Home Archive by category ಕರಾವಳಿ (Page 403)

ಹೃದಯಾಘಾತದಿಂದ ಹೆಚ್ಚುತ್ತಿರುವ ಮಕ್ಕಳ ಸಾವು ಪ್ರಕರಣ; ತನಿಖೆ ನಡೆಸಿ ಪರಿಹಾರ ಕಂಡುಕೊಳ್ಳಬೇಕು : ಶಕುಂತಳಾ ಶೆಟ್ಟಿ

ಪುತ್ತೂರಿನಲ್ಲಿ ಇತ್ತೀಚೆಗೆ ಮಕ್ಕಳು ಸಾವನ್ನಪ್ಪುವ ವಿಚಾರಗಳು ಹೆಚ್ಚಾಗಿ ಕಾಣುತ್ತಿದ್ದು, ಈ ಬಗ್ಗೆ ಆರೋಗ್ಯ ಇಲಾಖೆ ಹೆಚ್ಚಿನ ಗಮನಹರಿಸಿಬೇಕೆಂದು ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಹೇಳಿದರು.ಅವರು ಪುತ್ತೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿ, ಇದು ಪುತ್ತೂರಿನಲ್ಲಿ ಮಾತ್ರವಲ್ಲದೆ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಸಂಭವಿಸುತ್ತಿದೆ. ಇದನ್ನು ಆರೋಗ್ಯ ಇಲಾಖೆ

ಪುತ್ತೂರು ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಕ್ ರೈ ಕಾರು ಅಪಘಾತ

ಪುತ್ತೂರು ಬೈಪಾಸ್ ರಸ್ತೆಯಲ್ಲಿ ಪುತ್ತೂರು ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಕ್ ರೈ ಅವರ ಕಾರು ಅಪಘಾತ ಪ್ರಾಣಪಾಯದಿಂದ ಪಾರು. ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಕ್ ರೈ ಅವರ ಖಾಸಗಿ ಒಡೆತನದ ಕಾರೊಂದು ಪುತ್ತೂರು ಬೈಪಾಸ್ ರಸ್ತೆ ನೂಜಿ ಎಂಬಲ್ಲಿ ಡಿ.29 ರಂದು ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದೆ. ಡಾ.ದೀಪಕ್ ರೈ ದಂಪತಿ ಸಮೇತ ಮಂಗಳೂರು ಕಡೆಯಿಂದ ಕಾರಿನಲ್ಲಿ ಬರುತ್ತಿದ್ದ ವೇಳೆ ಬೈಪಾಸ್ ರಸ್ತೆಯ ನೂಜಿ ಎಂಬಲ್ಲಿ ಕಾರಿನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಗೆ

ಅಳಿಕೆ ಗ್ರಾಮದ ಕೋಟೆತ್ತಡ್ಕದಲ್ಲಿ ನಡೆಯುತ್ತಿರುವ ಕೆಂಪು ಕಲ್ಲುಗಣಿಗಾರಿಕೆ, ಪರವಾನಗಿ ಪಡೆದು ಕಲ್ಲು ತೆಗೆಯಲಾಗುತ್ತಿದೆ : ಮಾಲೀಕ ರಂಜಿತ್ ಕುಮಾರ್

ವಿಟ್ಲ: ಅಳಿಕೆ ಗ್ರಾಮದ ಕೋಟೆತ್ತಡ್ಕದಲ್ಲಿ ನಡೆಯುತ್ತಿರುವ ಕೆಂಪು ಕಲ್ಲು ಗಣಿಗಾರಿಕೆಯ ಸಂಪೂರ್ಣ ಸಕ್ರಮವಾಗಿದ್ದು, ಗಣಿಗಾರಿಕೆ ನಡೆಸುವ ಜಾಗ ಸಂಪೂರ್ಣ ವರ್ಗ ಜಮೀನಾಗಿದೆ. ಅದನ್ನು ಲೀಸ್ ಗೆ ಪಡೆದು ಸಂಬಂಧಪಟ್ಟ ಇಲಾಖೆಯಿಂದ ಪರವಾನಗಿ ಪಡೆದು ಕಲ್ಲು ತೆಗೆಯಲಾಗುತ್ತಿದೆ. ಈ ಭಾಗದಲ್ಲಿ ಪಾಂಡವರ ಕೋಟೆಯಿಲ್ಲ, ಪಾಂಡವರ ಒಲೆಯ ಕುರುಹು ಇದ್ದು ಆ ಸ್ಥಳವನ್ನು ಸಂರಕ್ಷಣೆ ಮಾಡಲಾಗಿದೆ ಎಂದು ಕೊಟೆತ್ತಡ್ಕ ಕೆಂಪು ಕಲ್ಲು ಕ್ವಾರಿ ಮಾಲೀಕ ರಂಜಿತ್ ಕುಮಾರ್ ಹೇಳಿದ್ದಾರೆ.

