Home Archive by category ರಾಜಕೀಯ (Page 45)

ಕಾಂಗ್ರೆಸ್ ನಾಯಕಿ ದಿವ್ಯಪ್ರಭಾ ವಿರುದ್ಧ ಕಿಡ್ನ್ಯಾಪ್ ಪ್ರಕರಣ ದಾಖಲು

ತನ್ನ ಅಳಿಯನನ್ನೇ ಅಪಹರಣ ಮಾಡಿ ಆಸ್ಪತ್ರೆಗೆ ದಾಖಲಿಸಿ ಮಾನಸಿಕ ಅಸ್ವಸ್ಥ ಎಂದು ಬಿಂಬಿಸಿದ ಆರೋಪದ ಮೇಲೆ ಪುತ್ತೂರು ಕಾಂಗ್ರೆಸ್ ನಾಯಕಿ ದಿವ್ಯಪ್ರಭಾ ಹಾಗೂ ಅವರ ಕುಟುಂಬದ ಐವರ ವಿರುದ್ಧ ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ದಿವ್ಯಪ್ರಭಾ ಅವರ ವಿರುದ್ದ ಅವರ ಅಳಿಯ ನವೀನ್ ಗೌಡ ಅವರು ದೂರು ನೀಡಿದ್ದು, ಬೆಂಗಳೂರಿನ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ

ರಾಜ್ಯದ ಅಭಿವೃದ್ಧಿಗಳಿಗೆ ಕರ್ನಾಟಕ ಜನತಾ ಪಕ್ಷ ಬೆಂಬಲಿಸಿ : ಪಕ್ಷದ ಸಂಸ್ಥಾಪಕ ಪದ್ಮನಾಭ ಪ್ರಸನ್ನ ಕುಮಾರ್

ರಾಜ್ಯದ ಜನತೆಯು ರಾಜ್ಯದ ಅಭಿವೃದ್ಧಿಗಳಿಗೆ ಕರ್ನಾಟಕ ಜನತಾ ಪಕ್ಷವನ್ನು ಬೆಂಬಲಿಸಿ ಸುವರ್ಣ ನಾಡನ್ನು ಕಟ್ಟಲು ಕೈ ಜೋಡಿಸಬೇಕೆಂದು ಪಕ್ಷದ ಸಂಸ್ಥಾಪಕ ಅಧ್ಯಕ್ಷರಾದ ಪದ್ಮನಾಭ ಪ್ರಸನ್ನ ಕುಮಾರ್ ಹೇಳಿದರು. ಅವರು ನಗರದ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು.ರಾಜ್ಯದಲ್ಲಿ ಚುನಾವಣಾ ಕಾವು ರಂಗೇರುತ್ತಿದೆ. ರಾಜ್ಯದ ಜನ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ದುರಾಡಳಿತದಿಂದ ಬೇಸತ್ತು ಹೋಗಿದ್ದಾರೆ. ರಾಜ್ಯದ ಸರ್ವತೋಮುಖ

ಹಿಂದೂ ಸಮಾಜಕ್ಕೆ ಛತ್ರಪತಿ ಶಿವಾಜಿ ಮಹಾರಾಜರ ಕೊಡುಗೆ ಅತ್ಯಮೂಲ್ಯ: ಶಾಸಕ ವೇದವ್ಯಾಸ ಕಾಮತ್

ಭಾರತ ದೇಶ ಹಾಗೂ ಹಿಂದೂ ಸಮಾಜಕ್ಕೆ ಛತ್ರಪತಿ ಶಿವಾಜಿ ಮಹಾರಾಜರು ನೀಡಿದ ಕೊಡುಗೆ ಅತ್ಯಮೂಲ್ಯವಾದದ್ದು ಎಂದು ಶಾಸಕರಾದ ಡಿ. ವೇದವ್ಯಾಸ ಕಾಮತ್ ಅವರು ಬಣ್ಣಿಸಿದರು.ಅವರು ಫೆ. 19ರ ಭಾನುವಾರ ನಗರದ ಕುದ್ಮಲ್ ರಂಗರಾವ್ ಪುರಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ ದಕ್ಷಿಣ ಕನ್ನಡ ಹಾಗೂ ಜಿಲ್ಲೆಯ ಆರ್ಯ ಯಾನೆ ಮರಾಠ ಸಮಾಜ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಛತ್ರಪತಿ ಶಿವಾಜಿಯವರ 396ನೇ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾರನ್ನು ಆತ್ಮೀಯವಾಗಿ ಸ್ವಾಗತಿಸಿದ ನಳಿನ್ ಕುಮಾರ್ ಕಟೀಲು

