Home Archive by category ಕರಾವಳಿ (Page 307)

ರಂಗ್ ದೇ ಬರ್ಸಾ ಹೋಲಿ ಸಂಭ್ರಮ: ಭಜರಂಗದಳ ಕಾರ್ಯಕರ್ತರಿಂದ ದಾಂಧಲೆ

ನಗರ ಮರೋಳಿಯಲ್ಲಿ ರಂಗ್ ದೇ ಬರ್ಸಾ ಹೋಲಿ ಸಂಭ್ರಮದ ಪಾರ್ಟಿಗೆ ಬಜರಂಗದಳ ಕಾರ್ಯಕರ್ತರು ದಾಳಿ ಮಾಡಿದ ಘಟನೆ ನಡೆದಿದೆ. ಹೋಳಿ ಆಚರಣೆಯಲ್ಲಿ ಬಣ್ಣ ಎರಚಿಕೊಂಡು ಯುವಕ ಯುವತಿಯರು ಸಂಭ್ರಮಿಸುತ್ತಿದ್ದರು. ಅನ್ಯಧರ್ಮದ ಯುವಕರ ಜೊತೆ ಹೋಳಿ ಆಚರಣೆ ಎಂದು ಆರೋಪಿಸಿ ಭಜರಂಗದಳ ಕಾರ್ಯಕರ್ತರು ದಾಳಿ ನಡೆಸಿ ಬ್ಯಾನರ್ ಹರಿದು ಹಾಕಿ ವಸ್ತುಗಳನ್ನು ಪುಡಿಗೈದಿದ್ದಾರೆ. ಈ ವೇಳೆ

ಮಂಗಳೂರು : ಮನಪಾ ಮಾಜಿ ಸದಸ್ಯೆ ಮೀರಾ ಅಶೋಕ್ ನಿಧನ

ಮಂಗಳೂರು ಮಹಾನಗರಪಾಲಿಕೆ ತಿರುವೈಲ್ ವಾರ್ಡಿನ ಮಾಜಿ ಸದಸ್ಯರುವಾಮಂಜೂರಿನ ಸದಾಶಿವ ನಗರ ಬಡಾವಣೆಯ ನಿವಾಸಿ ಶ್ರೀಮತಿ ಮೀರಾ ಅಶೋಕ್ ರವರು ಅಲ್ಪಕಾಲದ ಅನಾರೋಗ್ಯದಿಂದಾಗಿ ಇದೆ ಮಾರ್ಚ್ ತಿಂಗಳ 19ನೇ ತಾರೀಖಿನಭಾನುವಾರದಂದು ನಗರದ ಕೆ .ಎಂ .ಸಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು .ಮಂಗಳೂರು ಮಹಾನಗರಪಾಲಿಕೆಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದು ಮಾತರವಲ್ಲದೆವಿವಿಧ ಸಂಘಸಂಸ್ಥೆಗಳ ಲ್ಲಿ ಮುಖ್ಯ ಹುದ್ದೆಯನ್ನು ಅಲಂಕರಿಸಿಕೊಂಡು ಸದಾ ಚಟುವಟಿಕೆಯಿಂದ ಜನರನ್ನು ಸಂಘಟಿಸಿಕೊಂಡು

