Home Archive by category ಮನರಂಜನೆ (Page 3)

ಮಂಗಳೂರು: ಚಂದನ ವಾಹಿನಿಯಲ್ಲಿ ಅಂಬರ್ ಮರ್ಲೆರ್ ತುಳು ಸಾಮಾಜಿಕ ಹಾಸ್ಯ ಧಾರಾವಾಹಿ ಪ್ರಸಾರ

ಅರ್ನ ಕ್ರಿಯೇಷನ್ಸ್ ಸಂಸ್ಥೆಯ ‘ಅಂಬರ ಮರ್ಲೆರ್’ ಎಂಬ ತುಳು ಸಾಮಾಜಿಕ ಹಾಸ್ಯ ಧಾರಾವಾಹಿಯು ಚಂದನ ವಾಹಿನಿಯಲ್ಲಿ ಸೆ.24ರಿಂದ ಪ್ರತಿ ಭಾನುವಾರ ಪ್ರಸಾರವಾಗಲಿದೆ ಎಂದು ನಿರ್ಮಾಪಕ ಹಾಗೂ ಪ್ರಧಾನ ನಿರ್ದೇಶಕ ಸುಂದರ್ ರೈ ಮಂದಾರ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ‘ಪ್ರತಿ ಭಾನುವಾರ ಮಧ್ಯಾಹ್ನ 1.30ರಿಂದ 2 ಗಂಟೆಯವರೆಗೆ ಧಾರಾವಾಹಿ

ಮಂಗಳೂರು: ಸ್ಟಾರ್ ಸುವರ್ಣದಲ್ಲಿ “ಸರ್ಕಸ್” ತುಳು ಚಿತ್ರದ ಪ್ರಸಾರ

ತುಳು ಚಿತ್ರರಂಗದಲ್ಲಿ ಹಲವಾರು ದಾಖಲೆಗಳನ್ನು ಬರೆದ ಸರ್ಕಸ್ ಸಿನಿಮಾ ಸೆಪ್ಟಂಬರ್ 10ರಂದು ಸಂಜೆ 6 ಗಂಟೆಗೆ ಸ್ಟಾರ್ ಸುವರ್ಣದಲ್ಲಿ ಪ್ರಸಾರಗೊಳ್ಳಲಿದೆ. ಕೋಸ್ಟಲ್‌ವುಡ್‌ನಲ್ಲಿ ಸಿನಿ ಪ್ರೇಕ್ಷಕರನ್ನು ಮೋಡಿ ಮಾಡಿದ ಸಿನಿಮಾ ಎಂದರೆ ಅದು ಸರ್ಕಸ್ ಸಿನಿಮಾ. ಬಿಗ್‌ಬಾಸ್ ವಿನ್ನರ್ ರೂಪೇಶ್ ಶೆಟ್ಟಿ ಅಭಿನಯದ ತುಳು ಸಿನಿಮಾವಾಗಿದ್ದು, ಯಶಸ್ವಿಯನ್ನು ಕಂಡಿದೆ. ಇದೀಗ ಅದೇ ಸಿನಿಮಾ ಟೀವಿಯಲ್ಲೂ ಪ್ರಸಾರ ಆಗುತ್ತಿದೆ. ಈ ಚಿತ್ರದ ಹಕ್ಕನ್ನು ಸ್ಟಾರ್ ಸುವರ್ಣ ಚಾನೆಲ್

ಮಂಗಳೂರು: ಸೆ.15ರಂದು ಅಸ್ಮಿತಾಯ್ ಕೊಂಕಣಿ ಸಿನಿಮಾ ತೆರೆಗೆ

ಕೊಂಕಣಿಯ ಕಲೆ, ಸಾಹಿತ್ಯ, ಸಂಸ್ಕೃತಿಯ ಎಲ್ಲಾ ಕ್ಷೇತ್ರಗಳಲ್ಲಿ ಮಹತ್ತರ ಸಾಧನೆ ಮಾಡಿದ, ಗಿನ್ನೆಸ್ ದಾಖಲೆ ಬರೆದ ಪ್ರಮುಖ ಸಾಂಸ್ಕೃತಿಕ ಸಂಘಟನೆ ಮಾಂಡ್ ಸೊಭಾಣ್ ಬ್ಯಾನರ್ ಅಡಿಯಲ್ಲಿ ತಯಾರಾದ “ಅಸ್ಮಿತಾಯ್” ಚಲನಚಿತ್ರವು ಸೆಪ್ಟೆಂಬರ್ 15 ರಂದು ತೆರೆ ಕಾಣಲಿದೆ ಎಂದು ಚಿತ್ರ ಬರಹಗಾರ ಎರಿಕ್ ಒಝೆರಿಯೊ ತಿಳಿಸಿದಿದ್ದಾರೆ. ಎರಿಕ್ ಒಝೇರಿಯೊ ಬರೆದ ಮೂಲಕತೆಗೆ ಜೊಯೆಲ್ ಪಿರೇರಾ ಚಿತ್ರಕತೆ ಮತ್ತು ಸಂಭಾಷಣೆಯ, ಯುವ ನಿರ್ದೇಶಕ ವಿಲಾಸ್ ರತ್ನಾಕರ್ ಕ್ಷತ್ರಿಯ

