Home Archive by category ಕರಾವಳಿ (Page 305)

ಭ್ರಷ್ಟಾಚಾರದ ಬಗ್ಗೆ ಕಾಂಗ್ರೆಸ್ ಮುಖಂಡರು ಉತ್ತರಿಸಲಿ: ಬಿಜೆಪಿ ರಾಜ್ಯ ಘಟಕದ ಪ್ರಧಾನ ವಕ್ತಾರ ಎಂ.ಜಿ. ಮಹೇಶ್ ಸವಾಲು

ಕಾಂಗ್ರೆಸ್ ಭ್ರಷ್ಟಾಚಾರದ ಗಂಗೋತ್ರಿಯಾಗಿದ್ದು, ಕಾಂಗ್ರೆಸ್‍ನ 29 ಶಾಸಕರು ಭ್ರಷ್ಟಾಚಾರ ಆರೋಪಕ್ಕೆ ಗುರಿಯಾಗಿದ್ದಾರೆ. ಅವರಲ್ಲಿ 13 ಜನರು ಈಗಾಗಲೇ ಕೆಪಿಸಿಸಿ ಬಿಡುಗಡೆಗೊಳಿಸಿರುವ ಅಭ್ಯರ್ಥಿಗಳ ಪಟ್ಟಿಯಲ್ಲಿ ಟಿಕೆಟ್ ಪಡೆದಿದ್ದಾರೆ. ಬಿಜೆಪಿ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡುತ್ತಿರುವ ಕಾಂಗ್ರೆಸ್ ಮುಖಂಡರು ಈ ಬಗ್ಗೆ ಸ್ಪಷ್ಟನೆ ನೀಡಲಿ’

ಉಜಿರೆ ಎಸ್.ಡಿ.ಎಂ. ಕಾಲೇಜಿನ ಪ್ರಾಂಶುಪಾಲರಾಗಿ ಡಾ. ಕುಮಾರ ಹೆಗ್ಡೆ ನೇಮಕ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ವಿಜ್ಞಾನ ನಿಕಾಯದ ಡೀನ್, ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಕುಮಾರ ಹೆಗ್ಡೆ ಬಿ.ಎ. ಅವರು ನೇಮಕಗೊಂಡಿದ್ದಾರೆ. ಪ್ರಾಂಶುಪಾಲರಾಗಿದ್ದ ಡಾ. ಎ. ಜಯ ಕುಮಾರ್ ಶೆಟ್ಟಿ ಅವರು ಮಾ.31ರಂದು ಸೇವೆಯಿಂದ ನಿವೃತ್ತರಾದ ಹಿನ್ನೆಲೆಯಲ್ಲಿ ಈ ನೇಮಕಾತಿ ನಡೆದಿದೆ. ಡಾ. ಕುಮಾರ ಹೆಗ್ಡೆ ಬಿ.ಎ. ಅವರು ಮೈಸೂರು ವಿಶ್ವವಿದ್ಯಾನಿಲಯದಿಂದ ಸಸ್ಯಶಾಸ್ತ್ರದಲ್ಲಿ ರ್ಯಾಂಕ್

