ಮಂಗಳೂರು: ಕಾರ್ಯಕರ್ತನಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಪಾಳಮೋಕ್ಷ ವಿಚಾರಕ್ಕೆ ಸಂಬಂಧಿಸಿ ಮಂಗಳೂರಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯೆ ಕೊಟ್ಟಿದ್ದಾರೆ.ನಾವು ರಾಜಕೀಯ ಕ್ಷೇತ್ರದಲ್ಲಿ ಇರುವವರು, ಯಾರ ಬಗ್ಗೆಯೂ ವೈಯಕ್ತಿಯವಾಗಿ ಮಾತನಾಡಲ್ಲ, ಆದ್ರೆ ಸಮಾಜ ನಮ್ಮನ್ನ ಗಮನಿಸುತ್ತಿರುತ್ತದೆ. ಕಾರ್ಯಕರ್ತರು ನಾಯಕರ ಬಳಿ
ಮಂಗಳೂರು-ಯಶವಂತಪುರ ನಡುವೆ ಹಗಲು ಸಂಚರಿಸುವ ಆಕರ್ಷಕ ರೈಲು ’ವಿಸ್ಟಾಡೋಮ್’ ಗೆ ಇಂದು ಮಂಗಳೂರು ರೈಲು ನಿಲ್ದಾಣದಲ್ಲಿ ಚಾಲನೆ ನೀಡಲಾಯಿತು. ಸಂಸದ ನಳಿನ್ ಕುಮಾರ್ ಕಟೀಲ್ ಅವರು ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ರೈಲ್ವೆ ಇಲಾಖೆಯು ಹೆಚ್ಚು ಮುತುವರ್ಜಿ ವಹಿಸಿ ಪ್ರವಾಸೋದ್ಯಮಕ್ಕೆ ಒತ್ತು ನೀಡುವ ಪ್ರಯತ್ನ ಮಾಡಿದೆ. ಸಾರ್ವಜನಿಕರು ಅನೇಕ ಬೇಡಿಕೆಗಳನ್ಬು ಮುಂದಿಟ್ಟಿದ್ದು, ಒಂದೊಂದೇ ಬೇಡಿಕೆಗಳನ್ನು ಈಡೇರಿಸುತ್ತಾ ಬಂದಿದೆ. 2014ರವರೆಗೆ
ಕರ್ನಾಟಕ ಸರಕಾರದ ವಿಶೇಷ ಅನುದಾನದ ಮೂಲಕ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಕೃಷ್ಣಾಪುರ 4 ನೇ ಬ್ಲಾಕಿನ ಕೈಕಂಬವನ್ನು ಸಂಪರ್ಕಿಸುವ ರಸ್ತೆಯನ್ನು 20 ಲಕ್ಷ ರೂಪಾಯಿ ಅನುದಾನದಲ್ಲಿ ಕಾಂಕ್ರೀಟಿಕರಣ ಮಾಡುವ ಯೋಜನೆಗೆ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ಶನಿವಾರ ಗುದ್ದಲಿಪೂಜೆ ನೆರವೇರಿಸಿದರು. ಈ ಭಾಗದಲ್ಲಿ ಅಂಗನವಾಡಿ ನಿರ್ಮಾಣಕ್ಕೆ ಸ್ಥಳೀಯರು ಶಾಸಕರಿಗೆ ಮನವಿ ಅರ್ಪಿಸಿದರು.ಕಾರ್ಯಕ್ರಮದಲ್ಲಿ ಭಾಜಪಾ ಉತ್ತರ ಮಂಡಲ ಅಧ್ಯಕ್ಷರಾದ