ಸುರತ್ಕಲ್-ನಂತೂರು ಟೋಲ್ ಮುಕ್ತ ರಸ್ತೆಯಾಗಿ ಘೋಷಿಸಲು ಒತ್ತಾಯ : ಬನ್ನಂಜೆಯಲ್ಲಿ ಸಾಮೂಹಿಕ ಜನಾಗ್ರಹ ಧರಣಿ

ಸುರತ್ಕಲ್ ಅಕ್ರಮ ಟೋಲ್ ಸುಂಕ ಹೆಜಮಾಡಿ ಟೋಲ್‍ಗೇಟ್‍ನಲ್ಲಿ ಸಂಗ್ರಹಿಸುವ ಹೆದ್ದಾರಿ ಪ್ರಾಧಿಕಾರದ ವಿಲೀನ ಆದ್ಯಾದೇಶ ಶಾಶ್ವತವಾಗಿ ಹಿಂಪಡೆಯಲು ಆಗ್ರಹಿಸಿ ಸುರತ್ಕಲ್ ನಂತೂರು ಹೆದ್ದಾರಿಯನ್ನು ಟೋಲ್ ಮುಕ್ತ ರಸ್ತೆಯಾಗಿ ಘೋಷಿಸಲು ಒತ್ತಾಯಿಸಿ ಸಾಮೂಹಿಕ ಜನಾಗ್ರಹ ಧರಣಿ ಬನ್ನಂಜೆಯಲ್ಲಿ ನಡೆಯಿತು. ಟೋಲ್‍ಗೇಟ್ ವಿರೋಧಿ ಹೋರಾಟ ಸಮಿತಿ ಮತ್ತು ಸಮಾನ ಮನಸ್ಕ ಸಂಘಟನೆಗಳ ವತಿಯಿಂದ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ

ಭಜನೆ ಹಾಗೂ ಭಜಕರ ವಿರುದ್ಧ ಫೇಸ್ಬುಕ್ ಪೋಸ್ಟ್ : ವಿಶ್ವ ಹಿಂದೂ ಪರಿಷತ್ ಬಜರಂಗದಳ ಸುಳ್ಯ ಪ್ರಖಂಡ ಇದರ ವತಿಯಿಂದ ಪ್ರತಿಭಟನೆ

ಸುಳ್ಯ . ಸರಕಾರದ ಅರಣ್ಯ ಇಲಾಖೆ ಯಲ್ಲಿ ಇದ್ದುಕೊಂಡು ಭಜನೆ ಮತ್ತು ಬಜಕರ ಬಗ್ಗೆ ಹಿಂದೂ ದೇವರ ಬಗ್ಗೆ ನಿಂದನೆಯ ಪೋಸ್ಟುಗಳನ್ನು ತನ್ನ ಫೇಸ್ಬುಕ್ ನಲ್ಲಿ ಹರಿಯ ಬಿಟ್ಟು ಹಿಂದುಗಳ ಭಾವನೆಗೆ ದಕ್ಕೆ ತಂದಿರುವ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಕಾಣಿಯೂರು ವಿರುದ್ಧ ಪ್ರಕರಣ ದಾಖಲಾಗಿದ್ದರು ಕೂಡ ಬಂಧನ ಮಾಡದ ಅಧಿಕಾರಿಗಳ ವಿರುದ್ಧ ಬೃಹತ್ ಪ್ರತಿಭಟನೆಯನ್ನು ಇಂದು ಬೆಳ್ಳಾರೆ ಪೊಲೀಸ್ ಠಾಣಾ ಎದುರು ಬೃಹತ್ ಪ್ರತಿಭಟನೆ ನಡೆಸಿದರು ಮುಂದಿನ ದಿನದಲ್ಲಿ ಉಪ ವಲಯ ಅರಣ್ಯ

ಜ.5ರಂದು ಪದವು ಬಂಟರ ಭವನಕ್ಕೆ ಶಿಲಾನ್ಯಾಸ.