ಚುನಾವಣಾ ಅಕ್ರಮ ತಡೆಗೆ ಕ್ರಮ : ಮೂಡುಬಿದರೆ ಚುನಾವಣಾಧಿಕಾರಿ ಕೆ.ಮಹೇಶ್ಚಂದ್ರ ಹೇಳಿಕೆ

ಮೂಡುಬಿದಿರೆ ವಿಧಾನ ಸಭಾ ಕ್ಷೇತ್ರದಲ್ಲಿ ಅಳವಡಿಸಲಾಗಿರುವ ಬಂಟಿಂಗ್ಸ್ ಬ್ಯಾನರ್ ಗಳನ್ನು ತೆಗೆಸುವ ಕ್ರಮ ಕೈಗೊಳ್ಳಲಾಗಿದೆ, ಯಾವುದೇ ಕಾರ್ಯಕ್ರಮ ನಡೆಸುವಲ್ಲಿ ಅನುಮತಿ ಪಡೆದುಕೊಂಡೇ ನಡೆಸಬೇಕು, ರಾಜಕಾರಣಿಗಳು, ಚುನಾಯಿತ ಸದಸ್ಯರು ವೇದಿಕೆಯೇರಿ ಭಾಷಣ ಮಾಡುವಂತಿಲ್ಲ. ಯಾವುದೇ ಭರವಸೆ ನೀಡುವುದಾಗಲೀ, ಖಾಸಗಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಮತಯಾಚನೆ ಮಾಡುವು ದಾಗಲೀ ಕಂಡುಬಂದಲ್ಲಿ ಕಾನೂನು ಕ್ರಮ ಕೈಗೊಳ್ಳ ಲಾಗುವುದೆಂದು ಚುನಾವಣಾ ಅಧಿಕಾರಿಯಾಗಿರುವ ಕೆ.ಮಹೇಶಚಂದ್ರ

ಮಾಪ್ಸ್ ಕಾಲೇಜಿನಲ್ಲಿ ಸಿ.ಎ ಪೌಂಡೇಶನ್ ಕೋರ್ಸಿನ ಬಗ್ಗೆ ಓರಿಯೆಂಟೇಶನ್ ಕಾರ್ಯಕ್ರಮ

ಮಾಪ್ಸ್ ಕಾಲೇಜು, ಮಂಗಳೂರು ಇಲ್ಲಿ ಜೂನ್ ತಿಂಗಳಲ್ಲಿ ನಡೆಯುವ ಸಿ.ಎ ಪೌಂಡೇಶನ್ ಪರೀಕ್ಷೆಯ ಬಗ್ಗೆ ಆಸಕ್ತ ವಿದ್ಯಾರ್ಥಿಗಳಿಗೆ ಹಾಗೂ ವಿದ್ಯಾರ್ಥಿಗಳ ಹೆತ್ತವರಿಗೆ ಓರಿಯೆಂಟೇಶನ್ ಕೋರ್ಸನ್ನು ನಡೆಸಲಾಯಿತು. ಕಾಲೇಜಿನ ಅಧ್ಯಕ್ಷರಾದ ಶ್ರೀ ದಿನೇಶ್ ಕುಮಾರ್ ಆಳ್ವ ಇವರು ಮಾತಾನಾಡುತ್ತಾ ಮಾಪ್ಸ್ ಕಾಲೇಜು ಸಿ.ಎ ಕೋಚಿಂಗ್‍ಗೆ ಹೆಸರಾದ ಸಂಸ್ಥೆಯಾಗಿದ್ದು ಅತ್ಯಂತ ಪರಿಣ ತಿ ಹೊಂದಿರುವ ಪ್ರಾಚಾರ್ಯರು ಕೋಚಿಂಗ್ ಒದಗಿಸುತ್ತಿದ್ದು, ಹಾಜಾರಾದ ವಿದ್ಯಾರ್ಥಿಗಳು ಉತ್ತಮ

ಭಾರತದ ದೇಶೀ ಜ್ಞಾನದ ದಾಖಲೀಕರಣ ಅಗತ್ಯ: ಪ್ರೊ. ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ

ಉಜಿರೆ, ಮಾ.31: ಭಾರತದ ದೇಶೀಯ ಜ್ಞಾನ- ಸಾಂಪ್ರದಾಯಿಕ ಜ್ಞಾನದ ದಾಖಲೀಕರಣವಾಗಿ, ಅದು ಒಪ್ಪಿತಗೊಂಡು ಸದುದ್ದೇಶಕ್ಕೆ ಸರಿಯಾದ ರೀತಿಯಲ್ಲಿ ಬಳಸಲ್ಪಡಬೇಕಿದೆ. ದೇಶೀಯ ತಾಂತ್ರಿಕ ಜ್ಞಾನ ಕೂಡ ದಾಖಲೀಕರಣಗೊಂಡು ದೇಶದ ಉನ್ನತ ಶಿಕ್ಷಣದ ಪಠ್ಯಕ್ರಮದಲ್ಲಿ ಸಂಯೋಜಿಸಲ್ಪಡುವ ಅಗತ್ಯವಿದೆ. ಇದು ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ) 2020ರ ಮೂಲಕ ಸಾಧಿತವಾಗುತ್ತಿದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿ ಪ್ರೊ. ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ ಹೇಳಿದರು. ಇಲ್ಲಿನ

