ಪಡುಬಿದ್ರಿ ಸಮೀಪದ ಯುಪಿಸಿಎಲ್ ಕಂಪನಿಯಿಂದ ಕೇರಳಕ್ಕೆ ವಿದ್ಯುತ್ ಸರಬರಾಜು ನಡೆಸಲು ಟವರ್ ನಿರ್ಮಾಣಕ್ಕೆ ಜಿಲ್ಲಾಡಳಿತದ ನಿರ್ದೇಶನದಂತೆ ಗ್ರಾಮಸ್ಥರಿಗೆ ಮಾಹಿತಿ ನೀಡದೆ ಆಗಮಿಸಿದ ಅಧಿಕಾರಿಗಳ ತಂಡವನ್ನು ಗ್ರಾಮಸ್ಥರು ವಾಪಾಸು ಕಳುಹಿಸಿದ ಘಟನೆ ಇನ್ನಾ ಗ್ರಾಮದಲ್ಲಿ ನಡೆದಿದೆ. ಈ ಬಗ್ಗೆ ಮಾತನಾಡಿದ ಇನ್ನಾ ಗ್ರಾ.ಪಂ.ಸದಸ್ಯ ದೀಪಕ್ ಕೋಟ್ಯಾನ್, ಜನರ ವಿರೋಧದ ನಡುವೆಯೂ
ಬಂಟ್ವಾಳದ ಅಮ್ಟೂರು ಗ್ರಾಮದ ಕರಿಂಗಾಣದಲ್ಲಿರುವ ಶ್ರೀ ಮಂತ್ರದೇವತಾ ಕ್ಷೇತ್ರ ಸಾನಿಧ್ಯದಲ್ಲಿ ಶ್ರೀ ಮಂತ್ರದೇವತೆ, ಸ್ವಾಮಿ ಕೊರಗಜ್ಜ ಮತ್ತು ಶ್ರೀ ಗುಳಿಗ ದೈವಗಳ ವಾರ್ಷಿಕ ಕೋಲೋತ್ಸವವು ಫೆ.10 ಮತ್ತು 11 ರಂದು ನಡೆಯಲಿದೆ. ಕಟ್ಟೆಮಾರು ಶ್ರೀ ಮಂತ್ರದೇವತಾ ಸಾನಿಧ್ಯ.. ಬೇಡಿ ಬಂದ ಭಕ್ತರ ಇಷ್ಟರ್ಥಗಳನ್ನು ಈಡೇರಿಸೋ ಪುಣ್ಯ ಕ್ಷೇತ್ರ.. ಕ್ಷೇತ್ರದಲ್ಲಿ ಇದೇ ಬರುವ ಫೆ.೧೦ರಂದು ದೊಂದಿ ಬೆಳಕಿನಲ್ಲಿ ಶ್ರೀ ಮಂತ್ರದೇವತೆ ದೈವದ ವೈಭವದ ವಾರ್ಷಿಕ ಕೋಲೋತ್ಸವಹಾಗೂ ೧೧ರಂದು
ಬೈಂದೂರು ತಾಲೂಕಿನ ಗಂಗೊಳ್ಳಿ, ಮ್ಯಾಂಗನೀಸ್ ರೋಡ್ ಬಳಿ ಲಕ್ಷಾಂತರ ರೂಪಾಯಿ ಸೀಸ ಕಳ್ಳತನ ಮಾಡಿದ ಘಟನೆ ನಡೆದಿದೆ. ಅಕ್ಷಯ ಖಾರ್ವಿ ಎಂಬವರಿಗೆ ಸೇರಿದ ಅಂಗಡಿಯಾಗಿದ್ದು, ಕಳ್ಳಲು ನುಗ್ಗಿ ಲಕ್ಷಾಂತ ರೂಪಾಯಿ ಮೌಲ್ಯದ ಸೀಸ ಎಗರಿಸಿ ಪರಾರಿಯಾಗಿದ್ದರು. ಕಳ್ಳರ ಕೈಚಳಕದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸಿಸಿ ಕ್ಯಾಮೆರಾ ದೃಶ್ಯ ಆಧರಿಸಿ ಪೊಲೀಸ್ ಕಾರ್ಯಾಚರಣೆಯಲ್ಲಿ ಓರ್ವನನ್ನು ಬಂಧಿಸಲಾಗಿದೆ. ಕಳ್ಳತನದಲ್ಲಿ ಭಾಗಿಯಾಗಿದ್ದ ಅಶ್ಫಕ್ ನನ್ನು ಗಂಗೊಳ್ಳಿ ಪೋಲಿಸರು