ಉಡುಪಿ: ಹುಲಿ ಕುಣಿತ ಬೀಟ್‍ಗೆ ಹೆಜ್ಜೆ ಹಾಕಿದ ನಟ ರಕ್ಷಿತ್ ಶೆಟ್ಟಿ ಮತ್ತು ತಂಡ

ಉಡುಪಿಯ ಮಲ್ಪೆ ಸಮೀಪದ ಕೊಳ ಎಂಬಲ್ಲಿ ನಡೆದ ಹುಲಿ ವೇಷ ಸ್ಪರ್ಧೆಯಲ್ಲಿ ಸಪ್ತಸಾಗರದಾಚೆ ಎಲ್ಲೋ ಚಿತ್ರತಂಡದ ಕಲಾವಿದರು ಭಾಗವಹಿಸಿದ್ದರು. ನಟ ರಕ್ಷಿತ್ ಶೆಟ್ಟಿ ಮತ್ತು ತಂಡ ಭೇಟಿ ನೀಡಿ ಹುಲಿ ಕುಣಿತ ಬೀಟ್‍ಗೆ ಹೆಜ್ಜೆ ಹಾಕಿದರು. ರಕ್ಷಿತ್ ಶೆಟ್ಟಿಗೆ ಚಿತ್ರದ ಹೀರೋಯಿನ್ ರುಕ್ಮಿಣಿ ವಸಂತ್, ನಿರ್ದೇಶಕ ಹೇಮಂತ್ ಸಾಥ್ ನೀಡಿದರು.

ಸೆ.2-6 ಆಳ್ವಾಸ್ ನಲ್ಲಿ ನಾಯಿಮರಿ ನಾಟಕ ಪ್ರದರ್ಶನ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.) ಮೂಡುಬಿದಿರೆ ಇದರ ಆಶ್ರಯದಲ್ಲಿ ಸೆ.02 ರಿಂದ ಸೆ.06 ರ ವರೆಗೆ ವಿದ್ಯಾಗಿರಿಯ ಕೃಷಿ ಸಿರಿ ವೇದಿಕೆಯಲ್ಲಿ ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ವಿದ್ಯಾರ್ಥಿಗಳು ಅಭಿನಯಿಸುವ, ಡಾ| ಜೀವನ್ ರಾಂ ಸುಳ್ಯ ನಿರ್ದೇಶನದ ನಾಯಿಮರಿ ನಾಟಕದ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಶ್ರೀಮತಿ ವೈದೇಹಿ ರಚಿಸಿರುವ ಈ ನಾಟಕವು ಈಗಾಗಲೇ ರಾಜ್ಯದ ಅನೇಕ ಕಡೆಗಳಲ್ಲಿ ಯಶಸ್ವೀ ಪ್ರದರ್ಶನಗೊಂಡ ಅತ್ಯುತ್ತಮ ಮಕ್ಕಳ ನಾಟಕವೆಂಬ ಹೆಗ್ಗಳಿಕೆಗೆ

ಮಂಗಳೂರು: ಗಲ್ಫ್ ರಾಷ್ಟ್ರಗಳಲ್ಲಿ ರಾಪಟ ಸಿನಿಮಾದ ಪ್ರೀಮಿಯರ್ ಶೋ

ಕೋಸ್ಟಲ್‍ವುಡ್‍ನ ಬಹುನಿರೀಕ್ಷಿತ ಸಿನಿಮಾ ರಾಪಟ. ಇನ್ನೇನು ಕೆಲವೇ ದಿನಗಳಲ್ಲಿ ಕರಾಳಿಯಾದ್ಯಂತ ರಾಪಟ ಸಿನಿಮಾ ತೆರೆಗೆ ಬರಲಿದೆ. ಈಗಾಗಲೇ ಗಲ್ಫ್ ರಾಷ್ಟ್ರಗಳಲ್ಲಿ ಪ್ರೀಮಿಯರ್ ಶೋ ದ ಟಿಕೆಟ್ ಬಿಡುಗಡೆ ಸಮಾರಂಭ ಅದ್ಧೂರಿಯಾಗಿ ನಡೆದಿದೆ.ಬೊಳ್ಳಿ ಮೂವೀಸ್ ಹಾಗೂ ಅವಿಕ ಪ್ರೊಡಕ್ಷನ್ಸ್ ನಿರ್ಮಾಣದ ತೆಲಿಕೆದ ಬೊಳ್ಳಿ ಡಾ. ದೇವದಾಸ್ ಕಾಪಿಕಾಡ್ ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು, ಅರ್ಜುನ್ ಕಾಪಿಕಾಡ್ ನಿರ್ದೇಶನದ ಚೊಚ್ಚಲ

