Home Archive by category ಕರಾವಳಿ (Page 898)

ಪುತ್ತೂರು ನಗರಸಭೆಯ ವಿಶೇಷ ಸಾಮಾನ್ಯ ಸಭೆ:ಹೊರಗುತ್ತಿಗೆ ನೌಕರರ ನೇರ ನೇಮಕಾತಿಗೆ ಶಿಫಾರಸ್ಸು

ಪುತ್ತೂರು: ನಗರಸಭಾ ವ್ಯಾಪ್ತಿಯಲ್ಲಿ ಪೌರಕಾರ್ಮಿಕರು ಸೇರಿದಂತೆ ಹೊರಗುತ್ತಿಗೆ ನೌಕರರನ್ನು ನೇರ ನೇಮಕಾತಿ ಮಾಡುವ ಬಗ್ಗೆ ಶಿಫಾರಸ್ಸು ಮಾಡಲು ಪುತ್ತೂರು ನಗರಸಭಾ ಸಾಮಾನ್ಯ ಸಭೆಯಲ್ಲಿ ತೀರ್ಮಾನಿಸಲಾಯಿತು. ನಗರಸಭಾ ವಿಶೇಷ ಸಾಮಾನ್ಯ ಸಭೆಯು ನಗರಸಭಾ ಅಧ್ಯಕ್ಷ ಜೀವಂಧರ್ ಜೈನ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಅಧ್ಯಕ್ಷರು ಹೊರಗುತ್ತಿಗೆ

ಡಾ. ಎನ್‍ ಎಸ್‍ ಎಎಂನಲ್ಲಿ ಇಂಟಿಗ್ರೇಟೆಡ್ ಪಿಯು ಬ್ಯಾಚ್‍ಗಳ ಪ್ರಾರಂಭ

ನಿಟ್ಟೆ ವಿದ್ಯಾಸಂಸ್ಥೆಯ ಅಂಗಸಂಸ್ಥೆಯಾಗಿರುವ ಮಂಗಳೂರಿನ ಡಾ| ಎನ್‍ಎಸ್‍ಎಎಂ ಪದವಿಪೂರ್ವ ಕಾಲೇಜಿನಲ್ಲಿ ಈ ಶೈಕ್ಷಣಿಕ ವರ್ಷದಿಂದ ಇಂಟಿಗ್ರೇಟೆಡ್ ಪಿಯು ತರಗತಿಗಳನ್ನು ಪ್ರಾರಂಭಿಸಲಾಗುತ್ತದೆ. ನಿಟ್ಟೆ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಎನ್. ವಿನಯ ಹೆಗ್ಡೆಯವರ ಅಭಿಪ್ರಾಯದಂತೆ, ಸ್ಪರ್ಧಾತ್ಮಕ ಪರೀಕ್ಷೆಗಳಾದ ನೀಟ್ / ಜೆಇಇ ಮತ್ತು ಸಿಇಟಿ ಯಲ್ಲಿ ವಿದ್ಯಾರ್ಥಿಗಳ ಉತ್ತಮ ಸಾಧನೆ ಅವರ ಭವಿಷ್ಯವನ್ನು ರೂಪಿಸಲು ಸಹಾಯ ಮಾಡುವುದರಿಂದ ಕೋಚಿಂಗ್ ತಜ್ಞರ ಮತ್ತು ಪ್ರತಿಷ್ಠಿತ,

ವಿಟ್ಲ ಪ.ಪಂ. ವ್ಯಾಪ್ತಿಯಲ್ಲಿ ವೀಕೆಂಡ್ ಸಂಪೂರ್ಣ ಬಂದ್

ವಿಟ್ಲ: ವಿಟ್ಲ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಕೊರೊನಾ ಸೋಂಕು ನಿಯಂತ್ರಿಸಲು ಶನಿವಾರ ಮತ್ತು ಭಾನುವಾರ ವಿಟ್ಲ ಪೇಟೆ ಸೇರಿದಂತೆ ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿ ಸಂಪೂರ್ಣ ಲಾಕ್ ಡೌನ್ ಮಾಡುವುದಾಗಿ ವಿಟ್ಲ ಪಟ್ಟಣ ಪಂಚಾಯಿತಿ ನಿರ್ಣಯ ಕೈಗೊಂಡಿದೆ. ಈ ಬಗ್ಗೆ ವಿಟ್ಲ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಚಂದ್ರಕಾಂತಿ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೋವಿಡ್ ಟಾಸ್ಕ್ ಪೋರ್ಸ್ ತುರ್ತು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು. ವಾರದ ಶನಿವಾರ ಮತ್ತು ಭಾನುವಾರ

