Home Archive by category ಕರಾವಳಿ (Page 823)

ಮಂಜೇಶ್ವರ ಗ್ರಾ. ಪಂ.ನಲ್ಲಿ ಬೀಫ್ ಸ್ಟಾಲ್ ಸ್ಥಾಪನೆಗೆ ವಿರೋಧ : ಪ್ರತಿಭಟನೆ

ಮಂಜೇಶ್ವರ : ಮಂಜೇಶ್ವರ ಗ್ರಾ. ಪಂ. ಬೋರ್ಡ್ ಸಭೆಯಲ್ಲಿ ಬೀಫ್ ಸ್ಟಾಲ್ ಸ್ಥಾಪನೆಗೆ ಆಡಳಿತ ಮಂಡಳಿ ಅಜೆಂಡಾದ ಬಗ್ಗೆ ಚರ್ಚಿಸಿ ಆ ಬಗ್ಗೆ ಯಾವುದೇ ತೀರ್ಮಾನ ಕೈಗೊಳ್ಳದೆ ಇರುವುದರಿಂದ ಘರಂ ಆದ ವಿರೋಧ ಪಕ್ಷದ ಯುಡಿಎಫ್ ಸದಸ್ಯರುಗಳು ಬೀಫ್ ಸ್ಟಾಲ್‍ಗಳನ್ನು ವಿರೋಧಿಸುತ್ತಿರುವುದು ಆರೆಸ್ಸಸ್ ಅಜೆಂಡಾವನ್ನು ಪ್ರಾಬಲ್ಯಕ್ಕೆ ತರುವ ಯತ್ನವಾಗಿರುವುದಾಗಿ ಆರೋಪಿಸಿ ಬೋರ್ಡ್

ಎಐಡಿವೈಒ ಕರ್ನಾಟಕ ರಾಜ್ಯ ಸಮಿತಿ : ಭಗತ್‍ಸಿಂಗ್‍ರವರ 114ನೇ ಜನ್ಮದಿನಾಚರಣೆ

ಎಐಡಿವೈಒ ಕರ್ನಾಟಕ ರಾಜ್ಯ ಸಮಿತಿ ಯಿಂದ ಭಗತ್‍ಸಿಂಗ್‍ರವರ 114ನೇ ಜನ್ಮದಿನಾಚರಣೆ ಯನ್ನು ಆಚರಿಸಲಾಯಿತು. ಎಐಡಿವೈಒ ರಾಷ್ಟ್ರೀಯ ಅಧ್ಯಕ್ಷರಾದ ರಾಮಾಂಜನಪ್ಪ ಆಲ್ದಳ್ಳಿ ಮಾತನಾಡುತ್ತಾ ಭಗತ್‍ಸಿಂಗ್ ಕಂಡ ಕನಸು ನನಸಾಗಿಸಲು ಇಂದಿನ ವಿದ್ಯಾರ್ಥಿ ಯುವಜನರು ಸಂಕಲ್ಪ ತೊಡಬೇಕು ಭಗತ್‍ಸಿಂಗ್ ಅವರು ಕನಸು ಬ್ರಿಟಿಷರು ಭಾರತ ಬಿಟ್ಟು ತೊಲಗಿದರೆ ಸಾಕಾಗುವುದಿಲ್ಲ ಒಂದು ಸಮಾಜವಾದ ರಾಷ್ಟ್ರವನ್ನು ನಿರ್ಮಾಣ ಮಾಡಬೇಕೆಂಬುವುದಾಗಿತ್ತು. ಎಲ್ಲ ಬಡಜನರಿಗೆ ಮೂಲಭೂತ ಅವಶ್ಯಕತೆಗಳು

