Home Archive by category ರಾಜ್ಯ (Page 66)

ರಾಷ್ಟ್ರೀಯ ಶಿಕ್ಷಣ ನೀತಿ 2020ರ ಅನುಷ್ಠಾನಕ್ಕೆ ಚಾಲನೆ

ಬೆಂಗಳೂರು:  ಉನ್ನತ ಶಿಕ್ಷಣ ಇಲಾಖೆ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಇಂದು ಆಯೋಜಿಸಿದ್ದ ರಾಷ್ಟ್ರೀಯ ಶಿಕ್ಷಣ ನೀತಿ 2020ರ ಅನುಷ್ಠಾನಕ್ಕೆ ಕೇಂದ್ರ ಶಿಕ್ಷಣ, ಕೌಶಲ್ಯಾಭಿವೃದ್ಧಿ ಹಾಗೂ ಉದ್ಯಮಶೀಲತಾ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಚಾಲನೆ ನೀಡಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎನ್.ಇ.ಪಿ ಸಹಾಯವಾಣಿ, ಉನ್ನತ ಶಿಕ್ಷಣ ಅಂತರಾಷ್ಟೀಕರಣ

ಪರಿಸರ ಸಂರಕ್ಷಣೆ ಸಂದೇಶದೊಂದಿಗೆ ರಕ್ಷಾ ಬಂಧನ ಆಚರಿಸಿದ ಮಾಜಿ ಸಚಿವ ಎಂ.ಬಿ ಪಾಟೀಲ್

ರಾಜ್ಯದ ಹಲವೆಡೆ ಇಂದು ಅಣ್ಣ ತಂಗಿಯರ ಬಾಂಧವ್ಯ ಬೆಸೆಯುವ ಹಬ್ಬ ಎಂದೇ ಖ್ಯಾತಿ ಪಡೆದಿರುವ ರಕ್ಷಾ ಬಂಧನ ಆಚರಿಸಲಾಗುತ್ತಿದೆ. ರಕ್ಷಾ ಬಂಧನವು ನೂಲು ಹುಣ್ಣಿಮೆ ದಿನದಂದು ಪ್ರತಿ ವರ್ಷ ನಡೆಯುವ ಹಬ್ಬದಲ್ಲಿ ಅಣ್ಣ ತಂಗಿಗೆ ನೂಲಿನ ರೂಪದಲ್ಲಿ ದಾರ, ರಾಖಿ ಕಟ್ಟುವುದು ಸಂಪ್ರದಾಯ. ಆದರೆ ಮಾಜೀ ಗೃಹ ಸಚಿವರಾದ ಎಂ.ಬಿ ಪಾಟೀಲ್ ಈ ಬಾರಿ ವಿಶಿಷ್ಟ ರೀತಿಯಲ್ಲಿ ರಕ್ಷಾ ಬಂಧನ ಆಚರಿಸಿ ಗಮನಸೆಳೆದಿದ್ದಾರೆ. ಕೋಟಿ ವೃಕ್ಷ ಅಭಿಯಾನವನ್ನು ಯಶಸ್ವಿಯಾಗಿ ಪೂರೈಸಿ ಆ ಮೂಲಕ ಪರಿಸರದ

