ಕರ್ನಾಟಕದಲ್ಲಿ 34 ಶಾಸಕರನ್ನು ನಿಗಮ ಮಂಡಳಿಗಳಿಗೆ ನೇಮಿಸಿ ಆದೇಶ ಹೊರಡಿಸಲಾಗಿದೆ. ಅವರಿಗೆಲ್ಲ ಮಂತ್ರಿ ಸ್ಥಾನಮಾನ ನೀಡಲಾಗಿದೆ. ಮಂತ್ರಿ ಮಂಡಲದಲ್ಲಿ 34 ಮಂದಿ ಇದ್ದಾರೆ. ಕಾರ್ಯದರ್ಶಿಗಳನ್ನೂ ಸೇರಿ ರಾಜ್ಯದಲ್ಲಿ ಮಂತ್ರಿ ಸ್ಥಾನಮಾನ ಪಡೆದವರ ಸಂಖ್ಯೆ 74ಕ್ಕೆ ಏರಿತು. ಎಲ್ಲ 4ರ ಮಹಿಮೆ. 4ನೇ ತಿಂಗಳಿನಲ್ಲಿ ಲೋಕ ಸಭೆ ಚುನಾವಣೆಯ ಬಿರುಸು. ಅದಕ್ಕೆ ಮೊದಲು ಅಸಮಾಧಾನ
ಇಂಡಿಯಾ ಮೈತ್ರಿ ಕೂಟದ ಕ್ಷೇತ್ರ ಹಂಚಿಕೆಯು ಪಡುವಣ ಬಂಗಾಳ ಮತ್ತು ಪಂಜಾಬಗಳಲ್ಲಿ ಒಂದು ಸಮಸ್ಯೆ ಆಗಿದೆ. ತೃಣಮೂಲ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷಗಳು ಪಶ್ಚಿಮ ಬಂಗಾಳದ 42 ಮತ್ತು ಪಂಜಾಬಿನ 13 ತಮ್ಮ ಆಸ್ತಿ ಎಂದು ನಂಬಿವೆ. ಬಹು ಕಾಲ ಸಿಪಿಎಂ ಮತ್ತು ಕಾಂಗ್ರೆಸ್ ಪಕ್ಷಗಳು ಬಂಗಾಳದ್ದು ಮತ್ತು ಪಂಜಾಬಿನದು ತಮ್ಮ ಆಸ್ತಿ ಎಂದು ತಿಳಿದಿದ್ದವು. ಆ ಕಾಲವೆಲ್ಲ ಬದಲಾಗಿರುವುದು ಚರಿತ್ರೆ. ಮಮತಾ ಬ್ಯಾನರ್ಜಿಯವರು ರಾಜೀವ್ ಗಾಂಧಿಯವರ ಮೂಲಕ ಕಾಂಗ್ರೆಸ್ ಹೊಕ್ಕು ಆಮೇಲೆ
ಎಂಟು ತಿಂಗಳ ಹಿಂದೆ ವಿಧಾನ ಸಭಾ ಚುನಾವಣೆಯ ಕಾಲದಲ್ಲಿ ಟಿಕೆಟ್ ಸಿಗಲಿಲ್ಲ ಎಂದು ಕಾಂಗ್ರೆಸ್ ಸೇರಿದ್ದ ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿಗೆ ಸೇರಿದ್ದಾರೆ, ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.ಕಾಂಗ್ರೆಸ್ಸಿನಿಂದ ಟಿಕೆಟ್ ಕೊಡುತ್ತಾರೆ ಎಂದು ವಿಧಾನ ಪರಿಷತ್ ಚುನಾವಣೆಯ ಕಾಲದಲ್ಲಿ ಕಾಂಗ್ರೆಸ್ ಸೇರಿದ್ದರು. ಆದರೆ ಚುನಾವಣೆಯಲ್ಲಿ ಸೋತರು. ಆದ್ದರಿಂದ ಅವರನ್ನು ಅನಂತರ ಮೇಲ್ಮನೆಗೆ ಕಳುಹಿಸಿತು.ಬಿಜೆಪಿಯಲ್ಲಿ ಶಾಸಕ, ಮಂತ್ರಿ,
