Home Archive by category ರಾಜಕೀಯ (Page 43)

ಚುನಾವಣಾ ಮುಂಜಾಗ್ರತಾ ಕ್ರಮವಾಗಿ ಕುತ್ತಾರಿನಿಂದ ದೇರಳಕಟ್ಟೆವರೆಗೆ ಪೊಲೀಸ್ ಪಥಸಂಚಲನ

ಉಳ್ಳಾಲ: ಕರ್ನಾಟಕ ವಿಧಾನಸಭಾ ಚುನಾವಣಾ ಮುಂಜಾಗ್ರತಾ ಕ್ರಮವಾಗಿ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕುತ್ತಾರು ಶ್ರೀ ರಾಜರಾಜೇಶ್ವರಿ ಸಿದ್ಧಿವಿನಾಯಕ ದೇವಸ್ಥಾನದಿಂದ ದೇರಳಕಟ್ಟೆಯ ಕೆ.ಎಸ್ ಹೆಗ್ಡೆ ಆಸ್ಪತ್ರೆವರೆಗೆ ಸಿಆರ್ ಪಿಎಫ್ , ಉಳ್ಳಾಲ ಪೊಲೀಸ್ ಠಾಣೆ, ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಹಾಗೂ ಕೆಎಸ್ ಆರ್ ಪಿ ಅಸೈಗೋಳಿ ನೇತೃತ್ವದಲ್ಲಿ ಪಥಸಂಚಲನ ನಡೆಯಿತು.

ಕಾಂಗ್ರೆಸ್ : ಉಡುಪಿಯಲ್ಲಿ ಪ್ರಸಾದ್ ರಾಜ್ ಕಾಂಚಾನ್‌‌ಗೆ ಟಿಕೆಟ್

ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಹಳೆ ಮೊಳಗಿಸಿರುವ ಕಾಂಗ್ರೆಸ್​, ಪಕ್ಷದ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಇಂದು ಬಿಡುಗಡೆ ಮಾಡಿದೆ .ಮೊದಲ ಪಟ್ಟಿಯಲ್ಲಿ 124 ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಿದ್ದ ಕಾಂಗ್ರೆಸ್ ಹೈಕಮಾಂಡ್, ಇಂದು 42 ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.ಉಡುಪಿ ವಿಧಾನ ಸಭೆ ಕ್ಷೇತ್ರದಲ್ಲಿ ಪ್ರಸಾದ್ ರಾಜ್ ಕಾಂಚಾನ್ ಅವರಿಗೆ ಟಿಕೆಟ್ ಘೋಷಣೆಯಾಗಿದೆ. ನಿರೀಕ್ಷೆಯಂತೆ ಮೊಗವೀರರಿಗೆ ಕಾಂಗ್ರೆಸ್ ಮಣೆ ಹಾಕಿದೆ.ಪ್ರಸಾದ್ ರಾಜ್ ಈಗಾಗಲೇ ಪಕ್ಷದ ಪ್ರಚಾರ

ಸುಳ್ಯ : ಹಿರಿಯ ಕಾರ್ಯಕರ್ತರ ಭೇಟಿ ಮಾಡಿದ ಜಿ.ಕೃಷ್ಣಪ್ಪ

ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಅವರು ಕ್ಷೇತ್ರದಾದ್ಯಂತ ಮಿಂಚಿನ ಸಂಚಲನ ಮೂಡಿಸಿದ್ದಾರೆ.ಕೃಷ್ಣಪ್ಪ ಅವರು ಸುಳ್ಯದ ವಿವಿಧ ಬೂತ್ , ಬ್ಲಾಕ್ ಗಳ ಹಿರಿಯ ನಾಯಕರನ್ನು ಹಾಗೂ ಕಾರ್ಯಕರ್ತರನ್ನು ಭೇಟಿ ಮಾಡಿದರು.ಕುಟ್ರಾಪ್ಪಾಡಿಯಲ್ಲಿ ಗ್ರಾಮದ ಹಿರಿಯ ಕಾಂಗ್ರೆಸ್ ಮುಖಂಡ ಸುಬ್ರಾಯ ಹೆಬ್ಬಾರ್ ಅವರನ್ನು ಭೇಟಿ ಮಾಡಿದರು. ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಸಂಜೀವ ಪೂಜಾರಿ ಅವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಆನಂದ ಪೂಜಾರಿ