ಉದ್ಯಮಿ ಜಾರ್ಕಳ ಅಜಿತ್ ಹೆಗ್ಡೆ ನಿಧನ

ಕಾರ್ಕಳ ತಾಲೂಕಿನ ಉದ್ಯಮಿ, ಸಾಮಾಜಿಕ ಕಾರ್ಯಕರ್ತರು ಹಾಗೂ ಕಾರ್ಕಳದ ಲತಾ ಮೆಡಿಕಲ್ಸ್‍ನ ಸ್ಥಾಪಕರಾದ ಜಾರ್ಕಳ ಅಜಿತ್ ಹೆಗ್ಡೆ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರ ಅಂತಿಮ ದರ್ಶನವು ಸೆ.30ರಂದು ಬೆಳಗ್ಗೆ 8.30ರಿಂದ 10ರ ವರೆಗೆ ಕಾರ್ಕಳದ ತೆಳ್ಳಾರ್ ರಸ್ತೆಯಲ್ಲಿರುವ ಸ್ವಗೃಹ ಕಸ್ತೂರಿಯಲ್ಲಿ ನಡೆಯಲಿದೆ. ನಂತರ ಮಧ್ಯಾಹ್ನ 12.30ಕ್ಕೆ ನಿಂಜೂರು ಪಡುಮನೆ ಎಂಬಲ್ಲಿ ಅಂತಿಮ ಸಂಸ್ಕಾರದ ವಿಧಿ ವಿಧಾನಗಳು ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ತುಳು ದಿನ ಆಚರಣೆ ಮತ್ತು ಪರಿಷ್ಕ್ರತ ತುಳು ಜ್ಞಾತಿಪಾದಸಂಚಯ ಡಿಜಿಟಲ್ ಆವೃತ್ತಿ ಲೋಕಾರ್ಪಣೆ

ನಿಟ್ಟೆ ಪರಿಗಣಿತ ವಿಶ್ವವಿದ್ಯಾನಿಲಯವು ಗಾಂಧಿಜಯಂತಿಯ ಸಂದರ್ಭದಲ್ಲಿ ತುಳುದಿನವನ್ನು ಐಲೇಸಾ ತಂಡದ ಸಹಯೋಗದೊಂದಿಗೆ ಅಕ್ಟೋಬರ್ ೨ರಂದು ಆನ್ ಲೈನ್ ಮೂಲಕ ಆಚರಿಸಲಿದ್ದು ಇದರಲ್ಲಿ ವಿಶ್ವವಿದ್ಯಾನಿಲಯದ ಮಹತ್ ಭಾಷಾ ಯೋಜನೆಯಾದ ’ಪರಿಷ್ಕ್ರತ ತುಳು ಜ್ಞಾತಿಪದಸಂಚಯದ ಡಿಜಿಟಲ್ ಆವೃತ್ತಿಯನ್ನು ಕುಲಾಧಿಪತಿಯವರಾದ ಶ್ರೀ ಯನ್, ವಿನಯ ಹೆಗ್ಡೆಯವರು ಲೋಕಾರ್ಪಣೆ ಮಾಡಲಿದ್ದಾರೆ. ನಿಟ್ಟೆ ವಿಶ್ವವಿದ್ಯಾನಿಲಯದ ಸಹಕುಲಪತಿಯವರಾದ ಡಾ. ಎಂ. ಎಸ್ ಮೂಡಿತ್ತಾಯರು, ಕುಲಸಚಿವರಾದ ಡಾ.

ಲ್ಯಾಂಡ್ ಲಿಂಕ್ಸ್ ಪ್ರದೇಶದ ಜನರ ಬಹುದಿನಗಳ ಬೇಡಿಕೆ ಈಡೇರಿಕೆ : ನರ್ಮ್ ಬಸ್‍ಗೆ ಶಾಸಕ ಡಾ. ವೈ ಭರತ್ ಶೆಟ್ಟಿ ಚಾಲನೆ