ಬಂಟ್ವಾಳ: ಕಾಂಗ್ರೆಸ್ ವತಿಯಿಂದ ಕರಾವಳಿ ಪ್ರಜಾಧ್ವನಿ ಯಾತ್ರೆ

ಬಂಟ್ವಾಳ: ಕರ್ನಾಟಕವನ್ನು ಸಾಮಾಜಿಕ ಸಾಮರಸ್ಯದ, ಸರ್ವ ಜನಾಂಗದ ಶಾಂತಿಯ ತೋಟವನ್ನಾಗಿಸಿ ಅಭಿವೃದ್ಧಿಯ ಪಥದಲ್ಲಿ ಮುನ್ನಡೆಸಲು ಕಾಂಗ್ರೆಸ್ ಆಡಳಿತದ ಸರಕಾರವನ್ನು ಆಯ್ಕೆ ಮಾಡಬೇಕು ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಹೇಳಿದರು. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ವತಿಯಿಂದ ನಡೆಯುತ್ತಿರುವ ಕರಾವಳಿ ಪ್ರಜಾಧ್ವನಿ ಯಾತ್ರೆ ಪ್ರಯುಕ್ತ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ವಗ್ಗ, ಕಾರಿಂಜ ಕ್ರಾಸ್ ಜಂಕ್ಷನ್‌ನಲ್ಲಿ ಶನಿವಾರ ನಡೆದ ಸಾರ್ವಜನಿಕ

 ಕೈಲಾಶ್ ವಸತಿ ಸಮುಚ್ಚಯ ಗುಣನಾಥನ ಮೋಕ್ ಅಪ್ ಫ್ಲ್ಯಾಟ್‌ಗೆ ಅಭೂತಪೂರ್ವ ಸ್ಪಂದನೆ

ಭಾರ್ಗವಿ ಬಿಲ್ಡರ್ಸ್ ಅವರಿಂದ ಕೊಟ್ಟಾರದ ಮಾಲೆಮಾರ್ ಬಳಿ ನಿರ್ಮಾಣಗೊಳ್ಳುತ್ತಿರುವ ಅತ್ಯಾಧುನಿಕ ‘ಕೈಲಾಶ್’ ವಸತಿ ಸಮುಚ್ಚಯದಲ್ಲಿ ಗುಣನಾಥ-ಶಿಲ್ಪಾ ದಂಪತಿಯ ಮೋಕ್‌ಅಪ್ ಫ್ಲ್ಯಾಟ್ ಉದ್ಘಾಟನೆಯ ಬಳಿಕ ಜನರಿಂದ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗುತ್ತಿದೆ. ಈ ಸಮುಚ್ಚಯದಲ್ಲಿ ಶೇ.75ರಷ್ಟು ಫ್ಲ್ಯಾಟ್‌ಗಳು ಬುಕ್ಕಿಂಗ್ ಆಗಿವೆ. ಬುಕ್ಕಿಂಗ್ ಮಾಡಿದವರುತಮ್ಮ ಸ್ನೇಹಿತರು, ಪರಿಚಯಸ್ಥರನ್ನು ಇಲ್ಲಿ ಫ್ಲ್ಯಾಟ್ ಬುಕ್ ಮಾಡಲು ಪ್ರೇರೇಪಿಸುತ್ತಿದ್ದಾರೆ. ಇನ್ನು ಕೆಲವೇ

ಪುತ್ತೂರು: ರೈಲ್ವೆ ಮೇಲ್ಸೇತುವೆ ಅಗಲೀಕರಣಕ್ಕೆ ಶಿಲಾನ್ಯಾಸ

ಪುತ್ತೂರು: ಪುತ್ತೂರು ನಗರದ ನೆಹರುನಗರದಿಂದ ವಿವೇಕಾನಂದ ಕಾಲೇಜು ಸಂಪರ್ಕಿಸುವ ರಸ್ತೆಯಲ್ಲಿ ರೈಲ್ವೇ ಇಲಾಖೆಯ ಅನುದಾನ ರೂ.5.34 ಕೋಟಿ ವೆಚ್ಚದಲ್ಲಿ ರೈಲ್ವೇ ಮೇಲ್ಸೇತುವೆಯ ಅಗಲೀಕರಣ ಕಾಮಗಾರಿಗೆ ಶಾಸಕ ಸಂಜೀವ ಮಠಂದೂರು ಅವರು ಶಿಲಾನ್ಯಾಸ ನೆರವೇರಿಸಿದರು. ರೈಲ್ವೇ ಮೇಲ್ಸೇತುವೆಯ ಬಳಿ ತೆಂಗಿನ ಕಾಯಿ ಒಡೆದು ಶಿಲಾನ್ಯಾಸ ನೆರವೇರಿಸಿದ ಶಾಸಕ ಸಂಜೀವ ಮಠಂದೂರು ಅವರು ಮಾತನಾಡಿ ನಮ್ಮ ಉದ್ದೇಶ ಇರುವುದು ಈ ರಸ್ತೆ ಮುಂದೆ ಚತುಷ್ಪಥ ರಸ್ತೆಯಾಗಬೇಕು. ಈ ನಿಟ್ಟಿನಲ್ಲಿ

