Home Archive by category ಕರಾವಳಿ (Page 824)

ಬಿಜೆಪಿ ಪಕ್ಷಕ್ಕೆ ಕಾರ್ಯಕರ್ತರೆ ಶಕ್ತಿ, ಬೂತ್ ಅಧ್ಯಕ್ಷನೇ ಆತ್ಮ : ನಳಿನ್ ಕುಮಾರ್ ಕಟೀಲ್ ಹೇಳಿಕೆ

ಬಂಟ್ವಾಳ: ಬಿಜೆಪಿ ಪಕ್ಷಕ್ಕೆ ಕಾರ್ಯಕರ್ತರೆ ಶಕ್ತಿ. ಬೂತ್ ಅಧ್ಯಕ್ಷನೇ ಆತ್ಮ. ಬೂತ್ ಅಧ್ಯಕ್ಷರಿಗೆ ಶಕ್ತಿ ತುಂಬಿ, ಗೌರವಿಸುವ ಉದ್ದೇಶದಿಂದ ಪ್ರತೀ ಬೂತ್ ಅಧ್ಯಕ್ಷರ ಮನೆಗೆ ನಾಮಫಲಕ ಅಳವಡಿಸುವ ಕಾರ್ಯಕ್ರಮವನ್ನು ಪಕ್ಷದ ವತಿಯಿಂದ ನಡೆಸಲಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು. ಪ್ರಧಾನಿ ನರೇಂದ್ರ ಮೋದಿಯವರ 71ನೇ

ಸುರತ್ಕಲ್ ನಲ್ಲಿ ನಡೆದ ವೈದ್ಯ ವಿದ್ಯಾರ್ಥಿಗಳ ಮೇಲಿನ ದಾಳಿ ಪ್ರಕರಣಕ್ಕೆ ಶಾಸಕ ಯು.ಟಿ. ಖಾದರ್ ಖಂಡನೆ

ಮಂಗಳೂರು:ಮಂಗಳೂರಿನ ಸುರತ್ಕಲ್ ನಲ್ಲಿ ನಡೆದ ವೈದ್ಯ ವಿದ್ಯಾರ್ಥಿಗಳ ಮೇಲಿನ ದಾಳಿ ಪ್ರಕರಣವನ್ನು ಮಾಜಿ ಸಚಿವ, ಶಾಸಕ ಯುಟಿ ಖಾದರ್ ಖಂಡಿಸಿದ್ದಾರೆ. ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪೊಲೀಸ್ ಇಲಾಖೆ ವಿರುದ್ಧ ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದರು. ರಸ್ತೆಯಲ್ಲಿ ಯಾವನೋ ಒಬ್ಬ ರೌಡಿ ಹೊಡಿತಾನೆ ಅಂದರೆ ಏನೆನ್ನಬೇಕು..? ಹಾಡಹಗಲೇ ಇಂತಹ ಘಟನೆ ನಡೆದರೆ ಏನೆನ್ನಬೇಕು. ಪೊಲೀಸ್ ಇಲಾಖೆ ಧೈರ್ಯ, ರಕ್ಷಣೆ ಕೊಡುವ ಕೆಲಸ

ಕ್ಷೇತ್ರದ ಜನರಿಗೆ ಭರವಸೆ ನೀಡಿದ ಕೆಲಸ ಮಾಡುತ್ತೇನೆ : ಶಾಸಕ ಶ್ರೀಮಂತ ಪಾಟೀಲ್ ಹೇಳಿಕೆ

ಕ್ಷೇತ್ರದ ಜನರಿಗೆ ಭರವಸೆ ನೀಡಿದ ನಂತರ ಆ ಕೆಲಸ ಮಾಡಿ ಗ್ರಾಮಗಳಿಗೆ ತೆರಳುತ್ತೇನೆ. ಇಲ್ಲವಾದರೇ ಆ ಗ್ರಾಮಕ್ಕೆ ನಾನು ಮರಳುವುದಿಲ್ಲ. ಆಶ್ವಾಸನೆ ನೀಡುವ ಬೇರೆ ರಾಜಕೀಯ ಮುಖಂಡರ ಹಾಗೆ ಗೊಡ್ಡು ಮಾತುಗಳನ್ನು ಹೇಳುವುದಿಲ್ಲ ಎಂದು ಮಾಜಿ ಸಚಿವ ಹಾಗೂ ಶಾಸಕರಾದ ಶ್ರೀಮಂತ ಪಾಟೀಲ ವಿನಾಕಾರಣ ಆಡಿಕೊಳ್ಳುವವರಿಗೆ ಟಾಂಗ್ ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕು ಸಂಬರಗಿ ಗ್ರಾಮದಲ್ಲಿ ವಿವಿಧ ಅಭೀವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಪೂರ್ಣಗೊಂಡಿರುವ ಕಾಮಗಾರಿ

