Home Archive by category ದೈವ ದೇವರು (Page 16)

ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನ: ಆಟಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ತೀರ್ಥ ಸ್ನಾನ

ಪುರಾಣ ಪ್ರಸಿದ್ದ ಪರ್ವತ ಕ್ಷೇತ್ರ ಬಂಟ್ವಾಳ ತಾಲೂಕಿನ ನರಹರಿ ಪರ್ವತದ ಮೇಲಿರುವ ಶ್ರೀ ಸದಾಶಿವ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಯ ಪ್ರಯುಕ್ತ ವಿಶೇಷ ತೀರ್ಥ ಸ್ನಾನ ನಡೆಯಿತು. ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಬೆಟ್ಟ ಹತ್ತಿ ದೇವಸ್ಥಾನದ ತೀರ್ಥ ಬಾವಿಗಳಾದ ಶಂಖ, ಚಕ್ರ, ಗಧಾ, ಪದ್ಮ ಕೆರೆಗಳಿಗೆ ವೀಳ್ಯ ಅಡಿಕೆಯ ಭಾಗಿನ ಬಿಟ್ಟು ತೀರ್ಥ ನೀರು ಮಿಂದು ಪುನೀತರಾದರು.

ಕಡಲ್ಕೊರೆತ, ಸೌಪರ್ಣಿಕಾ ನದಿ ನೆರೆಹಾವಳಿ : ಸಂಕಷ್ಟ ನಿವಾರಣೆಗೆ ವರಾಹ ದೇವರಲ್ಲಿ ಪ್ರಾರ್ಥನೆ

ಬೈಂದೂರು: ಬೈಂದೂರು ಕ್ಷೇತ್ರದ ವ್ಯಾಪ್ತಿಯಲ್ಲಿ ವಿಪರೀತ ರಕ್ಕಸ ಅಲೆಗಳ ಕಡಲ್ಕೊರೆತ ಸೌಪರ್ಣಿಕಾ ನದಿಯ ನೆರೆಹಾವಳಿ ಹಾಗೂ ರಾಷ್ಟ್ರೀಯ ಹೆದ್ದಾರಿಯಲ್ಲಿ ಪದೇ ಪದೇ ಅಪಘಾತವಾಗಿ ಸಾಕಷ್ಟು ಮುಗ್ಧ ಜೀವಗಳು ಮತ್ತು ಜಾನುವಾರುಗಳು ದಿನದಿಂದ ದಿನಕ್ಕೆ ಸಾವನ್ನಪ್ಪುತ್ತಿವೆ. ಅಪಘಾತಗಳು ಹೆಚ್ಚುತ್ತಿರುವುದರಿಂದ ಜನರು ಭೀತರಾಗಿದ್ದು ಸಂಕಷ್ಟದ ನಿವಾರಣೆಗೆ ಜುಲೈ 28ರಂದು ನಡೆಯುವ ಬೃಹತ್ ಜಾತ್ರಾ ಮಹೋತ್ಸವದಲ್ಲಿ ಮಾರಸ್ವಾಮಿ ವರಾಹ ದೇವರಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡುವುದರ

ಅಧಿಕಾರದ ಮದ ನೆತ್ತಿಗೇರಿದರೆ ಆತನ ಅವನತಿ ನಿಶ್ಚಿತ : ಶ್ರೀರಾಮ ಕ್ಷೇತ್ರ ಕನ್ಯಾಡಿಯ ಮಠಾಧೀಶರಾದ ಶ್ರೀ ಬ್ರಹ್ಮಾನಂದ ಸರಸ್ವತಿ ನುಡಿ