ಗಲ್ಫ್ ರಾಷ್ಟ್ರಗಳಲ್ಲಿ ಸದ್ದು ಮಾಡಲಿರುವ ರಾಪಟ ತುಳು ಸಿನಿಮಾ

ತುಳುವಿನ ಮತ್ತೊಂದು ಬಹುನಿರೀಕ್ಷಿತ ಸಿನಿಮಾ ರಾಪಟ. ಅರ್ಜುನ್ ಕಾಪಿಕಾಡ್ ನಿರ್ದೇಶನದ ಚೊಚ್ಚಲ ಸಿನಿಮಾವಾಗಿದ್ದು, ಬಹರೈನ್‍ನಲ್ಲಿ ಸೆಫ್ಟರಂಬರ್ 15ರಂದು ಪ್ರೀಮಿಯರ್ ಶೋ ನಡೆಯಲಿದೆ. ಆ ಪ್ರಯುಕ್ತ ಟಿಕೆಟ್ ಬಿಡುಗಡೆ ಸಮಾರಂಭವು ಅದ್ಧೂರಿಯಾಗಿ ನಡೆಯಿತು.ಬೊಳ್ಳಿ ಮೂವೀಸ್ ಹಾಗೂ ಅವಿಕ ಪ್ರೋಡಕ್ಷನ್ ನಿರ್ಮಾಣದ ತೆಲಿಕೆದ ಬೊಳ್ಳಿ ಡಾ. ದೇವದಾಸ್ ಕಾಪಿಕಾಡ್ ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದಿರುವ ಸಿನಿಮಾ ರಾಪಟ. ಈಗಾಗಲೇ ಗಲ್ಫ್ ರಾಷ್ಟ್ರಗಳಲ್ಲಿ

“ರಾಪಟ” ತುಳು ಸಿನಿಮಾ – ಸಪ್ಟೆಂಬರ್ ನಲ್ಲಿ ವಿದೇಶಗಳಲ್ಲಿ ಪ್ರೀಮಿಯರ್ ಶೋ

ಬೊಳ್ಳಿ ಮೂವೀಸ್ ಹಾಗೂ ಅವಿಕ ಪೆÇ್ರಡಕ್ಷನ್ಸ್ ನಿರ್ಮಾಣದ ತೆಲಿಕೆದ ಬೊಳ್ಳಿ ಡಾ. ದೇವದಾಸ್ ಕಾಪಿಕಾಡ್ ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು ಅರ್ಜುನ್ ಕಾಪಿಕಾಡ್ ನಿರ್ದೇಶನದ “ರಾಪಟ” ತುಳು ಸಿನಿಮಾದ ಪ್ರೀಮಿಯರ್ ಶೋ ಸಪ್ಟೆಂಬರ್‍ನಲ್ಲಿ ವಿದೇಶಗಳಲ್ಲಿ ನಡೆಯಲಿದೆ. ಇದೇ ಮೊಟ್ಟ ಮೊದಲ ಬಾರಿಗೆ ತುಳು ಸಿನಿಮಾ ಪ್ರೀಮಿಯರ್ ಶೋದ ಟಿಕೆಟ್ ಬಿಡುಗಡೆ ಕಾರ್ಯಕ್ರಮವು ಮಸ್ಕತ್‍ನಲ್ಲಿ ಆಯೋಜಿಸಲಾಗಿದ್ದು, ಈಗ ಚಿತ್ರದ ಪ್ರೀಮಿಯರ್ ಶೋ

ಮ್ಯಾಶುಪ್ ವಿಡಿಯೋ ಸಾಂಗ್ ಮ್ಯಾಜಿಕಲ್ ಸ್ಟಾರ್ ಯುಟ್ಯೂಬ್ ಚಾನೆಲ್‍ನಲ್ಲಿ ಬಿಡುಗಡೆ

ಇತ್ತೀಚಿನ ದಿನಗಳಲ್ಲಿ ಸಾಕಷ್ಟು ವಿಡಿಯೊ ಸಾಂಗ್‍ಗಳು ಯುಟ್ಯೂಬ್ ಚಾನೆಲ್‍ಗಳಲ್ಲಿ ಬಿಡುಗಡೆಯಾಗುತ್ತಿದ್ದು ಭಾರಿ ಸೆನ್ಸೇಷನ್ ಕ್ರಿಯೇಟ್ ಮಾಡ್ತಾ ಇದೆ… ಇದೀಗ ಇಂತಹದ್ದೆ ಸಾಲಿಗೆ ಮತ್ತೊಂದು ವಿಡಿಯೋ ಸಾಂಗ್ ಸದ್ದು ಮಾಡೋದಕ್ಕೆ ರೆಡಿ ಆಗಿದೆ. ಹೌದು ಮ್ಯಾಜಿಕಲ್ ಸ್ಟಾರ್ ಮಂಗಳೂರು ಅರ್ಪಿಸುವ ರಿಮಿಕ್ಸ್ ವಿಡಿಯೋ ಸಾಂಗ್ ಮ್ಯಾಜಿಕಲ್ ಸ್ಟಾರ್ ಮಂಗಳೂರು ಯೂಟ್ಯೂಬ್ ಚಾನೆಲ್‍ನಲ್ಲಿ ಬಿಡುಗಡೆಗೊಂಡಿದೆ. ಮ್ಯಾಜಿಕಲ್ ಸ್ಟಾರ್ ಮಂಗಳೂರು..ಹಿತು