ಭರದ ಸಿದ್ಧತೆಯಲ್ಲಿ ಸಾಂಪ್ರದಾಯಿಕ ಮಂಗಳೂರು ದಸರಾ

ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ನವರಾತ್ರಿ ಉತ್ಸವ ಮತ್ತು ಮಂಗಳೂರು ದಸರಾ ಕಾರ್ಯಕ್ರಮಗಳಿಗೆ ಸಜ್ಜಾಗುತ್ತಿದೆ. ಅಕ್ಟೋಬರ್ 7ರಿಂದ 16ರತನಕ ನಡೆಯುತ್ತಿರುವ ಮಂಗಳೂರು ದಸರಾ ಮಹೋತ್ಸವವನ್ನು ಸರಕಾರದ ಮಾರ್ಗಸೂಚಿಯಂತೆ ಸಾಂಪ್ರದಾಯಿಕವಾಗಿ ನಡೆಸಲು ನಿರ್ಧರಿಸಲಾಗಿದ್ದು ಇದಕ್ಕಾಗಿ ಕುದ್ರೋಳಿ ಕ್ಷೇತ್ರದಲ್ಲಿ ಭರದ ಸಿದ್ಧತೆ ನಡೆಯುತ್ತಿದೆ. ಬ್ರಹ್ಮ ಶ್ರೀ ನಾರಾಯಣ ಗುರುಗಳಿಂದ ರಾಜ್ಯದಲ್ಲಿ ಸ್ಥಾಪಿತ ಏಕೈಕ ಕ್ಷೇತ್ರ ಮಂಗಳೂರಿನ ಕುದ್ರೋಳಿಯ ಶ್ರೀ

ವೈದ್ಯಕೀಯ ವಿದ್ಯಾರ್ಥಿಗಳ ಮೇಲೆ ಅನೈತಿಕ ಗೂಂಡಾಗಿರಿ ನಡೆಸಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಒತ್ತಾಯ- ಡಿವೈಎಫ್ಐ

ಸುರತ್ಕಲ್ ಎನ್.ಐ.ಟಿ.ಕೆ ಸಮೀಪ ಜೀಪಿನಲ್ಲಿ ತೆರಳುತ್ತಿದ್ದ ವೈದ್ಯಕೀಯ ವಿದ್ಯಾರ್ಥಿಗಳನ್ನು ತಡೆದು ದಾಂಧಲೆ ನಡೆಸಿ ಹಲ್ಲೆಗೆ ಯತ್ನಿಸಿದ ಬಿಜೆಪಿಯ ಗೂಂಡಾ ಕಾರ್ಯಕರ್ತರ ಕೃತ್ಯವನ್ನು ಡಿವೈಎಫ್ಐ ದ.ಕ ಜಿಲ್ಲಾ ಸಮಿತಿ ಖಂಡಿಸಿದೆ. ಪೊಲೀಸ್ ಇಲಾಖೆ ಈ ಕೂಡಲೇ ಗೂಂಡಾಗಿರಿ ನಡೆಸಿದವರ ಮೇಲೆ ಕಠಿಣ ಕಾನೂನಿನಡಿ ಶಿಕ್ಷೆಗೊಳಪಡಿಸಿ ಬಂಧಿಸಲು ಒತ್ತಾಯಿಸುತ್ತದೆ. ವಿದ್ಯಾರ್ಥಿಗಳು ಮಣಿಪಾಲಕ್ಕೆ ತೆರಳಿ ಬರುವಂತಹ ಹೊತ್ತಿನಲ್ಲಿ ಸುರತ್ಕಲ್ ಬಳಿ ತಡೆದು ಹಲ್ಲೆ ನಡೆಸಿದ ಬಿಜೆಪಿ,

