ಕುಂದಾಪುರ: ವಿಪರೀತ ಮದ್ಯ ಸೇವಿಸಿದ ಚಾಲಕನೋರ್ವ ರಾಷ್ಟ್ರೀಯ ಹೆದ್ದಾರಿ-66 ರಲ್ಲಿ ಯದ್ವಾತದ್ವ ಕಂಟೇನರ್ ಚಲಾಯಿಸಿ ಕೆಲಹೊತ್ತು ಆತಂಕ ಸೃಷ್ಠಿಸಿದ ಘಟನೆ ತಾಲೂಕಿನ ಮುಳ್ಳಿಕಟ್ಟೆಯಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ. ಕುರುಚಲು ಹುಲ್ಲು ಸಾಗಿಸುತ್ತಿದ್ದ ಛತ್ತೀಸ್ ಗಡ ಮೂಲದ ನೋಂದಣಿಯ ಕಂಟೇನರ್ ಚಾಲಕ ವಿಪರೀತವಾಗಿ ಮದ್ಯ ಸೇವಿಸಿ ಕಂಟೇನರ್ ಚಲಾಯಿಸಿದ ಪರಿಣಾಮ
ಕಸ್ಬಾ ಬೆಂಗ್ರೆಯ ಸಾಂಪ್ರದಾಯಿಕ, ನಾಡದೋಣಿಗಳು ತಂಗುವ ತೀರದಲ್ಲಿ ವಿದ್ಯುತ್ ಬೆಳಕಿನ ವ್ಯವಸ್ಥೆ ಇಲ್ಲದೆ, ಸರಿಯಾದ ರಸ್ತೆ ಸಂಪರ್ಕ ಇಲ್ಲದೆ ಮೀನುಗಾರರು ವೃತ್ತಿ ನಿರ್ವಹಿಸಲು ಸಮಸ್ಯೆಗಳು ಉಂಟಾಗಿದ್ದು, ಅದ್ಯತೆಯಿಂದ ವಿದ್ಯುತ್ ಬೆಳಕು, ರಸ್ತೆ ಸಂಪರ್ಕ ಒದಗಿಸುವಂತೆ ಒತ್ತಾಯಿಸಲಾಯಿತು. ನಿಯೋಗದಲ್ಲಿ ಪಲ್ಗುಣಿ ನಾಡದೋಣಿ ಮೀನುಗಾರರ ಸಂಘದ ಗೌರವಾಧ್ಯಕ್ಷ ಮುನೀರ್ ಕಾಟಿಪಳ್ಳ, ಅಧ್ಯಕ್ಷರಾದ ಅಬ್ದುಲ್ ತಯ್ಯೂಬ್,ಸರ್ಫರಾಝ್,ಸಾವಲ್, ಫಹಾಝ್,ಮುದಸ್ಸಿರ್,ಇಮ್ತಿಯಾಝ್,
ವಾರದ ಹಿಂದೆ ಮೀನುಗಾರಿಕೆಯ ಸಂದರ್ಭ ದೋಣಿ ಮಗುಚಿ ಮೃತರಾದ ಕಸ್ಬಾ ಬೆಂಗ್ರೆಯ ನಿವಾಸಿ ಶೆರೀಫ್ ಕುಟುಂಬಕ್ಕೆ ಸರಕಾರದ ವತಿಯಿಂದ ಪರಿಹಾರ ಧನ ನೀಡುವಂತೆ ಕೋರಿ ಮೀನುಗಾರಿಕಾ ಇಲಾಖೆಯ ಉಪ ನಿರ್ದೇಶಕ ಹರೀಶ್ ಕುಮಾರ್ ಅವರಿಗೆ “ಸಾಂಪ್ರದಾಯಿಕ ಮೀನುಗಾರರ ಸಂಘ” ದ ವತಿಯಿಂದ ಮನವಿ ಸಲ್ಲಿಸಲಾಯಿತು. ವೃದ್ದೆ ತಾಯಿ, ಸಹೋದರಿ, ಹೆಂಡತಿ, ಮೂರು ಸಣ್ಣ ಮಕ್ಕಳಿರುವ ಕುಟಂಬಕ್ಕೆ ಶೆರೀಫ್ ದುಡಿಮೆಯೇ ಆಧಾರವಾಗಿತ್ತು. ದಿಢೀರ್ ನಡೆದ ದುರಂತದಿಂದ ಮೃತ ಶೆರೀಫ್ ಕುಟುಂಬ
