Home Archive by category ರಾಜ್ಯ (Page 30)

ಜ್ಞಾನ ಯೋಗಾಶ್ರಮದ ಸಿದ್ಧೇಶ್ವರ ಸ್ವಾಮೀಜಿ ಅಸ್ತಂಗತ : ಬಿಜೆಪಿ ರಾಜ್ಯಾದ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲ್ ಸಂತಾಪ

ವಿಜಯಪುರದ ಜ್ಞಾನ ಯೋಗಾಶ್ರಮದ ಸಿದ್ಧೇಶ್ವರ ಸ್ವಾಮೀಜಿ ನಿಧನಕ್ಕೆ ಬಿಜೆಪಿ ರಾಜ್ಯಾದ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲ್ ಸಂತಾಪ ಸೂಚಿಸಿದ್ದಾರೆ. ಆಧ್ಯಾತ್ಮಿಕ ಬದುಕಿನ ಮುಖಾಂತರ ಒಂದು ಸುಂದರವಾದ ಜೀವನ ವ್ಯವಸ್ಥೆಯಲ್ಲಿ ಕಲ್ಪಿಸಿದವರು. ನಡೆದಾಡುವ ದೇವರು ಲಿಂಗೈಕ್ಯರಾಗಿದ್ದಾರೆ. ಅವರ ಅಗಲಿಕೆಯಿಂದ ಅವರ ಲಕ್ಷಾಂತರ ಭಕ್ತರಲ್ಲಿ ದುಃಖವನ್ನು ಸಹಿಸುವ ಶಕ್ತಿಯನ್ನು

ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿ ಲಿಂಗೈಕ್ಯ, ಪ್ರಧಾನಿ ಮೋದಿ, ಸಿಎಂ ಬೊಮ್ಮಾಯಿ ಸೇರಿದಂತೆ ಗಣ್ಯರಿಂದ ಸಂತಾಪ

ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಸಿಎಂ ಬಸವರಾಜ್ ಬೊಮ್ಮಾಯಿ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ಇಂದು ಸಂಜೆ 5 ಗಂಟೆಗೆ ಸಿದ್ದೇಶ್ವರ ಸ್ವಾಮೀಜಿ ಅಂತ್ಯಕ್ರಿಯೆ ನಡೆಯಲಿದೆ.ಜ್ಞಾನಯೋಗಾಶ್ರಮದ ಆವರಣದಲ್ಲಿ ಸ್ವಾಮೀಜಿಗಳ ಅಂತ್ಯಸಂಸ್ಕಾರ ನಡೆಯಲಿದೆ. ಸಕಲ ಸರ್ಕಾರಿ ಗೌರವದೊಂದಿಗೆ ಶ್ರೀಗಳ ಅಂತ್ಯಕ್ರಿಯೆ ನಡೆಯಲಿದ್ದು, ಸ್ವಾಮೀಜಿ ಅಪೇಕ್ಷೆಯಂತೆಯೇ ಅಂತ್ಯಕ್ರಿಯೆ

ಸಂಸದ ಬಿ.ವೈ ರಾಘವೇಂದ್ರ ಅವರ ಪೋಟೋಗ್ರಾಫರ್ ಪ್ರಸನ್ನ ಭಟ್ ಕೆರೆಯಲ್ಲಿ ಮುಳುಗಿ ಸಾವು

ರಾಮನಗರ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ. ರಾಘವೇಂದ್ರ ಅವರ ಪೋಟೋಗ್ರಾಫರ್ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಮಾವತ್ತೂರಿನಲ್ಲಿ ನಡೆದಿದೆ. ಪ್ರಸನ್ನ ಭಟ್ (26) ಮೃತ ಯುವಕ. ಜನವರಿ 1 ರಂದು ಸಂಜೆ ಕಾರಿನಲ್ಲಿ ಸ್ನೇಹಿತರ ಜೊತೆ ಬಂದಿದ್ದ ಮೃತ ಪ್ರಸನ್ನ ಭಟ್ ಅವರು ಮಾವತ್ತೂರು ಕೆರೆಯಲ್ಲಿ ಈಜಾಡಲು ಹೋಗಿದ್ದಾಗ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಕನಕಪುರ ಗಾಮಾಂತರ ಪೆÇಲೀಸ್ ಠಾಣೆ