ಮಠಾಧೀಶರೇ ಆಗಲೀ..ಮಂತ್ರಿ ಮಾಗದರೇ ಆಗಲೀ ಅಧಿಕಾರದ ಪಿತ್ತ ನೆತ್ತಿಗೇರಿ ಎಲ್ಲವೂ ನಾನೇ, ಎಲ್ಲವೂ ನಾನು ನನ್ನಿಂದಲೇ ನಡೆಯಬೇಕು ಎಂಬ ಸರ್ವಾಧಿಕಾರ ಧೋರಣೆ ತಾಳಿದರೆ ಅವರ ಅವನತಿ ಆರಂಭವಾದಂತೆ ಎಂಬುದಾಗಿ ಶ್ರೀರಾಮ ಕ್ಷೇತ್ರ ಕನ್ಯಾಡಿಯ ಮಠಾಧೀಶರಾದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಹೇಳಿದ್ದಾರೆ. ಅವರು ಕಾಪು ಬಿಲ್ಲವರ ಸಹಾಯಕ ಸಂಘದ ಅಧೀನದಲ್ಲಿ ನೂತನವಾಗಿ ನಿರ್ಮಿಣಗೊಳ್ಳಲಿರುವ ಬ್ರಹ್ಮಶ್ರೀ ನಾರಾಯಣಗುರು ಜ್ಞಾನ ಮಂದಿರದ ಶಿಲಾನ್ಯಾಸ ಕಾರ್ಯದಲ್ಲಿ ಭಾಗವಹಿಸಿ,

ಪಡುಬಿದ್ರಿ ಮಹಾಲಿಂಗೇಶ್ವರನಿಗೆ ದೀಪೋತ್ಸವ ಸಂಭ್ರಮ

ಇತಿಹಾಸ ಪ್ರಸಿದ್ಧ ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಳದಲ್ಲಿ ವಾರ್ಷಿಕ ದೀಪೋತ್ಸವ ಸಹಸ್ರಾರು ಭಕ್ತಾದಿಗಳ ಕೂಡುವಿಕೆಯಿಂದ ಬಹಳ ಅದ್ಧೂರಿಯಾಗಿ ನಡೆದು ಸಮಾಪನ ಗೊಂಡಿದೆ. ಪ್ರತೀ ವರ್ಷದಂತೆ ಈ ವರ್ಷವೂ ಕಾರ್ತಿಕ ಮಾಸದ ಕೊನೆಯ ಸೋಮವಾರ ನಡೆದ ಈ ದೀಪೋತ್ಸವದಲ್ಲಿ ಗ್ರಾಮ ಹಾಗೂ ಸ್ಥಳೀಯ ಗ್ರಾಮಗಳಿಂದ ಸಾವಿರಾರು ಭಕ್ತಾಧಿಗಳು ಆಗಮಿಸಿ ಸ್ವಯಂ ಪ್ರೇರಿತರಾಗಿ ಎಣ್ಣೆದೀಪ ಉರಿಸುವ ಮೂಲಕ ದೀಪೋತ್ಸವದಲ್ಲಿ ತಮ್ಮ ಅಳಿಲ ಸೇವೆ ಪೂರೈಸಿದ್ದಾರೆ. ಈ ಸಂದರ್ಭ

ಪುರಾತನ ಬಿಷ್ಟಮ್ಮನ ಕೆರೆ ಅಭಿವೃದ್ಧಿಗೊಳಿಸಲು ಒತ್ತಾಯ

ಬೇಲೂರು: ಬೇಲೂರಿನಲ್ಲಿರುವ ವಿಶ್ವಪ್ರಸಿದ್ಧ ಚನ್ನಕೇಶವ ದೇವಾಲಯಕ್ಕೆ ರಾಜ್ಯ ಮತ್ತು ಅಂತಾರಾಷ್ಟ್ರೀಯ ಮಟ್ಟದಿಂದ ಪ್ರವಾಸಿಗರು ಭೇಟಿ ನೀಡುವುದು ನಮಗೆಲ್ಲ ಗೊತ್ತಿರುವ ವಿಚಾರ. ಆದರೆ ಇಲ್ಲಿಯ ಪುರಾತನ ಹಾಗೂ ಹಳೆಯದಾದ ಬಿಷ್ಟಮ್ಮನ ಕೆರೆ ಮುಜರಾಯಿ ಇಲಾಖೆ ಅಧಿಕಾರಿಗಳು ಅಭಿವೃದ್ಧಿಗೊಳಿಸಿ ಪ್ರವಾಸೋದ್ಯಮವನ್ನು ಇನ್ನಷ್ಟು ಅಭಿವೃದ್ಧಿ ಗೊಳಿಸಬೇಕಾಗಿದೆ ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ. ಹೌದು ಇಲ್ಲಿರುವ ಬಿಷ್ಮಮ್ಮನ ಕೆರೆಯ ಬಳಿ ಉದ್ಯಾನವನ ಹಾಗೂ ಮೂಲಭೂತ

