Home Archive by category ರಾಜ್ಯ (Page 14)

ರಾಷ್ಟ್ರೀಯ ಕ್ಯಾನ್ಸರ್ ಜಾಗೃತಿ ದಿನ – ನವೆಂಬರ್ 7

ರಾಷ್ಟ್ರೀಯ ಕ್ಯಾನ್ಸರ್ ಜಾಗೃತಿ ದಿನ – ಪ್ರತಿ ವರ್ಷ ಭಾರತದಾದ್ಯಂತ ನವಂಬರ್ 7 ರಂದು ರಾಷ್ಟ್ರೀಯ ಕ್ಯಾನ್ಸರ್ ಜಾಗೃತಿ ದಿನ ಎಂದು ಆಚರಿಸಿ ಕ್ಯಾನ್ಸರ್ ರೋಗದ ಬಗ್ಗೆ ಜಾಗೃತಿ, ಆರಂಭಿಕ ಹಂತದಲ್ಲಿ ಗುರುತಿಸುವುದರ ಮಹತ್ವ ಮತ್ತು ಸಕಾಲದಲ್ಲಿ ಸೂಕ್ತ ಚಿಕಿತ್ಸೆ ಬಗ್ಗೆ ಮಾರ್ಗದರ್ಶನ ಮಾಡುವ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಕಾರ್ಯವನ್ನು ಮಾಡಲಾಗುತ್ತದೆ.

ಮತ್ತೆ ಮರುಕಳಿಸುತ್ತಿರುವ ಝಿಕಾ ಜ್ವರ

ಆಧುನಿಕ ಸಂಶೋಧನೆಗಳು, ಆವಿಷ್ಕಾರಗಳು ಹೆಚ್ಚಿದಂತೆ, ವೈದ್ಯರಿಗೆ ಹೊಸ ರೋಗಗಳನ್ನು ಗುರುತಿಸುವಲ್ಲಿ ಮತ್ತು ಚಿಕಿತ್ಸೆಯನ್ನು ನೀಡುವಲ್ಲಿ ಹೆಚ್ಚಿನ ಅನುಕೂಲ ಉಂಟಾಗಿದೆ ಎನ್ನುವುದು ಸತ್ಯವಾದ ವಿಚಾರ. ಅದರ ಜೊತೆಗೆ ಕೆಲವೊಂದು ರೋಗಾಣುಗಳು ತಮ್ಮ ದೇಹದ ರಚನೆಯನ್ನು ಪರಿಸ್ಥಿತಿಗೆ ಪೂರಕವಾಗಿ ಮಾರ್ಪಾಡುಗೊಳಿಸಿಕೊಂಡು, ಹೊಸ ಹೊಸ ರೋಗಗಳಿಗೆ ಕಾರಣವಾಗಿ ವೈದ್ಯಲೋಕಕ್ಕೆ ಸವಾಲಾಗಿ ನಿಲ್ಲತೊಡಗಿರುವುದು ವಿಪರ್ಯಾಸವಾದರೂ ಸತ್ಯ. ಅಂತಹ ರೋಗಾಣು ಮತ್ತು ರೋಗಗಳ ಸಾಲಿಗೆ ಸೇರುವ

ಶ್ರವಣಬೆಳಗೊಳ – ಸುಮಾರು 1000 ಲೀಟರ್ ಹಾಲನ್ನು ನೆಲಕ್ಕೆ ಸುರಿದು ಪ್ರತಿಭಟನೆ

ಶ್ರವಣಬೆಳಗೊಳ ಹೋಬಳಿಯ ಹಡೇನಹಳ್ಳಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಹಾಲು ಉತ್ಪಾದಕರು ಸುಮಾರು 1000 ಲೀಟರ್ ಹಾಲನ್ನು ನೆಲಕ್ಕೆ ಸುರಿದು ಪ್ರತಿಭಟನೆ ನಡೆಸಿದ್ದಾರೆ. 23 ವರ್ಷಗಳ ಹಿಂದೆ ಆರಂಭಗೊಂಡಿರುವ ಈ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘಕ್ಕೆ ಅಂದಿನಿಂದ ಇಂದಿನವರೆಗೂ ಇದೇ ಗ್ರಾಮದ ಜಯಂತಿ ಎಂಬುವವರು ಕಾರ್ಯದರ್ಶಿಯಾಗಿದ್ದಾರೆ. ಇತ್ತೀಚೆಗೆ ಹೊಸ ಆಡಳಿತ ಮಂಡಳಿ ರಚನೆಯಾಗಿದ್ದು, ಜಯಂತಿಯವರನ್ನು ಈವರೆಗಿನ ಖರ್ಚು ವೆಚ್ಚದ ವರದಿಯನ್ನು ಕೇಳಲಾಗಿದೆ. ಆದರೆ