ಉಡುಪಿ ಜಿಲ್ಲಾ ಪ್ರವಾಸದ ನಿಮಿತ್ತ ಮಂಗಳೂರು ಏರ್ ಪೋರ್ಟ್ ಗೆ ಆಗಮಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಇವರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಎಂ. , ಜಿಲ್ಲಾ ಉಸ್ತುವಾರಿ ಸಚಿವರಾದ ಸುನಿಲ್ ಕುಮಾರ್, ಶಾಸಕ ರಾಜೇಶ್ ನಾಯ್ಕ್, ಭರತ್ ಶೆಟ್ಟಿ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ದ ಭೇಟಿ

ಉಡುಪಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ದ ಇಂದು ಬೆಳಗ್ಗೆ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಮಠಕ್ಕೆ ಆಗಮಿಸಿದ ನಡ್ದಾ ಅವರನ್ನು ಮಠದ ದಿವಾನ ವರದರಾಜ ಆಚಾರ್ಯ ಮಾಲಾರ್ಪಣೆಗೈದು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವ ಸುನಿಲ್ ಕುಮಾರ್ ಮುಖಂಡರಾದ ಪ್ರದೀಪ ರಾವ್, ಸುಪ್ರಸಾದ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ಬಳಿಕ ಜೆಪಿ ನಡ್ದಾ

ಉಡುಪಿಗೆ ಆಗಮಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಇಂದು ಬೆಳಗ್ಗೆ ಉಡುಪಿಗೆ ಆಗಮಿಸಿದ್ದು, ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಮಠಕ್ಕೆ ಆಗಮಿಸಿದ ನಡ್ದಾರನ್ನು ಮಠದ ದಿವಾನ ವರದರಾಜ ಆಚಾರ್ಯ ಮಾಲಾರ್ಪಣೆಗೈದು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವ ಸುನಿಲ್ ಕುಮಾರ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಉಡುಪಿ ಶಾಸಕ ರಘುಪತಿ ಭಟ್, ಮುಖಂಡರಾದ

ಸರ್ಕಾರ ಮಹತ್ವವಿಲ್ಲದ ಬಜೆಟ್ ಮಂಡಿಸಿದೆ : ಯು.ಟಿ. ಖಾದರ್

ರಾಜ್ಯದ ಸಂಸದರ ಮೌನ, ಸರಕಾರದ ಅಸಹಾಯಕತೆ, ಕೇಂದ್ರ ಸರಕಾರದ ಮಲತಾಯಿ ಧೋರಣೆಯಿಂದಾಗಿ ರಾಜ್ಯದ ಜನತೆ ಸಾಲದ ಹೊರೆಯಲ್ಲಿ ಹೊತ್ತುಕೊಳ್ಳುವಂತಾಗಿದೆ. ರಾಜ್ಯ ಸರಕಾರ ಮಂಡಿಸಿದ್ದು ಸುಲಿಗೆ, ಸಾಲದ ಬಜೆಟ್ ಆಗಿದೆ ರಾಜ್ಯ ವಿಧಾನಸಭೆಯ ವಿಪಕ್ಷ ಉಪನಾಯಕ ಯು.ಟಿ.ಖಾದರ್ ಅಭಿಪ್ರಾಯಪಟ್ಟಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊನೆಯ ಉಸಿರೆಳೆಯುತ್ತಿರುವ ಸರಕಾರ ಮಹತ್ವವಿಲ್ಲದ ಬಜೆಟ್ ಮಂಡಿಸಿದ್ದು, ಜನತೆಯನ್ನು ಸಾಲದಲ್ಲಿ ಮುಳುಗಿಸಿದೆ

ಕಾಂಗ್ರೆಸ್ ಕಾರ್ಯಕರ್ತರಲ್ಲದ ಅಭ್ಯರ್ಥಿಗೆ ಟಿಕೆಟ್ ನೀಡುವ ಪ್ರಶ್ನೆಯೇ ಇಲ್ಲ : ಕಾರ್ಕಳದಲ್ಲಿ ಕಾಂಗ್ರೆಸ್ ಮುಖಂಡರ ಪುನರುಚ್ಚಾರ

