Home Archive by category ಕರಾವಳಿ (Page 883)

ಕಾಪು ಹೊಸ ಮಾರಿಯಮ್ಮ ಸನ್ನಿಧಿಯಲ್ಲಿ ಆಟಿ ಮಾರಿಪೂಜೆ

ಕಾಪು ಹೊಸ ಮಾರಿಯಮ್ಮ ದೇವಸ್ಥಾನದಲ್ಲಿ ವಾರ್ಷಿಕ ಆಟಿ ಮಾರಿ ಪೂಜೆಯು ಕೊವೀಡ್ ಸಮಸ್ಯೆಯಿಂದಾಗಿ ಸರಳವಾಗಿ ನಡೆದಿದೆ. ವಾರ್ಷಿಕವಾಗಿ ತುಳು ತಿಂಗಳುಗಳಾದ ಸುಗ್ಗಿ, ಜಾರ್ದೆ ಹಾಗೂ ಆಟಿ ಮಾರಿಪೂಜೆ ನಡೆಯುತ್ತಿದ್ದು, ಈ ಧಾರ್ಮಿಕ ಕಾರ್ಯಕ್ರಮಗಳಿಗೆ ಜಿಲ್ಲೆ ಹೊರಜಿಲ್ಲೆ, ಹೊರ ರಾಜ್ಯ, ದೇಶ ವಿದೇಶಗಳಿಂದಲೂ ಲಕ್ಷಾಂತರ ಭಕ್ತಾಧಿಗಳು ಆಗಮಿಸುತ್ತಿದ್ದು, ಆದರೆ ಈ ಬಾರಿ ಕೋವಿಡ್

ಗಾಂಜಾ ಜೊತೆ ಸಿಕ್ಕಿಬಿದ್ದ ಕಳ್ಳರು : ವಿಟ್ಲ ಪೊಲೀಸರ ಕಾರ್ಯಾಚರಣೆ

ಪೊಲೀಸ್ ತಪಸಾಣೆ ವೇಳೆ ತಪ್ಪಿಸಿಕೊಳ್ಳಲು ಹೋಗಿ ರಿಕ್ಷಾವೊಂದು ಪಲ್ಟಿಯಾಗಿದ್ದು, ವಿಚಾರಣೆ ನಡೆಸಿದಾಗ ರಿಕ್ಷಾದಲ್ಲಿದ್ದ ಗಾಂಜಾ ಜೊತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಸಜಿಪಮೂಡ ಗ್ರಾಮದ ಸುಭಾಶ್ ನಗರ ನಿವಾಸಿ ಅಸೀಫ್ ಯಾನೆ ಅಚಿ (28) ಸವಣೂರು ಗ್ರಾಮದ ಚಾಪಳ್ಳ ನಿವಾಸಿ ಫರಾಝ್ (23) ಎಂದು ಗುರುತಿಸಲಾಗಿದೆ. ಬಂಟ್ವಾಳ ತಾಲೂಕು ವಿಟ್ಲ ಕಸಬಾ ಗ್ರಾಮದ ಕಾಶಿಮಠ ಎಂಬಲ್ಲಿ ವಾಹನ ತಪಾಸಣೆ ಮಾಡುತ್ತಿರುವಾಗ ಉಕ್ಕುಡ ಕಡೆಯಿಂದ ವಿಟ್ಲ

ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷರಾಗಿ ಶ್ರೀನಿವಾಸ ನಾಯಕ್ ಇಂದಾಜೆ ಅವಿರೋಧ ಆಯ್ಕೆ

ಮಂಗಳೂರು:ಪತ್ರಕ ರ್ತರ ಗೃಹ ನಿರ್ಮಾಣ ಸಹಕಾರ ಸಂಘ ಮಂಗಳೂರು ಇದರ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಶ್ರೀನಿವಾಸ್ ನಾಯಕ್ ಇಂದಾಜೆ ಮತ್ತು ಉಪಾಧ್ಯಕ್ಷರಾಗಿ ಭಾಸ್ಕರ ರೈ ಕಟ್ಟ ಅವಿರೋಧವಾಗಿ ಆಯ್ಕೆಯಾದರು. ಮಂಗಳವಾರ ಸಂಘದ ಕಚೇರಿಯಲ್ಲಿ ನಡೆದ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಯ ಪ್ರಕ್ರೀಯೆಯನ್ನು ಸಹಕಾರ ಸಂಘದ ಹಿರಿಯ ನಿರೀಕ್ಷಕರಾದ ಶಿವಲಿಂಗಯ್ಯ.ಎಂ ಚುನಾವಣಾಧಿಕಾರಿಯಾಗಿ ನಡೆಸಿಕೊಟ್ಟರು.ಸಂಘದ ನಿರ್ದೇಶಕರಾದ ಕೇಶವ ಕುಂದರ್ ,ಪುಷ್ಪರಾಜ್ ಬಿ.ಎನ್,ಇಬ್ರಾಹಿಂ

