Home Archive by category ಕರಾವಳಿ (Page 98)

ಮಂಗಳೂರು: ಕಾವೂರಿನಲ್ಲಿ ಮಾರುಕಟ್ಟೆ ಸಂಕೀರ್ಣ ಖಾಲಿ: ಅಂಗಡಿ ಪಡೆದ ವ್ಯಾಪಾರಸ್ಥರು ವಾರದೊಳಗೆ ಸ್ಥಳಾಂತರಗೊಳ್ಳಬೇಕು: ಮೇಯರ್ ಸುಧೀರ್

ಕಾವೂರಿನಲ್ಲಿ ಸ್ಮಾರ್ಟ್ ಸಿಟಿ ಅನುದಾನದಿಂದ ನಿರ್ಮಿಸಲಾದ ಕೋಟ್ಯಾಂತರ ರೂಪಾಯಿ ಮೌಲ್ಯದ ಮಾರುಕಟ್ಟೆಯ ಸಂಕೀರ್ಣ ಖಾಲಿ ಬಿದ್ದಿದ್ದು, ಅಂಗಡಿ ಪಡೆದ ವ್ಯಾಪಾರಸ್ಥರು ಒಂದು ವಾರದ ಒಳಗಾಗಿ ಸ್ಥಳಾಂತರಗೊಳ್ಳಬೇಕು ಇಲ್ಲದಿದ್ದಲ್ಲಿ ಸೂಕ್ತ ಕ್ರಮ ಕೈಗೊಳ್ಳುವುದು ಅನಿವಾರ್ಯ ಎಂದು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಹೇಳಿದ್ದಾರೆ. ಕಾವೂರಿನಲ್ಲಿ ನಿರ್ಮಾಣವಾಗಿರುವ ಮಾರುಕಟ್ಟೆ

ಉಳ್ಳಾಲ: ಕುಡಿಯುವ ನೀರಿಗಾಗಿ ಶಾಶ್ವತ ಪರಿಹಾರ: ಸ್ಪೀಕರ್ ಖಾದರ್

ಉಳ್ಳಾಲ ನಗರಸಭೆ, ಸೋಮೇಶ್ವರ ಪುರಸಭೆ, ಕೋಟೆಕಾರು ಪಟ್ಣಣ ಪಂಚಾಯತ್ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಯೋಜನೆಗೆ 150 ಕೋಟಿ ರೂ, ಉಳ್ಳಾಲ ತಾಲೂಕು ಗ್ರಾಮೀಣ ಭಾಗದ ಕುಡಿಯುವ ನೀರಿಗೆ ಎರಡನೇ ಹಂತದ ಯೋಜನೆ 210 ಕೋಟಿ ರೂ ಸಲ್ಲಿಕೆಯಾಗಿದ್ದು, ಹಣಕಾಸು ಇಲಾಖೆಯಿಂದ ಅನುಮತಿ ಪಡೆದು ಸಚಿವ ಸಂಪುಟದ ಸಭೆಯಲ್ಲಿ ಅಂಗೀಕಾರವಾಗಲಿದ್ದು, ಮುಂದಿನ ಎರಡು ವರ್ಷದೊಳಗಡೆ ಮಂಗಳೂರು ವಿಧಾನಸಭಾ ಕ್ಷೇತ್ರದ್ಯಾಂತ ಕುಡಿಯುವ ನೀರಿಗೆ ಶಾಶ್ವತ ಪರಿಹಾರ ದೊರಕಲಿದೆ ಎಂದು ವಿಧಾನಸಭಾ ಸ್ಪೀಕರ್