ಮಂಗಳೂರಿನ ಕೊಂಚಾಡಿಯ ಲ್ಯಾಂಡ್ ಲಿಂಕ್ಸ್ ಪ್ರದೇಶದ ಜನರ ಬಹುದಿನಗಳ ಬೇಡಿಕೆಯಾದ ಸರ್ಕಾರಿ ಬಸ್ ಓಡಾಟದ ಕನಸು ನನಸಾಗಿದೆ. ಶಾಸಕ ಡಾ. ವೈ ಭರತ್ ಶೆಟ್ಟಿ ಅವರು ನರ್ಮ್ ಬಸ್ ಸಂಚಾರಕ್ಕೆ ಹಸಿರು ನಿಶಾನೆ ತೋರಿಸಿದರು. ಇದೇ ವೇಳೆ ಮಾತನಾಡಿದ ಶಾಸಕರು ಈ ಭಾಗದಲ್ಲಿ ಶಾಲಾ ವಿದ್ಯಾರ್ಥಿಗಳು, ನೌಕರಿಗೆ ಹೋಗುವ ಜನರಿಗೆ ಅನುಕೂಲವಾದ ಸಮಯದಲ್ಲಿ ನರ್ಮ್ ಬಸ್ ಸಂಚಾರ ಅವಕಾಶ ನೀಡಲಾಗಿದೆ. ಪ್ರತೀ 45 ನಿಮಿಷಕ್ಕೆ ನರ್ಮ್ ಬಸ್ ಓಡಾಟ ನಡೆಸಲಿದೆ. ಇದೀಗ ಪ್ರಾಯೋಗಿಕವಾಗಿ ಸಮಯದಲ್ಲಿ

ಕೆಎಸ್‌ಆರ್‌ಟಿಸಿ ಪುತ್ತೂರು ವಿಭಾಗ ಕಚೇರಿಯ ದಶಮಾನೋತ್ಸವ

ಪುತ್ತೂರು: ಕೆಎಸ್‌ಆರ್‌ಟಿಸಿ ಪುತ್ತೂರು ವಿಭಾಗದ ದಶಮಾನೋತ್ಸವ ಕಾರ್ಯಕ್ರಮವು ಮುಕ್ರಂಪಾಡಿಯ ವಿಭಾಗೀಯ ಕಚೇರಿಯ ಆವರಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ, ನಿವೃತ್ತ ನೌಕರರನ್ನು ಸನ್ಮಾನಿಸಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲೆಯೂ ಸೇರಿದಂತೆ ಈ ಭಾಗದಲ್ಲಿ ಉತ್ತರ ಕರ್ನಾಟಕ ಭಾಗದವರೇ ನಿಗಮದಲ್ಲಿ ನೌಕರರಾಗಿ ಕೆಲಸ ಮಾಡುತ್ತಿದ್ದಾರೆ. ಅವರನ್ನು ತವರು ಜಿಲ್ಲೆಗೆ ವರ್ಗಾಯಿಸಿದರೆ ಇಲ್ಲಿ ಸಿಬ್ಬಂದಿ

ಸಿದ್ದರಾಮಯ್ಯರೇ ಒಬ್ಬ ದೊಡ್ಡ ಭಯೋತ್ಪಾದಕ..? ನಳೀನ್ ಕುಮಾರ್ ಕಟೀಲ್

ಮಂಗಳೂರು: ಸಿದ್ದರಾಮಯ್ಯರೇ ಒಬ್ಬ ದೊಡ್ಡ ಭಯೋತ್ಪಾದಕ ಅನ್ನೋದು ನನಗೆ ಅನಿಸುತ್ತೆ ಎಂದು ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದಾರೆ. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆರೆಸ್ಸೆಸ್ಸಿಗರು ತಾಲಿಬಾನಿಗಳಿದ್ದಂತೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೆ ಸಂಬಂಧಿಸಿ ಈ ರೀತಿ ಪ್ರತಿಕ್ರಿಯಿಸಿದರು. ಅವರ ಅತಂತ್ರ ಸ್ಥಿತಿಯಲ್ಲಿ ಅವರು ಇಂಥ ಹೇಳಿಕೆಗಳನ್ನು ಕೊಡ್ತಿದ್ದಾರೆ, ತಾಲಿಬಾನ್ ಸಂಸ್ಕೃತಿ ಅವರದ್ದು, ಅವರು