ಮಂಗಳೂರು: ‘ಕರ್ನಾಟಕಕ್ಕೆ 50ರ ಸಂಭ್ರಮ’: ಶೃಂಗಾರಗೊಂಡ ಮಂಗಳೂರು ಪಾಲಿಕೆ ಆವರಣ

ರಾಜ್ಯಕ್ಕೆ ‘ಕರ್ನಾಟಕ’ ಎಂದು ಹೆಸರಿಟ್ಟು 50 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ವೈವಿಧ್ಯಮಯವಾಗಿ ನಾಡಹಬ್ಬ ಆಚರಣೆಗೆ ಸರ್ಕಾರ ನಿರ್ಧರಿಸಿದೆ. ಇದರಂತೆ ಮಂಗಳೂರು ಮಹಾನಗರ ಪಾಲಿಕೆ ಆವರಣ ಕನ್ನಡ ಬಾವುಟದ ಮುಖಾಂತರ ಶೃಂಗಾರಗೊಂಡಿದೆ. ಮಂಗಳೂರು ಪಾಲಿಕೆ ಕಚೇರಿಯ ಮುಖ್ಯ ಪ್ರವೇಶ ದ್ವಾರವನ್ನು ಕನ್ನಡ ಬಾವುಟದಿಂದಲೇ ವಿಶೇಷವಾಗಿ ಅಲಂಕರಿಸಲಾಗಿದೆ. ಪಾಲಿಕೆ ಕಚೇರಿ ಮುಂಭಾಗ ಕನ್ನಡ ಬಾವುಟದ ಸ್ವಾಗತ ಕಮಾನುಗಳು, ಶುಭಾಯ ಕೋರಿ ಹಾಕಿದ ನಾಮಫಲಕ, ನಾಡು ನುಡಿ

ಹಾಸನ: ನ.2ರಿಂದ ಹಾಸನಾಂಬೆ ಜಾತ್ರಾ ಮಹೋತ್ಸವ: ಐಜಿ ಡಾ. ಬೋರಲಿಂಗಯ್ಯ ಭೇಟಿ, ಪರಿಶೀಲನೆ

ಹಾಸನ: ನವೆಂಬರ್ 2ರಿಂದ ಆರಂಭವಾಗುವ ಹಾಸನಾಂಬೆ ಜಾತ್ರಾ ಮಹೋತ್ಸವ ಹಿನ್ನಲೆಯಲ್ಲಿ ಐಜಿ ಡಾ. ಬೋರಲಿಂಗಯ್ಯ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.        ಹಾಸನ ಜಿಲ್ಲೆಯ ಡಿಸಿ ಸಿ. ಸತ್ಯಭಾಮ ಮತ್ತು ಎಸ್ಪಿ ಮಹಮದ್ ಸುಜೀತಾ ಹಾಗೂ ಉಪವಿಭಾಗಧಿಕಾರಿ ಮಾರುತಿ ಅವರಿಂದ ಮಾಹಿತಿ ಪಡೆದ ಮೈಸೂರು ದಕ್ಷಿಣ ವಲಯ ಐ.ಜಿ ಅವರು, ದೇವಸ್ಥಾನದ ಸರತಿ ಸಾಲು, ವಾಹನಗಳ ಪಾರ್ಕಿಂಗ್, ಭಕ್ತರು ಬಂದು ಹೋಗುವ ಸ್ಥಳ ಸೇರಿದಂತೆ ಇತರೆ ವ್ಯವಸ್ಥೆಯನ್ನು