ಉಜಿರೆ ಬಿವೋಕ್‌ ವಿದ್ಯಾರ್ಥಿಗಳಿಂದ ‘ಟ್ಯಾಲೆಂಟ್ಸ್ ಡೇ’ ಸಿನೆಮಾ ಬಿಡುಗಡೆ

ಉಜಿರೆ: ಎಸ್‌ಡಿಎಂ ಕಾಲೇಜಿನ ಬಿ.ವೋಕ್ (ಡಿಜಿಟಲ್ ಮೀಡಿಯಾ & ಫಿಲ್ಮ್ ಮೇಕಿಂಗ್) ವಿಭಾಗದ ವತಿಯಿಂದ ವಿದ್ಯಾರ್ಥಿಗಳು ನಿರ್ದೇಶಿಸಿ ನಿರ್ಮಿಸಿರುವ ವಿಭಾಗದ ಮೊದಲ ಫೀಚರ್ ಸಿನಿಮಾ ‘ಟ್ಯಾಲೆಂಟ್ಸ್ ಡೇ’ ಇದರ ಬಿಡುಗಡೆ ಕಾರ್ಯಕ್ರಮವು ಕಾಲೇಜಿನ ಯುಜಿ ಸೆಮಿನಾರ್ ಹಾಲ್‌ನಲ್ಲಿ ನಡೆಯಿತು.  ಸಿನಿಮಾ ಬಿಡುಗಡೆ ಮಾಡಿ ಮಾತನಾಡಿದ  ಮನಶಾಸ್ತ್ರಜ್ಞೆ ಸಿಂಚನಾ ಉರುಬೈಲು, “ಸಿನಿಮಾ ನೋಡುವಾಗ ಇದು ವಿದ್ಯಾರ್ಥಿಗಳು ನಿರ್ಮಿಸಿರುವುದು ಎಂದು ಅನಿಸುವುದೇ

ಕಡಬ : ವಾಟ್ಸ್ಯಾಪ್ ಸ್ಟೇಟಸ್ ಹಾಕಿ, ನೇಣು ಬಿಗಿದು ಯುವಕ ಆತ್ಮಹತ್ಯೆ ‌

ಕಡಬ : ವಾಟ್ಸ್ಯಾಪ್ ಸ್ಟೇಟಸ್ ಹಾಕಿದ ಬಳಿಕ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ‌ಮಾಡಿಕೊಂಡ ಘಟನೆ ಕಡಬ ತಾಲೂಕಿನ ನೆಲ್ಯಾಡಿ ಸಮೀಪದ ಇಚಿಲಂಪಾಡಿಲ್ಲಿ ಕಳೆದ ತಡರಾತ್ರಿ ನಡೆದಿದೆ. ಮೃತ ಯುವಕನನ್ನು ರೆನೀಶ್ (27) ವರ್ಷ ಎಂದು ಗುರುತಿಸಲಾಗಿದೆ. ಮೃತ ರೆನೀಶ್ ತಂದೆ ತಾಯಿ ಮರಣ ಹೊಂದಿದ್ದು, ಈತನ ತಮ್ಮ ಕಳೆದ ಮೂರು ವರ್ಷದ ಹಿಂದೆ ಮಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ. ರೆನೀಶ್ ಮನೆಯಲ್ಲಿ ಒಬ್ಬಂಟಿಯಾಗಿ ವಾಸವಾಗಿದ್ದು, ವಿದ್ಯುತ್ ಲೈನ್ ನ ಕೆಲಸಕ್ಕೆ

ದೇಶೀ ಶಿಕ್ಷಣದ ನೆಲೆಯಲ್ಲಿ ಹೊಸ ಶಿಕ್ಷಣ ನೀತಿಯ ಯಶಸ್ಸು ಕಾದು ನೋಡಬೇಕಿದೆ: ಪ್ರೊ. ಪಿ.ವಿ. ಕೃಷ್ಣ ಭಟ್ಟ

