Home Archive by category ರಾಜಕೀಯ (Page 9)

ಮಂಗಳೂರು : ಡೆಂಗ್ಯೂ ಬಾದಿಸದಂತೆ ಎಚ್ಚರ ವಹಿಸಿ- ಡೆಂಗ್ಯೂ ನಿರ್ಮೂಲನೆ ಸಮಿತಿಯ ಸಭೆಯಲ್ಲಿ ಅಧಿಕಾರಿಗಳಿಗೆ ಮೇಯರ್ ಸೂಚನೆ

ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಡೆಂಗ್ಯೂ ಬಾದಿಸದಂತೆ ಎಚ್ಚರಿಕೆ ವಹಿಸಬೇಕಾಗಿರುವುದನ್ನು ಗಮನಿಸಿ ಮೇಯರ್ ಸುಧೀರ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಪಾಲಿಕೆಯ ಸಮಿತಿ ಸಭಾಂಗಣದಲ್ಲಿ ಡೆಂಗ್ಯೂ ನಿಮೂ೯ಲನೆ ಸಮಿತಿಯ ಸಭೆ ಜರಗಿತು. ಸಭೆಯಲ್ಲಿ ಮಾತನಾಡಿದ ಮೇಯರ್ ರವರು ಡೆಂಗ್ಯೂಯನ್ನು ತಡೆಗಟ್ಟಲು ಮೊತ್ತ ಮೊದಲನೇಯದಾಗಿ ಸೊಳ್ಳೆ ಉತ್ಪತ್ತಿಯಾಗುವುದನ್ನು ತಡೆಯಬೇಕು.

ಪುತ್ತೂರಿನಿಂದ ಕಾಟುಕುಕ್ಕೆಗೆ ಬಸ್ ಸೇವೆ – ಸಾರಿಗೆ ಇಲಾಖೆ ಕಮಿಷನರ್ ಜೊತೆ ಅಶೋಕ್ ರೈ ಮಾತುಕತೆ

ಪುತ್ತೂರು: ಪುತ್ತೂರಿನಿಂದ ಕಾಸರಗೋಡು ಜಿಲ್ಲೆಯ ಕಾಟುಕುಕ್ಕೆಗೆ ಕೆಎಸ್ಆರ್ಟಿಸಿ ಬಸ್ ಸಂಚಾರ ಪ್ರಾರಂಭ ಮಾಡುವಲ್ಲಿ ಇಲಾಖೆಯ ಅನುಮತಿಯ ಕುರಿತು ಸಾರಿಗೆ ಇಲಾಖೆಯ‌ಕಮಿಷನರ್ ಯೋಗಿಶ್ ರವರ ಜೊತೆ ಶಾಸಕ ಅಶೋಕ್ ರೈ ಮಾತುಕತೆ ನಡೆಸಿದ್ದಾರೆ.ಕಾಟುಕುಕ್ಕೆಗೆ ಅಂತರಾಜ್ಯ ಬಸ್ ಸೇವೆಗೆ ಪರವಾನಿಗೆ ಅಗತ್ಯವಾಗಿದೆ. ಈ ಹಿಂದೆ ಕಾಟುಕುಕ್ಕೆಗೆ ಇದ್ದ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಕಾಸರಗೋಡು ಜಿಲ್ಲೆಯಿಂದ ಬೆಟ್ಟಂಪಾಡಿ ಪ್ರಥಮ ದರ್ಜೆ ಕಾಲೇಜಿಗೆ ಅನೇಕ ವಿದ್ಯಾರ್ಥಿಗಳು

