Home Archive by category ಕರಾವಳಿ (Page 410)

ಶ್ರೀ ಚೈತನ್ಯ ಟೆಕ್ನೋ ಸ್ಕೂಲ್ ವತಿಯಿಂದ : ಶಾಲಾ ಮಕ್ಕಳೊಂದಿಗೆ ಸಂಚಾರ ಜಾಗೃತಿ ಕುರಿತು ರ್‍ಯಾಲಿ

ಮಂಗಳೂರಿನ ಕೊಟ್ಟಾರ ಚೌಕಿಯ ಶ್ರೀ ಚೈತನ್ಯ ಟೆಕ್ನೋ ಸ್ಕೂಲ್ ವತಿಯಿಂದ ಶಾಲಾ ಮಕ್ಕಳೊಂದಿಗೆ ಸಂಚಾರ ಜಾಗೃತಿ ಕುರಿತು ರ್‍ಯಾಲಿಯನ್ನ ನಗರದ ಲಾಲ್‍ಭಾಗ್ ಜಂಕ್ಷನ್‍ನಲ್ಲಿ ಹಮ್ಮಿಕೊಳ್ಳಲಾಗಿತ್ತು. ಮಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆ ನಿಯಮ ಉಲ್ಲಂಘನೆ, ಹೆಲ್ಮೆಟ್ ಧರಿಸದೇ ವಾಹನ ಚಲಾವಣೆ ಮಾಡುವುದರ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ

ಆಳ್ವಾಸ್ ತಾಂತ್ರಿಕ ಮಹಾವಿದ್ಯಾಲಯ : ಸ್ಟ್ರೆಲಿಯಂ ಟೆಕ್ನಾಲಜಿ & ಇನೋವೇಶನ್ ಸೆಂಟರ್‍ಗೆ ಚಾಲನೆ

ಮೂಡುಬಿದಿರೆ: ಹ್ಯೂಸ್ಟನ್ ಮೂಲದ ಮ್ಯಾನುಫ್ಯಾಕ್ಟರಿಂಗ್ ಹಾಗೂ ಲಾಜಿಸ್ಟಿಕ್ಸ್ ಸಂಬಂಧಿತ ಸೈಲಿಯ ‘ಇಂಕ್’ ಅಂತರಾಷ್ಟ್ರೀಯ ಕಂಪೆನಿಯ ಸಹಭಾಗಿತ್ವದಲ್ಲಿ ವಿಮಾನ ತಂತ್ರಜ್ಞಾನ ಆಧಾರಿತ ‘ಸ್ಟ್ರೆಲಿಯಂ ಟೆಕ್ನಾಲಜಿ ಆಂಡ್ ಸೆಂಟರ್‍ನ್ನು ಮಿಜಾರಿನ ಆಳ್ವಾಸ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ, ಅವರು ನೂತನ ಲ್ಯಾಬ್‍ನ್ನು ಉದ್ಘಾಟಿಸಿ ಶುಭ ಹಾರೈಸಿದರು. ಸ್ಟೆಲಿಯಂ

ತೆರಿಗೆ ಕಟ್ಟಲು ಒತ್ತಡ ಹೇರಿದ ವಿಚಾರ : ಪಲಿಮಾರು ಗ್ರಾ.ಪಂ. ಅಧ್ಯಕ್ಷರಿಗೆ ಧಮ್ಕಿ ಹಾಕಿದ ಕಂಪೆನಿ ಮುಖ್ಯಸ್ಥರು

