Home Archive by category ರಾಜ್ಯ (Page 3)

ಉಡುಪಿ: ಏ.3ರಂದು ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ನಾಮಪತ್ರ ಸಲ್ಲಿಕೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಏಪ್ರಿಲ್ 3ರಂದು ಉಮೇದುವಾರಿಕೆ ಸಲ್ಲಿಸಲಿದ್ದಾರೆ. ಲೋಕಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿ ಕೆ.ಜೆ. ಜಾರ್ಜ್ ನಾಮಪತ್ರ ಸಲ್ಲಿಕೆಯ ನೇತೃತ್ವ ವಹಿಸಲಿದ್ದಾರೆ. ಚಿಕ್ಕಮಗಳೂರಿನ ಕಾಂಗ್ರೆಸ್ ಶಾಸಕರಾದ ಹೆಚ್. ಡಿ ತಮ್ಮಯ್ಯ, ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ, ಶೃಂಗೇರಿ ಟಿಡಿ

ಕಾಂಗ್ರೆಸ್ ನ ಪದ್ಮರಾಜ್ ಗೆ ಮತ ಹಾಕಿ ಬಿಜೆಪಿಯನ್ನು ಸೋಲಿಸಿ: ಸಿಪಿಐಎಂನ ಯಾದವ ಶೆಟ್ಟಿ ಕರೆ

ಮೂಡುಬಿದಿರೆ: ದ.ಕ.ಜಿಲ್ಲೆಯಲ್ಲಿ ಕಳೆದ 32 ವರ್ಷಗಳಿಂದ ಬಿಜೆಪಿಯ ಸಂಸದರಿದ್ದರು. ಆದರೆ ಜಿಲ್ಲೆಯಲ್ಲಿ ಏನು ಅಭಿವೃದ್ಧಿ ಆಗಿದೆ. ಮನು ಸಂಸ್ಕೃತಿಯನ್ನು ಪ್ರತಿಪಾದಿಸುವ ಬಿಜೆಪಿಯು ಅಧಿಕಾರಕ್ಕೆ ಬರಬಾರದು ಆದ್ದರಿಂದ ನಾವು ಕಾಂಗ್ರೆಸ್ ನ ಪದ್ಮರಾಜ್ ಗೆ ಮತವನ್ನು ಹಾಕಿ ಬಿಜೆಪಿಯನ್ನು ಸೋಲಿಸಬೇಕು ಎಂದು ಸಿಪಿಐಎಂನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯಾದವ ಶೆಟ್ಟಿ ಕರೆ ನೀಡಿದರು. ಅವರು ಸಮಾಜ ಮಂದಿರದಲ್ಲಿ ನಡೆದ ಸಿಪಿಐಎಂ ಪಕ್ಷದ ಮೂಡುಬಿದಿರೆ ತಾಲೂಕು ಮಟ್ಟದ ರಾಜಕೀಯ

ರಾಜಕೀಯ ಬಿಟ್ಟು ಸಮುದಾಯದ ಗೆಲುವಿಗೆ ಆದ್ಯತೆ : ಸತ್ಯಜಿತ್ ಸುರತ್ಕಲ್

ಲೋಕಸಭಾ ಚುನಾವಣೆಯಲ್ಲಿ ಶ್ರೀ ನಾರಾಯಣ ಗುರು ವಿಚಾರ ವೇದಿಕೆಯ ಸಭೆಯಲ್ಲಿ ಕೈಗೊಳ್ಳಲಾದ ನಿರ್ಣಯದಂತೆ ಬಿಲ್ಲವ ಸಮಾಜಕ್ಕೆ ಶಕ್ತಿ ತುಂಬುವ ನಿಟ್ಟಿನಲ್ಲಿ ದ.ಕ., ಉಡುಪಿ- ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವ ಬಿಲ್ಲವ ಅಭ್ಯರ್ಥಿಗಳನ್ನು ಬೆಂಬಲಿಸಲಿದೆ ಎಂದು ಎಸ್‌ಎನ್‌ಜಿವಿ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್ ಹೇಳಿದ್ದಾರೆ. ಅವರು ನಗರದ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ, ಟೀಂ ಸತ್ಯಜಿತ್ ಸುರತ್ಕಲ್‌ನಲ್ಲಿ

