ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಮಹೋತ್ಸವದ ಧಾರ್ಮಿಕ ಕಾರ್ಯಕ್ರಮವು ಪ್ರಾತಃಕಾಲ 06:30 ಕ್ಕೆ ರುದ್ರಾಭಿಷೇಕ, ಪಂಚಾಮೃತ ವಿಶೇಷ ಸೇವೆಗಳೊಂದಿಗೆ ಪ್ರಾರಂಭಗೊಂಡಿತು. ಸಹಸ್ರಾರು ಭಕ್ತಾಭಿಮಾನಿಗಳು ಸನ್ನಿಧಾನಕ್ಕೆ ಆಗಮಿಸಿ, ದೇವರ ಪ್ರಾರ್ಥನೆಗೈದು, ಫೆಬ್ರವರಿ 22 ರಿಂದ ಮಾರ್ಚ್ 05 ರವರೆಗೆ ನಡೆಯಲಿರುವ ಅತಿರುದ್ರ ಮಹಾಯಾಗಕ್ಕೆ ಯಾಗ
ಕುಂದಾಪುರ: ಜಗತ್ಪ್ರಸಿದ್ದ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನದ ನೂತನ ಬ್ರಹ್ಮ ರಥವನ್ನು ಲೋಕಾರ್ಪಣೆ ಮಾಡಲಾಯಿತು. ಕೋಟೇಶ್ವರದಿಂದ ಪುರ ಮೆರವಣಿಗೆಯಲ್ಲಿ ಕೊಲ್ಲೂರಿಗೆ ಬಂದಿದ್ದ ಬ್ರಹ್ಮ ರಥವನ್ನು ದೇವಸ್ಥಾನದ ಮುಂಭಾಗದಲ್ಲಿ ಇರಿಸಲಾಗಿದ್ದು, ಗುರುವಾರ ಬೆಳಿಗ್ಗೆ ಶುದ್ದಾದಿ ಕಾರ್ಯಗಳು ಮುಗಿದ ಬಳಿಕ ಬ್ರಹ್ಮ ರಥದ ಹಸ್ತಾಂತರ ಪ್ರಕ್ರಿಯೆಗೆ ಪೂರ್ವಭಾವಿಯಾಗಿ ಋತ್ವೀಜರ ನೇತೃತ್ವದಲ್ಲಿ ಹೋಮ ನಡೆಸಲಾಯಿತು. ಬಳಿಕ ಹಳೆಯ ರಥದ ವಿಸರ್ಜನೆ ಹಾಗೂ ಕಳೆ ಇಳಿಸುವ ಸಲುವಾಗಿ
ಶಿವಪಾಡಿ ಶ್ರೀ ಉಮಾಮಹೇಶ್ವರ ಸನ್ನಿಧಿಯಲ್ಲಿ ಫೆಬ್ರವರಿ 18 ರಂದು ಆಚರಿಸಲ್ಪಡುವ ಮಹಾಶಿವರಾತ್ರಿಯ ಅಂಗವಾಗಿ ‘ಮಹಾಶಿವರಾತ್ರಿ ಮಹೋತ್ಸವ’ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಬೆಳಿಗ್ಗೆ 06:30 ರಿಂದ ರುದ್ರಾಭಿಷೇಕ, ಪಂಚಾಮೃತ ಅಭಿಷೇಕ, ವಿಶೇಷ ಪೂಜೆ ಹಾಗೂ ಸರ್ವ ಸೇವೆಗಳು ನೆರವೇರಲಿವೆ. ರಾತ್ರಿ 10:30 ರಿಂದ ಸಹಸ್ರ ಬಿಲ್ವಾರ್ಚನೆ, ಮಹಾರಂಗಾ ಪೂಜಾದಿಗಳು ಜರುಗಲಿದ್ದು, ರಾತ್ರಿ 09:30 ರಿಂದ ಪ್ರಾತಃಕಾಲದವರೆಗೆ ದೇವಸ್ಥಾನದ ವಠಾರದಲ್ಲಿ ಶ್ರೀ ಮಯೂರ
ಉಳ್ಳಾಲ: ಮಹಾಶಿವರಾತ್ರಿಯ ಸೂರ್ಯಾಸ್ತದ ನಂತರ ಜಾಗರಣದ ಸಂಧಿಕಾಲದಲ್ಲಿ ಸೋಮೇಶ್ವರ ದೇವಸ್ಥಾನದ ಬಳಿ ಇರುವ ರುದ್ರಪಾದೆಯಲ್ಲಿ ಲೋಕಕಲ್ಯಾಣಕ್ಕಾಗಿ ಅಗ್ನಿಹೋತ್ರ ಮತ್ತು ಭಸ್ಮ ತಯಾರಿ ಯಜ್ಞವು ಕರಾವಳಿ ಕಲ್ಯಾಣ ಪರಿಷತ್, ಕರ್ನಾಟಕ ಸೋಮೇಶ್ವರ ಶಕ್ತಿ ಕೇಂದ್ರದ ನೇತೃತ್ವದಲ್ಲಿ ಜರಗಲಿದೆ ಫೆಬ್ರವರಿ 18ರಂದು ನಡೆಯಲಿದೆ ಎಂದು ಪರಿಷತ್ ನ ಪದ್ಮನಾಭ ವರ್ಕಾಡಿ ತಿಳಿಸಿದ್ದಾರೆ. ತೊಕ್ಕೊಟ್ಟು ಸೇವಾಸೌಧದಲ್ಲಿರುವ ಉಳ್ಳಾಲ ಪ್ರೆಸ್ಕ್ಲಬ್ ನಲ್ಲಿ ನಡೆಸಿದ
