ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರಿಗೆ ರಾಜ್ಯದ ರೈತರ ಸಮಸ್ಯೆಗಳ ಪರಿಹಾರಕ್ಕಾಗಿ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ ಗೌರವಾಧ್ಯಕ್ಷರಾದ ಚಾಮರಸ ಮಾಲೀ ಪಾಟೀಲ್, ಪ್ರಧಾನ ಕಾರ್ಯದರ್ಶಿ ರವಿಕಿರಣ್ ಪುಣಚ ಹಾಗೂ ಕೇಂದ್ರ ಸ್ಥಾನಿಕ ಕಾರ್ಯದರ್ಶಿ ಪಿ.ಗೋಪಾಲ್ ರವರ ನಿಯೋಗದಿಂದ ಒತ್ತಾಯಪತ್ರ ಸಲ್ಲಿಸಿ ಮನವರಿಕೆ ಮಾಡಲಾಯಿತು. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ
ಉಡುಪಿ : ಪ್ರಸ್ತುತ ಜಾಗತಿಕವಾಗಿ ಕಂಡು ಬರುವ ಹಿಂಸಾತ್ಮಕ ಸಮಸ್ಯೆಗಳನ್ನು ಪರಿಹರಿಸಲು ರಾಷ್ಟ್ರೀಯ ಭಾವೈಕ್ಯತೆ ಹಾಗೂ ಕೋಮು ಸೌಹಾರ್ದತೆಯ ಪರಿಕಲ್ಪನೆ ಅಗತ್ಯವಾಗಿದೆ. ತಾನು ಚನ್ನಾಗಿ ಬದುಕಿ ಇತರರನ್ನೂ ಬದುಕಲು ಅವಕಾಶ ನೀಡುವ ಮನೋಸ್ಥಿತಿ ಬೆಳೆದಾಗ ಉತ್ತಮ ಬದುಕುವ ವಾತಾವರಣ ನಿರ್ಮಾಣವಾಗಲು ಸಾಧ್ಯ. ಸಂವಿಧಾನದ ಅಶಯವಾದ ಶಾಂತಿ, ಸಹಬಾಳ್ವೆ ಹಾಗೂ ಸಮಾನತೆಯ ಚಿಂತನೆಗಳು ಇಂದಿನ ಯುವ ಸಮುದಾಯದಲ್ಲಿ ಬೆಳೆದಾಗ ಭವ್ಯ ಭಾರತದ ನಿರ್ಮಾಣ ಸಾಧ್ಯವಾಗುತ್ತದೆ ಎಂದು ಸರಕಾರಿ
ಕುಂದಾಪುರ ತಾಲೂಕು ತ್ರಾಸಿ ಪ್ರವಾಸಿ ಮಂದಿರದ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಎಸ್.ಪಿ. ಮಾರ್ಗದರ್ಶನದಲ್ಲಿ ದಾಳಿ ನಡೆಸಿ ಆರೋಪಿ ಸಹಿತ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಎಸ್.ಪಿ ಮಾರ್ಗದರ್ಶನದಲ್ಲಿ ಡಿಎಸ್ಪಿ, ಸಿಪಿಐ ಸಂತೋಷ್ ಕಾಯ್ಕಿಣಿ, ಪ್ರೊಬೆಷನರಿ ಪಿಎಸ್ಐ ವಿನಯ್ ಕುಮಾರ್ ಮತ್ತು ಗಂಗೊಳ್ಳಿ ಪೊಲೀಸ್ ಉಪನಿರೀಕ್ಷಕರಾದ ನಂಜಾನಾಯ್ಕ್ ಎನ್, ನೇತ್ರತ್ವದಲ್ಲಿ ಅಪಾದಿತರಾದ ನಿಶಾನ್ ಮತ್ತು ಪ್ರಥಮ್ ಕುಮಾರ್ ಗಾಂಜಾ ಮಾರಾಟ