ಬಜ್ಪೆಯ ಸಮ್ಯತಾಳ ಕೈಚಳಕಕ್ಕೆ ಬೇಷ್ ಎಂದ ಸಂಸದ ಕೋಟ

ಬ್ರಹ್ಮಾವರ: ಕಟೀಲು ಶ್ರೀ ದುರ್ಗಾ ಪರಮೇಶ್ವರೀ ಪದವಿ ಪೂರ್ವಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ 96.5 ಅಂಕ ಪಡೆದು ಶಿಕ್ಷಣದಲ್ಲಿ ಟೋಪರ್ ಆಗಿ ಚಿತ್ರ ರಚನೆ ಕಲೆಯಲ್ಲಿ ಸೂಪರ್ ಎನಿಸಿಕೊಂಡ ಬಜ್ಪೆಯ ಸಮ್ಯತ ಆಚಾರ್ಯ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರ ಚಿತ್ರವನ್ನು ರಚಿಸಿ ಕಾರ್ಯಕ್ರಮವೊಂದರಲ್ಲಿ ನೀಡಿ ಬೇಷ್ ಎನಿಸಿಕೊಂಡಿದ್ದಾಳೆ. ಕೋಟೇಶ್ವರದ ಕಾರ್ಯಕ್ರಮವೊಂದರಲ್ಲಿ ಪ್ರತಿಭಾಪುರಸ್ಕಾರಕ್ಕೆ ಬಂದ ಸಮ್ಯತ ಆಚಾರ್ಯ ಉದ್ಘಾಟಕರಾದ ಕೋಟ ಶ್ರೀನಿವಾಸ ಪೂಜಾರಿಯವರಿಗೆ

ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಯೋಗಿ ಮಿತ್ರ ಬೇಡಿರಾಂ

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿಯವರ ಮಿತ್ರ ಮತ್ತು ಬಿಜೆಪಿ ಮಿತ್ರ ಪಕ್ಷದ ಶಾಸಕ ಬೇಡಿರಾಂ ಪ್ರಶ್ನೆ ಪತ್ರಿಕೆ ಸೋರಿಕೆ ವ್ಯವಹಾರದ ವೀಡಿಯೋ ಜಾಲ ತಾಣದಲ್ಲಿ ಹರಿದಾಡುತ್ತಿದೆ.ಕೆಲವು ಯುವಕರು ಶಾಸಕ ಬೇಡಿರಾಂರಿಗೆ ಹಣ ಕೊಟ್ಟರೂ ಕೆಲಸ ಸಿಕ್ಕಿಲ್ಲ ಎಂದು ಜಾಲ ತಾಣದಲ್ಲಿ ಗೋಳು ತೋಡಿಕೊಂಡ ಮೇಲೆ ಬೇಡಿರಾಂ ಕರಾಮತ್ತು ಹೊರಬಿದ್ದಿದೆ. ಕಳೆದ ವರುಷ ರೈಲ್ವೆ ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಬೇಡಿರಾಂ ಬಂಧನವಾಗಿತ್ತು. ಆದರೆ ದಿನದಲ್ಲೇ ಜಾಮೀನು ಪಡೆದು ಅವರು

ಮಂಗಳೂರು : ಬಿಜೆಪಿ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಪಿವಿಎಸ್ ಸರ್ಕಲ್ ಬಳಿಯ ವೈಶ್ಯ ಎಜುಕೇಶನ್ ಸೊಸೈಟಿ ಸಭಾಂಗಣದಲ್ಲಿ ನಡೆದ ಯೋಗಾಭ್ಯಾಸದಲ್ಲಿ ಶಾಸಕ ವೇದವ್ಯಾಸ ಕಾಮತ್ ಅವರು ಭಾಗವಹಿಸಿದರು. ಈ ವೇಳೆ ಮಾತನಾಡಿದ ಶಾಸಕರು, ಭಾರತದ ಸನಾತನ ಪರಂಪರೆಯನ್ನು ಇಡೀ ವಿಶ್ವವೇ ಗೌರವಿಸುವ ದಿನವೇ ಅಂತಾರಾಷ್ಟ್ರೀಯ ಯೋಗ ದಿನ. ಮನುಷ್ಯನ ದೇಹದ ಸಮತೋಲನಕ್ಕಾಗಿ ಯೋಗದ ಕೊಡುಗೆ ಅನನ್ಯವಾಗಿದ್ದು ದೇಹದ ಜೊತೆಗೆ ಮನಸ್ಸಿಗೂ