ಬಂಟ್ವಾಳ ಪುರಸಭೆಯ ಸಾಮಾನ್ಯ ಸಭೆ : ನೀರಿನ ಬಿಲ್ ಗೊಂದಲ, ಅಸಂವಿಧಾನಿಕ ಪದ ಬಳಕೆ

ಬಂಟ್ವಾಳ: ನೀರಿನ ಬಿಲ್ ಗೊಂದಲ, ಕ್ರಿಯಾಯೋಜನೆ ತಯಾರಿಕೆಯಲ್ಲಿ ತಾರತಮ್ಯ, ಪೌರಕಾರ್ಮಿಕ ದಿನಾಚರಣೆ ಊಟದ ವಿಚಾರ, ಅಸಂವಿಧಾನಿಕ ಪದ ಬಳಕೆ.. ಪುರಸಭಾಧ್ಯಕ್ಷ ಮಹಮ್ಮದ್ ಶರೀಫ್ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಪುರಸಭೆಯ ಸಾಮಾನ್ಯ ಸಭೆಯಲ್ಲಿ ಜಟಾಪಟಿಗೆ ಕಾರಣವಾದ ಮುಖ್ಯಾಂಶಗಳು.. ಆದ್ಯತೆಯ ಕಾಮಗಾರಿ ಎಂದು ಹೇಳಿ ತಾರತಮ್ಯ ನೀತಿ ಅನುಸರಿಸಲಾಗುತ್ತಿದೆ. ಕಳೆದ ಒಂದು ವರ್ಷದಿಂದ ಹಣ ಮಾಡಿದ್ದು ಬಿಟ್ಟರೆ ಅಭಿವೃದ್ದಿ ಕಾರ್ಯ ಏನು ಮಾಡಿಲ್ಲ ಎಂದು ವಿಪಕ್ಷ ಸದಸ್ಯ

ಪುತ್ತೂರಿನಲ್ಲಿ ಪಿಎಫ್‍ಐ ವತಿಯಿಂದ ಪ್ರತಿಭಟನೆ

ಪುತ್ತೂರು:ಅಸ್ಸಾಂನಲ್ಲಿ ಪ್ರತಿಭಟನಕಾರರ ಮೇಲೆ ದಾಳಿ ಹಾಗೂ ಹತ್ಯೆಯನ್ನು ಖಂಡಿಸಿ ಅಸ್ಸಾಂ ಸರಕಾರ ಹಾಗೂ ಪೊಲೀಸ್ ಕ್ರೌರ್ಯದ ವಿರುದ್ದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸೆ.28ರಂದು ಮಿನಿ ವಿಧಾನ ಸೌಧದ ಮುಂಭಾದ ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಪಿಎಫ್‌ಐ ಪುತ್ತೂರು ಜಿಲ್ಲಾಧ್ಯಕ್ಷ ಜಾಬೀರ್ ಅರಿಯಡ್ಕ ಮಾತನಾಡಿ, ದೇಶದಲ್ಲಿ ಹಲವಾರು ಹೋರಾಟಗಳನ್ನು ಮಾಡಿರುವ ನಾವು ಆರ್‌ಎಸ್‌ಎಸ್ ವಿರುದ್ದ

ಕಾರ್ಕಳದ ಪತ್ರಕರ್ತರಿಗೆ ಮಣಿಪಾಲ ಆರೋಗ್ಯ ಕಾರ್ಡ್ ವಿತರಣೆ

ಕಾರ್ಕಳ ತಾಲೂಕಿ ಎಲ್ಲಾ ಪತ್ರಕರ್ತರಿಗೆ ಉಚಿತವಾಗಿ ಮಣಿಪಾಲ ಆರೋಗ್ಯ ಕಾರ್ಡ್ ವಿತರಣಾ ಕಾರ್ಯಕ್ರಮ ನಡೆಯಿತು. ಕಾರ್ಕಳದ ಖಾಸಗಿ ಹೋಟೆಲ್‍ನಲ್ಲಿ ಪತ್ರಕರ್ತರಿಗೆ ಆರೋಗ್ಯ ಕಾರ್ಡ್ ವಿತರಣಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯ ವೈದ್ಯಾಧಿಕಾರಿ ಕೀರ್ತಿನಾಥ್ ಬಲ್ಲಾಳ್ ಅವರು. ಕಳೆದ 21 ವರ್ಷದಿಂದ ಸತತವಾಗಿ ಮಣಿಪಾಲ್ ಆರೋಗ್ಯ ಕಾರ್ಡ್‍ನ್ನು ವಿತರಿಸುತ್ತಿದ್ದೇವೆ. ಸಮಾಜದ ಎಲ್ಲಾರಿಗೂ ಕೈಗೆಟಕುವ ದರದಲ್ಲಿ ಆರೋಗ್ಯ ಸೇವೆ ಸಿಗಲಿ ಎಂಬ ಉದ್ದೇಶದಿಂದ