ಮಂಜೇಶ್ವರ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಎನ್‍ಆರ್ ಇಜಿ ಯೂನಿಯನ್ ನೇತೃತ್ವದಲ್ಲಿ ಪ್ರತಿಭಟನೆ

ಮಂಜೇಶ್ವರ: ಉದ್ಯೋಗ ಖಾತರಿ ಯೋಜನೆಯನ್ನು ಬುಡಮೇಲುಗೊಳಿಸುವ ಕ್ರಮವನ್ನು ಕೊನೆಗೊಳಿಸಿ, ಹೆಚ್ಚಿಸಿದ ಮಜೂರಿಯನ್ನು ಕೂಡಲೇ ವಿತರಿಸಿ, ಕಡಿತಗೊಳಿಸಿದ ಲೇಬರ್ ಬಜೆಟ್ ಪುನಸ್ತಾಪಿಸಿ ಇತ್ಯಾದಿ ಬೇಡಿಕೆಯನ್ನು ಮುಂದಿಟ್ಟುಕೊಂಡು ಎನ್‍ಆರ್‍ಇಜಿ ಯೂನಿಯನ್ ನೇತೃತ್ವದಲ್ಲಿ ಮೀಯಪದವಿನಲ್ಲಿ ಪ್ರತಿಭಟನೆ ನಡೆಸಿದರು. ಸಭೆಯನ್ನು ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಟಿ.ಎಂ.ಏ. ಕರೀಂ ಉದ್ಘಾಟಿಸಿದರು. ಮೀಂಜ ಪಂಚಾಯತ್ ಸದಸ್ಯ ಜನಾರ್ಧನ ಪೂಜಾರಿ ಅಧ್ಯಕ್ಷತೆ

ಕಡಬ: ಬಾಲಕಿ ಬರೆದ ಪತ್ರಕ್ಕೆ ಸಿಎಂ ಪ್ರತಿಕ್ರಿಯೆ: ಟ್ವಿಟ್ಟರ್(x)ನಲ್ಲಿ ಸಂತಸ ಹಂಚಿಕೊಂಡ ಸಿದ್ದರಾಮಯ್ಯ

ಶಾಲೆಯ ಪಕ್ಕದ ಅಂಗಡಿಯಲ್ಲಿ ತಂಬಾಕು ಉತ್ಪನ್ನ ಮಾರಾಟ ತಡೆಯಿರಿ ಎಂಬ ಬಾಲಕಿಯ ಮನವಿಗೆ ಸಿಎಂ ಸಿದ್ದರಾಮಯ್ಯ ಅವರು ತಕ್ಷಣ ಸ್ಪಂದಿಸಿದ್ದೂ,ಇದೀಗ ತನ್ನ ಟ್ವಿಟರ್ ಖಾತೆಯಲ್ಲಿ ಈ ಬಗ್ಗೆ ಬರೆದುಕೊಂಡಿದ್ದಾರೆ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗ ಸಾರ್ವಜನಿಕ ವಲಯದಿಂದ ಬರುತ್ತಿರುವ ಕೆಲವು ವಿಶೇಷ ವಿಚಾರಗಳಿಗೆ ತ್ವರಿತವಾಗಿ ಸ್ಪಂದಿಸುವ ಪ್ರಕ್ರಿಯೆಯನ್ನು ಆರಂಭಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಬಿಳಿನೆಲೆ ಕೈಕಂಬದ ಸರ್ಕಾರಿ ಶಾಲೆಯಲ್ಲಿ