ಬಂಟ್ಚಾಳ: ತಾಲೂಕಿನ ವಾಮದಪದವು ವಲಯ ಬಂಟರ ಸಂಘದ ವತಿಯಿಂದ ಆಲದಪದವಿನ ನಿವೇಶನದಲ್ಲಿ ನಿರ್ಮಿಸಲು ಉದ್ಧೇಶಿಸಿರುವ “ಪದವು ಬಂಟರ ಭವನ” ದ ಶಿಲಾನ್ಯಾಸ ಸಮಾರಂಭವು ಜ.5ರಂದು ನಡೆಯಲಿದೆ ಎಂದು ಸಂಘದ ಗೌರವ ಸಲಹೆಗಾರ ಅಶೋಕ ಪಕ್ಕಳ ಶ್ರೀ ಸನ್ನಿಧಿಗುತ್ತು ತಿಳಿಸಿದ್ದಾರೆ. ಬಿ.ಸಿ.ರೋಡಿನ ಪ್ರೆಸ್ ಕ್ಲಬ್ ನಲ್ಲಿ‌ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಆಲದಪದವಿನಲ್ಲಿ‌ರುವ 1.61 ಎಕ್ರೆ ನಿವೇಶನದಲ್ಲಿ 2 ಕೋಟಿ ರೂಪಾಯಿ ವೆಚ್ಚದಲ್ಲಿ ಸುಸಜ್ಜಿತವಾದ ಬಂಟರ ಭವನ

ಜಾಂಬೂರಿ ಸ್ಟಾಲ್‍ಗಳು ಖಾಲಿ ಖಾಲಿ.. ಬಿಕೋ ಎನ್ನುತ್ತಿರುವ ವಿದ್ಯಾಗಿರಿ

ಮೂಡುಬಿದಿರೆ: ಸ್ಕೌಟ್ಸ್ ಗೈಡ್ಸ್ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಂಬೂರಿ ಕಾರ್ಯಕ್ರಮದಿಂದ ಕಳೆದ ಏಳು ದಿನಗಳಿಂದ ಜನಜಂಗುಳಿಯಿಂದ ತುಂಬಿಕೊಂಡಿದ್ದ ವಿದ್ಯಾಗಿರಿ ಜನ ಸಂದಣಿ ಇಲ್ಲದೆ ಬಿಕೋ ಎನ್ನುತ್ತಿರುವ ದೃಶ್ಯ ಕಂಡು ಬಂತು. ವಿದ್ಯಾಗಿರಿಯ ಆಳ್ವಾಸ್ ಕ್ಯಾಂಪಸ್ ನಲ್ಲಿ ಹಾಕಲಾಗಿದ್ದ ವಿವಿಧ ಸ್ಟಾಲ್ ಗಳು, ಕೃಷಿ ಮೇಳದ ವೇದಿಕೆ, ಕೃಷಿಸಿರಿ, ಪ್ರದರ್ಶನಕ್ಕಿಟ್ಟಿದ್ದ ವಿವಿಧ ರೀತಿಯ ಬಣ್ಣ ಬಣ್ಣದ ಹೂವಿನ ಗಿಡಗಳು, ಆಹಾರಮೇಳ, ಕಲಾಮೇಳದ ವೇದಿಕೆಗಳಲ್ಲಿ ಮಂಗಳವಾರ ರಾತ್ರಿ