ಈ ವರ್ಷದ ರೋಗಿಗಳ ವಿಶ್ವ ಸುರಕ್ಷತಾ ದಿನದ ಥೀಮ್ “ತಾಯಿ ಮತ್ತು ನವಜಾತ ಶಿಶುಗಳ ಆರೈಕೆ”. ರೋಗಿಗಳ ಸುರಕ್ಷತೆಯ ಬಗ್ಗೆ ಜಾಗ್ರತಿ ಮೂಡಿಸಲು ರೋಗಿಗಳ ವಿಶ್ವ ಸುರಕ್ಷತಾ ದಿನವನ್ನು ವಿಶ್ವದಾದ್ಯಂತ ಆಚರಿಸಲಾಗುತ್ತದೆ.ಎ. ಜೆ ಆಸ್ಪತ್ರೆಯಲ್ಲಿ ರೋಗಿಗಳ ವಿಶ್ವ ಸುರಕ್ಷತಾ ದಿನವನ್ನುಆಚರಿಸಲಾಯಿತು. ಈ ಸಂಧರ್ಭ ಆಸ್ಪತ್ರೆಯಲ್ಲಿ ರೋಗಿಗಳ ಸುರಕ್ಷತೆಗಾಗಿಡಬ್ಲ್ಯೂ.ಹೆಚ್.ಓ ಮಾರ್ಗಸೂಚಿಗಳ ಅನುಷ್ಠಾನ ಮತ್ತು ಪಾಲನೆ ಬಗ್ಗೆ ವಿಶ್ಲೇಷಿಸಲಾಯಿತು. ಡಾ. ಮಂಜುನಾಥ್ಕಾಮತ್,
ದೇವರಹಿಪ್ಪರಗಿ ತಾಲ್ಲೂಕಿನ ಮುಳಸಾವಳಗಿ ಗ್ರಾಮದ ಎಂಎಸ್ಎಐಎಲ್ ರದ್ದುಪಡಿಸಲು ಗ್ರಾಮದ ಹಲವು ಮುಖಂಡರು, ಮಹಿಳೆಯರಿಂದ ಹಾಗೂ ಪ್ರಗತಿಪರ ಸಂಘಟನೆಗಳಿಂದ ಪ್ರತಿಭಟನೆಯನ್ನ ಹಮ್ಮಿಕೊಳ್ಳಲಾಗಿತ್ತು. ಪಟ್ಟಣದ ಮೊಹರೆ ಹನಮಂತರಾಯ ವೃತ್ತದಿಂದ ಅಂಬೇಡ್ಕರ್ ವೃತ್ತದ ವರೆಗೆ ಸರ್ಕಾರದ ವಿರುದ್ಧ ಧಿಕ್ಕಾರ ಕೂಗುತ್ತಾ ಬಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.ನಂತರ ಅಂಬೇಡ್ಕರ್ ವೃತ್ತದಲ್ಲಿ ಹಲವಾರು ಪ್ರಗತಿಪರ ಸಂಘಟನೆಯ ಮುಖಂಡರುಗಳು ಮಾತನಾಡಿ ಮಹಿಳೆಯರ ಹೋರಾಟಕ್ಕೆ ಬೆಂಬಲ