ಪುತ್ತೂರಿನಲ್ಲಿ ತೈಲ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್‌ನಿಂದ ಪ್ರತಿಭಟನೆ

ಪರಿಶಿಷ್ಟ ಜಾತಿ ಘಟಕ ಪುತ್ತೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗು ಬ್ಲಾಕ್ ಕಾಂಗ್ರೆಸ್ ಸಮಿತಿ ಪುತ್ತೂರು ವತಿಯಿಂದ ಕೇಂದ್ರ ಸರ್ಕಾರದ ಜನವಿರೋಧಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕೇಂದ್ರ ಹಾಗು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಯಂಗ್ ಬ್ರಿಗೇಡ್ ಸೇವಾದಳ ಅಧ್ಯಕ್ಷರು, ಯುವ ದಲಿತ ನಾಯಕರಾದ ಅಭಿಷೇಕ್ ಬೆಳ್ಳಿಪ್ಪಾಡಿ ಭಾರತದ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಪೆಟ್ರೋಲ್ ಬೆಲೆ 100ರ ಗಡಿ ದಾಟಿ

ಸರಕಾರಕ್ಕೆ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಮನೋಭಾವ ಇಲ್ಲ:ಮಾಜಿ ಸಚಿವ ರಮಾನಾಥ ರೈ

ಕೋವಿಡ್ ಲಾಕ್‌ಡೌನ್ ಸಂದರ್ಭದಲ್ಲಿ ತೈಲ ಬೆಲೆ ಏರಿಕೆಯಿಂದ ಕಂಗೆಟ್ಟಿರುವಾಗಲೇ ವಿದ್ಯುತ್ ಮೀಟರ್ ದರ ಏರಿಕೆ ಮಾಡುವ ಮೂಲಕ ಜನರ ಹಸಿವಿನ ಹೊಟ್ಟೆಗೆ ಹೊಡೆದಂತಾಗಿದೆ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದರು. ಅವರು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ರಾಜ್ಯದಲ್ಲಿ ವಿದ್ಯುತ್ ಬೇಡಿಕೆಗಿಂತ ಹೆಚ್ಚುವರಿಯಾಗಿ ಉತ್ಪಾದನೆಯಾಗುತ್ತದೆ. ಆದರೆ ಈ ನಡುವೆ ಅದಾನಿ ಕಂಪೆನಿ ಸೇರಿದಂತೆ ನಾನಾ ಕಂಪೆನಿಗಳಿಂದ ಸರಕಾರ ವಿದ್ಯುತ್

