Home Archive by category ರಾಜಕೀಯ (Page 49)

ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ವಿಶ್ವಾಸ್ ಕುಮಾರ್ ದಾಸ್ ಅವರ ಪದಗ್ರಹಣ ಸಮಾರಂಭ

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗ ನೂತನ ಅಧ್ಯಕ್ಷರಾದ ವಿಶ್ವಾಸ್ ಕುಮಾರ್ ದಾಸ್ ರವರ ಪದಗ್ರಹಣ ಹಾಗೂ ವಿಭಾಗದ ಜಿಲ್ಲಾ ಪದಾಧಿಕಾರಿಗಳ ಹಾಗೂ ಬ್ಲಾಕ್ ಅಧ್ಯಕ್ಷರ ಆದೇಶ ಪತ್ರ ವಿತರಣಾ ಸಮಾರಂಭವೂ ನಗರದ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯ ಹಾಗೂ ಎಐಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಬಿ.ಕೆ.

ಮೈಸೂರಿನಲ್ಲಿ ಕಾಂಗ್ರೆಸ್ ಮುಖಂಡರ ಜತೆಗಿನ ಪಕ್ಷ ಸಂಘಟನೆ, ಬಲವರ್ಧನೆ ಕುರಿತ ಸಮಾಲೋಚನೆ

ಮೈಸೂರಿನಲ್ಲಿ ಶನಿವಾರ ನಡೆದ ಮೈಸೂರು ವಿಭಾಗೀಯ ಮಟ್ಟದ ನಾನಾ ಜಿಲ್ಲೆಗಳ ಕಾಂಗ್ರೆಸ್ ಮುಖಂಡರ ಜತೆಗಿನ ಪಕ್ಷ ಸಂಘಟನೆ, ಬಲವರ್ಧನೆ ಕುರಿತ ಸಮಾಲೋಚನಾ ಸಭೆ ನಡೆಯಿತು. ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ, ಕರ್ನಾಟಕದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ್, ಎಐಸಿಸಿ ವೀಕ್ಷಕ ಮಧು ಯಾಕ್ಷಿಗೌಡ, ಕೇಂದ್ರದ ಮಾಜಿ

ಆಗಸ್ಟ್ 1ರಂದು ವಿಶ್ವಾಸ್ ಕುಮಾರ್ ದಾಸ್ ಅವರ ಪದಗ್ರಹಣ ಸಮಾರಂಭ

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ನೂತನ ಅಧ್ಯಕ್ಷರಾದ ವಿಶ್ವಾಸ್ ಕುಮಾರ್ ದಾಸ್ ಅವರ ಪದಗ್ರಹಣ ಹಾಗೂ ವಿಭಾಗದ ಜಿಲ್ಲಾ ಪದಾಧಿಕಾರಿಗಳ ಹಾಗೂ ಬ್ಲಾಕ್ ಅಧ್ಯಕ್ಷರುಗಳ ಆದೇಶ ಪತ್ರ ವಿತರಣಾ ಸಮಾರಂಭವೂ ಆಗಸ್ಟ್ 1ರಂದು ಮಂಗಳೂರಲ್ಲಿ ನಡೆಯಲಿದೆ. ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿಯಲ್ಲಿ ಬೆಳಿಗ್ಗೆ 10.30 ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಉದ್ಘಾಟನೆಯನ್ನು ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯರಾದ ಬಿ.ಕೆ.

ಮಂತ್ರಿಮಂಡಲದಲ್ಲಿ ಹಾಲಾಡಿ ಶ್ರೀನಿವಾಸ ಶೆಟ್ಟಿಯವರಿಗೆ ಸ್ಥಾನ ನೀಡಲು ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮನವಿ

ಮಂಗಳೂರು : ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರಕಾರದಲ್ಲಿ ಹಿರಿಯ ರಾಜಕಾರಣಿ, ಕುಂದಾಪುರ ಕ್ಷೇತ್ರದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಿ ಕೊಳ್ಳುವಂತೆ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮನವಿ ಮಾಡಿದೆ. ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅವರು ಈ ಕುರಿತು ರಾಜ್ಯ ಸರಕಾರಕ್ಕೆ ಮನವಿ ಮಾಡಿದ್ದು, ಕರ್ನಾಟಕ ರಾಜ್ಯ ಕಂಡ ಬಲು ಅಪರೂಪದ ರಾಜಕೀಯ ರತ್ನ ಹಾಲಾಡಿ ಶ್ರೀನಿವಾಸ ಶೆಟ್ಟರು. ಶ್ವೇತ ಚಾರಿತ್ರ್ಯದ ಮಾನ್ಯರ ರಾಜಕೀಯ