ತೆರಿಗೆ ಕಟ್ಟಲು ಒತ್ತಡ ಹೇರಿದ್ದಾರೆ ಎಂಬ ಕಾರಣಕ್ಕೆ ನಂದಿಕೂರು ಕೈಗಾರಿಕಾ ವಲಯದಲ್ಲಿ ಕಾರ್ಯಚರಿಸುತ್ತಿರುವ ಕಂಪನಿಯೊಂದರ ಮುಖ್ಯಸ್ಥರು ಪಲಿಮಾರು ಗ್ರಾ.ಪಂ. ಅಧ್ಯಕ್ಷರ ಛೇಂಬರ್ ಗೆ ಹೋಗಿ ಧಮ್ಕಿ ಹಾಕಿದ್ದಾರೆ ಎಂದು ಆರೋಪಿಸಿದ ಗ್ರಾ.ಪಂ. ಆಢಳಿತ ಸಮಿತಿ ಸದಸ್ಯರು ಅಧ್ಯಕ್ಷರೊಂದಿಗೆ ತೆರಳಿ ಕಂಪನಿ ಪ್ರಮುಖರಿಗೆ ಎಚ್ಚರಿಕೆ ನೀಡಿದ ಘಟನೆ ನಡೆದಿದೆ. ಸೃಷ್ಠಿ ಹೆಸರಿನ ಕಚ್ಚಾವಸ್ತುಗಳ ಮರು ಬಳಕೆ ಕಂಪನಿಯ ಪ್ರಮುಖರೇ ಆರೋಪಿಗಳು, ಅದಲ್ಲದೆ ಇದೇ ಕಂಪನಿಯ ವಠಾರದಲ್ಲಿ

ಮತದಾರರ ಪಟ್ಟಿ ಪರಿಷ್ಕರಣೆ ನೆಪದಲ್ಲಿ ಹೆಸರನ್ನು ಕಳಚುವ ಬಗ್ಗೆ ಮಾಜಿ ಸಚಿವ ರಮನಾಥ ರೈ ನೇತೃತ್ವದಲ್ಲಿ ದೂರು

ಬಂಟ್ವಾಳ: ಮತದಾರ ಪಟ್ಟಿ ಪರಿಷ್ಕರಣೆಯ ನೆಪದಲ್ಲಿ ಮತದಾರರ ಹೆಸರನ್ನು ಕಳಚುವ ಬಗ್ಗೆ ಮಾಜಿ ಸಚಿವ ಬಿ. ರಮಾನಾಥ ರೈ ನೇತೃತ್ವದಲ್ಲಿ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ಗುರುವಾರ ಬಂಟ್ವಾಳ ತಹಸೀಲ್ದಾರರಿಗೆ ದೂರು ಸಲ್ಲಿಸಿತು. ಬಳಿಕ ರಮನಾಥ ರೈ ಅವರು ಸುದ್ದಿಗಾರರೊಂದಿಗೆ ಮಾತನಾಡಿ ಚುನಾವಣಾ ಆಯೋಗದ ಆದೇಶದಂತೆ ಸ್ಥಳೀಯ ಮಟ್ಟದ ಮತಗಟ್ಟೆಯ ಬಿಎಲ್‍ಓಗಳು ಪಾರದರ್ಶಕವಾಗಿ ಕೆಲಸ ನಿರ್ವಹಿಸುತ್ತಿರುವ ಬಗ್ಗೆ ವಿಶ್ವಾಸವಿದೆ. ಆದರೆ ಕಳೆದ

ಯುವ ವಕೀಲನ ಉಪಟಳದಿಂದ ತೊಂದರೆ ಅನುಭವಿಸಿದ್ದೇವೆ : ಬಂಟ್ವಾಳದಲ್ಲಿ ಸುದ್ದಿಗೋಷ್ಟಿ ನಡೆಸಿ ಅಳಲು ತೋಡಿಕೊಂಡ ಭವಾನಿ

