ಬಿಜೆಪಿ ರಾಜ್ಯಾಧ್ಯಕ್ಷರ ಆಡಿಯೋ ನಕಲಿ ಅಥವಾ ಅಸಲಿಯೇ ಎಂದು ಮುಖ್ಯ ಮಂತ್ರಿ ಸ್ಪಷ್ಟ ಪಡಿಸಬೇಕಾಗಿದೆ ಎಂದು ಮಾಜಿ ಸಚಿವ ಯು.ಟಿ.ಖಾದರ್ ಹೇಳಿದ್ರು. ಹಾಲಿ ಸಿ.ಎಂ ಯಡಿಯೂರಪ್ಪ ಇನ್ನೂ ಮುಂದುವರಿಯುತ್ತಾರೋ ಇಲ್ಲವೋ ಎನ್ನುವುದನ್ನು ಬಿಜೆಪಿ ರಾಜ್ಯಾಧ್ಯಕ್ಷರು ಸ್ಪಷ್ಟವಾಗಿ ತಿಳಿಸಲಿ ಯು.ಟಿ.ಖಾದರ್ ಅವರು ಹೇಳಿದರು. ಇನ್ನು ಕಾಂಗ್ರೆಸ್ನಲ್ಲಿ ಯಾವುದೇ ಬಣವಿಲ್ಲ,
ಕೇಂದ್ರ ಹಾಗೂ ರಾಜ್ಯ ಸರ್ಕಾರ ಲಸಿಕೆ ವಿತರಣೆಯಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಮಾಜಿ ಸಚಿವ ಯು.ಟಿ.ಖಾದರ್ ಆರೋಪ ಮಾಡಿದ್ದಾರೆ. ಈ ಕುರಿತು ಮಂಗಳೂರಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರತಿ ದಿನ ಸುಮಾರು ಒಂದೂವರೆ ಲಕ್ಷ ಡೋಸ್ ಲಸಿಕೆ ಅಗತ್ಯ ಇದೆ.ಆದರೆ ಸರಬರಾಜಾಗುತ್ತಿರುವುದು ಒಂದು ವಾರಕ್ಕೆ 50 ಸಾವಿರ.ಇದರಿಂದಾಗಿ ಜನಸಾಮಾನ್ಯರು ಲಸಿಕೆಗಾಗಿ ಪರದಾಡುವಂತಾಗಿದೆ. ಸರಕಾರ ಜನಸಾಮಾನ್ಯರ ಈ ರೀತಿಯ ಅಗತ್ಯಗಳ ಬಗ್ಗೆ ,ಸಮಸ್ಯೆ
ಮಳೆಗಾಲ ಬಂತೆಂದರೆ ಸಾಕು ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಸಿರಿಬಾಗಿಲು ಎನ್ನುವ ಗ್ರಾಮ ಇತರ ಪ್ರದೇಶಗಳ ಸಂಪರ್ಕವನ್ನೇ ಕಳೆದುಕೊಂಡು ದ್ವೀಪವಾಗಿ ಬಿಡುತ್ತದೆ. ಶಿರಾಢಿಘಾಟ್ ನ ಮಧ್ಯಭಾಗದಲ್ಲಿರುವ ಈ ಗ್ರಾಮದ ಸುತ್ತ ಮೂರು ಹೊಳೆಗಳು ಹರಿಯುತ್ತಿದೆ, ಸೇತುವೆಯಿಲ್ಲದ ಕಾರಣ ಮಳೆಗಾಲದಲ್ಲಿ ಈ ಹೊಳೆಗಳು ತುಂಬಿ ಹರಿಯುವ ಕಾರಣ ಇಲ್ಲಿನ ಜನರಿಗೆ ಅಗತ್ಯ ಕಾರ್ಯಗಳಿಗಾಗಿ ಒಂದು ಭಾಗದಿಂದ ಇನ್ನೊಂದು ಭಾಗಕ್ಕೆ ಸಾಗಲಾರದ ಸಮಸ್ಯೆ ಇಲ್ಲಿ ವರ್ಷದಿಂದ ವರ್ಷಕ್ಕೆ
ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆ ಬೆಳ್ತಂಗಡಿಯ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾ ಭವನದಲ್ಲಿ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ಹರೀಶ್ ಪೂಂಜಾ ರವರು ಕೋವಿಡ್ನ 2 ನೆ ಅಲೆಯನ್ನು ಸಮರ್ಪಕವಾಗಿ ನಿಯಂತ್ರಿಸುವ ದೇಶ ಅಂದರೆ ಅದು ನರೇಂದ್ರ ಮೋದಿ ಸರಕಾರದ ಭಾರತ ದೇಶ, ಕರ್ನಾಟಕದಲ್ಲಿ ಮುಖ್ಯ ಮಂತ್ರಿ ಯಡಿಯೂರಪ್ಪ ಸರಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದಾರೆ. ಅಲ್ಲದೆ ಬರೀ ಮೂರು ವರ್ಷದಲ್ಲಿ ಬೆಳ್ತಂಗಡಿ
ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ನಕಲಿ ಆಡಿಯೋ ಜಾಲತಾಣಗಳಲ್ಲಿ ಹರಿಬಿಟ್ಟಿದ್ದು, ಈ ಬಗ್ಗೆ ತನಿಖೆ ನಡೆಸಬೇಕೆಂದು ಮಂಗಳೂರು ಪೊಲೀಸ್ ಆಯುಕ್ತರಿಗೆ ಬಿಜೆಪಿ ಶಾಸಕರು ದೂರು ನೀಡಿದ್ದಾರೆ. ಐವರು ಶಾಸಕರು ಮಂಗಳೂರು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಶಾಸಕರಾದ ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್. ಉಮಾನಾಥ್ ಕೋಟ್ಯಾನ್, ಸಂಜೀವ ಮಠಂದೂರು, ಹರೀಶ್ ಪೂಂಜಾ ಅವರು ಮಂಗಳೂರು ಪೊಲೀಸ್ ಆಯುಕ್ತರಿಗೆ ದೂರು ನೀಡಿ ನಕಲಿ ಆಡಿಯೋ
ಮಂಗಳೂರು: ಬಂಟ್ವಾಳ ತಾಲೂಕಿನ ಸಿದ್ದಕಟ್ಟೆಯಲ್ಲಿ ನಿರ್ಮಿಸಲು ಉದ್ದೇಶಿಸಲಾಗಿರುವ 110 ಕೆವಿ ವಿದ್ಯುತ್ ಉಪಕೇಂದ್ರ ಸ್ಥಾಪನೆಗೆ ಜಮೀನು ಸಮತಟ್ಟು ಮಾಡಲು 15 ಕೋಟಿ ರೂಗಳು ವಯ್ಯವಾಗಲಿವೆ ಎಂಬ ಮೆಸ್ಕಾಂ ಅಧಿಕಾರಿಗಳ ವರದಿಯ ನೈಜತೆಯನ್ನು ಲೋಕೋಪಯೋಗಿ ಇಲಾಖೆ, ಪಂಚಾಯತ್ ರಾಜ್ ಹಾಗೂ ಇಂಜಿನಿಯರಿಂಗ್ ಮತ್ತು ನಿರ್ಮಿತಿ ಕೇಂದ್ರದ ಇಂಜಿನಿಯರ್ ಗಳಿಂದ ಪರಿಶೀಲಿಸಿ, ಹೆಚ್ಚಿನ ಹಣ ನಮೂದಿಸಿದ್ದು ಕಂಡು ಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಲು
ಮಂಗಳೂರು (ಉಳ್ಳಾಲ) ವಿಧಾನಸಭಾ ಕ್ಷೇತ್ರದ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (NSUI) ಅಧ್ಯಕ್ಷರಾಗಿ ಅಹ್ನಾಫ್ ಅಹ್ಮದ್(ಡೀಲ್ಸ್) ಇವರು ನೇಮಕವಾಗಿದ್ದಾರೆ. ಇವರು ದಕ್ಷಿಣ ಕನ್ನಡ ಜಿಲ್ಲಾ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಉಪಾಧ್ಯಕ್ಷರಾಗಿದ್ದು ಮಂಗಳೂರಿನ SDM ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಬಿಎ ವ್ಯಾಸಂಗ ಮಾಡುತ್ತಿದ್ದಾರೆ. ಪ್ರೌಢಶಾಲೆಯಿಂದಲೇ ತನ್ನ ಸಹಪಾಠಿಗಳೊಂದಿಗೆ ತಂಡವನ್ನು ಕಟ್ಟಿ ಸಮಾಜ ಸೇವೆಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿರುವ ಇವರು