ದಕ್ಷಿಣ ಭಾರತ ಪ್ರವಾಸೋದ್ಯಮ ಉತ್ಸವ : ಕೇಂದ್ರ ಸಚಿವರೊಂದಿಗೆ ಸಮಾಲೋಚನಾ ಸಭೆ

ದಕ್ಷಿಣ ಭಾರತ ಪ್ರವಾಸೋದ್ಯಮ ಉತ್ಸವವನ್ನು ಆಯೋಜಿಸುವ ನಿಟ್ಟಿನಲ್ಲಿ ಪೂರ್ವಭಾವಿ ಸಭೆಯು ಕೇಂದ್ರ ಪ್ರವಾಸೋದ್ಯಮ ಸಚಿವ ಕಿಶನ್ ರೆಡ್ಡಿ ಅವರ ಉಪಸ್ಥಿತಿಯಲ್ಲಿ ಬೆಂಗಳೂರಿನಲ್ಲಿ ನಡೆಯಿತು. ಈ ಉತ್ಸವವು ದಕ್ಷಿಣ ಭಾರತದಲ್ಲಿ ಪ್ರವಾಸೋದ್ಯಮ ಚಟುವಟಿಕೆಯನ್ನು ಉತ್ತೇಜಿಸಲು ಸಹಕಾರಿಯಾಗಲಿದೆ ಎಂದು ಇದೇ ಸಂದರ್ಭದಲ್ಲಿ ಸಚಿವರಾದ ಕಿಶನ್ ರೆಡ್ಡಿ ಅವರು ಅಭಿಪ್ರಾಯ ಪಟ್ಟರು. ಇದೇ ಸಂದರ್ಭದಲ್ಲಿ ಪ್ರವಾಸೋದ್ಯಮ ಇಲಾಖೆಯ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ರಾಜ್ಯ ಪ್ರವಾಸೋದ್ಯಮ

ಯುವ ಸಮೂಹಕ್ಕೆ ಉದ್ಯೋಗ ಒದಗಿಸಿ: ನೂತನ ಮುಖ್ಯಮಂತ್ರಿಗೆ ರಾಜ್ಯ ಯುವ ಕಾಂಗ್ರೆಸ್ ಕಾರ್ಯಕಾರಣಿ ಆಗ್ರಹ

ಕೋವಿಡ್ ಸಮಸ್ಯೆ, ಆರ್ಥಿಕ ತೊಂದರೆಗಳಿಂದ ಭಾರೀ ಸಂಕಷ್ಟದಲ್ಲಿರುವ ರಾಜ್ಯದ ಯುವ ಸಮೂಹಕ್ಕೆ ಉದ್ಯೋಗ ಒದಗಿಸಲು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದ್ಯತೆ ನೀಡಬೇಕು ಎಂದು ಪ್ರದೇಶ ಯುವ ಕಾಂಗ್ರೆಸ್ ಕಾರ್ಯಕಾರಣಿ ಆಗ್ರಹಿಸಿದೆ. ಕೆಪಿವೈಸಿಸಿ ಅಧ್ಯಕ್ಷ ಎಂ.ಎಸ್ ರಕ್ಷಾ ರಾಮಯ್ಯ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಪ್ರದೇಶ ಯುವ ಕಾಂಗ್ರೆಸ್ ಕಾರ್ಯಕಾರಣಿ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ರಾಷ್ಟ್ರೀಯ ಯುವ ಕಾಂಗ್ರೆಸ್