ಮೂಡುಬಿದಿರೆ: ಮೀನು ಕೃಷಿಕರ ದಿನಾಚರಣೆ ಅಂಗವಾಗಿ ಕೃಷಿ ವಿಜ್ಞಾನ ಕೇಂದ್ರ ಮಂಗಳೂರು ಹಾಗೂ ಪಶು ವೈದ್ಯಕೀಯ ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬೀದರ್ ಇವುಗಳ ವತಿಯಿಂದ ಪಣಪಿಲ ಶ್ರೀ ರಾಜ್ ಕೊಟ್ಟಾರಿಬೆಟ್ಟು ಪಣಪಿಲ ಇಲ್ಲಿ ಮೀನು ಕೃಷಿ ಕುರಿತು ತರಬೇತಿ ಹಾಗೂ ಕ್ಷೇತ್ರೋತ್ಸವ ಮತ್ತು ಮಾರಾಟ ಕಾರ್ಯಕ್ರಮ ಶನಿವಾರ ನಡೆಯಿತು. ಮಂಗಳೂರು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ರಮೇಶ್ ಟಿ.ಜೆ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಮೀನು ಕೃಷಿ
ಮಂಗಳೂರು : ಲಯನ್ಸ್ ಕ್ಲಬ್ ಮಂಗಳೂರು ಕೊಡಿಯಾಲಬೈಲ್ ಇದರ 2021-2022 ನೇ ಸಾಲಿಗೆ ನೂತನ ಅಧ್ಯಕ್ಷರಾಗಿ ಲ. ಮೋಹನ್ ಕೊಪ್ಪಲ ಕದ್ರಿ ಆಯ್ಕೆಯಾಗಿರುತ್ತಾರೆ.ಕಾರ್ಯದರ್ಶಿಯಾಗಿ ಲ. ವಿನೂತನ್ ಕಲಿವೀರ್, ಕೋಶಾಧಿಕಾರಿಯಾಗಿ ಲ. ಕಿಶೋರ್ ಡಿ ಶೆಟ್ಟಿ ಆಯ್ಕೆಯಾಗಿರುತ್ತಾರೆ. ನಿಕಟಪೂರ್ವ ಅಧ್ಯಕ್ಷರು ಲ. ಗೋಕುಲ್ ಕದ್ರಿ, ಉಪಾಧ್ಯಕ್ಷರಾಗಿ ಲ.ಮೋಹನ್ ಬರ್ಕೆ, ಪದಾಧಿಕಾರಿಗಳಾಗಿ ಲ. ದೇವಾನಂದ್ – ಟೇಮರ್ ಆಗಿ, ಲ.ಪ್ರದೀಪ್ ಆಳ್ವ — ಟೈಲ್ ಟ್ವಿಸ್ಟರ್ ಆಗಿ, ಲ.
ಉಡುಪಿ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ತಾಲೂಕು ಕಾನೂನು ಸೇವೆಗಳ ಸಮಿತಿಯಿಂದ ಮೆಘಾ ಲೋಕ ಅದಾಲತ್ ಕಾರ್ಯಕ್ರಮವನ್ನು ಆಗಸ್ಟ್ 14ರಂದು ಉಡುಪಿಯ ಎಲ್ಲಾ ನ್ಯಾಯಾಲಯದಲ್ಲಿ ನಡೆಯಲಿದೆ ಎಂದು ಸೀನಿಯರ್ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್. ಹಾಗೂ ಎಡಿಷನಲ್ ಸೀನಿಯರ್ ಸಿವಿಲ್ ಜಡ್ಜ್ ನಟೇಶ್ ಆರ್. ಅವರು ತಿಳಿಸಿದ್ದಾರೆ. ಅವರು
ಮಂಗಳೂರು: ವಿಶ್ವಹಿಂದು ಪರಿಷತ್ತು ಬಜರಂಗದಳ ಸುರತ್ಕಲ್ ಪ್ರಖಂಡ ಇದರ ಆಶ್ರಯದಲ್ಲಿ ಕೋವಿಡ್ ಕಾಲದಲ್ಲಿ ವಾರಿಯರ್ಸ್ಗಳಾಗಿ ಶ್ರಮವಹಿಸಿದ ವೈದ್ಯರುಗಳಿಗೆ, ಆರೋಗ್ಯ ಸಿಬ್ಬಂದಿಗಳಿಗೆ ಅಭಿನಂದನಾ ಕಾರ್ಯಕ್ರಮವು ಮುಕ್ಕ ಶ್ರೀನಿವಾಸ್ ಆಸ್ಪತ್ರೆಯಲ್ಲಿ ಜರುಗಿತು.ಈ ಸಂದರ್ಭದಲ್ಲಿ ವಿಶ್ವಹಿಂದೂ ಪರಿಷತ್ತು ಮಂಗಳೂರು ವಿಭಾಗ ಕಾರ್ಯದರ್ಶಿ ಶರಣ್ ಪಂಪವೆಲ್ ಮಾತನಾಡಿ ವಿಶ್ವವು ಕೋವಿಡ್ ಮಹಾಮಾರಿಯಿಂದ ಸಾಕಷ್ಟು ಸಾವು ನೋವನ್ನು ಅನುಭವಿಸಿದ್ದೇವೆ. ಇಂತಹ ಸಂದರ್ಭಗಳಲ್ಲಿ ಒಂದನೇ,