ಆಯುರ್ವೇದ ಚಿಕಿತ್ಸೆಯ ಮೂಲಕ ಮಂಗಳೂರಿನ ಜನತೆಯ ಮನೆ ಮಾತಾಗಿರುವ ವೇದಂಆರೋಗ್ಯ ಆಯುರ್ವೇದ ಹೆಲ್ತ್ ಸೆಂಟರ್ನಲ್ಲಿ ಕೇರಳದ ಜನಪ್ರೀಯ ಓಣಂ ಹಬ್ಬವನ್ನು ಆಚರಿಸಲಾಯಿತು. ನಗರದ ವೆಲೆಂಸ್ಸಿಯಾ ಮತ್ತು ಕದ್ರಿಯಲ್ಲಿ ಕಾರ್ಯಚರಿಸುತ್ತಿರುವ ವೇದಂಆರೋಗ್ಯ ಆಯುರ್ವೇದ ಹೆಲ್ತ್ ಸೆಂಟರ್ ಕಳೆದ ಹಲವು ವರ್ಷಗಳಿಂದ ಜನತಗೆ ನಗುಮುಗದ ಸೇವೆಯನ್ನು ನೀಡುತ್ತಾ ಜನತೆಯ ಮನೆಮತಾಗಿದೆ. ಇಂದು ಮುಂಜಾನೆ ಕದ್ರಿಯ ಆಯುರ್ವೇದ ಹೆಲ್ತ್ ಸೆಂಟರ್ ಪೂಕಳಂ ಹಾಕಿ ಸಾಂಪ್ರದಾಯಿಕವಾಗಿ ಓಣಂ ಹಬ್ಬವನ್ನು
ವಿಟ್ಲ: ಲಾರಿ ಮತ್ತು ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಸವಾರ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಎಂಬಲ್ಲಿ ಸಂಭವಿಸಿದೆ. ಪೇರಮುಗೇರು ನಿವಾಸಿ ರುಕ್ಮಯ ಗಾಯಗೊಂಡ ಆಕ್ಟೀವಾ ಸವಾರ. ಉಪ್ಪಿನಂಗಡಿ ಕಡೆಯಿಂದ ಮಾಣಿ ಕಡೆಗೆ ಹೋಗುತ್ತಿದ್ದ ಆಕ್ಟೀವಾ ವಾಹನಕ್ಕೆ ಹಿಂದಿನಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಆಕ್ಟೀವಾ ನಜ್ಜುಗುಜ್ಜಾಗಿದ್ದು, ಸವಾರ ಸಣ್ಣಪುಟ್ಟ ಗಾಯಗಳಿಂದ ಪವಾಢದೃಶ್ಯ
ಪ್ರತಿನಿತ್ಯ ಕುಡುಪ್ಪಾಡಿ ದೋಟದಿಂದ ಮಹಾಕಾಳಿಪಡ್ಪುವಿನಲ್ಲಿರುವ ಬೀಡಿ ಬ್ರ್ಯಾಂಚ್ ಗೆ ಬೀಡಿ ಕೊಂಡೊಯ್ಯುತ್ತಿದ್ದ ಇಬ್ಬರು ಮಹಿಳೆಯರು ರೈಲಿಗೆ ಡಿಕ್ಕಿಯಾಗಿ ಮೃತಪಟ್ಟ ಘಟನೆ ಶನಿವಾರ ಬೆಳಗ್ಗೆ ನಡೆದಿದೆ. ವಸಂತಿ (50), ಪ್ರೇಮಾ (48)ಮೃತಪಟ್ಟ ದುರ್ದೈವಿಗಳು.ರೈಲು ಬರುತ್ತಿದ್ದದು ಇವರ ಗಮನಕ್ಕೆ ಬಂದಿರಲಿಲ್ಲ ಎಂದು ತಿಳಿದು ಬಂದಿದೆ. ವಿಷಯ ತಿಳಿದು ರೈಲ್ವೇ ಪೊಲೀಸರು ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸಿದ್ದಾರೆ.