ಗಣರಾಜ್ಯೋತ್ಸವ ಫೆರೇಡಲ್ಲಿ ಭಾಗವಹಿಸಲು ಪುತ್ತೂರಿನ ಡಾ| ವಜೀದಾಬಾನು ಆಯ್ಕೆ

2023 ನೇ ಸಾಲಿನಲ್ಲಿ ದೆಹಲಿಯಲ್ಲಿ ನಡೆಯಲಿರುವ ಭಾರತ ಗಣರಾಜ್ಯೋತ್ಸವ ಫೆರೇಡ್ ನಲ್ಲಿ ಭಾಗವಹಿಸಲು ಪುತ್ತೂರಿನ ಡಾ| ವಜಿದಾಬಾನು ಆಯ್ಕೆ. ಎನ್ ಎಸ್ ಎಸ್ ವತಿಯಿಂದ ನಡೆದ ದಕ್ಷಿಣ ಪ್ರಾಂತೀಯ ಪ್ರೀ ಆರ್ ಡಿ ತರಬೇತಿ ಶಿಬಿರದಲ್ಲಿ ಕರ್ನಾಟಕದಿಂದ ಆಯ್ಕೆಗೊಂಡಿರುವ ಏಳು ಮಂದಿಯಲ್ಲಿ ಇವರು ಒಬ್ಬರಾಗಿದ್ದಾರೆ. ಇವರು ಪುತ್ತೂರು ಅಂಬಿಕಾ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿಯಾಗಿದ್ದು ಪುತ್ತೂರಿನ ಮೊಟ್ಟೆತ್ತಡ್ಕ ಇಸ್ಮಾಯಿಲ್ ಮತ್ತು ಸುಫಿಯಾ ಬಾನು ದಂಪತಿಗಳ

ಸೌದಿ ಅರೇಬಿಯಾದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಸುರತ್ಕಲ್ ಯುವಕ ಮೃತ್ಯು

ಸೌದಿ ಅರೇಬಿಯಾದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಸುರತ್ಕಲ್ ತಡಂಬೈಲ್ ನ ಯುವಕನೋರ್ವ ಮೃತಪಟ್ಟಿರುವ ಘಟನೆ ವರದಿಯಾಗಿದೆ.ಸೌದಿ ಅರೆಬಿಯಾದ ಅಲ್ಅಸಾ ಎಂಬಲ್ಲಿ ಕಾರು ಮತ್ತು ಲಾರಿಯ ನಡುವೆ ಭೀಕರ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಅಪಘಾತದಿಂದ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಫಾಝಿಲ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.ಫಾಝಿಲ್ ಅವರಿಗೆ ಕಳೆದ ಒಂದೂವರೆ ವರ್ಷದ ಹಿಂದೆಯಷ್ಟೇ ಮದುವೆಯಾಗಿದ್ದು, ಸಣ್ಣ ಮಗು ಇದೆ. ಫಾಝಿಲ್ ತನ್ನ ಪತ್ನಿ

ಸಿಪಿಎಂ ಪಕ್ಷದ ಹಿರಿಯ ಸದಸ್ಯ, ಕಮ್ಯುನಿಸ್ಟ್ ಚಳವಳಿಯ ಹಿರಿಯ ಮುಖಂಡ ಕಾಂ. ಚಂದು ಭಂಡಾರಿ(80) ನಿಧನ

ಎಳೆಯ ಪ್ರಾಯದಲ್ಲೇ ಎಡಪಂಥೀಯ ವಿಚಾರಧಾರೆಗೆ ಆಕರ್ಷಿತರಾದ ಚಂದು ಭಂಡಾರಿ ಆ ಕಾಲದಲ್ಲಿ ನಡೆಯುತ್ತಿದ್ದ ರೈತರ ಹೋರಾಟದಲ್ಲಿ ಭಾಗವಹಿಸುವ ಮೂಲಕ ರೈತಾಪಿ ಜನತೆಯ ನಾಯಕರಾಗಿ ಬೆಳೆದರು. ಜೊತೆಗೆ ಹಂಚು ಕಾರ್ಮಿಕರಾಗಿ ದುಡಿಯುವ ಮೂಲಕ ಹಂಚು ಕಾರ್ಮಿಕರ ಸಮರಶೀಲ ಹೋರಾಟಗಳಲ್ಲಿ ಭಾಗವಹಿಸಿ ಕಾರ್ಮಿಕ ನಾಯಕರಾದರು. ಬಜಾಲ್ ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಅವರು ಪಕ್ಷದ ಪತ್ರಿಕೆ ಮಾರಾಟ ಮಾಡುವಲ್ಲಿ ಹಾಗೂ ಪಕ್ಷದ ನಿಧಿ ಸಂಗ್ರಹ ಮಾಡುವುದರಲ್ಲಿ ಮಹತ್ವದ ಪಾತ್ರ ವಹಿಸಿದ್ದರು.