ಬಂಟ್ವಾಳ: ಯುವ ವಕೀಲ ಕುಲದೀಪ್ ಶೆಟ್ಟಿ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿ ದೌಜ್ಯನ್ಯ ನಡೆಸಿದ ಪುಂಜಾಲಕಟ್ಟೆ ಪೆÇಲೀಸರ ಅಮಾನತಿಗೆ ಆಗ್ರಹಿಸಿ ಜಿಲ್ಲಾಯದ್ಯಂತ ವಕೀಲರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದರೆ ಯುವ ವಕೀಲನ ಉಪಟಳದಿಂದ ತುಂಬಾ ತೊಂದರೆಯಾಗಿದ್ದು ಮಾನಸಿಕವಾಗಿ ಕುಗ್ಗಿ ಹೋಗಿರುವುದಾಗಿ ದೂರುದಾರ ವಸಂತಗೌಡ ಅವರ ಪತ್ನಿ ಭವಾನಿ ಅಳಲು ತೋಡಿಕೊಂಡಿದ್ದಾರೆ. ಅವರು ಸುದ್ದಿಗೋಷ್ಟಿಯಲ್ಲಿ ಮಾತನಾಡಿ ಕಳೆದ ಡಿ. 2ರಂದು ತಾನು ತನ್ನ ಪತಿ ಹಾಗೂ ಕೆಲಸದಾಳು

‘ಎಸ್.ಡಿ.ಎಂ ಯಶಸ್ವಿ ಪ್ರಯೋಗಗಳ ರೂವಾರಿ ಡಾ. ಬಿ.ಯಶೋವರ್ಮ’

ಉಜಿರೆ ಡಿಸೆಂಬರ್ ೫: ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ನಾಯಕತ್ವವನ್ನುವಹಿಸಿಕೊಂಡು ಯಶಸ್ವಿ ಪ್ರಯೋಗಗಳನ್ನು ನಡೆಸಿದ್ದರು ಡಾ. ಬಿಯಶೋವರ್ಮ ಎಂದು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಎಸ್.ಸತೀಶ್ಚಂದ್ರ ಹೇಳಿದರು.ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಮಾಜಿ ಕಾರ್ಯದರ್ಶಿ ದಿ. ಡಾ. ಬಿ. ಯಶೋವರ್ಮಅವರ ೬೮ನೇ ಹುಟ್ಟು ಹಬ್ಬದ ಅಂಗವಾಗಿ ಎಸ್.ಡಿ.ಎಂ ಕಲಾಕೇಂದ್ರ ಆಯೋಜಿಸಿದ್ದ‘ಯಶೋಸ್ವಪ್ನ’ ಕಾರ್ಯಕ್ರಮದಲ್ಲಿ ಅವರ ತತ್ವ ಮತ್ತುಕಾರ್ಯಗಳನ್ನು ಮೆಲುಕು

ಉಜಿರೆಯಲ್ಲಿ ಮತದಾರರ ನೋಂದಣಿ ಅಭಿಯಾನ

ಮತದಾನವೆಂಬುದು ಪ್ರತಿಯೊಬ್ಬ ಭಾರತೀಯ ಪ್ರಜೆಯ  ಹಕ್ಕಾದರೆ ಅದನ್ನು ಸಮರ್ಥವಾಗಿ ಬಳಸಿಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಚುನಾವಣಾ ತರಬೇತುದಾರ, ಕನ್ನಡ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆಯ ಸಹಶಿಕ್ಷಕ ಧರಣೇಂದ್ರ ಕೆ.   ಹೇಳಿದರು.      ಉಜಿರೆ ಶ್ರೀ ಧ. ಮಂ ಕಾಲೇಜು ಇಲ್ಲಿ ವಿದ್ಯಾರ್ಥಿ ಕ್ಷೇಮಪಾಲನೆ ಹಾಗೂ ಶಿಸ್ತಿನ ಸಮಿತಿ ಆಶ್ರಯದಲ್ಲಿ  ದ.ಕ ಜಿಲ್ಲಾ ಕಂದಾಯ ಇಲಾಖೆಯು ಆಯೋಜಿಸಿದ್ದ  ‘ಮತದಾರರ ನೋಂದಣಿ