ಕಾಶಿಯಲ್ಲಿ ಜೈ ಸೀತಾ ರಾಮ್ ಧ್ವನಿಸುರುಳಿ ಬಿಡುಗಡೆ

ಸತ್ಯ ಶಾಂತ ಪ್ರತಿಷ್ಠಾನ (ರಿ) ಅರ್ಪಿಸುವ ಶ್ರೀಮತಿ ಶಾಂತಾ ಕುಂಟಿನಿ ಇವರ ಸಾಹಿತ್ಯ ರಚನೆ ಹಾಗೂ ನಿರ್ಮಾಣದ ಅದೇ ರೀತಿ ಸಂಗೀತ ಹಾಗೂ ಗಾಯನ ದ.ಕ ಜಿಲ್ಲೆಯ ಹೆಸರಾಂತ ಗಾಯಕರಾದ ಶ್ರೀ ಅರ್ವಿಂದ್ ವಿವೇಕ್ ಹಾಗೂ ಪ್ರತೀಕ್ಷಾ ಸೌಜನ್ಯ ಗೌಡ, ನಿತಿನ್ ಇವರ ಧ್ವನಿಯಲ್ಲಿ ಮೂಡಿ ಬಂದಿರುವ ಯೂಟ್ಯೂಬ್ ಹಾಡು “ಜೈ ಸೀತಾ ರಾಮ್ ಹಾಡಿನ ಬಿಡುಗಡೆ ಕಾರ್ಯಕ್ರಮವು ದಿನಾಂಕ 18/12/2022 ರಂದು ಸಂಜೆ ಕಾಶಿ ಕನ್ನಡದ ಕಂಪು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಜಂಗಮವಾಡಿ ಮಠ ವಾರಣಾಸಿ

ಕಸ್ತೂರಿ ರಂಗನ್ ವರದಿ ರದ್ದುಪಡಿಸಲು ಕ್ರಮ ಕೈಗೊಳ್ಳಿ : ಮಾಜಿ ಸಚಿವ ರಮಾನಾಥ ರೈ

ರಾಜ್ಯ ಸರಕಾರ ಕಸ್ತೂರಿ ರಂಗನ್ ವರದಿಗೆ ವಿರೋಧ ಇದೆ ಎಂದು ಹೇಳಿಕೆ ನೀಡಿ ರಾಜಕೀಯ ಲಾಭ ಪಡೆಯುವ ಪ್ರಯತ್ನ ಮಾಡುವುದು ಬೇಡ. ಅದನ್ನು ರದ್ದುಪಡಿಸುವ ಬಗ್ಗೆ ಕ್ರಮ ವಹಿಸಲಿ ಎಂದು ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ರಮಾನಾಥ ರೈ ಒತ್ತಾಯಿಸಿದ್ದಾರೆ. ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಸ್ತೂರಿ ರಂಗನ್ ವರದಿ ಇನ್ನೂ ರದ್ದಾಗಿಲ್ಲ. ಆ ಸಮಸ್ಯೆ ಇನ್ನೂ ಜೀವಂತ ಇದೆ. ಕಸ್ತೂರಿ ರಂಗನ್ ವರದಿ ಜಾರಿ ಬೇಡ ಎಂದು ಆಕ್ಷೇಪವನ್ನು

5 ಮತ್ತು 8 ನೇ ತರಗತಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸುವ ನಿರ್ಧಾರ ಸರಿಯಲ್ಲ : ಪೋಷಕರು