ಶ್ರೀ ಸಂಸ್ಥಾನ ಗೋಕರ್ಣ ಪರ್ತಗಳಿ ಜೀವೋತ್ತಮ ಮಠಾಧೀಶರಾದ ಶ್ರೀ ವಿದ್ಯಾಧಿರಾಜ ತೀರ್ಥ ಸ್ವಾಮೀಜಿ (76) ಇಂದು ಇಹಲೋಕ ತ್ಯಜಿಸಿ ವಿಷ್ಣುಪಾದ ಸೇರಿದ್ದಾರೆ. 1945ರಲ್ಲಿ ಗಂಗೊಳ್ಳಿಯಲ್ಲಿ ಜನಸಿದ ಶ್ರೀಗಳ ಪೂರ್ವಾಶ್ರಮ ಹೆಸರು ರಾಘವೇಂದ್ರ. ಶ್ರೀ ವಿದ್ಯಾಧಿರಾಜ ತೀರ್ಥ ಸ್ವಾಮೀಜಿ1967ರಲ್ಲಿ ಸನ್ಯಾಸತ್ವ ಸ್ವೀಕರಿಸಿದ್ದರು. ಸನ್ಯಾಸ ಸ್ವೀಕರಿಸಿ 54 ವರ್ಷ ಸುಧೀರ್ಘವಾಗಿ ಮಠವನ್ನು, ಮಠದ ಆಡಳಿತದಲ್ಲಿರುವ ದೇವಾಲಯಗಳನ್ನು , ಮಠದ ಲಕ್ಷಾಂತರ ಶಿಷ್ಯರನ್ನು ಧಾರ್ಮಿಕವಾಗಿ
ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಅವರದ್ದೆನ್ನಲಾದ ಆಡಿಯೋ ಸಂಬಂಧ ಕರ್ನಾಟಕ ಕಾಂಗ್ರೆಸ್ ಪಕ್ಷ, ಬಿಜೆಪಿ ಪಕ್ಷದ ಮೀರ್ ಸಾದಿಕ್ ನಳಿನ್ ಕುಮಾರ್ ಕಟೀಲ್ ಎಂದು ಲೇವಡಿ ಮಾಡಿದೆ. ಈ ಕುರಿತು ಟ್ವೀಟ್ ಮಾಡಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್, ಬಿಜೆಪಿ ಪಕ್ಷದ ಮೀರ್ ಸಾದಿಕ್ ನಳಿನ್ ಕುಮಾರ್ ಕಟೀಲ್ ಅವರ ಬಗ್ಗೆ ಬಿಎಸ್ ಯಡಿಯೂರಪ್ಪ ಅವರಿಗೆ ಈ ಹಿಂದೆಯೇ ಮನವರಿಕೆಯಾಗಿತ್ತು. ಆದರೆ ಜಗದೀಶ್ ಶೆಟ್ಟರ್ ಮತ್ತು ಕೆಎಸ್ ಈಶ್ವರಪ್ಪ
ಮಂಗಳೂರು ಮಹಾನಗರ ಪಾಲಿಕೆಯ ಉರ್ವ ಮಾರುಕಟ್ಟೆ ಸಂಕೀರ್ಣಕ್ಕೆ ಇಂದು ಶಾಸಕ ವೇದವ್ಯಾಸ್ ಕಾಮತ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಹಾನಗರ ಪಾಲಿಕೆಯ ಮೇಯರ್ ಶ್ರೀ ಪ್ರೇಮಾನಂದ ಶೆಟ್ಟಿ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ರವಿಶಂಕರ್ ಮಿಜಾರ್, ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರಾದಅಕ್ಷಯ್ ಶ್ರೀಧರ್ , ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾದ ಗಣೇಶ್ ಕುಲಾಲ್, ಸಂಧ್ಯಾ ಮೋಹನ್ ಆಚಾರ್, ಜಗದೀಶ್ ಶೆಟ್ಟಿ ಬೋಳೂರು, ಪಾಲಿಕೆ ನಾಮನಿರ್ದೇಶಿತ


