ಮಂಗಳೂರು: ಶಿವಮೊಗ್ಗದಲ್ಲಿ ನಡೆದ ದಾಳಿ ಪ್ರಕರಣಕ್ಕೆ ನಳಿನ್ ಕುಮಾರ್ ಕಟೀಲ್ ಖಂಡನೆ

ಶಿವಮೊಗ್ಗದಲ್ಲಿ ಮೀಲಾದ್ ಮೆರವಣಿಗೆ ಹೆಸರಿನಲ್ಲಿ ಹಿಂದೂ ಧರ್ಮೀಯರ ಅಂಗಡಿಗಳ, ಮನೆಗಳಿಗೆ ದಾಳಿ ನಡೆದಿದ್ದು, ಇದು ಖಂಡನೀಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಕಾಂಗ್ರೆಸ್ ವಿಜಯೋತ್ಸವದ ಮೆರವಣಿಗೆಯಲ್ಲಿ ಪಾಕಿಸ್ತಾನದ ಧ್ವಜ ಹಾರಾಡಿದ್ದು, ಪಾಕಿಸ್ತಾನದ ಪರ ಘೋಷಣೆ ಕೂಗಲಾಗಿತ್ತು. ಆ ಸಂದರ್ಭ ಯಾವುದೇ ರೀತಿಯ

ಚೆನ್ನೈ: ಹಸಿರು ಕ್ರಾಂತಿಯ ಹರಿಕಾರ ಎಂ.ಎಸ್. ಸ್ವಾಮಿನಾಥನ್ ವಿಧಿವಶ

ಪ್ರಖ್ಯಾತ ವಿಜ್ಞಾನಿ ಹಾಗೂ ಅಧಿಕ ಇಳುವರಿಯ ಭತ್ತದ ತಳಿ ಅಭಿವೃದ್ಧಿಯಿಂದ ದೇಶದ ಆಹಾರ ಭದ್ರತೆಯಲ್ಲಿ ಪ್ರಮುಖ ಪಾತ್ರ ವಹಿಸುವ ಮೂಲಕ ಹಸಿರು ಕ್ರಾಂತಿಯ ಹರಿಕಾರ ಎಂದೇ ಪ್ರಸಿದ್ಧರಾಗಿದ್ದ ಎಂ.ಎಸ್.ಸ್ವಾಮಿನಾಥನ್ (98) ಚೆನ್ನೈನಲ್ಲಿ ನಿಧನರಾದರು. ಮೊಂಕೊಂಬು ಸಾಂಬಶಿವನ್ ಸ್ವಾಮಿನಾಥನ್ ಅವರು 1925ರ ಆ. 7ರಂದು ತಮಿಳುನಾಡಿನ ತಂಜಾವೂರು ಜಿಲ್ಲೆಯಲ್ಲಿ ಜನಿಸಿದರು. ಹವಾಮಾನ ತಜ್ಞ, ಕೃಷಿ ವಿಜ್ಞಾನಿ, ಸಸ್ಯ ತಳಿವಿಜ್ಞಾನಿಯೂ ಆಗಿದ್ದ ಅವರು ಭಾರತದ ಕೃಷಿ ಉತ್ಪನ್ನಗಳ

ಹಾಸನ: ಕರ್ನಾಟನ ಬಂದ್‍ಗೆ ನಮ್ಮ ಬೆಂಬಲ ಇದೆ: ಶಾಸಕ ಸಿಮೆಂಟ್ ಮಂಜು

ಕಾವೇರಿ ವಿವಾದದ ಹಿನ್ನೆಲೆಯಲ್ಲಿ ಶುಕ್ರವಾರ ನಡೆಯಲಿರುವ ಕರ್ನಾಟಕ ಬಂದ್‍ಗೆ ನಮ್ಮ ಸಂಪೂರ್ಣ ಬೆಂಬಲ ಇದೆ ಎಂದು ಆಲೂರು ಸಕಲೇಶಪುರ ಕ್ಷೇತ್ರದ ಶಾಸಕರಾದ ಸಿಮೆಂಟ್ ಮಂಜು ಹೇಳಿದರು. ಅವರು ಹಾಸನದಲ್ಲಿ ಮಾತನಾಡಿ, ಆಡಳಿತರೂಡ ಸರ್ಕಾರ ವಕೀಲರನ್ನು ಇಟ್ಟು ವಾದ ಮಾಡುವಲ್ಲಿ ವಿಫಲವಾಗಿದೆ. ನಮ್ಮ ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುತ್ತಿದ್ದಾರೆ. ನಮಗೆ ನೀರಿಲ್ಲದಿರುವಾಗ ಪರರಿಗೆ ನೀರು ನೀಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಸರ್ಕಾರವನ್ನು ಪ್ರಶ್ನಿಸಿದರು.