ಸಾರ್ವಜನಿಕ ಆಸ್ತಿಗೆ ಹಾನಿ ಮಾಡಿದ್ದಾರೆ ಎಂದು ಗೌಹತಿಯಲ್ಲಿ ಪೋಲೀಸರು ರಾಹುಲ್ ಗಾಂಧಿಯವರ ವಿರುದ್ಧ ಪ್ರಕರಣ ದಾಖಲಿಸಿದ್ದರೂ, ಅದನ್ನು ಪರಿಗಣನೆಗೆ ತೆಗೆದುಕೊಳ್ಳದೆ ಭಾರತ್ ಜೋಡೋ ನ್ಯಾಯ ಯಾತ್ರೆಯು ಬುಧವಾರ ಬಾರ್ಪೇಟ್ನತ್ತ ಮುನ್ನಡೆಯಿತು. ರಾಹುಲ್ ಗಾಂಧಿ ಅವರಲ್ಲದೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ಮೊದಲಾದವರ ವಿರುದ್ಧ ಹಿಂಸೆಗೆ ಪ್ರಚೋದನೆ, ಉದ್ದೇಶಪೂರ್ವಕ ಟ್ರಾಫಿಕ್ ಜಾಮ್, ಸಾರ್ವಜನಿಕ ಆಸ್ತಿಗೆ ಹಾನಿ ಎಂದೆಲ್ಲ ಅಸ್ಸಾಂ
ಅಯೋಧ್ಯೆ ವಿಚಾರದಲ್ಲಿ ನಾವು ಅಂತರ ಕಾಯ್ದುಕೊಂಡಿಲ್ಲ, ನಾವು ಕೂಡ ರಾಮ ಮತ್ತು ಆಂಜನೇಯನ ಭಕ್ತರೇ.. ಬಿಜೆಪಿ ರಾಮನನ್ನು ರಾಜಕೀಯಕರಣ ಮಾಡುತ್ತಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಹೇಳಿದರು. ಉಡುಪಿಯಲ್ಲಿ ಬಿಜೆಪಿ ವಿರುದ್ದ ಅಕ್ರೋಶ ವ್ಯಕ್ತಪಡಿಸಿದ ಸಚಿವರು.ಧರ್ಮ ಇದ್ದರೆ ಮಾತ್ರ ಬಿಜೆಪಿಗೆ ರಾಜಕಾರಣ ಮಾಡಲು ಸಾಧ್ಯ, ಬಿಜೆಪಿಗೆ ಅಭಿವೃದ್ಧಿ ಮತ್ತು ಬಡವರ ಚಿಂತನೆ ಬೇಕಾಗಿಲ್ಲ. ಎಷ್ಟು ಜನರಿಗೆ ನೀರಾವರಿ ವ್ಯವಸ್ಥೆ ಮಾಡಿದ್ದೀರಿ ಉದ್ಯೋಗ
ಲೋಕ ಸಭಾ ಚುನಾವಣೆ ಸಂಬಂಧ ಚುನಾವಣಾ ಆಯೋಗದ ಕೋರಿಕೆಯಂತೆ ಉಡುಪಿ ಜಿಲ್ಲೆಯ ಸದ್ಯದ ಅಂತಿಮ ಅರ್ಹ ಮತದಾರರ ಪಟ್ಟಿಯನ್ನು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಪ್ರಕಟಿಸಿದರು. ಜಿಲ್ಲೆಯ ಐದೂ ವಿಧಾನ ಸಭಾ ಕ್ಷೇತ್ರಗಳು ಸೇರಿ 10,45,296 ಅರ್ಹ ಮತದಾರರು ಇದ್ದಾರೆ. ಇವರಲ್ಲಿ 5,40,833 ಮಹಿಳೆಯರು, 5,04,448 ಗಂಡಸರು ಹಾಗೂ 15 ಮಂದಿ ತೃತೀಯ ಲಿಂಗಿಗಳಾಗಿದ್ದಾರೆ. ಹೊಸದಾಗಿ ಮತದಾರ ಪಟ್ಟಿಗೆ ಸೇರಿದ ಯುವ ಸಮುದಾಯದ ಸಂಖ್ಯೆ 10,245 ಆಗಿದೆ. ಯಥಾಪ್ರಕಾರ ಮತದಾರರ
ಕರ್ನಾಟಕ ಸರ್ಕಾರದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಶ್ರೀ ಡಿ.ಕೆ ಶಿವಕುಮಾರ್ ಹಾಗೂ ಉನ್ನತ ಶಿಕ್ಷಣ ಸಚಿವರಾದ ಶ್ರೀ ಎಂ. ಸಿ ಸುಧಾಕರ್ ಅವರ ಸೂಚನೆಯಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸವಾದ್ ಸುಳ್ಯ ಮೂಲತ ಸುಳ್ಯ ನಗರದ ಗಾಂಧಿನಗರದವರು, ಇವರು ತನ್ನ ಪ್ರಾಥಮಿಕ ಶಿಕ್ಷಣವನ್ನು ಸೈಂಟ್ ಬ್ರಿಜಿಸ್ಟ್ನಲ್ಲಿ ಮುಗಿಸಿ 14 ನೇ ವಯಸ್ಸಿನಲ್ಲಿ ಸರಕಾರಿ ಪ್ರೌಢ ಶಾಲೆ ಗಾಂಧೀನಗರ ಸುಳ್ಯ ಇದರ ಚುನಾಯಿತ ಉಪನಾಯಕನಾಗಿ ಆಯ್ಕೆಗೊಂಡಿದ್ದು, 10