ಉಳ್ಳಾಲ: ನಕಲಿ ಚಿನ್ನ ಧರಿಸಿ ಅಂಗಡಿ ಮಾಲೀಕರಿಗೆ ಮೋಸ, ಆರೋಪಿ ಗುರುತು ಪತ್ತೆ

ಉಳ್ಳಾಲ: ತೊಕ್ಕೊಟ್ಟು ಭಾಗದ ಎರಡು ಹಾಗೂ ಕುತ್ತಾರಿನಲ್ಲಿ ಒಂದು ಅಂಗಡಿಗೆ ವಂಚಿಸಿದ ಆರೋಪಿಯ ಗುರುತು ಹಿಡಿದಿರುವ ಅಂಗಡಿ ಮಾಲೀಕರು, ಉಳ್ಳಾಲ ಪೆÇಲೀಸ್ ಠಾಣೆಯಲ್ಲಿ ಕಸಬಾ ಬೆಂಗ್ರೆ ನಿವಾಸಿ, ಹಲವು ವಂಚನೆ ಪ್ರಕರಣಗಳ ಆರೋಪಿ ಗೂಡ್ಸ್ ಮುನೀರ್ ಎಂಬಾತನ ವಿರುದ್ಧ ದೂರು ದಾಖಲಿಸಿದ್ದು, ಪೆÇಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಕಳೆದ ಅಕ್ಟೋಬರ್ ತಿಂಗಳಲ್ಲಿ ತೊಕ್ಕೊಟ್ಟು ಓವರ್ ಬ್ರಿಡ್ಜ್‍ನ ಅಯ್ಯಂಗಾರ್ ಬೇಕರಿ ಮತ್ತು ಸಮೀಪದ ಪೂರ್ಣಿಮ ಎಂಬವರ ದಿನಸಿ

ಮಂಗಳೂರು: ಡಿಕೆಶಿ ಕೇಸ್ ವಾಪಸ್ ಹಿಂಪಡೆದಿರುವುದು ಖಂಡನೀಯ: ಮಾಜಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ

ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಹೇಳಿಕೊಳ್ಳಲು ಆಶ್ಚರ್ಯ ಎನಿಸುವಂತಹ ಬಹಳ ನೋವಿನ ಸಂಗತಿ ನಡೆದಿದ್ದು ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರನ್ನು ಭ್ರಷ್ಟಾಚಾರ ಆರೋಪದಡಿಯಲ್ಲಿ ಸಿಬಿಐ ತನಿಖೆ ಮಾಡುತ್ತಿದ್ದರೂ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಸಚಿವ ಸಂಪುಟ ಸಿಬಿಐ ತನಿಖೆಗೆ ಕೊಟ್ಟ ಅನುಮತಿ ವಾಪಾಸು ತೆಗೆದುಕೊಂಡಿರುವುದು ಖಂಡನೀಯ ಎಂದು ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಬಿಜೆಪಿ ಮಂಗಳೂರು ಮಂಡಲ ಕಚೇರಿಯಲ್ಲಿ

ಶಕ್ತಿ ಯೋಜನೆಯಡಿ 100 ಕೋಟಿ 47 ಲಕ್ಷ ಸ್ತ್ರೀ ದಾಟು

ಮಹಿಳೆಯರನ್ನು ಕೆಎಸ್‌ಆರ್‌ಟಿಸಿ ಬಸ್ಸುಗಳಲ್ಲಿ ಉಚಿತವಾಗಿ ಕೊಂಡೊಯ್ಯುವ ಶಕ್ತಿ ಯೋಜನೆಯು ಕರ್ನಾಟಕದಲ್ಲಿ ಜೂನ್ 11ರಂದು ಆರಂಭವಾಗಿದೆ. ಅಲ್ಲಿಂದ ನವೆಂಬರ್ 23ರವರೆಗೆ ಶಕ್ತಿ ಯೋಜನೆಯಡಿ 100 ಕೋಟಿ 47 ಲಕ್ಷ ಮಹಿಳೆಯರ ಓಡಾಟ ಆಗಿದೆ. ಈ ಸಂಬಂಧ ಬೆಂಗಳೂರು ವಿಧಾನ ಸೌಧದ ಬಾಂಕ್ವೆಟ್ ಹಾಲಿನಲ್ಲಿ ಶುಕ್ರವಾರ ಶತಕೋಟಿ ಸಂಭ್ರಮ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮವು ಕರ್ನಾಟಕ ಸರಕಾರದ ಗ್ಯಾರಂಟಿಗಳಿಗೆ ಮತ್ತಷ್ಟು ಒತ್ತು ನೀಡಿತು. ಈ ಸಂದರ್ಭದಲ್ಲಿ ಮಾತನಾಡಿದ

