Home Archive by category ಕರಾವಳಿ (Page 8)

ಮಂಗಳೂರು: ನ.26ರಂದು ಮಾತಾ ಅಮೃತಾನಂದಮಯಿ ಮಠದಲ್ಲಿ ನವಗ್ರಹ ಶಾಂತಿ ಹೋಮ

ಮಂಗಳೂರು ಬೋಳೂರಿನಲ್ಲಿರುವ ಮಾತಾ ಅಮೃತಾನಂದಮಯಿ ಮಠದ ವತಿಯಿಂದ ನವೆಂಬರ್ 26ರಂದು ನವಗ್ರಹ ಶಾಂತಿ ಹೋಮವು ಮಠದ ಆವರಣದಲ್ಲಿ ಬೆಳಿಗ್ಗೆ7 ಗಂಟೆಗೆ ನಡೆಯಲಿದೆ. ನವಗ್ರಹ ಶಾಂತಿ ಹೋಮವು ಒಬ್ಬ ವ್ಯಕ್ತಿಯ ಜಾತಕದಲ್ಲಿ ಪ್ರತಿಕೂಲ ಗ್ರಹ ಸ್ಥಾನಗಳಿಂದ ಉಂಟಾಗುವ ದುಷ್ಪರಿಣಾಮಗಳನ್ನು ಕಡಿಮೆ ಮಾಡಲು ಒಂಬತ್ತು ಗೃಹಗಳ ಶಾಂತಿಗಾಗಿ ನಡೆಸುವ ವೈದಿಕ ಆಚರಣೆಯಾಗಿದೆ. ಪ್ರಾರ್ಥನೆಗಳು,

ಯುವ ಮನಸ್ಸುಗಳು ಎಚ್ಚೆತ್ತುಕೊಂಡಲ್ಲಿ ಸ್ವಾಸ್ಥ್ಯ ಸಮಾಜ ನಿರ್ಮಾಣ ಸಾಧ್ಯ : ಡಾ. ಅನುರಾಧ ಕುರುಂಜಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್( ರಿ) ಸುಳ್ಯ ತಾಲೂಕು, ಸುಳ್ಯ ವಲಯ ಗಾಂಧಿನಗರ ಕಾರ್ಯಕ್ಷೇತ್ರದ ವತಿಯಿಂದ ಆಲೆಟ್ಟಿ ಮಿತಡ್ಕ ರೋಟರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಭಾಗದ ಮಕ್ಕಳಿಗೆ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಡಾ. ಅನುರಾಧ ಕುರುಂಜಿಯವರು ಮಾತನಾಡಿ ಯುವ ಮನಸ್ಸುಗಳು ಎಚ್ಚೆತ್ತುಕೊಂಡಲ್ಲಿ ಸ್ವಾಸ್ಥ್ಯ ಸಮಾಜ ನಿರ್ಮಾಣ ಸಾಧ್ಯ ಎಂದರಲ್ಲದೇ ದುಶ್ಚಟಕ್ಕೆ

ನ. 28 ಉಡುಪಿ ಕೃಷ್ಣ ಮಠಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ :ಪೂರ್ವಭಾವಿ ಸಭೆ

ಉಡುಪಿ: ಉಡುಪಿ ಪರ್ಯಾಯ ಪುತ್ತಿಗೆ ಮಠದ ಶ್ರೀ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ ನವೆಂಬರ್ 28 ರಂದು ನಡೆಯುವ “ಲಕ್ಷ ಕಂಠ ಗೀತಾ ಪಾರಾಯಣ – ಬ್ರಹತ್ ಗೀತೋತ್ಸವ” ಕಾರ್ಯಕ್ರಮದಲ್ಲಿ ದೇಶದ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದು ಇದರ ಪೂರ್ವಭಾವಿಯಾಗಿ ಇಂದು ದಿನಾಂಕ 24-11-2025 ರಂದು ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್ ಕಚೇರಿ ನಡೆದ ಇಲಾಖಾಧಿಕಾರಿಗಳ ಸಭೆಯಲ್ಲಿ ಶಾಸಕರಾದ ಗುರ್ಮೆ