ಆಲೂರಿನಲ್ಲಿ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮ

ಹಾಸನ ತಾಲೂಕು ಕಾನೂನು ಸೇವಾ ಸಮಿತಿ ಆಲೂರು, ವಕೀಲರ ಸಂಘ ಆಲೂರು ಮತ್ತು ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮವನ್ನು ಆಲೂರು ತಾಲೂಕು ಜೆಎಂಎಫ್ಸಿ ನ್ಯಾಯಾಧೀಶರಾದ ಪ್ರತಿಮಾ ನೇತೃತ್ವದಲ್ಲಿ ಹಮ್ಮಿಕೊಂಡಿದ್ದರು. ಆಲೂರು ತಾಲೂಕಿನ ಅಂಬೇಡ್ಕರ್ ಭವನದಲ್ಲಿ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮವನ್ನು ತಾಲೂಕು ಜೆಎಂಎಫ್ಸಿ ನ್ಯಾಯಾಧೀಶರಾದ ಪ್ರತಿಮಾ ಅವರು ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡುತ್ತಾ ಕಾನೂನಿನ ಅರಿವಿನ

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ : ತಲಪಾಡಿಯಲ್ಲಿ ಮರಗಳ ಮಾರಣ ಹೋಮ

 ಮಂಜೇಶ್ವರ : ರಾಷ್ಟ್ರೀಯ ಹೆದ್ದಾರಿ ಅಗಲೀಕರಣದ ಭಾಗದ ಮೊದಲ ಹಂತವಾಗಿ ರಾಷ್ಟ್ರೀಯ ಹೆದ್ದಾರಿ ಬದಿಗಳಲ್ಲಿರುವ ಮರಗಳನ್ನು ತೆರವುಗೊಳಿಸಲು ಸರಕಾರವು ಗುತ್ತಿಗೆಯನ್ನು ನೀಡಿದೆ. ಈ ಹಿನ್ನೆಲೆಯಲ್ಲಿ ತಲಪಾಡಿಯಿಂದ ಮರಗಳ ಮಾರಣ ಹೋಮದದ ಪ್ರಕ್ರಿಯೆ ಆರಂಭಗೊಂಡಿತ್ತು. ಮರಗಳನ್ನು ಕಡಿದು ಅದರ ರೆಂಬೆಗಳನ್ನು ರಸ್ತೆ ಬದಿಗಳಲ್ಲಿ ಹಾಗೂ ಬಸ್ಸು ನಿಲ್ದಾಣ ಪರಿಸರಗಳಲ್ಲಿ ಮತ್ತು ಸಾರ್ವಜನಿಕರು ನಡೆದಾಡುತ್ತಿರುವ ಸ್ಥಳಗಳಲ್ಲಿ ಉಪೇಕ್ಷಿಸಿ ಅದನ್ನು ತೆರವುಗೊಳಿಸದೇ ಇರುವುದು

ಅರಸೀಕೆರೆ : ನಿಂತಿದ್ದ ರೈಲು ಬೋಗಿಯಲ್ಲಿ ಬೆಂಕಿ ಅವಘಡ

ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ಅರಸೀಕೆರೆ ನಗರ ರೈಲು ನಿಲ್ದಾಣದಲ್ಲಿ ಸ್ವಚ್ಛತೆಗೆ ನಿಲ್ಲಿಸಿದ್ದ ನಿಜಮುದ್ದಿನ್ ಮೈಸೂರು ಚೆನ್ನೈ ಎಕ್ಸ್ಪ್ರೆಸ್ ರೈಲು ಗಾಡಿಯ ಒಂದೇ ಭೋಗಿಯ ಎರಡು ಕಂಪಾರ್ಟ್‍ಮೆಂಟ್‍ಗಳಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಯಿತು. ಅದೃಷ್ಟವಶಾತ್ ಬೋಗಿಯಲ್ಲಿ ಪ್ರಯಾಣಿಕರು ಇಲ್ಲದ ಕಾರಣ ಯಾವುದೇ ಪ್ರಾಣಹಾನಿಯಾಗಿಲ್ಲ, ಇದರಿಂದ ಹೆಚ್ಚಿನ ಅನಾಹುತ ತಪ್ಪಿದೆ. ಸುದ್ದಿ ತಿಳಿದ ಕೂಡಲೇ ರೈಲ್ವೆ ಅಧಿಕಾರಿಗಳ ತಂಡ