ನ.19ರಂದು ರಿಕ್ಷಾದಲ್ಲಿ ನಡೆದ ಸ್ಫೋಟ ಪ್ರಕರಣದ ಆರೋಪಿ ಮುಹಮ್ಮದ್ ಶಾರಿಕ್ನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಅಧಿಕಾರಿಗಳು ಬುಧವಾರ ಕೆಲಕಾಲ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದು ಬಂದಿದೆ. ಸ್ಫೋಟದಿಂದ ಆರೋಪಿಗೆ ಭಾಗಶಃ ಸುಟ್ಟಗಾಯಗಳಾಗಿದ್ದವು. ನಗರದ ಫಾದರ್ ಮುಲ್ಲರ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆರೋಪಿಯ ಆರೋಗ್ಯದಲ್ಲಿ
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ತುಂಬೆಯಿಂದ ಸರಬರಾಜಾಗುವ ನೀರಿನ ಪೂರೈಕೆಯಲ್ಲಿ ಸಮಸ್ಯೆಯ ಕುರಿತಂತೆ ವಿಪಕ್ಷ ನಾಯಕ, ಸದಸ್ಯರಿಂದ ಹಿಡಿದು ಆಡಳಿತ ಪಕ್ಷದ ಸದಸ್ಯರನೇಕರು ಕೂಡಾ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಘಟನೆ ನಡೆದ ಪಾಲಿಕೆ ಸಾಮಾನ್ಯ ಸಭೆಯಲ್ಲಿ ನಡೆಯಿತು. ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಜಯಾನಂದ ಅಂಚನ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಖುದ್ದು ಮೇಯರ್ ಕೂಡಾ ತಮ್ಮ ವಾರ್ಡ್ನಲ್ಲಿಯೂ ಸಮಸ್ಯೆ ಇದೆ ಎಂದು ಹೇಳುವ ಮೂಲಕ ಸಮಸ್ಯೆಯ
ಉಪ್ಪಳ ಹಾಗೂ ಮಂಜೇಶ್ವರ ಪರಿಸರಗಳಲ್ಲಿ ವ್ಯಾಪಕವಾಗಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮೂವರನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಮಂಜೇಶ್ವರ ಪೊಲೀಸರು 18.2 ಗ್ರಾಂ ಎಂಡಿಎಂಎ ಆರೋಪಿಗಳಿಂದ ವಶಪಡಿಸಿಕೊಂಡಿದ್ದಾರೆ. ಉಪ್ಪಳ ಕೋಡಿವಯಲ್ನ ಮುಹಮ್ಮದ್ ಕಾಸಿಂ, ಮಂಜೇಶ್ವರ ಕುಂಜತ್ತೂರು ಬಾಚಲಿಕದ ಅಬ್ದುಲ್ ಸವಾಸ್ ಮತ್ತು ಉಪ್ಪಳ ಬಪೈತೊಟ್ಟಿಯ ಮುಹಮ್ಮದ್ ನಾಸೀರ್ ಬಂಧಿತ ಆರೋಪಿಗಳು.ಠಾಣಾಧಿಕಾರಿ ಎ.ಸಂತೋಷ್ ಕುಮಾರ್ ಮತ್ತು ಎಸ್ಐ ರಜಿತ್ ನೇತೃತ್ವದ