ಸುಳ್ಯ : ಬಿಎಸ್‌ಎನ್‌ಎಲ್ ನೆಟ್‌ವರ್ಕ್ ಸಮಸ್ಯೆ- ಪರಿಹಾರ ಕುರಿತು ಜಿಲ್ಲಾಧಿಕಾರಿಗಳ ಜೊತೆ ಚರ್ಚೆ ನಡೆಸಿದ ಸಂಸದರು

ಮಂಗಳೂರು : ಸುಳ್ಯ ತಾಲೂಕಿನ ಗ್ರಾಮೀಣ ಭಾಗದಲ್ಲಿ ಬಿಎಸ್‌ಎನ್‌ಎಲ್ ನೆಟ್ ವರ್ಕ್ ಸಮಸ್ಯೆ ತೀವ್ರಗೊಂಡಿರುವ ಹಿನ್ನಲೆಯಲ್ಲಿ ಪರಿಹಾರದ ಕುರಿತು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.ಜಿಲ್ಲಾಧಿಕಾರಿ ಕಚೇರಿಯಲ್ಲಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ ಮಾಡಿ ಚರ್ಚಿಸಿದರು. ಸುಳ್ಯ ತಾಲೂಕಿನ ತೊಡಿಕಾನದ ಬಿಎಸ್‌ಎನ್‌ಎಲ್ ನೆಟ್‌ವರ್ಕ್ ಸಮಸ್ಯೆ ಸೇರಿದಂತೆ ಸುಳ್ಯ ತಾಲೂಕಿನ ವಿವಿಧ ಕಡೆ ನೆಟ್‌ವರ್ಕ್

ಶಾಸಕ ಹರೀಶ್ ಪೂಂಜಾರನ್ನು ಬಂಧಿಸದಂತೆ ಸರ್ಕಾರಕ್ಕೆ ತಾಕೀತು ಮಾಡಿದ ಉಚ್ಚ ನ್ಯಾಯಾಲಯ

ಸುಳ್ಳು ಕೇಸ್ ದಾಖಲಿಸಿ ಉದ್ದೇಶಪೂರ್ವಕವಾಗಿ ದ.ಕ. ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿಯವರ ಬಂಧನ ನಡೆದಿದೆ. ಆತ ಅಮಾಯಕ ಎಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಶಾಸಕ ಹರೀಶ್ ಪೂಂಜಾ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ನಡೆದ ಘಟನೆಗಳ ಬಗ್ಗೆ ಅವರ ಮೇಲೆ ಬೆಳ್ತಂಗಡಿ ಠಾಣೆಯಲ್ಲಿ ದಾಖಲಾಗಿದ್ದ ಮೊಕದ್ದಮೆ ವಿಚಾರವಾಗಿ ಜೂ೦೭ ರಂದು ಪ್ರಕರಣವನ್ನು ಕೈಗೆತ್ತಿಕೊಂಡ ಹೈಕೋರ್ಟ್ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್

ಇಳಿದ ಮಹಿಳಾ ಸಂಸದೆಯರ ಸಂಖ್ಯೆ

2019ರ 17ನೇ ಲೋಕಸಭೆಯಲ್ಲಿ ಅತಿ ಹೆಚ್ಚು 78 ಮಹಿಳಾ ಸಂಸದೆಯರು ಇದ್ದರು. ಈ ಬಾರಿ ಸಂಸದೆಯರಾಗಿ ಗೆದ್ದವರ ಸಂಖ್ಯೆಯು 73ಕ್ಕೆ ಇಳಿದಿದೆ.ಶೇಕಡಾವಾರು 14 ಇದ್ದುದು ಈ ಸಲ 13 ಶೇಕಡಾಕ್ಕೆ ಇಳಿಕೆಯಾಗಿದೆ. ಒಟ್ಟು 797 ಮಂದಿ ಮಹಿಳೆಯರು ಸ್ಪರ್ಧೆಯಲ್ಲಿ ಇದ್ದರು; ಗೆದ್ದವರು 73 ಮಹಿಳೆಯರು. 2014ರಲ್ಲಿ ಬರೇ 64 ಮಹಿಳೆಯರು ಸಂಸತ್ತಿಗೆ ಆಯ್ಕೆಯಾಗಿದ್ದರು. ಬಿಜೆಪಿಯಿಂದ 69 ಮಂದಿ ಸ್ಪರ್ಧಿಸಿ 30 ಮಂದಿ ಮತ್ತು ಕಾಂಗ್ರೆಸ್ಸಿನಿಂದ 41 ಸ್ಪರ್ಧಿಸಿ 14 ಮಂದಿ ಮಹಿಳೆಯರು