ಬಿಎಸ್‌ವೈ ಅವರನ್ನ ಹಾಡಿಹೊಗಳಿದ ಪ್ರಧಾನಿ ನರೇಂದ್ರ ಮೋದಿ

ನೂತನ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಟ್ವೀಟ್ ಮೂಲಕ ನೂತನ ಸಿಎಂಗೆ ಅಭಿನಂದನೆ ಸಲ್ಲಿಸಿದ್ರು. ರಾಜ್ಯದಲ್ಲಿ ನಿರೀಕ್ಷೆಗೂ ಮೀರಿ ಕೆಲಸ ಮಾಡ್ತಾರೆ ಎನ್ನುವ ವಿಶ್ವಾಸವಿದೆ ಎಂದು ಮೋದಿ ಟ್ವೀಟ್ ಮೂಲಕ ಹೇಳಿಕೊಂಡಿದ್ದಾರೆ. ಇದೇ ವೇಳೆ ಮಾಜಿ ಸಿಎಂ ಬಿಎಸ್‌ವೈ ಅವರನ್ನು ಟ್ವೀಟ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಹಾಡಿ ಹೊಗಳಿದ್ದಾರೆ. ಬಿಎಸ್‌ವೈಗೆ ಪಕ್ಷ ಮೇಲಿನ ಬದ್ಧತೆ ಅವರ್ಣನೀಯವಾಗಿದೆ. ಸಾಮಾಜಿಕ ನ್ಯಾಯ,

ಸಿಎಂ ಆಗಿ ಬಸವರಾಜ ಬೊಮ್ಮಾಯಿ ಪ್ರಮಾಣವಚನ ಸ್ವೀಕಾರ: ಪ್ರಮಾಣವಚನ ಬೋಧಿಸಿದ ರಾಜ್ಯಪಾಲ ಟಿ.ಸಿ.ಗೆಹ್ಲೋಟ್

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಬಸವರಜ ಬೊಮ್ಮಾಯಿ ಅವರಿಗೆ ಪ್ರಮಾಣ ಬೋಧಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅಧಿಕಾರ ಮತ್ತು ಗೌಪ್ಯತೆ ಪ್ರಮಾಣ ವಚನ ಬೋಧಿಸಿದರು. ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವರು ಕಾರ್ಯಕ್ರಮ

ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ನಾಳೆ ಮಧ್ಯಾಹ್ನ ಪ್ರಮಾಣ ವಚನ

ರಾಜ್ಯದ ನೂತನ ಸಿಎಂ ಆಗಿ ಬಸವರಾಜ್ ಬೊಮ್ಮಾಯಿ ಅವರನ್ನು ನೇಮಕ ಮಾಡಲಾಗಿದೆ. ಶಾಸಕಾಂಗದ ಪಕ್ಷದ ಸಭೆಯ ಬಳಿಕ ಅಧಿಕೃತವಾಗಿ ಘೋಷಣೆ ಮಾಡಲಾಯಿತು. ಮಂಗಳವಾರ ರಾತ್ರಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಬೊಮ್ಮಾಯಿ ಅವರನ್ನು ಶಾಸಕಾಂಗ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ. ಬುಧವಾರ ಮಧ್ಯಾಹ್ನ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬಿಜೆಪಿ ಹೈಕಮಾಂಡ್ ವೀಕ್ಷಕರಾಗಿ ನೇಮಿಸಿದ್ದ ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್, ಕಿಶನ್

ಆಸ್ಕರ್ ಫೆರ್ನಾಂಡಿಸ್ ರಿಗೆ ಯಶಸ್ವಿ ಶಸ್ತ್ರ ಚಿಕಿತ್ಸೆ

ಮಂಗಳೂರು: ನಗರದ ಯೆನೆಪೊಯ ಆಸ್ಪತ್ರೆಯಲ್ಲಿ ಕಳೆದ ಒಂಬತ್ತು ದಿನಗಳಿಂದ ಪ್ರಜ್ಞಾಹೀನ ಸ್ಥಿತಿಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದ ಕಾಂಗ್ರೆಸ್‌ನ ಹಿರಿಯ ಮುಖಂಡ, ರಾಜ್ಯ ಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ (80) ಅವರಿಗೆ ಮಂಗಳವಾರ ನಸುಕಿನ ಜಾವ ಯಶಸ್ವಿ ಶಸ್ತ್ರ ಚಿಕಿತ್ಸೆ ನಡೆಸಲಾಯಿತು. ತಡರಾತ್ರಿ 12ರಿಂದ ಆರಂಭವಾದ ಶಸ್ತ್ರ ಚಿಕಿತ್ಸೆಯು ನಸುಕಿನ ಜಾವ 5.30 ರವರೆಗೂ ನಡೆಯಿತು. ಯೆನೆಪೊಯ ಆಸ್ಪತ್ರೆಯ ನ್ಯೂರಾಲಜಿಸ್ಟ್ ಡಾ.ದಿವಾಕರ್ ರಾವ್, ಎ.ಜೆ. ಆಸ್ಪತ್ರೆಯ