ಬೆಂಗಳೂರು; ಪ್ರಸಕ್ತ ಶೈಕ್ಷಣಿಕ ಸಾಲಿನಿಂದ 5 ಮತ್ತು 8 ನೇ ತರಗತಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿರುವುದು ರಾಷ್ಟ್ರೀಯ ಶಿಕ್ಷಣ ನೀತಿ – ಎನ್.ಇ.ಪಿಗೆ ವಿರುದ್ಧವಾಗಿದ್ದು, ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಇದು ಭಾರೀ ಅಸಮಾನತೆ ಸೃಷ್ಟಿಸಲಿದೆ ಎಂದು ಕರ್ನಾಟಕ ಪ್ರದೇಶ ಸಾಮಾನ್ಯ ನಾಗರಿಕರ ಧ್ವನಿ ವೇದಿಕೆ ಕಳವಳ ವ್ಯಕ್ತಪಡಿಸಿದೆ. ಶೈಕ್ಷಣಿಕ ವರ್ಷದ ಕೊನೆಯಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ವಿವೇಚನೆ ಇಲ್ಲದೇ ಏಕಾಏಕಿ

ಹತ್ತು ದಿವಸಗಳ ಒಳಗಾಗಿ ಮಂಗಳೂರು ವಿವಿ ಫಲಿತಾಂಶ ಬಿಡುಗಡೆ : ವಿಪಕ್ಷ ಉಪ ನಾಯಕ ಯು.ಟಿ.ಖಾದರ್ ಪ್ರಶ್ನೆಗೆ ಸದನದಲ್ಲಿ ಭರವಸೆ

ಮಂಗಳೂರು ವಿಶ್ವವಿದ್ಯಾನಿಲಯದ ಫಲಿತಾಂಶ ವಿಳಂಬದ ಬಗ್ಗೆ ಸದನದಲ್ಲಿ ಸರಕಾರವನ್ನು ಪ್ರಶ್ನಿಸಿದ ವಿಪಕ್ಷ ಉಪ ನಾಯಕ ಯು.ಟಿ.ಖಾದರ್ ಫಲಿತಾಂಶ ವಿಳಂಬದಿಂದಾಗಿ ವಿದ್ಯಾರ್ಥಿಗಳಿಗೆ ತನ್ನ ಹಿಂದಿನ ವರ್ಷದ ಫಲಿತಾಂಶ ತಿಳಿಯದೆ ಮುಂದಿನ ವರ್ಷಕ್ಕಾಗಿ ಸ್ಕಾಲರ್ ಶಿಪ್ ಗೆ ಅರ್ಜಿ ಸಲ್ಲಿಸಲು ಗೊಂದಲ,ಅದೇ ರೀತಿ ಹಾಸ್ಟೆಲ್ ಗಳಲ್ಲಿ ಗೊಂದಲ ಮುಂತಾದ ವಿಚಾರಗಳ ಬಗ್ಗೆ ಸದನದಲ್ಲಿ ವಿವರಿಸಿ ಆದಷ್ಟು ಬೇಗನೇ ಫಲಿತಾಂಶ ಬಿಡುಗಡೆ ಮಾಡುವಂತೆ ಸರಕಾರಕ್ಕೆ ಒತ್ತಾಯಿಸಿದರು.”ಎ”

ನೈತಿಕ ಸ್ಥೈರ್ಯವನ್ನು ಕುಗ್ಗಿಸುವುದಕ್ಕಾಗಿ ಡಿಕೆಶಿಯ ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ ನಡೆಸಲಾಗಿದೆ : ಅಮಳ ರಾಮಚಂದ್ರ

ಪುತ್ತೂರು: ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳು ಇಡಿ, ಐಟಿ ಮತ್ತು ಸಿಬಿಐಗಳನ್ನು ತನ್ನ ಸ್ವ ರಕ್ಷಣೆಯ ಸೊತ್ತುಗಳಾಗಿ ಬಳಸಿಕೊಳ್ಳುತ್ತಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ನೈತಿಕ ಸ್ಥೈರ್ಯವನ್ನು ಕುಗ್ಗಿಸುವುದಕ್ಕಾಗಿ ಅವರ ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ಕೆಪಿಸಿಸಿ ವಕ್ತಾರ ಅಮಳ ರಾಮಚಂದ್ರ ಆರೋಪಿಸಿದ್ದಾರೆ. ಅವರು ಬುಧವಾರ ಪುತ್ತೂರು ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಬೆಳಗಾವಿ

ಕಾರವಾರ: ದನಗಳನ್ನು ಬೇಟೆಯಾಡುತ್ತಿದ್ದ ಹುಲಿ ಬೋನಿಗೆ

ಕಾರವಾರ ತಾಲೂಕಿನ ಉಳವಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಚಂದ್ರಾಳಿ ಮೊಳೆ ಊರುಗಳಲ್ಲಿ ಸಾಕು ದನಗಳ ಬೇಟೆ ಆಡುತ್ತಿದ್ದ ಹುಲಿಯನ್ನು ಗುಂದ ಅರಣ್ಯ ಇಲಾಖೆಯ ಅಧಿಕಾರಿಗಳು ಸೆರೆ ಹಿಡಿದಿದ್ದಾರೆ. ಕಳೆದ 15 ದಿನಗಳಿಂದ ಹುಲಿಯೊಂದು ರೈತರ ದನದ ಕೊಟ್ಟಿಗೆಗೆ ಬಂದು ರಾತ್ರಿ ವೇಳೆ ದನಗಳನ್ನು ಕೊಂದು ಹೊತ್ತೊಯ್ಯುತ್ತಿತ್ತು. ಇಲ್ಲವೇ ತಿಂದು ಅರೆಜೀವ ಮಾಡಿ ಹೋಗುತ್ತಿತ್ತು. ಇದರಿಂದ ಬಡ ರೈತರು ಕಂಗಾಲಾಗಿ ಹೋಗಿದ್ದರ. ಅರಣ್ಯ ಇಲಾಖೆಯ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದ್ದರು.

ಕರ್ನಾಟಕ ಪ್ರಾಂತ ರೈತ ಸಂಘದ ಮಾಜಿ ಅಧ್ಯಕ್ಷ ಪರಮೇಶ್ವರನ್ ನಾಯರ್ (84) ನಿಧನ

ಮೂಲತಃ ಕೇರಳದವರಾಗಿದ್ದು , ಕಳೆದ 30 ವರ್ಷಗಳಿಂದ ಕಳೆಂಜ ಗ್ರಾಮದ ಕೋಡಿಕುಲತ್ ಎಂಬಲ್ಲಿ ವಿವಿಧ ಕೃಷಿ ಚಟುವಟಿಕೆಗಳನ್ನು ನಡೆಸಿಕೊಂಡಿದ್ದರೂ , ಕೇರಳ ರಾಜ್ಯದ ಹಿರಿಯ ಕಮ್ಯೂನಿಸ್ಟ್‌ ನಾಯಕರೊಂದಿಗೆ ನಿಕಟ ಸಂಬಂಧ ಹೊಂದಿದ್ದ ನಾಯರ್ ಅವರು ಅತ್ಯಂತ ಸರಳ ವ್ಯಕ್ತಿತ್ವದಿಂದ ಜನಸಾಮಾನ್ಯರ ಮೆಚ್ಚುಗೆ ಗಳಿಸಿದ್ದರು. ಅರಳಿ ಸೌಜನ್ಯ ನಗರದ ಭೂ ಹೋರಾಟ ಸೇರಿದಂತೆ ಹಲವಾರು ರೈತರ ಹೋರಾಟದ ನೇತೃತ್ವವನ್ನು ವಹಿಸಿದ್ದರು. ಸರ್ಕಾರಗಳ ಜನ ವಿರೋಧಿ ನೀತಿಗಳ ಬಗ್ಗೆ ಜನಸಾಮಾನ್ಯರಿಗೆ