ಮಂಗಳೂರು ಬೀಚ್‍ನಲ್ಲಿ ಯುವಕರ ಗಾಂಜಾ ಸೇವನೆ : ವೀಕೆಂಡ್ ಮೋಜು-ಮಸ್ತಿ

ಮಂಗಳೂರು ನಗರ ಹೊರವಲಯದ ಪಣಂಬೂರು ಕುಳಾಯಿ ಬೀಚ್‍ನಲ್ಲಿ ಯುವಕರು ಗಾಂಜಾ ಸೇವನೆ ಮಾಡುತ್ತಿರುವ ದೃಶ್ಯ ಕ್ಯಾಮರದಲ್ಲಿ ಸೆರೆಯಾಗಿದೆ. ವೀಕೆಂಡ್ ಸಮಯದಲ್ಲಿ ಯುವಕರು ಗಾಂಜಾ ಸೇವನೆ ಮಾಡುತ್ತಾ ಮೋಜು ಮಸ್ತಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಇದರಿಂದ ಸಾರ್ವಜನಿಕರು ಭಯಭೀತರಾಗಿದ್ದಾರೆ. ಬೀಚ್‍ನಲ್ಲಿ ಯುವಕರ ಉಪಟಳದಿಂದ ಜನರ ಆತಂಕಕ್ಕೆ ಕಾರಣವಾಗಿದೆ. ಗಾಂಜಾ ಸೇವನೆ ಮಾಡಿದ ಬಳಿಕ ಯುವಕರು ಬೀಚ್‍ನಲ್ಲಿ ಮೋಜು ಮಸ್ತಿಯಲ್ಲಿ ತೊಡಗಿಕೊಂಡಿರುವುದೇ ಕಾರಣ. ಈ ಬಗ್ಗೆ ಪೆÇಲೀಸರು

ಆಕಾಶ ಅದ್ಭುತಗಳ ಆಗರ -ಪ್ರೊಫೆಸರ್ ರಮೇಶ್ ಭಟ್

ವಿವಿಧ ವಿಸ್ಮಯಗಳಿಗೆಆಕಾಶ ಸಾಕ್ಷಿಯಾಗುತ್ತದೆ. ಆಕಾಶದ ಬಗ್ಗೆ ಆಳವಾಗಿ ತಿಳಿಯುತ್ತಾ ಹೋದಂತೆ ಅವು ಸೃಷ್ಟಿಸುವ ಅದ್ಭುತಗಳನ್ನು ತಿಳಿದುಕೊಳ್ಳಬಹುದುಎಂದು ತಜ್ಞರಾದಪ್ರೊಫೆಸರ್‍ರಮೇಶ್ ಭಟ್ ಹೇಳಿದರು.ಅವರುಉಜಿರೆಯಎಸ್‍ಡಿಎಂಕಾಲೇಜಿನ ಭೌತಶಾಸ್ತ್ರ ವಿಭಾಗ ಆಯೋಜಿಸಿದ ವಂಡರ್‍ಆಫ್ ಸ್ಕೈಎಂಬ ವಿಷಯದವೆಬಿನಾರ್‍ಕಾರ್ಯಕ್ರಮದಲ್ಲಿ ಮಾತನಾಡಿದರು. ಆಕಾಶವು ನಮ್ಮದೃಷ್ಟಿಕೋನದಲ್ಲಿ ಭೂಮಿಯ ಮೇಲ್ಮೈಯ ಮೇಲೆ ಕಾಣುವ ವಾತಾವರಣ.ಸೂರ್ಯ, ಚಂದ್ರ ಮತ್ತು ನಕ್ಷತ್ರ ಮೊದಲಾದವುಗಳನ್ನು