ಕಿಟೆಲ್ ತುಳು ಭಾಷೆಗೆ ಅನನ್ಯ ಕೊಡುಗೆ ನೀಡಿದವರು : ಪ್ರಶಾಂತ್ ಪಂಡಿತ್

ಮಂಗಳೂರು: ಕನ್ನಡದ ಮೊಟ್ಟ ಮೊದಲ ಶಬ್ದಕೋಶವನ್ನು ತಯಾರಿಸಿದ ಫರ್ಡಿನೆಂಡ್ ಕಿಟೆಲ್ ಅವರು ತುಳು ಭಾಷೆಗೆ ಅನನ್ಯವಾದ ಕೊಡುಗೆ ನೀಡಿದವರು. ಕಿಟ್ಟೆಲ್ ಅವರು ಮಂಗಳೂರಿನಲ್ಲಿ ಕಳೆದ ದಿನಗಳು ಅವರ ಬದುಕಿನ ಮಹತ್ವದ ವಿದ್ವತ್ ಪೂರ್ಣ ದಿನಗಳಾಗಿದ್ದವು ಎಂದು ಸಂಶೋಧಕ, ಹಾಗೂ ಸಾಕ್ಷ್ಯ ಚಿತ್ರ ನಿರ್ಮಾಪಕ ಪ್ರಶಾಂತ್ ಪಂಡಿತ್ ಅವರು ಅಭಿಪ್ರಾಯಪಟ್ಟರು. ಅವರು ಮಂಗಳೂರಿನ ತುಳು ಭವನದಲ್ಲಿ ಕರ್ನಾಟಕದ ತುಳು ಸಾಹಿತ್ಯ ಅಕಾಡೆಮಿಯು ಆಯೋಜಿಸಿದ್ದ ತುಳು ಭಾಷೆಗೆ ಕಿಟ್ಟೆಲ್ ಅವರ

ಸುರತ್ಕಲ್‌-ನಂತೂರು-ಬಿ.ಸಿ ರೋಡ್‌ ಹೆದ್ದಾರಿ ವ್ಯಾಪ್ತಿ ಎನ್‌ಎಚ್‌ಎಐಗೆ ಹಸ್ತಾಂತರಿಸಿದ ಕೇಂದ್ರ ಸರ್ಕಾರ

ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರ ನಿರಂತರ ಪ್ರಯತ್ನಕ್ಕೆ ಬಹುದೊಡ್ಡ ಯಶಸ್ಸು ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ನಿರಂತರ ಪ್ರಯತ್ನದ ಫಲವಾಗಿ ನವ ಮಂಗಳೂರು ಬಂದರು ವ್ಯಾಪ್ತಿಗೆ ಸೇರಿದ ಸುರತ್ಕಲ್-ನಂತೂರು-ಬಿಸಿ ರೋಡ್ ಬಂದರು ಸಂಪರ್ಕ ರಸ್ತೆಯ ನಿರ್ವಹಣೆಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(NHAI)ಕ್ಕೆ ಹಸ್ತಾಂತರಿಸಲು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ಅನುಮೋದನೆ ನೀಡಿದೆ. ಆ ಮೂಲಕ ಹಲವು

ಪುತ್ತೂರು: ಯುವಕನ ದುರಂತ ಅಂತ್ಯ; ತಂದೆ-ತಾಯಿಯಂತೆಯೇ ಮಗನೂ ಆತ್ಮಹತ್ಯೆಗೆ ಶರಣು

ಪುತ್ತೂರು: ಬೆಂಗಳೂರಿನಿಂದ ಊರಿಗೆ ಬಂದಿದ್ದ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಪುರುಷರಕಟ್ಟೆ ಇಂದಿರಾನಗರದಲ್ಲಿ ನವೆಂಬರ್ 21ರಂದು ನಡೆದಿದೆ. ಮೃತರನ್ನು ಪುರುಷರಕಟ್ಟೆ ಇಂದಿರಾನಗರ ನಿವಾಸಿ, ದಿವಂಗತ ಪ್ರವೀಣ್ ಜೋಗಿ ಅವರ ಪುತ್ರ ಪ್ರತೀಕ್ (23) ಎಂದು ಗುರುತಿಸಲಾಗಿದೆ. ಬೆಂಗಳೂರಿನ ಶೋರೂಮ್‌ ವರ್ಕ್‌ಶಾಪ್‌ ಒಂದರಲ್ಲಿ ಉದ್ಯೋಗದಲ್ಲಿದ್ದ ಪ್ರತೀಕ್, ಇತ್ತೀಚೆಗಷ್ಟೇ ಊರಿಗೆ ಬಂದಿದ್ದರು. ಗುರುವಾರ ಮಧ್ಯಾಹ್ನ

ಕಾಪು ಪುರಸಭೆ ಬೀಡುಬದಿ ವಾರ್ಡಿನ ರಸ್ತೆ ಅಭಿವೃದ್ಧಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಗುದ್ದಲಿ ಪೂಜೆ

ಕಾಪು ಪುರಸಭಾ ವ್ಯಾಪ್ತಿಯ ಬೀಡುಬದಿ ವಾರ್ಡಿನ ಶ್ರೀ ಕೃಷ್ಣ ಪೂಜಾರಿ ಅವರ ಮನೆಯಿಂದ ಸಾದು ಶೆಟ್ಟಿ ಮನೆ ವರೆಗೆ ರಸ್ತೆ ಅಭಿವೃದ್ಧಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ 5 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ಇಂದು 20-11-2025 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಕಾಪು ಪುರಸಭೆಯ