ರಥ ಯಾತ್ರೆಯ ಮೂಲಕ ಬಿಜೆಪಿಯನ್ನು ರಾಷ್ಟ್ರ ಮಟ್ಟಕ್ಕೆ ಏರಿಸಿದ ನಾಯಕರಾದ ಲಾಲ್ ಕೃಷ್ಣ ಅಡ್ವಾಣಿಯವರಿಗೆ ಭಾರತ ರತ್ನ ಗೌರವ ಸಲ್ಲುತ್ತಿರುವುದಾಗಿ ಇಂದು ಪ್ರಧಾನಿ ಮೋದಿಯವರು ಅಡ್ವಾಣಿಯವರನ್ನು ಅವರ ಮನೆಯಲ್ಲಿ ಭೇಟಿ ಮಾಡಿ ತಿಳಿಸಿದರು.ರಾಮ ಮಂದಿರ ಹೋರಾಟದ ಮುಖ್ಯ ರೂವಾರಿಯಾಗಿದ್ದರು ಅಡ್ವಾಣಿ. 1977ರ ಜನತಾ ಸರಕಾರದಲ್ಲಿ ಮತ್ತು ವಾಜಪೇಯಿಯವರ ಸಂಪುಟದಲ್ಲಿ ಅಡ್ವಾಣಿಯವರು ಸಚಿವರಾಗಿದ್ದರು; ಉಪ ಪ್ರಧಾನಿ ಆಗಿದ್ದರು. ಆಗ ಮುಂದಿನ ಪ್ರಧಾನಿ ಅಡ್ವಾಣಿಯವರು ಎಂದು
ತಮಿಳು ನಟ ವಿಜಯ್ ತಮಿಳಗ ವೆಟ್ರಿ ಕಳಗಂ ಎಂಬ ರಾಜಕೀಯ ಪಕ್ಷವನ್ನು ಸ್ಥಾಪಿಸಿದ್ದಾರೆ. ಆ ಹೆಸರಿನ ಅರ್ಥ ತಮಿಳುನಾಡು ವಿಜಯ ಸಂಘಟನೆ. ವಿಜಯ್ ಎಂದರೆ ಗೆಲುವು, ವೆಟ್ರಿ ಎಂದೇ ಅರ್ಥ. ನಟಿಸುತ್ತಿರುವ ಎರಡು ಸಿನಿಮಾ ಮುಗಿಸಿ ಚಿತ್ರ ರಂಗಕ್ಕೆ ವಿದಾಯ ಹೇಳುವುದಾಗಿ ಸಹ ವಿಜಯ್ ಹೇಳಿದ್ದಾರೆ. ಕ್ರಿಶ್ಚಿಯನ್ ತಂದೆ ಎಸ್. ಎ. ಚಂದ್ರಶೇಖರ್, ಹಿಂದೂ ತಾಯಿ ಶೋಭಾ ಪುತ್ರ ವಿಜಯ್ರ ಮಡದಿ ಶ್ರೀಲಂಕಾ ತಮಿಳದಿ. ಹುಟ್ಟು ಹೆಸರು ಜೋಸೆಫ್ ವಿಜಯ್ ಚಂದ್ರಶೇಖರ್. ವಿಜಯ್ ರಾಜಕೀಯ ಪಕ್ಷ
ಬಜಪೆ: ಗುರುಪುರ ಫಲ್ಗುಣಿ ನದಿಯ ಸೇತುವೆ ಸಮೀಪದಿಂದ ಯುವಕನೋರ್ವ ನಾಪತ್ತೆಯಾಗಿರುವ ಘಟನೆ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಳಲಿ ಮಟ್ಟಿ ತಿಮ್ಮೊಟ್ಟು ನಿವಾಸಿ ಚೇತನ್ ಪೂಜಾರಿ ( 27) ಎಂದು ತಿಳಿದು ಬಂದಿದೆ. ಗುರುವಾರ ಸಂಜೆಯಿಂದ ಗುರುಪುರ ಫಲ್ಗುಣಿ ನದಿ ಸೇತುವೆಯಲ್ಲಿ ಬೈಕ್ ವೊಂದು ನಿಲ್ಲಿಸಿವ ಕುರಿತು ಬಜ್ಪೆ ಪೊಲೀಸರಿಗೆ ಮಾಹಿತಿ ಬಂದಿದೆ. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಬೈಕ್ ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದಾಗ
ಮಾರ್ಚ್ 10ರಂದು ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆಯು ಚಿಕ್ಕಮಂಗಳೂರು ಜಿಲ್ಲೆಯ ಮಲ್ಲಂದೂರ್ ನಾರಾಯಣ ಗುರು ಸಮಾಜ ಸೇವಾ ಸಂಘದಲ್ಲಿ ಅಧ್ಯಕ್ಷರಾದ ರಾಘವೇಂದ್ರ ಪೂಜಾರಿಯವರ ನೇತೃತ್ವದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಡಾ। ರಾಜಶೇಖರ್ ಕೋಟ್ಯಾನ್,ಉಪಾಧ್ಯಕ್ಷರಾದ ಹರೀಶ್ ಸಾಲ್ಯಾನ್,ಮಹಾಮಂಡಲದ ಸದಸ್ಯರಾದ ರತ್ನಾಕರ್ ಸಾಲ್ಯಾನ್ ಗೋವಾ,ವಾಸು ಪೂಜಾರಿ,ಗಣೇಶ್ ಪೂಜಾರಿ,ಉಪಾಧ್ಯಕ್ಷರಾದ ಸತೀಶ್