ಉಜಿರೆ, ಮಾ.29: ಭಾರತದ ದೇಶೀಯ ಶಿಕ್ಷಣ ಪದ್ಧತಿಗಳು ಜೀವನ ಪದ್ಧತಿ, ಮೌಲ್ಯಗಳನ್ನು ಆಧರಿಸಿ ಇದ್ದವು. ಇತ್ತೀಚಿನ ದಿನಗಳಲ್ಲಿ ಶಿಕ್ಷಣದ ಬಗ್ಗೆ ಪುನರ್ ವಿಮರ್ಶೆ ನಡೆದಿದೆ. ಹೊಸ ಶಿಕ್ಷಣ ನೀತಿಯೂ ಬಂದಿದೆ. ಆದರೆ ಅದು ಇದುವರೆಗೆ ಉಂಟಾಗಿರುವ ಕೊರತೆಗಳನ್ನು ಎಷ್ಟರ ಮಟ್ಟಿಗೆ ನಿವಾರಿಸುತ್ತದೆ ಎಂಬುದನ್ನು ಕಾದು ನೋಡಬೇಕಿದೆ ಎಂದು ಒಡಿಷಾದ ಕೇಂದ್ರೀಯ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ.ವಿ. ಕೃಷ್ಣ ಭಟ್ಟ ಅವರು ಹೇಳಿದರು. ಇಲ್ಲಿನ ಎಸ್.ಡಿ.ಎಂ. ಕಾಲೇಜಿನ ಸೆಮಿನಾರ್

ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನೆ

ಪರ್ಲಾಣಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು, ಉಜಿರೆಯ ರಾಷ್ಟ್ರೀಯ ಸೇವಾ ಯೋಜನಾ ಘಟಕವು ತನ್ನ ಸುವರ್ಣೋತ್ಸವದಲ್ಲಿ ಇದ್ದು , 2022 -23ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರವನ್ನು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಪರ್ಲಾಣಿಯಲ್ಲಿ ಆಯೋಜಿಸಲಾಗಿದೆ. ಏಳು ದಿನಗಳ ವಿಶೇಷ ಶಿಬಿರವು ಗುರುವಾರದಂದು ಗಣ್ಯರ ಸಮ್ಮುಖದಲ್ಲಿ ವಿದ್ಯುಕ್ತವಾಗಿ ಚಾಲನೆಗೊಂಡಿತು. “ವಿಜ್ಞಾನ ಮತ್ತು ವೈಜ್ಞಾನಿಕ ಮನೋಧರ್ಮಕ್ಕಾಗಿ ಯುವ ಜನತೆ” ಎಂಬ ಧ್ಯೆಯ ವಾಕ್ಯದಡಿಯಲ್ಲಿ

ಕಾರ್ಕಳ : ನಕಲಿ ಪತ್ರಕರ್ತರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ಕೆಲವರನ್ನು ಬೆದರಿಸಿ ಹಣ ವಸೂಲಿ ಮಾಡುತ್ತಿರುವ ನಕಲಿ ಪತ್ರಕರ್ತರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕಾರ್ಕಳ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರು ಕಾರ್ಕಳ ಗ್ರಾಮಾಂತರ ಎಸ್‍ಐ ತೇಜಸ್ವಿ ಅವರಿಗೆ ಮನವಿ ಸಲ್ಲಿಸಿತು.ಇತ್ತೀಚೆಗೆ ಕೆಲವು ವ್ಯಕ್ತಿಗಳು ಪತ್ರಕರ್ತರ ಸಂಘ ಮತ್ತು ಪತ್ರಕರ್ತರ ಹೆಸರು ಹೇಳಿ ಹಣ ಸಂಗ್ರಹಿಸುವ, ವಸೂಲಿ ಮಾಡುವ ಹಾಗೂ ಬೆದರಿಸುವ ಕೆಲಸದಲ್ಲಿ ತೊಡಗಿಸಿಕೊಂಡಿವುದು ಸಂಘದ ಗಮನಕ್ಕೆ ಬಂದಿದೆ. ಯಾವುದೇ