ಪದ್ಮರಾಜ್ ಅವರು ಕಾಂಗ್ರೆಸ್ ಪಕ್ಷದ ಎಲ್ಲರ ಒಮ್ಮತದ ಅಭ್ಯರ್ಥಿ : ಮಾಜಿ ಸಚಿವ ರಮಾನಾಥ ರೈ

ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಅವರು ಎ.3ರಂದು ಬೆಳಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಮಾಜಿ ಸಚಿವ ಹಾಗೂ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿಯ ಉಸ್ತುವಾರಿ ಬಿ.ರಮಾನಾಥ ರೈ ತಿಳಿಸಿದ್ದಾರೆ. ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಮಪತ್ರ ಸಲ್ಲಿಸುವ ಮೊದಲು ಚರ್ಚ್, ಮಸೀದಿ, ದೇವಸ್ಥಾನ ಸೇರಿದಂತೆ ವಿವಿಧ ಧಾರ್ಮಿಕ ಕೇಂದ್ರಗಳಿಗೆ ಭೇಟಿ ನೀಡಿ

ಬೈಂದೂರು: ಬಿಜೆಪಿ ನಾಯಕರಿಗೆ ಶಾಕ್ ಕೊಟ್ಟ ಈಶ್ವರಪ್ಪ

ಬೈಂದೂರು: ಕಳೆದ 40 ವರ್ಷಗಳಿಂದ ಭಾರತೀಯ ಜನತಾ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ತೊಡಗಿಸಿಕೊಂಡಿದ್ದೇನೆ. ಹಿಂದುತ್ವ ದೇಶ ಅಭಿವೃದ್ಧಿ ರಾಜಕಾರಣ ಹಾಗೂ ಕುಟುಂಬ ರಾಜಕಾರಣ ಕುರಿತು ಜನ ಸ್ಪಷ್ಟ ಫಲಿತಾಂಶ ನೀಡಲಿದ್ದಾರೆ.ಯಾವ ಒತ್ತಡಗಳಿಗೂ ಮಣಿಯಲಾರೆ.ಬ್ರಹ್ಮ ಬಂದು ಹೇಳಿದರು ಈ ಚುನಾವಣೆಯಿಂದ ಹಿಂದೆ ಸರಿಯಲಾರೆ ಎಂದು ಮಾಜಿ ಸಚಿವ ಈಶ್ವರಪ್ಪ ಹೇಳಿದರು. ಅವರು ಉಪ್ಪಂದದಲ್ಲಿ ಉಪ್ಪುಂದ ಪರಿಚಯ ಹೋಟೆಲ್ ಸಭಾಭವನದಲ್ಲಿ ನಡೆದ ಈಶ್ವರಪ್ಪ ಬೆಂಬಲಿತ ಕಾರ್ಯಕರ್ತರ

ಲೋಕಸಭಾ ಚುನಾವಣೆ: ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟಿಸಿದ ಜನಾರ್ದನ ಪೂಜಾರಿ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರ ಚುನಾವಣಾ ಕಚೇರಿ ಮಂಗಳೂರು ಲಾಲ್’ಭಾಗ್’ನಲ್ಲಿ ಉದ್ಘಾಟನೆಗೊಂಡಿತು.ಮಂಗಳೂರು ಮಹಾನಗರ ಪಾಲಿಕೆ ಬಳಿಯಲ್ಲಿರುವ ಕಚೇರಿಯನ್ನು ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಉದ್ಘಾಟಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್., ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ,

ಮಾರ್ಚ್ 25ರಿಂದ ಎಸ್‌ ಎಸ್‌ ಎಲ್‌ ಸಿ ಪರೀಕ್ಷೆ

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗೆ ಅಂತಿಮ ಹಂತದ ಸಿದ್ಧತೆ ನಡೆಯುತ್ತಿದ್ದು, ಈ ಬಾರಿ ಒಟ್ಟು 2,750 ಕೇಂದ್ರಗಳಲ್ಲಿ 8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ. ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಮಾರ್ಚ್‌ 25ರಿಂದ ಏಪ್ರಿಲ್‌ 6ರವರೆಗೆ ನಡೆಯಲಿದೆ. ಹೀಗಾಗಿ ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಅಗತ್ಯ ಪೊಲೀಸ್ ಭದ್ರತೆ, ಪರೀಕ್ಷಾ ಕೇಂದ್ರಗಳ ಸುತ್ತಮುತ್ತ