ಹಾಸನದಲ್ಲಿ ಬೆಂಕಿ ತಗುಲಿ ಸುಟ್ಟು ಕರಕಲಾದ ಬೇಕರಿ : ಸಹಾಯ ಹಸ್ತ ಚಾಚಿದ ಜೈ ಕರ್ನಾಟಕ ಸಂಘ

ಒಂದೆಡೆ ಕೊರೊನಾ ಎಂಬ ಮಹಾಮಾರಿ ಮನುಷ್ಯನನು ಪಾತಳಕ್ಕೆ ತೊರೆಯುತ್ತಿದ್ದರೆ ಇನ್ನೊಂದು ಕಡೆ ಬೇಕರಿ ಕಾರ್ಮಿಕರ ಬದುಕು ಹೀನಾಯ ಸ್ಥಿತಿ ತಲುಪಿದೆ. ದಿನ ಬೆಳಗಾದರೆ ಬೇಕರಿ ಪದಾರ್ಥಗಳನ್ನು ಮಾರಿ ಬದುಕುವ ಬೇಕರಿ ಕಾರ್ಮಿಕರು ಇಂದು ಬೇಕರಿಗಳನ್ನು ಮುಚ್ಚಿರುವ ಕಾರಣ ಸಾಕಷ್ಟು ನಷ್ಟದಲ್ಲಿ ಸಿಲುಕಿದ್ದಾರೆ. ಹೀಗಿರುವಾಗ ಹಾಸನ ಅಯ್ಯಂಗಾರ್ ಬೇಕರಿ ಸುಟ್ಟು ಕರಕಲಾಗಿದೆ. ಚಿಕ್ಕಮಗಳೂರು ಜಿಲ್ಲೆ ಬಂಟಕಲ್‍ನಲ್ಲಿ ವೆಂಕಟೇಶ್ ಎಂಬುವವರಿಗೆ ಸೇರಿದ ಹಾಸನ್ ಅಯ್ಯಂಗಾರ್ ಬೇಕರಿ

ಗಾಳಿ ಮಳೆಗೆ ವಿದ್ಯುತ್ ತಂತಿ ಮೇಲೆ ಬಿದ್ದ ಮರ: ಧರೆಗುರುಳಿದ ವಿದ್ಯುತ್ ಕಂಬ

ಕರಾವಳಿಯಲ್ಲಿ ಬಿರುಸುಗೊಂಡ ಮಳೆಯಿಂದಾಗಿ ಅಲ್ಲಲ್ಲಿ ವ್ಯಾಪಕವಾಗಿ ಹಾನಿಯಾಗುತ್ತಿದ್ದು, ನಗರದ ಮಂಗಳಾದೇವಿ ಸಮೀಪದ ರಾಮಕೃಷ್ಣ ಮಿಷನ್ ಬಳಿಯಲ್ಲಿ ಗಾಳಿಮಳೆಗೆ ಮರವೊಂದು ವಿದ್ಯುತ್ ತಂತಿ ಮೇಲೆ ಬಿದ್ದು ವಿದ್ಯುತ್ ಕಂಬಗಳು ಧರೆಗುರುಳಿದ ಘಟನೆ ನಡೆದಿದೆ. ಇಂದು ಬೆಳಗ್ಗೆ ಸುಮಾರು 5.30 ರ ವೇಳೆಗೆ ಈ ಘಟನೆ ನಡೆದಿದ್ದು, ೫ ವಿದ್ಯುತ್ ಕಂಬಗಳು ಧರೆಗುರಳಿದ್ದು, ವಾಹನ ಸಂಚಾರಕ್ಕೆ ತೊಡಕ್ಕುಂಟಾಗಿತ್ತು. ಇನ್ನು ಘಟನೆಯಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ದ್ವಿಚಕ್ರ

ಬಿ.ಸಿ.ರೋಡು-ಪುಂಜಾಲಕಟ್ಟೆ ರಸ್ತೆ ಅಗಲೀಕರಣ: ಹಲವಾರು ಸಮಸ್ಯೆಗಳು ಸೃಷ್ಠಿ

ಬಂಟ್ವಾಳ: ಬಿ.ಸಿ.ರೋಡು- ಪುಂಜಾಲಕಟ್ಟೆ ರಸ್ತೆ ಅಗಲೀಕರಣ ಕಾಮಗಾರಿ ಭರದಿಂದ ನಡೆಯುತ್ತಿದೆ. ಮಳೆಗಾಲದ ಈ ಸಮಯದಲ್ಲಿ ರಸ್ತೆ ಅಭಿವೃದ್ದಿಯಿಂದಾಗಿ ಹಲವರು ಸಮಸ್ಯೆಗಳು ತಲೆದೋರಿವೆ. ನಾವೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳೇಗೇಟು ಬಳಿ ಮನೆಯಂಗಳವೇ ನೀರು ಹರಿದು ಹೋಗುವ ಚರಂಡಿಯಾಗಿ ಪರಿವರ್ತನೆಯಾದರೆ, ರಸ್ತೆ ಪಕ್ಕದ ಅಡಿಕೆ ತೋಟದಲ್ಲಿ ನೀರು ತುಂಬಿ ಕೊಂಡು ಕೃಷಿ ನಾಶವಾಗುವ ಭೀತಿ ಎದುರಾಗಿದೆ. ರಸ್ತೆ ವಿಸ್ತರಣೆ ಕಾಮಗಾರಿ ಮನೆ ಅಂಚಿನವರೆಗೂ ಸಾಗಿದ್ದು ತಡೆಗೋಡೆ