ತೆಂಕನಿಡಿಯೂರು : ಗದ್ದೆಗಿಳಿದ ಪ್ರಾಂಶುಪಾಲರು, ಉಪನ್ಯಾಸಕರು, ವಿದ್ಯಾರ್ಥಿಗಳು

ಉಡುಪಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಉಡುಪಿ ಇಲ್ಲಿನ ಪ್ರಾಂಶುಪಾಲರು ಮತ್ತು  ಉಪನ್ಯಾಸಕರು, ವಿದ್ಯಾರ್ಥಿಗಳು ಉಡುಪಿಯ ಕುತ್ಪಾಡಿಯಲ್ಲಿ ಗದ್ದೆಗಿಳಿದು ಕಳೆಕೀಳುವ ಕಾರ್ಯವನ್ನು ನಡೆಸಿದರು. ಕೇದಾರೋತ್ಪನ್ನ ಟ್ರಸ್ಟ್ ಉಡುಪಿಯ 1500 ಎಕ್ರೆ ಹಡಿಲು ಭೂಮಿಯಲ್ಲಿ ಕೃಷಿ ಕಾರ್ಯವನ್ನು ಕೈಗೊಂಡಿದೆ. ಪರಿಸರದ ವಿದ್ಯಾರ್ಥಿಗಳನ್ನು ಬಳಸಿಕೊಂಡು ಅವರಿಗೆ ತರಬೇತಿ ನೀಡುವುದರೊಂದಿಗೆ ಕೃಷಿ ಕಾರ್ಯವನ್ನು ಕೈಗೊಳ್ಳುತ್ತಿದೆ.

ನಾರಾಯಣ ಗುರು ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗೆ ಉಚಿತ ಶಿಕ್ಷಣ

ಮಂಗಳೂರಿನ ನಾರಾಯಣ ಗುರು ಪದವಿ ಕಾಲೇಜಿನಲ್ಲಿ ಜುಲೈ 25ರಿಂದ 31ರ ವರೆಗೆ ಬಿಕಾಂ ತರಗತಿಗೆ ದಾಖಲಾಗುವ ಎಲ್ಲಾ ವಿದ್ಯಾರ್ಥಿನಿಯರಿಗೆ ಸಂಪೂರ್ಣ ಉಚಿತ ಶಿಕ್ಷಣವನ್ನು ನೀಡುವುದಾಗಿ ಕಾಲೇಜಿನ ಪ್ರಾಂಶುಪಾಲರು ತಿಳಿಸಿದ್ದಾರೆ.ನಗರದ ನಾರಾಯಣ ಗುರು ಪದವಿ ಕಾಲೇಜಿನಲ್ಲಿ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಪ್ರೋತ್ಸಾಹವನ್ನು ನೀಡುತ್ತಿದ್ದು, ಅದರಂತೆ ಜುಲೈ 25ರಿಂದ ಜುಲೈ 31ರ ವರೆಗೆ ದಾಖಲಾತಿ ಮಾಡಿಕೊಳ್ಳುವ ವಿದ್ಯಾರ್ಥಿನಿಯರಿಗೆ ಪೂರ್ಣವಾಗಿ ಉಚಿತ ಶಿಕ್ಷಣ

ಶಾಲಾ ಮಕ್ಕಳ ಮೊಟ್ಟೆ ಡೀಲ್ ಪ್ರಕರಣ : ದ.ಕ. ಜಿಲ್ಲಾ ಕಾಂಗ್ರೆಸ್‍ನಿಂದ ಪ್ರತಿಭಟನೆ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮಾಜಿ ಸಚಿವೆ ಶಶಿಕಲಾ ಜೊಲ್ಲೆಯವ್ರು ಮೊಟ್ಟೆ ಹಗರಣದ ಕುರಿತು ಸೂಕ್ತ ತನಿಖೆ ಮಾಡಬೇಕೆಂದು ಆಗ್ರಹಿಸಿ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಮಂಗಳೂರಿನ ಮಲ್ಲಿಕಟ್ಟೆಯಲ್ಲಿ ಪ್ರತಿಭಟನೆ ನಡೆಸಿದರು. ಇದೇ ವೇಳೆ ಪ್ರತಿಭಟನಾಕಾರರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದರು. ರಾಜ್ಯ ಸರ್ಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮಾಜಿ ಸಚಿವೆ ಶಶಿಕಲಾ ಜೊಲ್ಲೆ

