ಪುತ್ತೂರು: ರೂ.13 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಪುತ್ತೂರು ಕೃಷಿ ಉತ್ಪನ್ನ ಮಾರುಕಟ್ಟೆಯ ಮೂಲಕ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಉಪ್ಪಿನಂಗಡಿಯನ್ನು ಸಂಪರ್ಕಿಸುವ ರಸ್ತೆಗೆ ರೈಲ್ವೆ ಅಂಡರ್ ಬ್ರಿಡ್ಜ್ಗೆ 10 ತಿಂಗಳ ಬಳಿಕ ಲೋಕಾರ್ಪಣೆಗೆ ಸಿದ್ದಗೊಂಡಿದೆ. ಮಾ.18ರಂದು ಬ್ರಿಡ್ಜ್ನ ಅಂತಿಮ ಬಾಕ್ಸ್ ಕಾಮಗಾರಿ ನಡೆಯುತ್ತಿದ್ದು, ಈ
ಆರೋಗ್ಯಕ್ಕೆ ಸೋಂಕು ಅತ್ಯಂತ ಅಪಾಯಕಾರಿ, ಈ ಕುರಿತು ಚಿಕಿತ್ಸಾ ವಿಧಾನಗಳ ನಾವೀನ್ಯತೆ ಹಾಗೂ ಬದಲಾವಣೆಗಳ ಕುರಿತು ಸಮ್ಮೇಳನ ಬೆಳಕು ಚೆಲ್ಲಲಿದೆ ಎಂದು ಕೇಂದ್ರ ಇಂಡಿಯನ್ ಅಸೋಸಿಯೇಷನ್ನಿನ ಪೀಡಿಯಾಟ್ರಿಕ್ ಅಧ್ಯಕ್ಷ ಡಾ.ಜಿ.ವಿ ಬಸವರಾಜ ಅಭಿಪ್ರಾಯಪಟ್ಟರು. ಅವರು ನಾಟೆಕಲ್ ಕಣಚೂರು ಆರೋಗ್ಯ ವಿಜ್ಞಾನ ಹಾಗೂ ಆಸ್ಪತ್ರೆ ವಠಾರದಲ್ಲಿ ಇಂಡಿಯನ್ ಅಕಾಡೆಮಿ ಆಫ್ ಪೀಡಿಯಾಟ್ರಿಷಿಯನ್ ದಕ್ಷಿಣ ಕನ್ನಡ , ಕಣಚೂರು ಆರೋಗ್ಯ ವಿಜ್ಞಾನಗಳ ಸಂಯುಕ್ತಾಶ್ರಯದಲ್ಲಿ ಸಾಂಕ್ರಾಮಿಕ
ದ.ಕ ಜಿಲ್ಲಾ ಸಾಹಿತ್ಯ ಪರಿಷತ್, ಮಂಗಳೂರು ತಾಲೂಕು ಘಟಕದ ವತಿಯಿಂದ ಮುಡಿಪು ಸೂರಜ್ ಪಿ.ಯು ಕಾಲೇಜ್ ಆಶ್ರಯದಲ್ಲಿ ರೋಟರಿ ಮಂಗಳೂರು ಸೆಂಟ್ರಲ್ ಸಹಕಾರದೊಂದಿಗೆ “ವಿದ್ಯಾರ್ಥಿ -ಪೋಷಕ ವಿಜಯ ಪಥ” ಪುಸ್ತಕ ಬಿಡುಗಡೆ ಹಾಗೂ ಉಪನ್ಯಾಸ ಕಾರ್ಯಕ್ರಮ ಮುಡಿಪು ಪಿಯು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್ ಕಾರ್ಯಕ್ರಮಕ್ಕೆದೀಪ ಬೆಳಗಿಸಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ವಿದ್ಯಾರ್ಥಿ
ಪುತ್ತೂರು: ಚುನಾವಣೆ ಸಂದರ್ಭ ಹಿಂದಿನ ಸಲ ಅಭಿಪ್ರಾಯ ಸಂಗ್ರಹ ಮಾಡಿದ್ದೆವು. ಅದರ ಆಧಾರದಲ್ಲಿ ಕಳೆದ ೫ ವರ್ಷಗಳಲ್ಲಿ ನಾನು ಶಾಸಕನಾಗಿ ಮತ್ತು ಎರಡೂವರೆ ವರ್ಷದಲ್ಲಿ ನಗರಸಭೆಯಿಂದ ಏನೇನು ಭರವಸೆಯನ್ನು ಇಟ್ಟಿದ್ದಾರೋ, ಏನು ಬೇಡಿಕೆಯನ್ನು ಸಲ್ಲಿಸಿದ್ದಿರೋ ಅದರ ಅಧಾರದಲ್ಲಿ ಒಂದಷ್ಟು ಕೆಲಸ ಕಾರ್ಯ ಮಾಡಿದ್ದೇವೆ. ಶೇ.೭೫ ರಷ್ಟು ಪ್ರಣಾಳಿಕೆಯ ಬೇಡಿಕೆಯನ್ನು ನಮ್ಮ ಸರಕಾರ ಈಡೇರಿಸಿದೆ. ಮುಂದಿನ ಚುನಾವಣೆಯ ನಮ್ಮ ಪ್ರಣಾಳಿಕೆ, ನಾಗರಿಕರ ಪ್ರಣಾಳಿಕೆ ಆಗಬೇಕು. ಈ