ಪುತ್ತೂರು ಬಸ್ಸು ನಿಲ್ದಾಣಕ್ಕೆ ‘ಕೋಟಿ ಚೆನ್ನಯ’ ನಾಮಕರಣ

ಪುತ್ತೂರು: ಜಿಲ್ಲೆಯ ಅವಳಿ ವೀರರಾದ ಕೋಟಿ ಚೆನ್ನಯರ ಹೆಸರನ್ನು ಪುತ್ತೂರಿನ ಬಸ್ಸು ನಿಲ್ದಾಣಕ್ಕೆ ಇಡುವ ಮೂಲಕ ಅವರ ಹೆಸರನ್ನು ಮುಂದಿನ ಪೀಳಿಗೆಗೆ ನೆನಪಿಸುವ ಕೆಲಸ ಮಾಡಲಾಗಿದೆ. ಸರ್ಕಾರವು ಅವಳಿ ವೀರರ ನಾಮಕರಣ ಮಾಡಿ ಅವರಿಗೆ ಮಾನ್ಯತೆಯನ್ನು ನೀಡುವ ಕಾರ್ಯ ಮಾಡಿದೆ ಎಂದು ಪುತ್ತೂರು ಶಾಸಕ ಸಂಜೀವ ಮಠಂದೂರು ಹೇಳಿದರು. ಅವರು ಭಾನುವಾರ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದದ ಪುತ್ತೂರು ಬಸ್ಸು ನಿಲ್ದಾಣಕ್ಕೆ ‘ಕೋಟಿ ಚೆನ್ನಯ’ ಬಸ್ಸು ನಿಲ್ದಾಣ  ನಾಮಕರಣ

ಮಂಗಳೂರು: ಮೆ. ಕೆ ಕಮಲಾಕ್ಷ ಪೈ ಆಂಡ್ ಸನ್ಸ್ ಸಂಸ್ಥೆಯ ಮಾಲಕ ನಿಧನ

ಕೆ ಕಮಲಾಕ್ಷ ಪೈ (91 ವ) ನಗರದ ಮಣ್ಣಗುಡ್ಡೆಯಲ್ಲಿರುವ ತಮ್ಮ ನಿವಾಸದಲ್ಲಿ ಅಲ್ಪಕಾಲದ ಅಸೌಖ್ಯದಿಂದ ಶನಿವಾರ (ಮಾ 25)ನಿಧನ ಹೊಂದಿದರು. ಎಳವೆಯಿಂದಲೇ ವ್ಯವಹಾರಿಕವಾಗಿ ತಮ್ಮನ್ನು ತೊಡಗಿಸಿಕೊಂಡಿದ್ದ ಅವರು ಏಳುವರೆ ದಶಕಗಳ ಕಾಲ ತಮ್ಮ ವ್ಯವಹಾರ ಸಂಸ್ಥೆಯನ್ನು ಮುನ್ನಡೆಸಿಕೊಂಡು ಬಂದಿದ್ದರು. ಅವರು ನಾಲ್ವರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಮೂಡುಬಿದಿರೆ: ಹೈಮಾಸ್ಟ್ ದೀಪ ಲೋಕಾರ್ಪಣೆ