ಶ್ರೀ ಕ್ಷೇತ್ರ ಪೊಳಲಿಯಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ‘ಹಣತೆ ದೀಪ’

ಪೊಳಲಿ ಟೈಗರ್ಸ್ ಫ್ರೆಂಡ್ಸ್ ಮತ್ತು ಪುರಲ್ದ ಅಪ್ಪೆನ ಮೋಕೆದ ಬೊಳ್ಳಿಲು ತಂಡದ ವತಿಯಿಂದ ಶ್ರೀ ಕ್ಷೇತ್ರ ಪೊಳಲಿಯಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ‘ಹಣತೆ ದೀಪ’ ಬೆಳಕಿನ ಹಬ್ಬಕ್ಕೆ ಶ್ರೀ ರಾಜರಾಜೇಶ್ವರಿ ದೇವಸ್ಥಾನ ಪೊಳಲಿಯಲ್ಲಿ ದೇವಸ್ಥಾನದ ಆವರಣದಲ್ಲಿ ತುಪ್ಪ ದೀಪ ಅಲಂಕಾರ ಸೇವೆ ನೆರವೇರಿತು… ಈ ವಿಶೇಷ ಸೇವೆಯು ಕಳೆದ ಎರಡು ವರ್ಷಗಳಿಂದ ನಡೆದುಕೊಂಡು ಬಂದಿದ್ದು ಈ ಬಾರಿಯ ಸೇವಾಕಾರ್ಯಕ್ಕೆ ಅತಿಥಿಯಾಗಳು ಸೇರಿ ಚಾಲನೆ ನೀಡಿದರು. ಈ ವೇಳೆ ದೇವಸ್ಥಾನದ ಪ್ರಧಾನ

ಪುತ್ತೂರಿನ ಶ್ರೀಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರ ಬಲಿ ಉತ್ಸವ

ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪತ್ತನಾಜೆಯಂದು ಒಳಗಾದ ದೇವರ ಬಲಿ ಉತ್ಸವ ವಾಡಿಕೆಯಂತೆ ದೀಪಾವಳಿ ಅಮವಾಸ್ಯೆ ದಿನದಂದು ಸಂಪ್ರದಾಯದಂತೆ ಆರಂಭಗೊಂಡಿದೆ. ಕಳೆದ ರಾತ್ರಿ ಶ್ರೀ ದೇವರ ಬಲಿ ಹೊರಟು ದೀಪಾವಳಿ ಉತ್ಸವ ನಡೆಯಿತು. ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರೂ ಆಗಿರುವ ಪ್ರಧಾನ ಅರ್ಚಕ ವೇದ.ಮೂ.ವಿ.ಎಸ್.ಭಟ್ ಮತ್ತು ವೇ.ಮೂ. ವಸಂತ ಕೆದಿಲಾಯ ಅವರ ನೇತೃತ್ವದಲ್ಲಿ ಉತ್ಸವಾದಿಗಳು ನಡೆಯಿತು. ದೇವಳದ ಪ್ರಾಕಾರ ಗುಡಿಗಳಲ್ಲಿ ಹೂವಿನ ಪೂಜೆ