ಕಾರ್ಕಳ: ಕಾರ್ಕಳದಲ್ಲಿ ಕಾಂಗ್ರೆಸ್ ಕಾರ್ಯಕರ್ತರಲ್ಲದ ಐದನೇ ಅಭ್ಯರ್ಥಿಗೆ ಟಿಕೆಟ್ ನೀಡುವ ಪ್ರಶ್ನೆಯೇ ಇಲ್ಲ. ನಾವೆಲ್ಲಾ ಒಗ್ಗಟ್ಟಾಗಿ ಚುನಾವಣೆ ಎದುರಿಸಿ ಜಯಶಾಲಿಯಾಗಲಿದ್ದೇವೆ ಎಂದು ಕಾರ್ಕಳ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾದ ನೀರೆ ಕೃಷ್ಣ ಶೆಟ್ಟಿ, ಮಂಜುನಾಥ್ ಪೂಜಾರಿ ಮುದ್ರಾಡಿ, ಡಿ ಆರ್ ರಾಜು, ಸುರೇಂದ್ರ ಶೆಟ್ಟಿ ಪುನರುಚ್ಚರಿಸಿದ್ದಾರೆ. ಕಾರ್ಕಳ ನಗರದ ಖಾಸಗಿ ಹೋಟೆಲ್‍ನಲ್ಲಿ ನಡೆದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಹೆಬ್ರಿ ಬ್ಲಾಕ್

ಅಶ್ವತ್ಥ್ ನಾರಾಯಣ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಇಲ್ಲವಾದಲ್ಲಿ ಕಾಂಗ್ರೆಸ್ ಬೀದಿಗಿಳಿದು ಹೋರಾಟ ಮಾಡಲಿದೆ : ಐವನ್ ಡಿಸೋಜ

ಮಾಜಿ ಸಿಎಂ ಮತ್ತು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಟಿಪ್ಪುವಿನಂತೆ ಹೊಡೆದು ಹಾಕಬೇಕು ಎಂದು ಪ್ರಚೋದನಕಾರಿ ಹೇಳಿಕೆ ನೀಡಿರುವ ಸಚಿವ ಅಶ್ವತ್ಥನಾರಾಯಣ ಅವರನ್ನು ಸಂಪುಟದಿಂದ ಕಿತ್ತುಹಾಕಿ, ಸೂಕ್ತ ಕ್ರಮ ಕೈಗೊಳ್ಳದೇ ಇದ್ದಲ್ಲಿ ಕಾಂಗ್ರೆಸ್ ಬೀದಿಗೆ ಇಳಿದು ಹೋರಾಟ ಮಾಡಲಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜ ಹೇಳಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯದ ಉನ್ನತ ಶಿಕ್ಷಣ ಸಚಿವರಾಗಿ ಸಾಮಾಜಿಕ ಮೌಲ್ಯವನ್ನು ಎತ್ತಿ ಹಿಡಿದು

ರಾಜ್ಯ ಬಜೆಟ್ ಸರ್ವತೋಮುಖ ಅಭಿವೃದ್ಧಿಗೆ ಪೂರಕ ಬಜೆಟ್ : ನಳಿನ್ ಕುಮಾರ್ ಕಟೀಲ್

ಸಿಎಂ ಬಸವರಾಜ್ ಬೊಮ್ಮಾಯಿ ಅವರು ಮಂಡಿಸಿದ ಬಜೆಟ್ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾದ ಬಜೆಟ್ ಆಗಿದೆ. ಸರ್ವವ್ಯಾಪಿ, ಸರ್ವಸ್ಪರ್ಶಿ ಬಜೆಟ್ ಇದಾಗಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು. ಅವರು ರಾಜ್ಯ ಬಜೆಟ್ ಬಗ್ಗೆ ಮಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದರು. ಆರೋಗ್ಯದಲ್ಲಿ ಪರಿವರ್ತನೆ ತರೋ ಕೆಲಸ ಸರ್ಕಾರ ಮಾಡಿದೆ. ಕೃಷಿಕರು, ಮಹಿಳೆಯರು, ಮತ್ತು ಯುವಕರ ಪರವಾದ ಬಜೆಟ್ಈಗ ಮೂರು ಲಕ್ಷ ಕೋಟಿಗೂ ಅಧಿಕ ಬಜೆಟ್ ಮಂಡನೆಯಾಗಿದೆ. ಇದು ಕೃಷಿಕನ ಕನಸಿನ ಬಜೆಟ್,