ಉಜಿರೆಯ ಎಸ್.ಡಿ.ಎಂ ನ ಕಾಮರ್ಸ್ ಅಸೊಸಿಯೆಶನ್ ಉದ್ಘಾಟನೆ

ಇಂದಿನ ಯುವಶಕ್ತಿಯು ಕಾರ್ಪೊರೇಟ್ ಜಗತ್ತಿನಲ್ಲಿ ಮೆಲ್ಗೈಯನ್ನು ಸಾದಿಸುತ್ತಿದೆ. ಯುವಜನತೆಯು ಏನನ್ನಾದರೂ ಸಾಧಿಸುತ್ತದೆ ಅಂತಹ ಸಾಮರ್ಥ್ಯ, ಬುದ್ಧಿಶಕ್ತಿ ಯುವಕರಿಗಿದೆ ಎಂದು ಉಜಿರೆಯ ಎಸ್.ಡಿ.ಎಂ ಸೊಸೈಟಿಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ವೈ ಹರೀಶ್ ಅಭಿಪ್ರಾಯ ಪಟ್ಟರು.  ಉಜಿರೆಯ ಶ್ರೀ.ಧ.ಮ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ಕಾಮರ್ಸ್ ಕ್ಯಾಂಪಸ್  ಅಸೊಸಿಯೆಶನ್’ನ ಉದ್ಘಾಟನೆಯ ಸಂಧರ್ಭದಲ್ಲಿ ಮಾತನಾಡುತ್ತಿದ್ದರು.     

ಉಜಿರೆ ಎಸ್. ಡಿ. ಎಂ. ಕಾಲೇಜಿನಲ್ಲಿ ಯುವ ರೆಡ್ ಕ್ರಾಸ್ ಘಟಕದ ಉದ್ಘಾಟನೆ

ಉಜಿರೆ :  ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಯುವ ರೆಡ್ ಕ್ರಾಸ್ ಘಟಕದ ಉದ್ಘಾಟನಾ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಉಜಿರೆಯ ಶ್ರೀ ಧ. ಮಂ. ಪಾಲಿಟೆಕ್ನಿಕ್ ಕಾಲೇಜಿನ ಪ್ರಾಧ್ಯಾಪಕರಾದ ಸಂಪತ್ ಕುಮಾರ್. ಕೆ ರವರು ಉದ್ಘಾಟನೆಯನ್ನು ನೆರವೇರಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.           “ಉತ್ತಮ ಸಂವಹನ ಕೌಶಲ್ಯ, ಹೊಸ ವಿಷಯಗಳ ತಿಳಿಯುವ ಉತ್ಸುಕತೆ ಹಾಗೂ ಏಕಾಗ್ರತೆಯ ಕಾರ್ಯಗಳಿಂದ ಮನುಷ್ಯನ ವ್ಯಕ್ತಿತ್ವ

ವಕೀಲರ ಮೇಲಿನ ದೌರ್ಜನ್ಯ ಆರೋಪ : ಬೆಳ್ತಂಗಡಿಯಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ

ವಕೀಲರ ಮೇಲಿನ ದೌರ್ಜನ್ಯವನ್ನು ಖಂಡಿಸಿ ಬೆಳ್ತಂಗಡಿಯಲ್ಲಿ ವಕೀಲರ ಸಂಘದವರು ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ವಕೀಲರ ಸಂಘದ ಅಧ್ಯಕ್ಷರಾದ ಪ್ರಸಾದ್ ಕೆ.ಎಸ್. ಅವರು, ವಕೀಲರ ಮನೆಗೆ ಬಂದು ಪೊಲೀಸರು ಹಲ್ಲೆ ಮಾಡಿರುವುದು ಖಂಡನೀಯ, ಹಲ್ಲೆಗೈದ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಅಲ್ಲದೆ ಪುಂಜಾಲಕಟ್ಟೆ ಲೀಸ್ ಉಪನಿರೀಕ್ಷಕರನ್ನು ಕೂಡಲೇ ಅಮಾನತು ಮಾಡಬೇಕು ಇಲ್ಲದೆ ಹೋದರೆ ಮುಂದಕ್ಕೆ ಉಗ್ರವಾದ ಹೋರಾಟ ಮಾಡುವುದಾಗಿ ಹೇಳಿದರು.