ನಂಜನಗೂಡಿನಲ್ಲಿ ದೇವಸ್ಥಾನ ಕೆಡವಿರುವುದಕ್ಕೆ ಅಧಿಕಾರದಲ್ಲಿರುವ ಬಿಜೆಪಿ ಸರಕಾರವೇ ನೇರ ಹೊಣೆ, 2008ರಲ್ಲಿ ಆದ ಸುಪ್ರೀ ಕೋರ್ಟ್ ಆದೇಶವನ್ನು ಪ್ರಯೋಗಕ್ಕೆ ಒಳಪಡಿಸಿದ್ದು ಬಿಜೆಪಿ ಸರಕಾರ, ಇದು ಸರಕಾರ ಪ್ರಾಯೋಜಿತ ಕಾರ್ಯಕ್ರಮ ಎಂದು ಎಂದು ಮಾಜಿ ಸಚಿವ ಬಿ.ರಮನಾಥ ರೈ ಆಕ್ರೋಶ ವ್ಯಕತಪಡಿಸಿದರು. ರಾಜ್ಯ ಬಿಜೆಪಿ ಸರಕಾರ ಧಾರ್ಮಿಕ ಕೇಂದ್ರಗಳನ್ನು ಧ್ವಂಸಗೊಳಿಸಿದ ಹಾಗೂ ಅನೇಕ ದೇವಸ್ಥಾನ, ದೈವಸ್ಥಾನ ಮತ್ತು ಪ್ರಾರ್ಥನಾ ಮಂದಿರಗಳನ್ನು ತೆರವುಗೊಳಿಸುವುದರ ವಿರುದ್ದ
ಬೈಂದೂರು ಉಪ್ಪುಂದದ ತಾರಾಪತಿಯಲ್ಲಿ ಜೈಗುರೂಜಿ ಹೆಸರಿನ ದೋಣಿಯಲ್ಲಿ ಆರು ಜನರು ಮೀನುಗಾರಿಕೆ ತೆರಳಿದ್ದು, ಮೀನುಗಾರಿಕೆ ಮುಗಿಸಿ ಹಿಂತಿರುಗಿ ಬರುವ ವೇಳೆ ರಭಸದಿಂದ ಹೊಡೆದ ತೆರೆಗೆ ದೋಣಿ ಮಗುಚಿ ಬಿದ್ದ ಪರಿಣಾಮವಾಗಿ ಆರು ಜನರಲ್ಲಿ ನಾಲ್ವರನ್ನು ಕಾಪಾಡುವಲ್ಲಿ ಯಶಸ್ವಿಯಾಗಿ, ಉಳಿದಿಬ್ಬರು ಚರಣ್ ಹಾಗೂ ಗೊಂಡಯ್ಯ ಅಣ್ಣಪ್ಪ ಎಂಬುವರು ನಾಪತ್ತೆಯಾಗಿದ್ದರು. ನಾಪತ್ತೆಯಾಗಿದ್ದ ಚರಣ್ ಮತ್ತು ಅಣ್ಣಪ್ಪ ಎಂಬುವರಲ್ಲಿ ಚರಣ್ ಮೃತ ದೇಹ ಅಮ್ಮನವರ ತೊಪ್ಲು ಎಂಬಲ್ಲಿ ಶನಿವಾರದಂದು
ಸುಳ್ಯ ತಾಲೂಕಿನ ಗುತ್ತಿಗಾರು ವಳಲಂಬೆಯ ಹೊಸೋಳಿಕೆ ಗಿರಿಯಪ್ಪ ಗೌಡ ಅವರ ಧರ್ಮ ಪತ್ನಿ ಶ್ರೀಮತಿ ಗಂಗಮ್ಮ ಅವರು ಸೆಪ್ಟಂಬರ್ 6ರಂದು ಅಸೌಖ್ಯದಿಂದ ನಿಧನರಾಗಿದ್ದು ಅವರಿಗೆ ಶ್ರದ್ಧಾಂಜಲಿ ಅರ್ಪಿಸುವ ಕಾರ್ಯಕ್ರಮವು ಇಂದು ಹೊಸೊಳಿಕೆಯ ತಮ್ಮ ಸ್ವ ಗೃಹದಲ್ಲಿ ನೆರವೇರಿತ್ತು.ಈ ಸಂದರ್ಭದಲ್ಲಿ ಮೃತರ ಪತಿ ಗಿರಿಯಪ್ಪ ಗೌಡ ಹೊಸೊಳಿಕೆ, ಪುತ್ರಿಯರಾದ ಶ್ರೀಮತಿ ರೇಷ್ಮಾ ಗಂಗಾಧರ್ ಕೆದ್ಕಾರ್, ಶ್ರೀಮತಿ ಪ್ರೇಮ ಕುಶಾಲಪ್ಪ ಸೋಮರ್ ಪೇಟೆ ಸೇರಿದಂತೆ ಕುಟುಂಬಸ್ಥರು ಮತ್ತು