ಮಂಗಳೂರಿನಲ್ಲಿ ಅಂತರ್ ರಾಷ್ಟ್ರೀಯ ಈಜುಕೊಳ ಲೋಕಾರ್ಪಣೆ

19ನೇ ರಾಷ್ಟ್ರೀಯ ಹಿರಿಯರ ಈಜುಸ್ಪರ್ಧೆಯ ಆರಂಭದೊಂದಿಗೆ ನಗರದ ಎಮ್ಮೆಕೆರೆ ಪ್ರದೇಶದಲ್ಲಿ ಒಲಂಪಿಕ್ಸ್ ಮಾನದಂಡದ ಪ್ರಕಾರ ನಿರ್ಮಿಸಿರುವ ಅತ್ಯಾಧುನಿಕ ಈಜುಕೊಳ ಉದ್ಘಾಟನೆಗೊಂಡಿದೆ. ಈಜುಕೊಳ ಉದ್ಘಾಟಿಸಿದ ನಗರಾಭಿವೃದ್ಧಿ ಸಚಿವ ಸುರೇಶ್ ಬಿ.ಎಸ್ ಮಾತನಾಡಿ, ಮಂಗಳೂರಿನಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಆದಾಯ ಸೃಷ್ಟಿಸುವ ಯೋಜನೆಗಿಂತ ಹೆಚ್ಚಾಗಿ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲಾಗಿದೆ. ಇನ್ನು ಮುಂದೆಯಾದರೂ ಮಹಾನಗರ ಪಾಲಿಕೆಯ ಯಾವುದಾದರೂ ಯೋಜನೆಯಡಿ ಆದಾಯ ವೃದ್ಧಿಸುವ

ಕರಾವಳಿಯಲ್ಲಿ ಸಾಧಾರಣ ಮಳೆ

ದಕ್ಷಿಣ ಕನ್ನಡ ಮತ್ತು ಉಡುಪಿ ಭಾಗಗದ ಕೆಲವು ಕಡೆಗಳಲ್ಲಿ ಅಲಲ್ಲಿ ಸಾಧಾರಣ ಮಳೆಯಾಗಿದೆ. ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವಣವಿದ್ದು, ಮಾಧ್ಯಹ್ನಾದ ಸಮಯದಲ್ಲಿ ಮಳೆ ಸುರಿದಿದೆ. ಕರಾವಳಿಯಲ್ಲಿ ಹಿಂಗಾರು ಕ್ಷೀಣಿಸುತ್ತಿದ್ದು, ಮುಂದಿನ ಎರಡು ದಿನಗಳ ಕಾಲ ಜಿಲ್ಲೆಯ ಅಲಲ್ಲಿ ಮೋಡ ಮತ್ತು ಸಾಧಾರಣ ಮಳೆಯ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಸದ್ಯಕ್ಕೆ ಯಾವುದೇ ಅಲರ್ಟ್ ಘೋಷಿಸಿಲ್ಲ.