ಎಂ.ಸಿ.ಸಿ. ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಅನಿಲ್ ಲೋಬೊ ಇವರಿಗೆ ತೌಳವ ಸಹಕಾರಿ ಮಾಣಿಕ್ಯ ಪ್ರಶಸ್ತಿ ಪ್ರಧಾನ

ಸಹಕಾರ ಕ್ಷೇತ್ರದಲ್ಲಿ ನೀಡಿದ ಅತ್ಯುತ್ತಮ ಕೊಡುಗೆಯನ್ನು ಗುರುತಿಸಿ ಮಂಗಳೂರಿನ ಉರ್ವ ಸ್ಟೋರ್‌ನ ತುಳುಭವನ ಸಿರಿ ಚಾವಡಿಯಲ್ಲಿ 16 ನವೆಂಬರ್ 2025 ರಂದು ನಡೆದ 72ನೇ ಸಹಕಾರ ಸಪ್ತಾಹ ಆಚರಣೆಯ ಸಮಾರಂಭದಲ್ಲಿ ಎಂ.ಸಿ.ಸಿ. ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಅನಿಲ್ ಲೋಬೋ ಅವರಿಗೆ 2025 ರ ಪ್ರತಿಷ್ಠಿತ ತೌಳವ ಸಹಕಾರಿ ಮಾಣಿಕ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ತುಳುನಾಡು ರಕ್ಷಣಾ ವೇದಿಕೆ (ರಿ) ಮತ್ತು ತುಳುನಾಡು ಸೂರ್ಯ ಪತ್ರಿಕೆ ಜಂಟಿಯಾಗಿ ಆಯೋಜಿಸಿದ

ಕಿಟೆಲರ ತುಳು ಒಡನಾಟ’ : ವಿಚಾರಗೋಷ್ಠಿ ಮತ್ತು ಸಾಕ್ಷ್ಯ ಚಿತ್ರ ಪ್ರದರ್ಶನ

ಮಂಗಳೂರು: ತುಳು ಭಾಷೆ ಮತ್ತು ತುಳುನಾಡಿನೊಂದಿಗೆ ಕಿಟೆಲ್ ಅವರ ಒಡನಾಟದ ಬಗ್ಗೆ ಹೊಸ ಬೆಳಕು ಚೆಲ್ಲುವ ವಿಚಾರ ಮಂಥನ ಕಾರ್ಯಕ್ರಮ ನ.22ರ ಶನಿವಾರದಂದು ಬೆಳಿಗ್ಗೆ 10:00 ಗಂಟೆಗೆ ಮಂಗಳೂರಿನ ಊರ್ವ ಸ್ಟೋರ್ ನಲ್ಲಿರುವ ತುಳು ಭವನದಲ್ಲಿ ನಡೆಯಲಿದೆ. ಕರ್ನಾಟಕದಲ್ಲಿ ಸುದೀರ್ಘ ಕಾಲ ಅಧ್ಯಯನ ಹಾಗೂ ಕ್ಷೇತ್ರಕಾರ್ಯ ಮಾಡಿ ಕನ್ನಡದ ನಿಘಂಟು ರೂಪಿಸಿದ ರೆವೆರೆಂಡ್ ಫರ್ಡಿನೆಂಡ್ ಕಿಟೆಲ್ ಅವರ ತುಳುನಾಡಿನ ಜೊತೆಗಿನ ಮತ್ತು ತುಳು ಭಾಷೆಯ ಒಡನಾಟದ ಬಗ್ಗೆ ‘ಅರಿವು ಮತ್ತು

ಕ್ರೀಡಾ ಚಟುವಟಿಕೆಗಳು ಉತ್ತಮ ಆರೋಗ್ಯಕ್ಕೆ ಅತ್ಯವಶ್ಯಕ: ಡಾ. ಪೊಡಿಯ

ಕ್ರೀಡೆ ಎಂಬುದು ಆರೋಗ್ಯಕ್ಕೆ ಪೂರಕ. ಕ್ರೀಡೆಯಿಂದ ದೈಹಿಕ ಕ್ಷಮತೆಯೊಂದಿಗೆ ನಾವು ಆರೋಗ್ಯವಾಗಿ ಕ್ರಿಯಾಶೀಲವಾಗಿ ಇರಲು ಸಾಧ್ಯ ಎಂದು ರಾಷ್ಟ್ರ ಮಟ್ಟದ ಕ್ರೀಡಾಪಟು, ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿ ಪುತ್ತೂರು ಇಲ್ಲಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ಪೊಡಿಯ ಹೇಳಿದರು. ಇವರು ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ನವೆಂಬರ್ 19ರಂದು ನಡೆದ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. ಕ್ರೀಡಾ ಸಾಧನೆಗೆ ನಿರಂತರ ಪ್ರಯತ್ನ ಕಠಿಣ ಪರಿಶ್ರಮ