ಮತದಾನ ಜಾಗೃತಿಯ ವ್ಯಂಗ್ಯ ಚಿತ್ರಗಳ ಪ್ರದರ್ಶನ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ದ.ಕ. ಜಿಲ್ಲೆಯಲ್ಲಿ ಪ್ರತಿಯೊಬ್ಬ ಮತದಾರರೂ ಮತ ಚಲಾಯಿಸುವ ಮೂಲಕ ಶೇ.100ರಷ್ಟು ಮತದಾನಕ್ಕೆ ನೆರವಾಗುವಂತೆ ದ.ಕ. ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಕರೆ ನೀಡಿದ್ದಾರೆ. ನಗರದ ಸಂತ ಅಲೋಶಿಯಸ್ ಕಾಲೇಜಿನ ಎರಿಕ್ ಮಥಾಯಸ್ ಸಭಾಂಗಣದಲ್ಲಿ ಸೋಮವಾರ ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಸಂತ ಅಲೋಶಿಯಸ್ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಸಹಯೋಗದಲ್ಲಿ ಆಯೋಜಿಸಲಾದ ಮತದಾನ ಜಾಗೃತಿಯ ವ್ಯಂಗ್ಯ ಚಿತ್ರಗಳ ಪ್ರದರ್ಶನವನ್ನು ಉದ್ಘಾಟಿಸಿ ಅವರು

ಪುತ್ತೂರು ಮೆಡಿಕಲ್ ಕಾಲೇಜು ವಿಚಾರ : ಮಂಜೂರು ಜಾಗದಲ್ಲಿ `ಸೀಫುಡ್ ಕಾರ್ಖಾನೆ’ ಮುಂದಾದವರು ಯಾರು : ಎಂ.ಬಿ. ವಿಶ್ವನಾಥ ರೈ ಪ್ರಶ್ನೆ

ಪುತ್ತೂರು: ಪುತ್ತೂರಿನಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಮೊದಲು ಕನಸು ಕಂಡವರೇ ನಾವು ಎಂದು ಬಿಜೆಪಿ ಜಿಲ್ಲಾ ಓಬಿಸಿ ಮೋರ್ಚಾ ಅಧ್ಯಕ್ಷ ಆರ್.ಸಿ. ನಾರಾಯಣ್ ಅವರು ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ ಹೇಳಿಕೊಂಡಿದ್ದು, ಕಾಲೇಜು ಹೋರಾಟ ಅಭಿಯಾನ ಕಾಂಗ್ರೆಸ್ನ ಟೂಲ್ ಕಿಟ್ ಎಂದು ಆಪಾದಿಸಿದ್ದಾರೆ. ಒಂದು ವೇಳೆ ಬಿಜೆಪಿ ಮೆಡಿಕಲ್ ಕಾಲೇಜಿಗೆ ಮೊದಲು ಕನಸು ಕಂಡಿದ್ದು ನಿಜವೇ ಆಗಿದ್ದರೆ ಪುತ್ತೂರು ಶಾಸಕರು ಮೆಡಿಕಲ್ ಕಾಲೇಜಿಗೆ ಮೀಸಲಿಟ್ಟ ಜಾಗದಲ್ಲಿ `ಸೀಫುಡ್

ಸುರತ್ಕಲ್‍ನಲ್ಲಿ ವಿದ್ಯುತ್ ಚಿತಾಗಾರ ಲೋಕಾರ್ಪಣೆ

ಸುರತ್ಕಲ್: ಮಂಗಳೂರು ಮಹಾನಗರ ಪಾಲಿಕೆಯ 2020-21ನೇ ಸಾಲಿನ 15ನೇ ಹಣಕಾಸು ಯೋಜನೆಯಡಿಯಲ್ಲಿ ಮತ್ತು ಎನ್.ಎಮ್.ಪಿ.ಟಿ., ಸಿ.ಎಸ್.ಆರ್. ನಿಧಿಯಡಿ 2.5 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ವಿದ್ಯುತ್ ಚಿತಾಗಾರದ ಉದ್ಘಾಟನಾ ಸಮಾರಂಭ ನಡೆಯಿತು. ಶಾಸಕ ಡಾ. ವೈ ಭರತ್ ಶೆಟ್ಟಿ ಅವರು ವಿದ್ಯುತ್ ಚಿತಾಗಾರವನ್ನು ಉದ್ಘಾಟಿಸಿದರು. ಬಳಿಕ ಮಾತಾಡಿದ ಅವರು, “”ಮಂಗಳೂರಿನಲ್ಲಿ ವಿದ್ಯುತ್ ಚಿತಾಗಾರವಿದ್ದು ಅಲ್ಲಿ ಹೆಣಗಳನ್ನು ಸುಡಲು ಕಾಯಬೇಕಾಗುತ್ತದೆ.

ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ : ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು, ಈ ಹಿನ್ನೆಲೆಯಲ್ಲಿ ಚುನಾವಣೆಗೆ ಸಿದ್ಧತೆ ನಡೆಸಿರುವ ಕಾಂಗ್ರೆಸ್ 124 ಮಂದಿ ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿಯನ್ನು ಪ್ರಕಟಿಸಿದೆ.ಪ್ರಮುಖವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ವರುಣಾ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ. ನಂಜನಗೂಡು ಕ್ಷೇತ್ರಕ್ಕೆ ಧ್ರುವನಾರಾಯಣ್ ಅವರ ಪುತ್ರ ದರ್ಶನ್ ಅವರಿಗೆ ಟಿಕೆಟ್ ನೀಡಲಾಗಿದೆ. ಕನಕಪುರ ಕ್ಷೇತ್ರದಿಂದ ಡಿಕೆಶಿ ಅವರು ಸ್ಪರ್ಧಿಸಲಿ. ಮೊದಲ ಹಂತದ

ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿ ಲೋಕಸಭೆ ಸಚಿವಾಲಯ ಅಧಿಸೂಚನೆ

ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ವಯನಾಡು ಸಂಸದ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿ ಲೋಕಸಭೆ ಸಚಿವಾಲಯ ಶುಕ್ರವಾರ ಅಧಿಸೂಚನೆ ಹೊರಡಿಸಿದೆ.ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರಿಗೆ ಗುಜರಾತ್‍ನ ನ್ಯಾಯಾಲಯವು 2019ರಲ್ಲಿ ದಾಖಲಾದ ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿ ಗುರುವಾರ ತೀರ್ಪು ನೀಡಿದೆ. 2019ರ ಲೋಕಸಭೆ ಚುನಾವಣಾ ಪ್ರಚಾರ ಸಂದರ್ಭದಲ್ಲಿ ರಾಹುಲ್

ನರಿಂಗಾನ ಗ್ರಾಮದ ನೆತ್ತಿಲಕೋಡಿ ರಸ್ತೆ ಶಿಲನ್ಯಾಸ

ಉಳ್ಳಾಲ: ವೈದ್ಯಕೀಯ ಕಾಲೇಜು ಜೊತೆಗೆ ಶಿಕ್ಷಣ ಸಂಸ್ಥೆಗಳ ಸ್ಥಾಪನೆಯೊಂದಿಗೆ ಕೇರಳ ಗಡಿಭಾಗದ ನರಿಂಗಾನ ಗ್ರಾಮ ಸಾಕಷ್ಟು ಅಭಿವೃದ್ಧಿಯನ್ನು ಶಾಸಕರ ಮುತುವರ್ಜಿಯೊಂದಿಗೆ ನಡೆಯುತ್ತಿದ್ದು, ಶೀಘ್ರವೇ ತುಳು ಗ್ರಾಮ ಸ್ಥಾಪನೆಯೊಂದಿಗೆ ಇತಿಹಾಸದ ಪುಟಗಳಲ್ಲಿ ಗ್ರಾಮ ಅಚ್ಚಳಿಯದೆ ನೆಲೆ ನಿಲ್ಲಲಿದೆ ಎಂದು ಜಿ.ಪಂ ಮಾಜಿ ಸದಸ್ಯೆ ಮಮತಾ ಡಿ.ಯಸ್ ಗಟ್ಟಿ ಹೇಳಿದ್ದಾರೆ. ಅವರು ನರಿಂಗಾನ ಗ್ರಾಮದ ನೆತ್ತಿಲಕೋಡಿ ರಸ್ತೆ ಕಾಂಕ್ರೀಟಿಕರಣದ ಶಿಲನ್ಯಾಸ ನೆರವೇರಿಸಿ ಮಾತನಾಡಿದರು.ಶಾಸಕರ

ಶಕುಂತಳಾ ಶೆಟ್ಟಿ ಅವರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಿ : ಪಕ್ಷದ ವರಿಷ್ಠರಿಗೆ ಮಹಿಳಾ ಕಾಂಗ್ರೆಸ್ ಸಮಿತಿ ಆಗ್ರಹ

ಪುತ್ತೂರು ಕಾಂಗ್ರೇಸ್ ನಲ್ಲಿ ಅಭ್ಯರ್ಥಿಯಾಗಿ ಮಾಜಿ ಶಾಸಕಿ ಶಕುಂತಳಾ ಶೆಟ್ಟಿಯವರಿಗೆ ಆದ್ಯತೆ ನೀಡಬೇಕು. ಅದರಲ್ಲಿ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಅವರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಿ ಅವರಿಗೆ ಮತ್ತೊಮ್ಮೆ ಅವಕಾಶ ನೀಡಬೇಕು ಎಂದು ಪುತ್ತೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿ ಆಗ್ರಹಿಸಿದೆ. ಪುತ್ತೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷೆ ಶಾರದಾ ಅರಸ್ ಅವರು ಮಂಗಳವಾರ ಪುತ್ತೂರು ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಠಿಯಲ್ಲಿ