ಮಂಗಳೂರು ; ಶವ ಕೊಳೆಸಿದ ಮಂಗಳೂರಿನ ಆಸ್ಪತ್ರೆಗೆ ಗ್ರಾಹಕರ ನ್ಯಾಯಾಲಯದಿಂದ ದಂಡ ಪ್ರಯೋಗ

ಹಣ ಪಡೆದು ಶವಾಗಾರದಲ್ಲಿ ಶವ ಇಟ್ಟು ಕೊಳೆಸಿದ ಕಾರಣಕ್ಕೆ ಮಂಗಳೂರು ನಗರದ ಆಸ್ಪತ್ರೆ ಒಂದಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಗ್ರಾಹಕರ ನ್ಯಾಯಾಲಯವು ವಾರಸುದಾರರಿಗೆ ರೂ. 5 ಲಕ್ಷ ಪರಿಹಾರ ನೀಡುವಂತೆ ಸೂಚಿಸಿದೆ. ತಿಂಗಳೊಳಗೆ ಪರಿಹಾರ ನೀಡಲು ವಿಫಲರಾದಲ್ಲಿ 8% ಬಡ್ಡಿ ಸೇರಿಸಿ ನೀಡುವಂತೆಯೂ ಸೂಚಿಸಲಾಗಿದೆ. 2019ರ ಅಕ್ಟೋಬರ್ 25ರಂದು ವಿಲ್ಸನ್ ಆಲನ್ ಫೆರ್ನಾಂಡೀಸ್ ಸಾವಿಗೀಡಾದರು. ವಿದೇಶದ ಬಂಧು ಬರಲಿ ಎಂದು ಮಂಗಳೂರಿನ ಒಂದು ಆಸ್ಪತ್ರೆಗೆ ಹಣ ನೀಡಿ ಅಲ್ಲಿನ ಶವಾಗಾರದಲ್ಲಿ

ಮುಂಡ್ಕೂರು: ಮನೆಗೆ ನುಗ್ಗಿ ಬರಿಗೈಯಲ್ಲಿ ವಾಪಸ್ಸಾದ ಕಳ್ಳರು..!!

ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಜಾರಿಗೆಕಟ್ಟೆಯ ಅಲಂಗಾರು ಗುಡ್ಡೆ ಎಂಬಲ್ಲಿ ಮನೆಯ ಬಾಗಿಲ ಚಿಲಕ ಮುರಿದು ಒಳ ನುಗ್ಗಿದ ಕಳ್ಳರು ಬರಿಗೈಯಲ್ಲೇ ವಾಪಾಸ್ಸಾಗಿದ್ದರೆ. ಅಲಂಗಾರು ಗುಡ್ಡೆಯ ಹೆಲೆನ್ ಸೆರಾವೊ ಎಂಬುವವರು ಮನೆಯಲ್ಲಿ ಇಲ್ಲದ ವೇಳೆ ಈ ಘಟನೆ ನಡೆದಿದ್ದು, ಇಂದು ಬೆಳಿಗ್ಗೆ ಮನೆಗೆ ಬಂದು ನೋಡುವಾಗ ಬಾಗಿಲು ತೆರೆದಿದ್ದು, ಒಳ ರೂಮಿನಲ್ಲಿದ್ದ ಕಪಾಟುಗಳನ್ನು ಕಳ್ಳರು ಜಾಲಾಡಿಸಿ ಹೋಗಿದ್ದಾರೆ. ಆದರೆ ಮನೆಯಲ್ಲಿ ನಗ-ನಗದು ಇಲ್ಲದ ಕಾರಣ ಬರಿಗೈಯಲ್ಲೇ

ಮಂಗಳೂರು – ಡಿ.10ರಂದು ಅಂತರ್ ಧರ್ಮೀಯ ಸೌಹಾರ್ದ ಕ್ರೀಡಾ ಕೂಟ

ಕಥೋಲಿಕ್ ಸಭಾ ಮಂಗಳೂರು ಪ್ರದೇಶ, ಆಂಜೆಲೊರ್ ಘಟಕ ಮತ್ತು ಅಂತರ್ ಧರ್ಮೀಯ ಸಂವಾದ ಆಯೋಗ, ಆಂಜೆಲೊರ್ ಚರ್ಚ್ ವತಿಯಿಂದ ಪುರುಷರಿಗೆ ವಾಲಿಬಾಲ್ ಹಾಗೂ ಮಹಿಳೆಯರಿಗೆ ತ್ರೋಬಾಲ್ ಪಂದ್ಯಾವಳಿಯನ್ನು ಡಿ.10 ನಗರದ ಕಪಿತಾನಿಯೊ ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಆಂಜೆಲೊರ್ ಚರ್ಚ್‍ನ ಅಂತರ್ ಧರ್ಮೀಯ ಆಯೋಗದ ಸಂಚಾಲಕರಾಧ ಫೆಲಿಕ್ಸ್ ಮೊರಾಸ್ ತಿಳಿಸಿದರು. ನಗರದ ಪ್ರೆಸ್ ಕ್ಲಬ್‍ನಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾಹಿತಿ ನೀಡಿದರು.