ಅತಿಥಿ ಗೃಹ ಉದ್ಘಾಟಿಸಿದ ವಿಧಾನ ಸಭೆ ವಿಪಕ್ಷ ಉಪನಾಯಕ ಯು.ಟಿ.ಖಾದರ್ ಮಾತನಾಡಿ, ಪತ್ರಕರ್ತರು ಏನು ಬರೆಯಬೇಕು ಎಂದು ಆಲೋಚಿಸದಂತೆ ಏನು ಬರೆಯಬಾರದು ಎಂಬುದನ್ನು ತಿಳಿದಿರಬೇಕು. ಹಿರಿಯ ಪತ್ರಕರ್ತರು ಯುವ ಪತ್ರಕರ್ತರಿಗೆ ಮಾರ್ಗದರ್ಶನ ನೀಡುವ ಕೆಲಸವಾಗಬೇಕಿದೆ ಎಂದರು. ಜಿಲ್ಲಾ ಕೇಂದ್ರದ ವ್ಯವಸ್ಥೆ: ಸುಳ್ಯ ಕ್ಷೇತ್ರ ಈಗಾಗಲೇ ಹಲವಾರು ರೀತಿಯಲ್ಲಿ ಅಭಿವೃದ್ಧಿ ಹೊಂದಿದೆ. ಮುಂದಕ್ಕೆ ಸುಳ್ಯಕ್ಕೆ ಜಿಲ್ಲಾ ಕೇಂದ್ರದ ಅವಶ್ಯಕತೆಯನ್ನು ನಾವು ಮಾಡಿಯೇ ಮಾಡುತ್ತೇವೆ. ನನ್ನದು
ಉಳ್ಳಾಲ: ಲಾರಿ ಅಪಘಾತಕ್ಕೀಡಾಗಿ ಪಾದಚಾರಿ ಮುಳ್ಳೇರಿಯ ಆದೂರು ನಿವಾಸಿ ವಸಂತ್ ಕುಮಾರ್ ರೈ (55) ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತಲಪಾಡಿ ಟೋಲ್ ಗೇಟ್ ಸಮೀಪ ಸೋಮವಾರ ಸಂಜೆ ಸಂಭವಿಸಿದೆ. ಟೋಲ್ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ 66 ರನ್ನು ದಾಟುವ ಸಂದರ್ಭ ಕೇರಳದ ಕಡೆಯಿಂದ ಅತಿವೇಗದಿಂದ ಧಾವಿಸುತ್ತಿದ್ದ ಕಲ್ಲು ಲೋಡ್ ಇದ್ದ ಲಾರಿ ವಸಂತ್ ಅವರಿಗೆ ಢಿಕ್ಕಿ ಹೊಡೆದಿದೆ.ತಲೆಗೆ ಗಂಭೀರ ಗಾಯಗೊಂಡ ಅವರನ್ನು ಟೋಲ್ ಸಿಬ್ಬಂದಿ
ಖ್ಯಾತ ಯಕ್ಷಗಾನ ಕಲಾವಿದ, ಮಾಜಿ ಶಾಸಕ ಕುಂಬ್ಳೆ ಸುಂದರ ರಾವ್ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.ಸುರತ್ಕಲ್ ಹಾಗೂ ಧರ್ಮಸ್ಥಳ ಮೇಳಗಳಲ್ಲಿ ಯಕ್ಷಗಾನ ಕಲಾವಿದರಾಗಿ ಸೇವೆ ಸಲ್ಲಿಸಿದ್ದ ಅವರು ತಮ್ಮ ಪ್ರಾಸಬದ್ಧ , ನಿರರ್ಗಳ ಅರ್ಥಗಾರಿಕೆಯಿಂದ ಮನೆಂತಾಗಿದ್ದರು. ಶಾಸಕರಾಗಿ, ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾಗಿ ಅವರ ಸೇವೆ ಸ್ಮರಣೀಯ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.ಭಗವಂತನು ಮೃತರ ಆತ್ಮಕ್ಕೆ ಶಾಂತಿ ನೀಡಲಿ,
ಯಕ್ಷರಂಗದ ಅಪ್ರತಿಮ ಕಲಾವಿದ ಕುಂಬ್ಳೆ ಸುಂದರ್ ರಾವ್ ಅಸ್ತಂಗತರಾಗಿದ್ದಾರೆ.ಯಕ್ಷಗಾನ ಕಲಾವಿದರೂ ಮಾಜಿ ಶಾಸಕರೂ ಆಗಿದ್ದ ಕುಂಬ್ಳೆ ಸುಂದರ್ ರಾವ್ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಯಕ್ಷಗಾನ ಮತ್ತು ತಾಳ-ಮದ್ದಳೆ (ಸಾಂಪ್ರದಾಯಿಕ ನೃತ್ಯ) ಕಲಾವಿದರೂ ಆಗಿದ್ದ ಸುಂದರ್ ರಾವ್, ಮಂಗಳೂರಿನ ಆಗಿನ ಸುರತ್ಕಲ್ ಕ್ಷೇತ್ರದ ಶಾಸಕರಾಗಿಯೂ ಸೇವೆ ಸಲ್ಲಿಸಿದ್ದರು. 1994 ರಿಂದ 1999ರವರೆಗೆ ಬಿಜೆಪಿಯಿಂದ ಸುರತ್ಕಲ್ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದ ಅವರು, ಸುರತ್ಕಲ್,