ರಾಜಕೀಯ ಶುದ್ಧೀಕರಣಕ್ಕೆ ಬರುವುದಾದರೆ ಎಲ್ಲರಿಗೂ ಸ್ವಾಗತ: ಡಿವಿಎಸ್

ರಾಜಕೀಯ ಶುದ್ಧೀಕರಣದ ಬಗ್ಗೆ ಸ್ವಂತ ತೀರ್ಮಾನ ತೆಗೆದುಕೊಳ್ಳಲು ನನ್ನಿಂದ ಸಾಧ್ಯ, ಆದರೆ, ಸಮಾನ ಮನಸ್ಕರಾಗಿ ನನ್ನೊಂದಿಗೆ ಕೈಜೋಡಿಸಲು ಯಾರಾದರೂ ಬರುವುದಾದರೆ ಎಲ್ಲರಿಗೂ ಸ್ವಾಗತ ಎಂದು ಸಂಸದ, ಮಾಜಿ ಸಿಎಂ ಡಿ. ವಿ. ಸದಾನಂದ ಗೌಡ ಹೇಳಿದರು. ಅವರು ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿ ನಂತರ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಗುಂಪುಗಾರಿಕೆಗಳಿದ್ದವು. ದೆಹಲಿ ಬಣ ಹಾಗೂ ಕರ್ನಾಟಕ

ಲೋಕಸಭಾ ಚುನಾವಣೆ : ತಿರುವಳ್ಳೂರು ಕ್ಷೇತ್ರದಿಂದ ಸಸಿಕಾಂತ್ ಸೆಂಥಿಲ್ ಸ್ಪರ್ಧೆ

ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ನಾಲ್ಕನೇ ಪಟ್ಟಿ ಘೋಷಣೆ ಮಾಡಿದೆ. ಈ ಪಟ್ಟಿಯಲ್ಲಿ 46 ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿದೆ. ಇದರಲ್ಲಿ ಕಾಂಗ್ರೆಸ್ ಹೈಕಮಾಂಡ್ ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಅವರಿಗೂ ಟಿಕೆಟ್ ನೀಡಿದ್ದು, ತಿರುವಳ್ಳೂರು ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಸಸಿಕಾಂತ್ ಸೆಂಥಿಲ್ ಅವರು ಕರ್ನಾಟಕದ ದಕ್ಷಿಣ ಕನ್ನಡದಲ್ಲಿ ಜಿಲ್ಲಾಧಿಕಾರಿಯಾಗಿ ಕೆಲಸ ಮಾಡಿದ್ದರು. ಸಸಿಕಾಂತ್ ಸೆಂಥಿಲ್ ಅವರು ಮೂಲತಃ ತಮಿಳುನಾಡಿನವರು. ಇವರು

ಬರ ಪರಿಹಾರ ನೀಡದ ಕೇಂದ್ರ ಸರಕಾರ: ಸುಪ್ರೀಂ ಕೋರ್ಟಿನಲ್ಲಿ ಕರ್ನಾಟಕದ ಅರ್ಜಿ

ಬರಗಾಲದಿಂದಾಗಿ 48 ಲಕ್ಷ ಹೆಕ್ಟೇರ್ ಬೆಳೆ ನಾಶವಾಗಿದೆ. ಆದರೆ ಕೆಂದ್ರ ಸರಕಾರವು ತಾರತಮ್ಯ ನೀತಿ ಅನುಸರಿಸುತ್ತ ಪರಿಹಾರ ನೀಡುತ್ತಿಲ್ಲ ಎಂದು ರಾಜ್ಯ ಸರಕಾರದ ಪರವಾಗಿ ಸುಪ್ರೀಂ ಕೋರ್ಟಿನಲ್ಲಿ ಅರ್ಜಿ ಸಲ್ಲಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದರು. ಅವರು ಈ ನಿಟ್ಟಿನಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಪತ್ರಿಕಾಗೊಟ್ಟಿ ನಡೆಸಿ ಮಾಹಿತಿ ನೀಡಿದರು. ಬರಗಾಲದಲ್ಲಿ ಎನ್‌ಡಿಆರ್‌ಎಫ್/ಎಸ್‌ಡಿಆರ್‌ಎಫ್ ಎಷ್ಟು ಪರಿಹಾರ ನೀಡಬೇಕು ಎಂದು ಕ್ರಮ ನಿಯಮ ಇದೆ.