ತೆಲಂಗಾಣದಲ್ಲಿ ವೈಎಸ್ಆರ್ ಪಕ್ಷವನ್ನು ಸ್ಥಾಪಿಸಿದ್ದ ಹಿಂದಿನ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಆಗಿದ್ದ ರಾಜಶೇಖರ ರೆಡ್ಡಿಯವರ ಮಗಳು ಮತ್ತು ಈಗಿನ ಆಂಧ್ರದ ಮುಖ್ಯಮಂತ್ರಿ ಜಗನ್ಮೋಹನ್ ರೆಡ್ಡಿಯವರ ಸಹೋದರಿ ವೈ. ಎಸ್. ಶರ್ಮಿಳಾ ಅವರು ದಿಲ್ಲಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರಿದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಸಮ್ಮುಖದಲ್ಲಿ ಶರ್ಮಿಳಾ ಅವರು ಕಾಂಗ್ರೆಸ್ ಸೇರಿದ್ದಲ್ಲದೆ ತಮ್ಮ ಪಕ್ಷವನ್ನು ಕಾಂಗ್ರೆಸ್ಸಿನಲ್ಲಿ
ಕೊಲ್ಕತ್ತಾದಲ್ಲಿ ಒಂದು ಲಕ್ಷ ನಾಗರಿಕರನ್ನು ಸೇರಿಸಿ ನಡೆದ ಗೀತಾ ಮಂತ್ರ ಪಠಣ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕರು ಹಣ ಬಾಚಿದ್ದಾರೆ ಎಂದು ಆರೋಪ ಮಾಡಿದ್ದ ಪಡುವಣ ಬಂಗಾಳದ ಬಿಜೆಪಿ ಮುಖಂಡ ಅನುಪಮ್ ಹಜ್ರಾ ಅವರನ್ನು ಕೇಂದ್ರೀಯ ಸ್ಥಾನದಿಂದ ವಜಾ ಮಾಡಲಾಗಿದೆ.ಗೀತಾ ಮಂತ್ರ ಪಠಣ ಕಾರ್ಯಕ್ರಮಕ್ಕೆ ಬಿಜೆಪಿಯ ಕೆಲವರು ಹಣವಂತರಿಗೆ ದೊಡ್ಡ ಮೊತ್ತದ ಹಣಕ್ಕೆ ವಿಶೇಷ ಪಾಸ್ ಮಾರಾಟ ಮಾಡಿದ್ದರು. ಅಕ್ರಮ ಹಣ ಮಾಡಿಕೊಂಡಿದ್ದರು ಎಂದು ಅನುಪಮ್ ಆರೋಪ ಮಾಡಿದ್ದರು. ಕೆಲವು ಬಿಜೆಪಿ
ರಾಮ ಮಂದಿರ ಉದ್ಘಾಟನೆಗೆ ದಯವಿಟ್ಟು ಬರಬೇಡಿ ಎಂದು ರಾಮ ಮಂದಿರ ಹೋರಾಟದ ಪ್ರಮುಖರು ಮತ್ತು ಬಿಜೆಪಿ ನಾಯಕರಾಗಿದ್ದ ಲಾಲ್ ಕೃಷ್ಣ ಅಡ್ವಾಣಿ ಮತ್ತು ಮುರಳಿ ಮನೋಹರ ಜೋಶಿಯವರಿಗೆ ರಾಮ ಮಂದಿರ ಟ್ರಸ್ಟ್. ಇದು ಸ್ವಲ್ಪ ವಿವಾದಕ್ಕೆ ಕಾರಣವಾಗುತ್ತಲೇ ರಾಮ ಮಂದಿರ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ಅವರು ಇಬ್ಬರು ಹಿರಿಯರೂ ವಯೋ ಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಲಕ್ಷಗಟ್ಟಲೆ ಜನರು ಸೇರುವ ತಾಣದಲ್ಲಿ ಅವರನ್ನು ನೋಡಿಕೊಳ್ಳಲು