ಉಡುಪಿಯ ಆದರ್ಶ ನರ್ಸಿಂಗ್ ಕಾಲೇಜಿನ ದೀಪ ಬೆಳಗಿಸುವ ಕಾರ್ಯಕ್ರಮ ಹಾಗೂ ಆದರ್ಶ ಇನ್ಸ್ಟಿಟ್ಯೂಟ್ ಆಫ್ ಪ್ಯಾರಮೆಡಿಕಲ್ ಸೈನ್ಸಸ್ನ ಹೊಸ ವಿದ್ಯಾರ್ಥಿಗಳ ದಿನಾಚರಣೆಯು ನವೆಂಬರ್ 25, 2022 ರ ಶುಕ್ರವಾರದಂದು ಆದರ್ಶ ಸಮೂಹ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಮಾಹೆಯ ಉಪ ಕುಲಪತಿಗಳಾದ ಡಾ. ಎಚ್. ಎಸ್. ಬಲ್ಲಾಳ್ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ನರ್ಸಿಂಗ್ ವೃತ್ತಿಯು ಸಮಾಜದ ಹಾಗೂ ಜನರ ಸೇವೆ ಮಾಡುವಂತಹ ಶ್ರೇಷ್ಠ
ಸುರತ್ಕಲ್ ಅಕ್ರಮ ಟೋಲ್ ಗೇಟ್ ವಿರುದ್ಧದ ಹೋರಾಟ ಯಶಸ್ವಿಯ ಹಂತಕ್ಕೆ ತಲುಪಿದೆ. ದ.ಕ ಜಿಲ್ಲಾಧಿಕಾರಿ ಡಿಸೆಂಬರ್ ಒಂದರಿಂದ ಟೋಲ್ ಸಂಗ್ರಹ ಸ್ಥಗಿತಕ್ಕೆ ಲಿಖಿತ ಆದೇಶ ಹೊರಡಿಸಿದ್ದಾರೆ. ಬಿಜೆಪಿ ಪಕ್ಷ ಮಾತ್ರ ತನ್ನದೇ ಸಾಧನೆಯಂತೆ ಬಿಂಬಿಸಲು ಹೊರಟು ಮುಜುಗರಗೊಳಗಾಗಿ ಇನ್ನು ಈಗಾಗಲೇ ತಯಾರಿಸಿದ ಅಭಿನಂದನೆಯ ಬ್ಯಾನರ್, ಫ್ಲೆಕ್ಸ್ ಗಳನ್ನು ಅಳವಡಿಸಲು ಸಾಧ್ಯವಾಗದೆ ಅವುಗಳೆಲ್ಲಾ ಸುರತ್ಕಲ್ ಸ್ಮಶಾನದ ಮೂಲೆ ಸೇರಿದೆ. ನಿಜವಾಗಿ ಸ್ಮಶಾನ ಸೇರಿದ್ದು ಅಭಿನಂದನೆಯ ಪ್ಲೆಕ್ಸ್
ಮಂಗಳೂರು : ಗೂಂಡಾ ಕಾಯ್ದೆ, ಭಯೋತ್ಪಾದನಾ ನಿಗ್ರಹ ಮೊದಲಾದ ಕಾನೂನು ಜಾರಿಯಲ್ಲಿದ್ದರೂ, ಗೋಡೆ ಬರಹದಂತಹ ಪ್ರಕರಣಗಳು ನಡೆದಾಗ ಸರಕಾರ, ಪೊಲೀಸ್ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದರೆ, ಜಿಲ್ಲೆಯಲ್ಲಿ ಕುಕ್ಕರ್ ಬಾಂಬ್ ಸ್ಫೋಟದಂತಹ ಪ್ರಕರಣಗಳು ನಡೆಯುತ್ತಿರಲಿಲ್ಲ. ಸರಕಾರದ ವೈಫಲ್ಯದಿಂದ ಇಂದು ಸಮಾಜದಲ್ಲಿ ಗೊಂದಲ ಸೃಷ್ಟಿಗೆ ಕಾರಣವಾಗಿದೆ ಎಂದು ಮಾಜಿ ಶಾಸಕ ಜೆ.ಆರ್. ಲೋಬೋ ಆರೋಪಿಸಿದ್ದಾರೆ. ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