ಶಿವಪಾಡಿ ಶ್ರೀ ಉಮಾಮಹೇಶ್ವರ ದೇವರ ಸನ್ನಿಧಿಯಲ್ಲಿ ಫೆಬ್ರವರಿ 18, 2023 ರ ಶನಿವಾರದಂದು ಆಚರಿಸಲ್ಪಡುವ ಮಹಾಶಿವರಾತ್ರಿಯು ಅನೇಕ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ರಾತ್ರಿ 09:30 ರಿಂದ ಪ್ರಾತಃ ಕಾಲದವರೆಗೆ ದೇವಸ್ಥಾನದ ವಠಾರದಲ್ಲಿ ಶ್ರೀ ಮಯೂರ ವಾಹನ ಯಕ್ಷಗಾನ ನಾಟಕ ಸಭಾ, ಸೂಡ ಇವರಿಂದ “ಅಬ್ಬಗ ದಾರಗ” ತುಳುಪ್ರಸಂಗ ಮತ್ತು “ಬೇಡರ ಕಣ್ಣಪ್ಪ” ಕನ್ನಡ ಪ್ರಸಂಗ ಯಕ್ಷಗಾನ ಬಯಲಾಟ ಪ್ರದರ್ಶನಗೊಳ್ಳಲಿದೆ. ಫೆಬ್ರವರಿ 22, 2023
ಸುಬ್ರಹ್ಮಣ್ಯ, ಫೆ.14: ಕರ್ನಾಟಕ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಮಂಗಳವಾರ ನಾಗಾರಾಧನೆಯ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿದರು. ಕ್ಷೇತ್ರಕ್ಕೆ ಆಗಮಿಸಿದ ಅವರನ್ನು ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಶ್ರೀ ದೇವಳದಿಂದ ಗೌರವಪೂರ್ವಕವಾಗಿ ಸ್ವಾಗತಿಸಲಾಯಿತು. ಪತ್ನಿ ಸೇರಿದಂತೆ ಕುಟುಂಬ ಸಮೇತರಾಗಿ ಶ್ರೀ ದೇವಳಕ್ಕೆ ಆಗಮಿಸಿದ ರಾಜ್ಯಪಾಲರನ್ನು ಶ್ರೀ ದೇವಳದ ಗಜರಾಣಿ ಯಶಸ್ವಿ ತನ್ನ ಸೊಂಡಿಲಿನಿಂದ
ಗೋವುಗಳ ಸಂರಕ್ಷಣೆ ಹಾಗೂ ಗೋ ಸಂತತಿ ಉಳಿಸುವ ನಿಟ್ಟಿನಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಮಣಿಪಾಲದ ಶಿವಪಾಡಿಯಲ್ಲಿರುವ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 14, 2023 ರ ಮಂಗಳವಾರದಂದು ಗೋವು ಆಲಿಂಗನ ವಿಶೇಷ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಆಂಧ್ರದ ನಲ್ಲೂರು ಜಿಲ್ಲೆಯ ಪುಂಗನೂರು ರಾಜಮನೆತನದವರು ಬೆಳಸಿದ ಪುಂಗನೂರು ತಳಿಯ ಐದು ಹಸುಗಳಿಗೆ ಶಾಸಕ ಕೆ. ರಘುಪತಿ ಭಟ್ ಅವರ ತಾಯಿ ಸರಸ್ವತಿ ಬಾರಿತ್ತಾಯ ಅವರು ಮೇವು ನೀಡಿ ಆಲಿಂಗನ ಮಾಡಿದರು. ತದನಂತರ
ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಡೆಯಲಿರುವ ಅತಿರುದ್ರ ಮಹಾಯಾಗದ ಅಂಗವಾಗಿ ಭಾನುವಾರದಂದು ಯಜ್ಞಕ್ಕೆ ಬೇಕಾಗುವ ದ್ರವ್ಯಗಳ ಸಮರ್ಪಣಾ ಕಾರ್ಯಕ್ರಮದಲ್ಲಿ ಅತಿಥಿಗಳೆಲ್ಲರೂ ಸೇರಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ ಕೊಪ್ಪರಿಗೆಗೆ ಭತ್ತ ಸುರಿಯುವ ಮೂಲಕ ಚಾಲನೆ ನೀಡಿದರು. ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಕೆರಾಡಿ ಚಂದ್ರಶೇಖರ್ ಶೆಟ್ಟಿ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಉಡುಪಿಯ ಶಾಸಕರು,
ಹಿಮಾಲಯದಲ್ಲಿ ವಾಸಿಸುತ್ತಿರುವ ನಾಥ ಸಂಪ್ರದಾಯದ ಅವಧೂತ ಮಹಾಸಭಾದ ಬಾಬಾ ಶ್ರೀ ಸೋಮರನಾಥ ಬಾಬಜಿ ಇವರು ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ಅತಿರುದ್ರ ಮಹಾಯಾಗದ ಪೂರ್ವ ತಯಾರಿಯನ್ನು ನೋಡಿ ಈ ಮಹಾಕಾರ್ಯ ಆ ಶಿವನ ಪ್ರೇರಣೆ ಮತ್ತು ಅನುಗ್ರಹದಿಂದ ನೆರವೇರುತ್ತಿದೆ. ಶಿವನನ್ನು ಇಲ್ಲಿ ಭಜಿಸುವುದರಿಂದ ಈ ಪ್ರದೇಶ ಪಾವನ ತಾಣವಾಗಿ ಪರಿವರ್ತಿತವಾಗುತ್ತದೆ. ಅತಿರುದ್ರ ಮಹಾಯಾಗ ಯಶಸ್ವಿಯಾಗಲಿ, ಲೋಕ ಕಲ್ಯಾಣಾರ್ಥವಾಗಿ ನಡೆಯುತ್ತಿರುವ ಈ
ಮರೋಳಿಯ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ, ಜನ್ಮಭೂಮಿ ಫೌಂಡೇಶನ್ ಮಂಗಳೂರು ವತಿಯಿಂದ ಫೆ.11ರಂದು ಶ್ರೀ ಸೂರ್ಯನಾರಾಯಣ ಸನ್ನಿಧಿಯಲ್ಲಿ ಸಪ್ತಗಿರಿವಾಸಿಯಾದ ಶ್ರೀನಿವಾಸ ಮತ್ತು ಪದ್ಮಾವತಿಯ ಕಲ್ಯಾಣೋತ್ಸವದ ಪುಣ್ಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಗಣೇಶ್ ಶೆಟ್ಟಿ ಜಪ್ಪು ಗುಡ್ಡೆಗುತ್ತು ಹೇಳಿದರು. ಅವರು ನಗರದ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಫೆ.11ರಂದು ಸಂಜೆ 4 ಗಂಟೆಗೆ ಬ್ರಹ್ಮಶ್ರೀ ಕೆ.ಯು ನೀಲೇಶ್ವರ