ಮೂಡುಬಿದಿರೆ: ಪುರಸಭಾ ವ್ಯಾಪ್ತಿಯ ಪ್ರಾಂತ್ಯ ಗ್ರಾಮದ 12ನೇ ವಾರ್ಡಿನ ಹಳೆ ಪೊಲೀಸ್ ಠಾಣೆಯ ಬಳಿ ರೂ 9.50 ಲಕ್ಷ ಪುರಸಭಾ ನಿಧಿಯಿಂದ ಮಾಡಿರುವ ಅಭಿವೃದ್ಧಿ ಕಾಮಗಾರಿಗಳಾದ ರಸ್ತೆ ಅಗಲೀಕರಣ ಮತ್ತು ಇಂಟರ್ ಲಾಕ್ ಅಳವಡಿಕೆ, ಚರಂಡಿ ಹಾಗೂ ಹೈ ಮಾಸ್ಟ್ ದೀಪವನ್ನು ಶನಿವಾರ ಸಂಜೆ ಪುರಸಭಾಧ್ಯಕ್ಷ ಪ್ರಸಾದ್ ಕುಮಾರ್ ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ ಪುರಸಭಾ ಉಪಾಧ್ಯಕ್ಷೆ ಸುಜಾತ ಶಶಿಕಿರಣ್, ಸ್ಥಾಯಿ ಸಮಿತಿ ಅಧ್ಯಕ್ಷ ನಾಗರಾಜ ಪೂಜಾರಿ, ಪುರಸಭಾ ಸದಸ್ಯರಾದ ಸ್ವಾತಿ

ವಿಕಲಚೇತನ ಫಲಾನುಭವಿಗಳಿಗೆ ಸಾಧನಾ ಸಲಕರಣೆ ವಿತರಣೆ

ಮೂಡುಬಿದಿರೆ: 2022-23 ನೇ ಸಾಲಿನ ತಾಲೂಕು ಪಂಚಾಯತ್ ಅನಿರ್ಬಂಧಿತ ಅನುದಾನದಡಿ 14,ಮಂದಿ ಫಲಾನುಭವಿಗಳಿಗೆ ದ್ವಿಚಕ್ರ ವಾಹನ, ವೀಲ್ ಚೆರ್ ಹಾಗೂ ಶ್ರವಣ ಸಾಧನಗಳನ್ನು ಮಾನ್ಯ ಶಾಸಕ ಉಮಾನಾಥ ಎ. ಕೋಟ್ಯಾನ್ ಅವರು ಶನಿವಾರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ವಿತರಿಸಿದರು.ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ದಯಾವತಿ ಈ ಸಂದರ್ಭದಲ್ಲಿದ್ದರು.

ಮೂಳೂರು: ಬೈಕ್‌ಗೆ ಟ್ಯಾಂಕರ್ ಢಿಕ್ಕಿ: ಅಪಘಾತದಲ್ಲಿ ಇಬ್ಬರು ಮೃತ್ಯು

ಮೂಳೂರು ವೆಸ್ಟ್ ಕೋಸ್ಟ್ ನರ್ಸರಿ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಟ್ಯಾಂಕರ್ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ಬೈಕ್ ಸವಾರ ಸ್ಥಳದಲ್ಲಿಯೇ ಧಾರುಣವಾಗಿ ಮೃತಪಟ್ಟಿದ್ದು, ಇನ್ನೋರ್ವ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಶನಿವಾರ ಸಂಜೆಯ ವೇಳೆ ನಡೆದಿದೆ. ಪಲ್ಸರ್ ಬೈಕ್ ಮತ್ತು ಟ್ಯಾಂಕರ್ ಉಡುಪಿ ಕಡೆಯಿಂದ ಪಡುಬಿದ್ರಿ ಕಡೆ ಸಾಗುತ್ತಿತ್ತು.   ಹಿಂಬದಿಯಿಂದ ಬಂದ ಟ್ಯಾಂಕರ್ ಬೈಕಿಗೆ ಡಿಕ್ಕಿ ಹೊಡೆದಿದೆ.ಬೈಕ್ ನಲ್ಲಿದ್ದವರು ಯಾರೆಂದು