ಮೂಡುಬಿದಿರೆ ಪುರಸಭಾ ಅಧಿವೇಶನ : ಎಸ್‍ಎಫ್‍ಸಿ ನಿಧಿ ಕಾಮಗಾರಿ ಟೆಂಡರ್ ತಡೆ ಹಿಡಿಯಲು ಆಗ್ರಹ

 ಪುರಸಭೆಯ ಬೀದಿದೀಪ, ವಿದ್ಯುತ್ ದಾರಿದೀಪ ದುರಸ್ತಿ ಮತ್ತು ನಿರ್ವಹಣೆ ಮತ್ತು ಕೊಳವೆ ಬಾವಿಗಳಿಗೆ ಜೋಡಿಸಿದ ಎಲ್ಲಾ ರೀತಿಯ ಪಂಪುಗಳಿಗೆ ಅಗತ್ಯವಿರುವ ಬಿಡಿಭಾಗಗಳನ್ನು ಜೋಡಿಸಿ ದುರಸ್ತಿಪಡಿಸುವ ಕಾಮಗಾರಿಯ ಟೆಂಡರ್ ಮತ್ತು ಪುರಸಭಾ ವ್ಯಾಪ್ತಿಯ ವಿವಿಧ ಕಾಮಗಾರಿಗಳಿಗೆ ಎಸ್‌ಎಫ್‌ಸಿ 2019-20ನೇ ಸಾಲಿನ ವಿಶೇಷ ಅನುದಾನದಡಿಯಲ್ಲಿ ಕಾಮಗಾರಿ ನಡೆಸಲು ಟೆಂಡರ್‌ಗೆ ಅನುಮೋದನೆ ನೀಡುವಿಕೆಯಲ್ಲಿ ಗಂಭೀರ ಲೋಪದೋಷಗಳಾಗಿವೆ. ಹೀಗಾಗಿ ಈ ಟೆಂಡರ್‌ಗೆ ಅನುಮೋದನೆಯನ್ನು

ಮರವೂರು ಸೇತುವೆ ದುರಸ್ತಿ ಕಾರ್ಯ ಬಹುತೇಕ ಪೂರ್ತಿ : ಸಂಚಾರಕ್ಕೆ ಮುಕ್ತಗೊಳ್ಳುವ ನಿರೀಕ್ಷೆ

ಫಲ್ಗುಣಿ ನದಿಗೆ ಅಡ್ಡಲಾಗಿ ಕಟ್ಟಿದ ಮರವೂರು ಸೇತುವೆಯ ಕುಸಿದ ಪಿಲ್ಲರ್‌ನ್ನು ಯಥಾಸ್ಥಿತಿಗೆ ತಂದು ಸೇತುವೆ ದುರಸ್ತಿ ಕೆಲಸ ಬಹುತೇಕ ಪೂರ್ತಿಯಾಗಿದೆ. ಜು.30ರಿಂದ ಲಘು ವಾಹನ ಸಂಚಾರಕ್ಕೆ ಮುಕ್ತಗೊಳಿಸುವ ನಿರೀಕ್ಷೆಯಿದೆ. ಪಿಡಬ್ಲ್ಯೂಡಿ ಇಲಾಖೆಯ ತಜ್ಞ ಇಂಜಿನಿಯರ್‌ಗಳ ಸಲಹೆಯಂತೆ ಸೇತುವೆಯ ಪಿಲ್ಲರ್ ಅನ್ನು ಹೈಡ್ರೋಲಿಕ್ ಜ್ಯಾಕ್ ಬಳಸಿ ಮೇಲಕ್ಕೆತ್ತಿ ಯಥಾಸ್ಥಿತಿಗೆ ತರಲಾಗಿತ್ತು. ಇದೀಗ ದುರಸ್ತಿ ಕೆಲಸ ಬಹುತೇಕ ಪೂರ್ಣಗೊಂಡಿದೆ.ಗುರುವಾರ ತಜ್ಞರ ಉಪಸ್ಥಿತಿಯಲ್ಲಿ