ದೇವೇಂದ್ರ ಫಡ್ನವೀಸ್ ಅವರಿಗೆ ಪಕ್ಷದ ಸಂಘಟನೆಯಲ್ಲಿ ತೊಡಗಿಕೊಳ್ಳುವಂತೆ ಬಿಜೆಪಿ ಹೈಕಮಾಂಡಿಗೆ ಮನವಿ

ಮಹಾರಾಷ್ಟದ ಹಾಲೀ ಉಪ ಮುಖ್ಯಮಂತ್ರಿ ಮಾಜೀ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ರಾಜೀನಾಮೆ ನೀಡಿ ಪಕ್ಷದ ಸಂಘಟನೆಯಲ್ಲಿ ತೊಡಗಿಕೊಳ್ಳಲು ಅವಕಾಶ ಮಾಡುವಂತೆ ಬಿಜೆಪಿ ಹೈಕಮಾಂಡಿಗೆ ಮನವಿ ಮಾಡಿದ್ದಾರೆ. ಶಿವಸೇನೆ ಮುರಿದು, ಇತರ ಪಕ್ಷಗಳ ಶಾಸಕರನ್ನು ಖರೀದಿಸಿ ಮಹಾರಾಷ್ಟದಲ್ಲಿ ಬಿಜೆಪಿಯು ಖರೀದಿ ಸರಕಾರ ರಚಿಸಿತ್ತು. ಮತದಾರರು ಅದನ್ನು ಅಕ್ರಮ ಎನ್ನುವಂತೆ ತೀರ್ಪು ನೀಡಿದ್ದಾರೆ. ಇನ್ನು ಒಂದು ವರುಷದಲ್ಲಿ ವಿಧಾನ ಸಭೆಗೆ ಚುನಾವಣೆ ನಡೆಯುವಾಗ ಬಿಜೆಪಿಗೆ ಇದು ದೊಡ್ಡ

ದಿಲ್ಲಿಯಲ್ಲಿ ಇಂಡಿಯಾ ಮೈತ್ರಿ ಕೂಟ ಮತ್ತು ಎನ್‌ಡಿಎ ಮೈತ್ರಿ ಕೂಟ ಎರಡೂ ಕುಟಗಳ ಸಭೆ

ಬುಧವಾರ ದಿಲ್ಲಿಯಲ್ಲಿ ಇಂಡಿಯಾ ಮೈತ್ರಿ ಕೂಟ ಮತ್ತು ಎನ್‌ಡಿಎ ಮೈತ್ರಿ ಕೂಟ ಎರಡೂ ಕುಟಗಳು ತಮ್ಮ ರಾಜಕೀಯ ತಂತ್ರಗಾರಿಕೆಯ ಬಗೆಗೆ ಸಭೆ ನಡೆಸಿದವು. ಪಾಟ್ನಾದಿಂದ ಬೆಳಿಗ್ಗೆ ಹತ್ತೂವರೆ ಗಂಟೆಯ ಹೊತ್ತಿಗೆ ಹೊರಟ ವಿಸ್ತಾರ್ ವಿಮಾನದಲ್ಲಿ ಮುಖ್ಯಮಂತ್ರಿ ನಿತೀಶ್‌ಕುಮಾರ್ ಮತ್ತು ಮಾಜೀ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ದಿಲ್ಲಿಗೆ ಹೊರಟದ್ದು ಭಾರೀ ಗಾಳಿ ಸುದ್ದಿಗಳಿಗೆ ಕಾರಣವಾಗಿತ್ತು. ಕೊನೆಗೆ ನಿತೀಶ್ ಕುಮಾರ್ ಅವರು ಎನ್‌ಡಿಎ ಕೂಟದ ಸಭೆಯಲ್ಲಿ ಭಾಗವಹಿಸಿದರೆ,