 ಅರ್ಕುಳ ಶ್ರೀ ವರದೇಶ್ವರ ದೇವಸ್ಥಾನದ ಡ್ರೈನೇಜ್ ಸಮಸ್ಯೆ: ಶಾಸಕ ಡಾ ವೈ ಭರತ್ ಶೆಟ್ಟಿ ಭೇಟಿ

ಇತಿಹಾಸ ಪ್ರಸಿದ್ಧ ಸುಮಾರು 800 ವರ್ಷಗಳಷ್ಟು ಪ್ರಾಚೀನ ಸ್ವಯಂಭೂ ಅರ್ಕುಳ  ಶ್ರೀವರದೇಶ್ವರ ದೇವಸ್ಥಾನ ಬಳಿ ರೈಲ್ವೆ ಇಲಾಖೆಯವರು ಗೋಡೆಕಟ್ಟುವ ಕಾಮಗಾರಿ ಸಂದರ್ಭದಲ್ಲಿ ದೇವಸ್ಥಾನದ ಡ್ರೈನೇಜ್ ವ್ಯವಸ್ಥೆಗೆ ಲೋಪವಾಗಿತ್ತು. ಇದರ ಪರಿಣಾಮ ದೇವಸ್ಥಾನದ ಅಂಗಣ ತುಂಬಾ ಮಳೆನೀರು ತುಂಬಿಕೊಂಡಿತ್ತು. ಈ ವಿಷಯವನ್ನು ಅರ್ಕುಳ  ಗ್ರಾಮಸ್ಥರು ಶಾಸಕರಾದ ಡಾ ವೈ ಭರತ್ ಶೆಟ್ಟಿಯವರಲ್ಲಿ ತಿಳಿಸಿದಾಗ  ಕೂಡಲೇ ಸ್ಪಂದಿಸಿ  ರೈಲ್ವೆ ಇಲಾಖೆಯವರೊಂದಿಗೆ ಮಾತನಾಡಿ ತ್ವರಿತ ವಾಗಿ

ಕದ್ರಿ ವಾರ್ಡ್‍ನ ಜನತೆಗೆ ಆಹಾರದ ಸಾಮಾಗ್ರಿ ವಿತರಣೆ

ಕದ್ರಿ ವಾರ್ಡಿನ ಕಾರ್ಪೋರೇಟರ್ ಆದ ಕದ್ರಿ ಮನೋಹರ್ ಶೆಟ್ಟಿ ಇವರ ವಿನಂತಿಯ ಮೇರೆಗೆ ಕದ್ರಿ ದಕ್ಷಿಣ 33ನೇ ವಾರ್ಡಿನಲ್ಲಿ ಕೊರೊನಾ ಸಮಯದಲ್ಲಿ ಸಂಕಷ್ಟದಲ್ಲಿ ಇರುವ ಜನರಿಗೆ ಸಹಾಯವಾಗಲೆಂದು ಆಹಾರದ ಕಿಟ್‍ಗಳನ್ನು ಒದಗಿಸಿದರು. ಉದ್ಯಮಿ ಗಣೇಶ್ ಶಿರ್ವ ದುಬಾಯಿ ಇವರ ಸಹಕಾರದೊಂದಿಗೆ ಜೊತೆಯಾಗಿ ಕದ್ರಿ ವಾರ್ಡಿನ ತರಕಾರಿ ವ್ಯಾಪಾರಸ್ಥರಾದ ಸುದೀರ್ ಕದ್ರಿ ಮಾರ್ಕೆಟ್ ಹಾಗೂ ಸುನಿಲ್ ಕೊಟ್ಟಾರಿ ಇವರು ತರಕಾರಿಯ ಕಿಟ್‍ಗಳನ್ನು ಒದಗಿಸಿದರು. ಈ ಸಂದರ್ಭದಲ್ಲಿ ವಾರ್ಡಿನ