ಗಿರಿಜಾ ಹೆಲ್ತ್‍ ಕೇರ್ & ಸರ್ಜಿಕಲ್ ಸಂಸ್ಥೆಯಿಂದ ವಿಶ್ವ ಔಷಧ ತಜ್ಞರ ದಿನಾಚರಣೆ

ಮಂಗಳೂರು ಮತ್ತು ಉಡುಪಿಯಲ್ಲಿ ಕಾರ್ಯಾಚರಿಸುತ್ತಿರುವ ಗಿರಿಜಾ ಹೆಲ್ತ್‍ಕೇರ್ ಮತ್ತು ಸರ್ಜಿಕಲ್ ಸಂಸ್ಥೆಯ ವತಿಯಿಂದ ವಿಶ್ವ ಔಷಧ ತಜ್ಞರ ದಿನಾಚರಣೆ ನಡೆಯಿತು. ಕಾರ್ಯಕ್ರಮದಲ್ಲಿ ಉಡುಪಿಯ ರಸಾಯನಶಾಸ್ತ್ರಜ್ಞ ಮತ್ತು ಔಷಧ ತಜ್ಞರ ಸಂಘದ ಅಧ್ಯಕ್ಷರಾದ ವಿ.ಜಿ. ಶೆಟ್ಟಿ ಅವರು 2012ರಿಂದ ವಿಶ್ವ ಔಷಧ ತಜ್ಞರ ದಿನವನ್ನಾಗಿ ಆಚರಿಸಲಾಗುತ್ತಿದೆ. ಉಡುಪಿಯ ಗಿರಿಜಾ ಹೆಲ್ತ್ ಕೇರ್ ಮತ್ತು ಸರ್ಜಿಕಲ್ ಸಂಸ್ಥೆಯ ವತಿಯಿಂದ ಆಚರಿಸಲಾಗುತ್ತಿದೆ. ವೈದ್ಯಕೀಯ ಕ್ಷೇತ್ರದಲ್ಲಿ ಔಷಧ ತಜ್ಞರ

ನಂತೂರು-ಪಂಪ್ವೆಲ್ ಹೆದ್ದಾರಿಯಲ್ಲಿ ಹಿಟ್ ಆಂಡ್ ರನ್ ಪ್ರಕರಣ : ವಿದ್ಯಾರ್ಥಿ ಸ್ಥಳದಲ್ಲೇ ಸಾವು

ನಗರದ ನಂತೂರು-ಪಂಪ್ವೆಲ್ ಹೆದ್ದಾರಿಯಲ್ಲಿ ಹಿಟ್ ಅಂಡ್ ರನ್ ಪ್ರಕರಣ ನಡೆದಿದ್ದು ಕಾಲೇಜು ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಮಂಗಳೂರಿನ ಲಕ್ಷ್ಮೀ ಮೆಮೋರಿಯಲ್ ನರ್ಸಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಯಾಗಿದ್ದ ಮಹಾರಾಷ್ಟ್ರದ ಪೂನಾ ಮೂಲದ ಮಾನಸ್ ಉಗಾಲೆ (27) ಎಂಬಾತ ಸಾವನ್ನಪ್ಪಿದ ಯುವಕ.ಈತ ನಂತೂರಿನಿಂದ ಪಂಪ್ವೆಲ್ ನತ್ತ ಪಲ್ಸರ್ ಬೈಕಿನಲ್ಲಿ ತೆರಳುತ್ತಿದ್ದಾಗ ಯಾವುದೋ ವಾಹನ ಹಿಂದಿನಿಂದ ಡಿಕ್ಕಿಯಾಗಿ ಪರಾರಿಯಾಗಿದೆ. ಆನಂತರ, ಇತರೇ