ಪುತ್ತೂರು: ಫೆಡರೇಶನ್ ಆಫ್ ಇಂಟರ್ನ್ಯಾಶನಲ್ ವಾಲಿಬಾಲ್ ಇವರ ಆಶ್ರಯದಲ್ಲಿ ಆ. 24ರಿಂದ ಸೆ. 2ರವರೆಗೆ ಇರಾನಿನ ತೆಹ್ರಾನ್ನಲ್ಲಿ 19 ವರ್ಷ ವಯೋಮಿತಿಯ ಹುಡುಗರ ವರ್ಲ್ಡ್ ವಾಲಿಬಾಲ್ ಚಾಂಪಿಯನ್ಶಿಪ್ ನಡೆಯಲಿದೆ. ಇದರಲ್ಲಿ ಭಾಗವಹಿಸುವ ಭಾರತೀಯ ತಂಡವನ್ನು ಆಯ್ಕೆ ಮಾಡುವ ನಿಟ್ಟಿನಲ್ಲಿ ಒಡಿಸ್ಸಾದ ಭುವನೇಶ್ವರದ ಕಿಟ್ಟ್ ಯುನಿವರ್ಸಿಟಿಯಲ್ಲಿ ಜುಲೈ 22 ಮತ್ತು 23ರಂದು ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಈ ಪ್ರಕ್ರಿಯೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದಲೂ ಅರ್ಹ
ಕಾರ್ಕಳ: ಒಬ್ಬ ತುಳುವನಾಗಿ ತುಳುನಾಡಿನ ಸಂಸ್ಕøತಿ ಮತ್ತು ಸಂಸ್ಕಾರದ ಬಗ್ಗೆ ವಿಶೇಷ ಗೌರವವನ್ನು ಹೊಂದಿರುವ ನನ್ನಿಂದ ತುಳುನಾಡಿಗೆ ಅಪಚಾರವಾಗಿದೆ ಎನ್ನುವ ಬಿಜೆಪಿ ಹೇಳಿಕೆಯನ್ನು ತಿರಸ್ಕರಿಸುತ್ತಿರುವುದಾಗಿ ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಪೂಜಾರಿ ಹೇಳಿದ್ದಾರೆ. ಅವರು ಕಾರ್ಕಳದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಉಡುಪಿಗೆ ಆಗಮಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಕಾರ್ಕಳಕ್ಕೆ ಬರಮಾಡಿಕೊಳ್ಳಲು ಆಹ್ವಾನಿಸುವ ಜತೆಗೆ,
ಯಶವಂತಪುರ-ಮಂಗಳೂರು ನಡುವೆ ಹಗಲು ಸಂಚರಿಸುವ ರೈಲಿಗೆ ಗಾಜಿನ ಛಾವಣಿಯನ್ನು ಹೊಂದಿರುವ ಆಕರ್ಷಕ ವಿಸ್ಟಾಡೋಮ್ ಬೋಗಿಗಳು ಸೇರ್ಪಡೆಗೊಂಡು ಸಂಚಾರ ಆರಂಭಿಸಲಿರುವ ಸೇವೆಗೆ ಜುಲೈ 11ರಂದು ಬೆಳಗ್ಗೆ 9 ಗಂಟೆಗೆ ಮಂಗಳೂರು ಜಂಕ್ಷನ್ (ಪಡೀಲ್) ರೈಲು ನಿಲ್ದಾಣದಲ್ಲಿ ಚಾಲನೆ ಸಿಗಲಿದೆ.ಮಂಗಳೂರು ಜಂಕ್ಷನ್ನಿಂದ ಹೊರಡುವ ಯಶವಂತಪುರ ಮಂಗಳೂರು ಎಕ್ಸ್ಪ್ರೆಸ್ ವಿಶೇಷ ರೈಲಿನಲ್ಲಿ ಈ ವಿಸ್ಟಾ ಡೋಮ್ ಅಳವಡಿಕೆಯಾಗಲಿದೆ. ಈ ವಿಶೇಷ ಬೋಗಿಯು ಪಶ್ಚಿಮ ಘಟ್ಟದ ನಡುವೆ ಸಂಚರಿಸುವ ಸಂದರ್ಭ


