ಚುನಾವಣಾ ಪೂರ್ವ ಮಧ್ಯಾವಧಿ ಆಯವ್ಯಯ ಮಂಡನೆ ಆಗಿದೆ. ಸಂಸದ ಶಶಿ ತರೂರ್ ಪ್ರಕಾರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಬಜೆಟ್ ಅಂಕಿ ಅಂಶಗಳಿಗಿಂತ ಹೆಚ್ಚಾಗಿ ಗಿಲೀಟಿನ ಮಾಮೂಲಿ ಶಬ್ದಗಳದ್ದಾಗಿದೆ. ಈ ಮಾತನ್ನು ನಿರ್ಮಲಾರ ಗಂಡ ಪರಕಾಲ ಪ್ರಭಾಕರ್ ಅವರು ಬಿಜೆಪಿ ಸರಕಾರದ ಒಟ್ಟಾರೆ ಶಬ್ದಗಳ ಕಸರತ್ತು ಗಮನಿಸಿ ಹಿಂದೆಯೇ ಟೀಕಿಸಿದ್ದಾರೆ. ಬಜೆಟ್ ಮಂಡನೆ ವೇಳೆ ಸಂಸದರ ಹಾಜರಾತಿ ಕಡಿಮೆ ಇತ್ತು. ಗ್ಯಾಲರಿಯಲ್ಲಿ ನಿರ್ಮಲಾರ ಮಗಳು ವಂಗಮಯಿ ಪರಕಾಲ ಕುಳಿತಿದ್ದರು.
ಪುತ್ತೂರು: ಕೇಂದ್ರೀಯ ಮೀಸಲು ಪೊಲೀಸ್ ಪಡೆಯಲ್ಲಿ ಸುಧೀರ್ಘ 33 ವರ್ಷ ಸೇವೆ ಸಲ್ಲಿಸಿದ ಬಡಗನ್ನೂರು ಗ್ರಾಮದ ಪಟ್ಟೆ ನಿವಾಸಿ ವಿದ್ಯಾಧರ ಎನ್. ನಿವೃತ್ತಿ ಹೊಂದಿ ಫೆ. 3 ರಂದು ಹುಟ್ಟೂರಿಗೆ ಆಗಮಿಸುತ್ತಿದ್ದಾರೆ.ಪುತ್ತೂರು ತಾಲೂಕು ಬಡಗನ್ನೂರು ಗ್ರಾಮದ ಪಟ್ಟೆ ದಿ. ಮಹಾಲಿಂಗ ಪಾಟಾಳಿ ಮತ್ತು ಗಿರಿಜಾ ದಂಪತಿ ಪುತ್ರನಾದ ವಿದ್ಯಾಧರ ಎನ್. ಅವರು ಪ್ರಾಥಮಿಕ ಶಿಕ್ಷಣವನ್ನು ಪಟ್ಟೆ ಶ್ರೀಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಗಿಸಿ ಪ್ರೌಢಶಿಕ್ಷಣವನ್ನು ಶ್ರೀ
ಉಳ್ಳಾಲ: ಮೇಲ್ತೆನೆ’ ಸಂಘಟನೆ ಪ್ರಕಟಿಸಿದ ಕವಿ ಬಶೀರ್ ಅಹ್ಮದ್ ಕಿನ್ಯಾ ರಚಿಸಿರುವ ‘ಕವಿಯಲ್ಲ-ನಾನೊಬ್ಬ ಹಾಡುಗಾರ’ ಕವನ ಸಂಕಲನ ಬಿಡುಗಡೆ ಕಾರ್ಯಕ್ರಮ ತೊಕ್ಕೊಟ್ಟು ಜಂಕ್ಷನ್ನಲ್ಲಿರುವ ಉಳ್ಳಾಲ ಪ್ರೆಸ್ಕ್ಲಬ್ನಲ್ಲಿ ನಡೆಯಿತು. ಅಬುಧಾಬಿಯ ಬ್ಯಾರೀಸ್ ವೆಲ್ಫೇರ್ ಫೋರಂನ ಸ್ಥಾಪಕಾಧ್ಯಕ್ಷ ಮುಹಮ್ಮದ್ ಅಲಿ ಉಚ್ಚಿಲ್ಬಶೀರ್ ಅಹ್ಮದ್ ಕಿನ್ಯಾ ರಚಿಸಿರುವ ‘ಕವಿಯಲ್ಲ-ನಾನೊಬ್ಬ ಹಾಡುಗಾರ’ ಕವನ ಸಂಕಲನ ಬಿಡುಗಡೆಗೊಸಿದರು. ಬಳಿಕ ಮಾತನಾಡಿದ ಅವರು, ಪ್ರಸಕ್ತ ದಿನಗಳಲ್ಲಿ ಅಧಿಕ