ಮುಂಡ್ಕೂರು;ಪ್ರತೀ ವರ್ಷ ರಕ್ತದಾನ ಶಿಬಿರ, ತರಬೇತಿ ಕಾರ್ಯಾಗಾರ, ಉಚಿತ ಯೋಗ ಶಿಬಿರ, ಶಾಶ್ವತ ಯೋಜನೆ ಮುಂತಾದ ಜನೋಪಯೋಗಿ ಕಾರ್ಯಕ್ರಮಗಳನ್ನು ಮಾಡುತ್ತಾ ಜೇಸಿಯ ಕಂಪನ್ನು ಎಲ್ಲೆಡೆ ಪಸರಿಸಿರುವ ಘಟಕ ಜೇಸಿಐ ಮುಂಡ್ಕೂರು ಭಾರ್ಗವ. ಈ ವರ್ಷ ಪ್ರಶಾಂತ್ ಕುಮಾರ್ ರವರ ಅಧ್ಯಕ್ಷತೆಯಲ್ಲಿ ಕೋವಿಡ್ ಸಮಯದಲ್ಲಿ ಅಶಕ್ತರಿಗೆ ಕಿಟ್ ವಿತರಣೆ, ಸಾಧಕ ಮಹಿಳೆಯರಿಗೆ ಅಭಿನಂದನಾ ಕಾರ್ಯಕ್ರಮ, ಹಲವು ತರಬೇತಿ ಕಾರ್ಯಕ್ರಮ, ಅಂತರಾಷ್ಟ್ರೀಯ ಯೋಗ ದಿನ, ನಿರಂತರ ಉಚಿತ ಯೋಗ ಶಿಬಿರ,
ಪ್ರಸ್ತುತ ವಿದ್ಯಾಮಾನದಲ್ಲಿ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬುವ ನಿಟ್ಟಿನಲ್ಲಿ ಮುಕ್ಕ ಶ್ರೀನಿವಾಸ್ ವಿಶ್ವವಿದ್ಯಾಲಯ, ಅಭಿಯಾಂತ್ರಿಕ ಮತ್ತು ತಾಂತ್ರಿಕ ಮಹಾವಿದ್ಯಾಲಯ, ಮುಕ್ಕ ಇವರ ವತಿಯಿಂದ ಅಣುಕು ಸಿಇಟಿ ಪರೀಕ್ಷೆಯನ್ನು ಆಗಸ್ಟ್ 22 ಮತ್ತು 23 ರಂದು ಏರ್ಪಡಿಸಲಾಗಿದೆ. ಸಿಇಟಿ ಪರೀಕ್ಷೆಯನ್ನು ಎದುರಿಸುವ ಮಾಹಿತಿಯನ್ನು ಕೊಡಲಾಗುವುದೆಂದು ಕಾಲೇಜಿನ ಪ್ರಾಂಶುಪಾಲ ಡಾ. ಥಾಮಸ್ ಪಿಂಟೋ, ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಪರೀಕ್ಷೆಗಳು
ಕರಾವಳಿಯಲ್ಲಿ ಕೆಲವು ವರ್ಷಗಳಿಂದ ಭಯೋತ್ಪಾದಕ ಚಟುವಟಿಕೆ ನಡೆಯುತ್ತಿದೆ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಚಟುವಟಿಕೆಗಳ ಮೇಲೆ ಹೆಚ್ಚಿನ ನಿಗಾ ವಹಿಸಬೇಕೆಂದು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು. ಅವರು ಮಂಗಳೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದರು. ಮಂಗಳೂರಿನಲ್ಲಿ ಎನ್ಐಎ ಕೇಂದ್ರ ಸ್ಥಾಪನೆ ಮಾಡುವ ಬಗ್ಗೆ ಕೇಂದ್ರ ಸರ್ಕಾರ ಜೊತೆ ಚರ್ಚೆ ನಡೆಸಲಾಗುವುದು ಎಂದು ಹೇಳಿದರು. ಅಪ್ಘಾನಿಸ್ತಾನದಲ್ಲಿ
ಮಂಗಳೂರಿನ ಸಂತ ಅಲೋಶಿಯಸ್ ಸ್ವಾಯತ್ತ ಕಾಲೇಜಿನ ಸ್ನಾತಕೋತ್ತರ ಆಹಾರ ವಿಜ್ಞಾನವಿಭಾಗದ ಅಸಿಸ್ಟೆಂಟ್ ಪ್ರೊಫೆಸರ್ ಡ್ಯಾನಿಯೆಲ್ಲಾ ಆನ್ಎಲ್. ಚೆಯ್ನ್ರವರ ಸ್ಟಡೀಸ್ ಆನ್ದ ಬಯೋ ಡೈವರ್ಸಿಟಿ ಆಫ್ ಫುಡ್ ರಿಸೋರ್ಸಸ್ ಇನ್ ಮೇಘಾಲಯ ಎಂಬ ಮಹಾಪ್ರಬಂಧಕ್ಕೆ ಹೈದರಾಬಾದ್ನ ಓಸ್ಮಾನಿಯಾ ವಿಶ್ವವಿದ್ಯಾನಿಲಯವು ಪಿಹೆಚ್.ಡಿ. ಪದವಿ ನೀಡಿ ಗೌರವಿಸಿದೆ.ಇವರು ಹೈದರಾಬಾದ್ನ ನ್ಯಾಶನಲ್ಇನ್ಸ್ಟಿಟ್ಯೂಟ್ ಆಫ್ ನ್ಯೂಟ್ರಿಶನ್ನ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್


