ದೀಪ ಬೆಳಕು ನೀಡಿದಂತೆ ಮನಸ್ಸು, ಹೃದಯ ಬೆಳಕಾಗಲಿ : ಡಾ. ಪ್ರಭಾಕರ ಭಟ್ ಕಲ್ಲಡ್ಕ

ಪುತ್ತೂರು: ಹಿಂದೂ ಸಮಾಜದ ಶಕ್ತಿಯನ್ನು ವೃದ್ಧಿಸಲು ನಮ್ಮ ಮನಸ್ಸು ಮತ್ತು ಹೃದಯ ಬೆಳಕಾಗಬೇಕು. ಅದಕ್ಕಾಗಿ ಮಹಾಲಿಂಗೇಶ್ವರ ದೇವಸ್ಥಾನದಿಂದ ಹೊರಟ ದೀಪದ ಬೆಳಕು ಎಲ್ಲರ ಮನೆ ಮನೆಯಲ್ಲಿ ಬೆಳಗಲಿ. ಮನೆ ದೇವಸ್ಥಾನ ಆಗಲಿ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಾಂತ ಕಾರ್ಯಕಾರಿಣಿ ಆಹ್ವಾನಿತ ಸದಸ್ಯ ಡಾ. ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಾಮರಸ್ಯ ವಿಭಾಗದ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದೊಂದಿಗೆ ಉರ್ಲಾಂಡಿ

ಶ್ರೀ ಸುಬ್ರಾಯ ವಿಷ್ಣುಮೂರ್ತಿ ನಾವೂರೇಶ್ವರ ದೇವಸ್ಥಾನ ಶ್ರೀ ವ್ಯಾಘ್ರ ಚಾಮುಂಡಿ ದೈವದ ದೈವಸ್ಥಾನದ ಶಿಲಾನ್ಯಾಸ

ಬಂಟ್ವಾಳ: ನಾವೂರು ಶ್ರೀ ಸುಬ್ರಾಯ ವಿಷ್ಣುಮೂರ್ತಿ ನಾವೂರೇಶ್ವರ ದೇವಸ್ಥಾನದ ಹೊರಾಂಗಣದ ನೈಋತ್ಯ ದಿಕ್ಕಿನಲ್ಲಿ ನೂತನವಾಗಿ ನಿರ್ಮಿಸಲ್ಪಡುವ ಶ್ರೀ ವ್ಯಾಘ್ರ ಚಾಮುಂಡಿ ದೈವದ ದೈವಸ್ಥಾನದ ಶಿಲಾನ್ಯಾಸ ಕಾರ್ಯಕ್ರಮ ಕ್ಷೇತ್ರದಲ್ಲಿ ನಡೆಯಿತು. ಬೆಳಗ್ಗಿನ 10.15 ರ ಧನುರ್ಲಗ್ನ ಸುಮುಹೂರ್ತದಲ್ಲಿ ತಂತ್ರಿಗಳಾದ ಶ್ರೀ ಪಾದ ಪಾಂಗಣ್ಣಾಯ ಅವರು ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿ ಶಿಲಾನ್ಯಾಸ ನೆರೆವೇರಿಸಿದರು. ಈ ಸಂದರ್ಭ ದೇವಸ್ಥಾನದ ಅರ್ಚಕರಾದ ವೆಂಕಟದಾಸ್ ಭಟ್,

ಇಂದಿನಿಂದ ಹಾಸನಾಂಬೆ ದೇವಿ ದರ್ಶನ : 2 ಡೋಸ್ ಲಸಿಕೆ ಕಡ್ಡಾಯ

ಹಾಸನ ಪ್ರಸಿದ್ಧ ಹಾಸನಾಂಬ ದೇವಿ ದರ್ಶನೋತ್ಸವ ಇಂದಿನಿಂದ ಪ್ರಾರಂಭವಾಗಲಿದ್ದು, ಜಿಲ್ಲಾಡಳಿತದ ವತಿಯಿಂದ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಜಿಲ್ಲಾಧಿಕಾರಿ ಆರ್.ಗಿರೀಶ್ ಅವರು ಹಾಸನಾಂಬ ದೇವಾಲಯ ಆವರಣದಲ್ಲಿಂದು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಂತಿಮ ಹಂತದ ಸಿದ್ದತೆಗಳನ್ನು ಪರಿಶೀಲಿಸಿದರು. ಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ದೇವಾಲಯದ ಅಲಂಕಾರ ಪ್ರಮುಖ ವೃತ್ತಗಳಲ್ಲಿ ದೀಪಾಲಂಕಾರ ಬಹುತೇಕ ಪೂರ್ಣಗೊಂಡಿದೆ ಎಂದರು. ಸಾರ್ವಜನಿಕರಿಗೆ ಅ.29 ರಿಂದ ನ.5ರ ವರೆಗೆ ಪ್ರತಿ