ಬಂಟ್ವಾಳದ ಕಾವಳಮೂಡೂರು ಗ್ರಾಮದ ಕಾರಿಂಜ ಮಹತೋಭಾರ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ತೆನೆ ಹಬ್ಬ ಆಚರಣೆ ಸಂಪನ್ನಗೊಂಡಿತು. ಪ್ರತಿ ವರ್ಷ ಕನ್ಯಾ ಸಂಕ್ರಮಣದ ಮರು ದಿವಸ ನಡೆಯುವ ತೆನೆ ಹಬ್ಬ ಆಚರಣೆಗಾಗಿ ಕಾರಿಂಜದಿಂದ ಸುಮಾರು 9ಕಿ.ಮೀ. ದೂರವಿರುವ ಸರಪಾಡಿ ಹಲ್ಲಂಗಾರು ಗದ್ದೆಯೊಂದರಿಂದ ತೆನೆಗಳನ್ನು ತರಲಾಗುತ್ತಿದ್ದು, ಈ ಬಾರಿಯೂ ಸಂಪ್ರದಾಯದಂತೆ ನೆರವೇರಿಸಲಾಯಿತು. ಸೂರ್ಯೋದಯದ ಮುಂಚೆ ಶ್ರೀ ಕ್ಷೇತ್ರ ಕಾರಿಂಜದಿಂದ ವಾದ್ಯ ವೃಂದ ಸಹಿತ ಅರ್ಚಕರು, ತಂತ್ರಿಗಳು,
ಪರಿಸರ ಪ್ರೇಮಿಯೋರ್ವರು ಸಾರ್ವಜನಿಕವಾಗಿ ರಸ್ತೆ ಬದಿಯಲ್ಲಿ ನೆಟ್ಟಿರುವ ಗಿಡಗಳನ್ನು ದುಷ್ಕರ್ಮಿಗಳು ಕಿತ್ತೆಸೆದ ಘಟನೆ ಬಡಗಕಜೆಕಾರು ಗ್ರಾಮದ ದೆತ್ತಿಮಾರು ಎಂಬಲ್ಲಿ ಸಂಭವಿಸಿದ್ದು, ಈ ಬಗ್ಗೆ ಅರಣ್ಯ ಹಾಗೂ ಪೊಲೀಸ್ ಇಲಾಖೆಗೆ ದೂರು ನೀಡಲಾಗಿದೆ. ಇನ್ನು ರಾತೋರಾತ್ರಿ ಸ್ಥಳೀಯ ಐವರು ವ್ಯಕ್ತಿಗಳು ಕಿತ್ತೆಸೆದು ಧ್ವಂಸಗೊಳಿಸಿರುವುದಾಗಿ ಮಾರ್ಕ್ ಸೇರಾ ಅವರು ದೂರು ನೀಡಿದ್ದಾರೆ. ನೆಟ್ಟ ಗಿಡಗಳನ್ನು ಕಿತ್ತು ಬಿಸಾಕಿದ ಘಟನೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಖಂಡನೆ


