ಎರಡು ಬಸ್ಸುಗಳ ಓವರ್ಟೇಕ್ ಭರದಲ್ಲಿ ಬಸ್ಸೊಂದು ಡಿವೈಡರ್ ಮೇಲೇರಿದ ಘಟನೆ ಉಚ್ಚಿಲ ಸಮಿಪದ ಮೂಳೂರು ವೆಸ್ಟ್ಕೋಸ್ಟ್ ನರ್ಸರಿ ಬಳಿ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ ೬೬ ರಲ್ಲಿ ಉಡುಪಿ ಕಡೆಯಿಂದ ಮಂಗಳೂರಿನತ್ತ ಚಲಿಸುವ ವಿಶಾಲ್ ಹೆಸರಿನ ಎರಡು ಬಸ್ಸುಗಳು ಓವರ್ಟೇಕ್ ಮಾಡಿಕೊಂಡು ಬಂದು ಮೂಳೂರು ಬಳಿ ಸರ್ವಿಸ್ ರಸ್ತೆಯ ಪಕ್ಕದ ಡಿವೈಡರ್ ಮೇಲೇರಿದೆ.ಘಟನೆಯಿಂದ ಪ್ರಯಾಣಿಕರು ಗಾಯಗೊಂಡಿದ್ದಾರೆ. ಈ ಘಟನೆಯಿಂದ ರೊಚ್ಚಿಗೆದ್ದ ಪ್ರಯಾಣಿಕರು ಬಸ್ಸಿನ ಕಿಟಕಿ ಗಾಜುಗಳನ್ನು
ಸಹಕಾರಿ ಭೀಷ್ಮ ನಾರಾಯಣ ಸನಿಲ್ ಅವಧಿಯಲ್ಲಿ ಸಹಕಾರಿ ಕ್ಷೇತ್ರ ಸಾಕಷ್ಟು ಅಭಿವೃಧ್ಧಿಯನ್ನು ಕಂಡಿದೆ. ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಪ್ರಶಸ್ತಿ ಪಡೆದವರು ನಮಗೆಲ್ಲ ಆದರ್ಶ ಪ್ರಾಯರು.ಧಾರ್ಮಿಕ ಸಮಾಜಿಕ ಶೈಕ್ಷಣಿಕ ಹೀಗೆ ಎಲ್ಲಾ ಕ್ಷೇತ್ರದಲ್ಲಿಯೂ ಸಹಕಾರಿ ಭೀಷ್ಮ ನಾರಾಯಣ ಸನಿಲ್ ಅವರು ಕೈಯಾಡಿಸಿದ್ದಾರೆ ಎಂದು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ರತ್ನ ಚಿತ್ತರಂಜನ್ ಬೋಳಾರ್ ಹೇಳಿದರು. ಅವರು ಹಳೆಯಂಗಡಿ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ
ಮಂಗಳೂರಿನ ರೋಹನ್ ಸಿಟಿ ಯೋಜನೆಯ ನಿರ್ಮಾಪಕರಾದ ರೋಹನ್ ಕಾರ್ಪೋರೇಶನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಅಧ್ಯಕ್ಷ ರೋಹನ್ ಮೊಂತೇರೋ ಅವರಿಗೆ ಟೈಮ್ಸ್ ಆಫ್ ಇಂಡಿಯಾ 2023ನೇ ವರ್ಷದ ಉದಯೋನ್ಮುಖ ಯೋಜನೆ ಪ್ರಶಸ್ತಿ ಲಭಿಸಿದೆ.ಮೈಸೂರಿನ ಸೈಲೆಂಟ್ ಶೋರ್ಸ್ ರೆಸಾರ್ಟ್ ಮತ್ತು ಎಸ್ಪಿಎದಲ್ಲಿ ನಡೆದ ಟೈಮ್ಸ್ ಬ್ಯುಸಿನೆಸ್ ಅವಾರ್ಡ್ ಸಮಾರಂಭದಲ್ಲಿ ಅವರ ಪರವಾಗಿ ಜನರಲ್ ಮ್ಯಾನೇಜರ್ ದೀಮಂತ್ ಸುವರ್ಣ ಮತ್ತು ಸೇಲ್ಸ್ ಅಸೋಸಿಯೇಟ್ ಅಲ್ಫೋನ್ಸ್ ಫೆರ್ನಾಂಡಿಸ್ ಅವರು
ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಗ್ರಾಮ ಶಾಖೆ ಪಡುಬಿದ್ರಿ, ಇದರ ದಶಮಾನೋತ್ಸವ ಅಂಗವಾಗಿ ಮೂರನೇ ವರ್ಷದ ರಾಜ್ಯಮಟ್ಟದ ಜೈ ಭೀಮ್ ಟ್ರೋಫಿ 2023 ಹೆಜಮಾಡಿ ಬಸ್ತಿಪಡ್ಪು ಮೈದಾನದಲ್ಲಿ ಉದ್ಘಾಟನೆಗೊಂಡಿತು. ಅಂಬೇಡ್ಕರ್ ಬಾವಚಿತ್ರಕ್ಕೆ ಹೂ ಹಾರ ಹಾಕುವ ಮೂಲಕ ಜಿಲ್ಲಾ ಶಾಖೆಯ ಪ್ರಧಾನ ಸಂಚಾಲಕ ಸುಂದರ ಮಾಸ್ತರ್ ಉದ್ಘಾಟಿಸಿ ಮಾತನಾಡಿದ ಅವರು, ಅದೇಷ್ಟೋ ಪ್ರತಿಭೆಗಳಿದ್ದರೂ ಅವಕಾಶ ವಂಚಿತವಾಗಿ ಕಮರಿ ಹೋಗುತ್ತಿದೆ. ಆ ನಿಟ್ಟಿನಲ್ಲಿ ಇಂಥಹ ಕ್ರೀಡೆಗಳನ್ನು
ವಿಟ್ಲ: ಬೋರ್ ವೆಲ್ ಲಾರಿ ಮತ್ತು ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ ಸಂಭವಿಸಿ ಸವಾರ ಸ್ಥಳದಲ್ಲೆ ಮೃತಪಟ್ಟ ಘಟನೆ ವಿಟ್ಲದ ಕಾಶಿಮಠದಲ್ಲಿ ನಡೆದಿದೆ. ಉಕ್ಕುಡ ಆಲಂಗಾರು ನಿವಾಸಿ ರಂಜಿತ್(20) ಮೃತಪಟ್ಟವರು. ವಿಟ್ಲ ಕಡೆಯಿಂದ ಉಕ್ಕುಡ ಕಡೆಗೆ ತೆರಳುತ್ತಿದ್ದ ಬೈಕ್ ಗೆ ಎದುರಿನಿಂದ ಬಂದ ಬೋರ್ ವೆಲ್ ಲಾರಿ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ. ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಸಹಸವಾರ ಅಪಾಯದಿಂದ ಪಾರಾಗಿದ್ದಾರೆ. ಸ್ತಳಕ್ಕೆ ವಿಟ್ಲ ಪೆÇಲೀಸರು ಭೇಟಿ ನೀಡಿದ್ದಾರೆ
ಸುರತ್ಕಲ್ : ಯಕ್ಷಧ್ರುವ ಪಟ್ಲ ಫೌಂಡೇಶನ್ (ರಿ.) ಸುರತ್ಕಲ್ ಘಟಕ ಇದರ ವಾರ್ಷಿಕ ಮಹಾಸಭೆ ಇತ್ತೀಚೆಗೆ ಸುರತ್ಕಲ್ ಬಂಟರ ಭವನದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ವಹಿಸಿದ್ದರು. ಗೌರವಾಧ್ಯಕ್ಷ ಮಹಾಬಲ ಪೂಜಾರಿ ಕಡಂಬೋಡಿ ಉಪಸ್ಥಿತರಿದ್ದು, ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಸುಧಾಕರ ಎಸ್ ಪೂಂಜ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಗೌರವಾಧ್ಯಕ್ಷರಾಗಿ ಮಹಾಬಲ ಪೂಜಾರಿ ಕಡಂಬೋಡಿ