರ್ಷನ ಸಹೋದರಿ ಅಶ್ವಿನಿಯವರು ವಿಚಾರಿಸಿದರು. ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅಶ್ವಿನಿ ಅವರು ಕಾರ್ಯಕರ್ತರ ಸ್ಥಿತಿಯನ್ನ ನೋಡಿ ತುಂಬಾ ಬೇಸರಗೊಂಡಿದ್ದೇನೆ. ಇವತ್ತು ಅರುಣ್ ಪುತ್ತಿಲ ಇಲ್ಲದಿದ್ದರೆ ಕಾರ್ಯಕರ್ತರನ್ನ ಜೀವಂತ ನೋಡುತ್ತಿರಲಿಲ್ಲ. ಕಾರ್ಯಕರ್ತರು ಹಿಂದೂ ಸಮಾಜ ಗಟ್ಟಿಗೊಳಿಸಲು ಹೋರಾಡ್ತಾ ಇದ್ದಾರೆ.

ಕುಲಶೇಖರ ಬ್ರಹ್ಮಕಲಶೋತ್ಸ ವ ವೈಭವ : ಪ್ರಧಾನ ಶ್ರೀ ವೀರನಾರಾಯಣ ದೇವರ ಪ್ರತಿಷ್ಠೆ

ಕುಲಾಲರ ಕುಲದೇವರು ಕುಲಶೇಖರ ಕ್ಷೇತ್ರದ ಪ್ರಧಾನ ಶ್ರೀ ವೀರನಾರಾಯಣ ದೇವರ ಪ್ರತಿಷ್ಠೆಯು ಇಂದು ಬೆಳಿಗ್ಗೆ ೯.೧೦ರ ಮಿಥುನಲಗ್ನ ಸುಮುಹೂರ್ತದಲ್ಲಿ ಕ್ಷೇತ್ರದ ತಂತ್ರಿಗಳಾದ ವೇ|ಮೂ| ಬ್ರಹ್ಮಶ್ರೀ ಅನಂತ ಉಪಾಧ್ಯಾಯರ ವೈದಿಕ ನೇತೃತ್ವದಲ್ಲಿ ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಹಾಗೂ ವಿವಿಧ ಸಮಿತಿ ಪದಾಧಿಕಾರಿಗಳು ಹಾಗೂ ನೂರಾರು ಸಂಖ್ಯೆಯ ಭಕ್ತಾಧಿಗಳ ಉಪಸ್ಥಿತಿಯಲ್ಲಿ ನೆರವೇರಿತು. ವಿಷ್ಣುಸ್ವರೂಪಿ ಶ್ರೀ ವೀರನಾರಾಯಣ ದೇವರ ಸಾನಿಧ್ಯವು ದಕ್ಷಿಣ

ಅಕ್ರಮ ಮರಳು ಗಣಿಗಾರಿಕೆ ತಡೆಯಲು ಕಾರ್ಯಪ್ರವೃತ್ತರಾಗಿ : ತಹಶೀಲ್ದಾರ್ ರವಿ ಎಸ್ ಅಂಗಡಿ

ಉಡುಪಿ : ಉಡುಪಿ ತಾಲೂಕು ವ್ಯಾಪ್ತಿಯಲ್ಲಿ ಅಕ್ರಮ ಮರಳು ಸಾಗಾಣಿಕೆ ಕುರಿತು ಸಾರ್ವಜನಿಕರಿಂದ ದೂರುಗಳು ಬಂದ ತಕ್ಷಣವೇ ಅಧಿಕಾರಿಗಳು ಕಾರ್ಯಪ್ರವೃತರಾಗಿ ಮರಳು ಸಾಗಾಣಿಕೆಯನ್ನು ತಡೆಯಲು ಕ್ರಮಕೈಗೊಳ್ಳುವಂತೆ ಉಡುಪಿ ತಾಲೂಕು ತಹಶೀಲ್ದಾರ್ ರವಿ ಎಸ್ ಅಂಗಡಿ ಹೇಳಿದರು.ಅವರು ಶುಕ್ರವಾರ ಉಡುಪಿ ತಾಲೂಕು ಕಚೇರಿಯಲ್ಲಿ ಉಡುಪಿ ತಾಲೂಕು ಮರಳು ಉಪಖನಿಜ ಅಕ್ರಮ ಸಾಗಾಣಿಕೆ, ದಾಸ್ತಾನು ವಿಷಯಗಳ ಕುರಿತು ಟಾಸ್ಕ್ಫೋರ್ಸ್ ಸಮಿತಿ ಸದಸ್ಯರೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ

ಅನಧಿಕೃತ ಮರಳು ದಕ್ಕೆಯಲ್ಲಿದ್ದ 5 ಲಾರಿಗಳು ವಶ

ಉಡುಪಿ : ಕುಂದಾಪುರ ತಾಲೂಕು ವಂಡ್ಸೆ ಹೋಬಳಿಯ ಹಟ್ಟಿಯಂಗಡಿ ಹಾಗೂ ಹೆಮ್ಮಾಡಿ ಪರಿಸರದಲ್ಲಿ ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಟಕ್ಕೆ ಸಂಬಂಧಿಸಿದಂತೆ ಶುಕ್ರವಾರ ರಾತ್ರಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಭೂವಿಜ್ಞಾನಿ ಸಂಧ್ಯಾ ಅವರು ಕಾರ್ಯಾಚರಣೆ ನಡೆಸಿ 5 ಟಿಪ್ಪರ್ ಲಾರಿಗಳನ್ನು ವಶ ಪಡಿಸಿಕೊಂಡಿದ್ದಾರೆ.ಹಟ್ಟಿಯಂಗಡಿ ಗ್ರಾಮದ ಹಟ್ಟಿಕುದ್ರು ಹಾಗೂ ಹೆಮ್ಮಾಡಿ ಗ್ರಾಮದ ಕನ್ನಡಕುದ್ರು ಎಂಬಲ್ಲಿ ಪಂಚಗಂಗವಲ್ಲಿ ನದಿಯಿಂದ ಅನಧಿಕೃತವಾಗಿ ಮರಳುಗಾರಿಕೆ ನಡೆಸಿ, ಸಾಗಾಟ