ವೀಕೆಂಡ್ ಕರ್ಫ್ಯೂ ಅನಗತ್ಯ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

 ವಿಜಯಪುರ ಜಿಲ್ಲೆಯಲ್ಲಿ ಕೊರೊನಾ ಹೊಸ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ. ಆದರೂ, ಶನಿವಾರ ಮತ್ತು ರವಿವಾರ ವೀಕೆಂಡ್ ಕರ್ಫ್ಯೂ ವಿಧಿಸುತ್ತಿದ್ದಾರೆ. ಕೋವಿಡ್ ಕೇವಲ ಶನಿವಾರ ಮತ್ತು ರವಿವಾರ ಮಾತ್ರ ಬರುತ್ತದಾ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಶ್ನಿಸಿದರು. ಈ ಕುರಿತು ಸುದ್ದಿಗಾರದೊಂದಿಗೆ ಮಾತನಾಡಿದ ಅವರು, ಕೋವಿಡ್ ಲಸಿಕೆ ಹಾಕುವುದರಲ್ಲಿ ವಿಜಯಪುರ ನಗರ ರಾಜ್ಯದಲ್ಲಿಯೇ ಮೊದಲ ಸ್ಥಾನದಲ್ಲಿದೆ. ಕೊರೊನಾ 3ನೇ ಅಲೆ ನಮ್ಮ ಮೇಲೆ ಹೆಚ್ಚಿಗೆ ಪರಿಣಾಮ

ವಿ4 ಸ್ಟ್ರೀಮ್‌ನಲ್ಲಿ ತೆರೆಕಂಡ ಟು ಆಂಡ್ ಮೀ ತುಳು ಸಿನಿಮಾಕ್ಕೆ ಪ್ರೇಕ್ಷಕರು ಫಿದಾ

ಟು ಆಂಡ್ ಮೀ ಹೆಸ್ರು ಹೇಳುವ ಹಾಗೆ ಇದೊಂದು ಡಿಫರೆಂಟ್ ಮೂವಿ… ಎಲ್.ಎಸ್. ಮೀಡಿಯಾ ಬ್ಯಾನರಡಿಯಲ್ಲಿ ಮೂಡಿ ಬಂದಿದೆ. ಸ್ವರಾಜ್ ಶೆಟ್ಟಿ ಬಹುಭಾಷಾ ಸಿನಿಮಾದಲ್ಲಿ ನಟಿಸಿದ್ದರೂ ಅವರ ಮೊದಲ ನಿರ್ದೇಶನದಲ್ಲಿ ತೆರೆಕಂಡ ಸಿನಿಮಾ ಇದಾಗಿದೆ. ಈಗಾಗಲೇ ವಿ4 ಸ್ಟ್ರೀಮ್‌ನ ಓಟಿಟಿಯಲ್ಲಿ ರಿಲೀಸ್ ಆಗಿರುವ ಟು ಆಂಡ್ ಮೀ ತುಳು ಮೂವಿಗೆ ಸಿನಿ ಪ್ರೇಕ್ಷಕರಿಂದ ಸಖತ್ ರೆಸ್ಪಾನ್ ಸಿಕ್ಕಿದೆ. ಇಬ್ಬರ ಹುಡುಗಿಯರ ನಡುವೆ ಒಬ್ಬ ಪ್ರೇಮಿ ಎನ್ನುವ ಕಥಾ ಹಂದರ ಹೊಂದಿರುವ ಚಿತ್ರವು ಬಹಳ

ರಾಜ್ಯದ ರೈತರ ಸಮಸ್ಯೆಗಳ ಪರಿಹಾರಕ್ಕೆ ಸಿಎಂ ಬೊಮ್ಮಾಯಿ ಅವರಿಗೆ ಮನವಿ

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರಿಗೆ ರಾಜ್ಯದ ರೈತರ ಸಮಸ್ಯೆಗಳ ಪರಿಹಾರಕ್ಕಾಗಿ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ ಗೌರವಾಧ್ಯಕ್ಷರಾದ ಚಾಮರಸ ಮಾಲೀ ಪಾಟೀಲ್, ಪ್ರಧಾನ ಕಾರ್ಯದರ್ಶಿ ರವಿಕಿರಣ್ ಪುಣಚ ಹಾಗೂ ಕೇಂದ್ರ ಸ್ಥಾನಿಕ ಕಾರ್ಯದರ್ಶಿ ಪಿ.ಗೋಪಾಲ್ ರವರ ನಿಯೋಗದಿಂದ ಒತ್ತಾಯಪತ್ರ ಸಲ್ಲಿಸಿ ಮನವರಿಕೆ ಮಾಡಲಾಯಿತು. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪೂರಕವಾಗಿ ಸ್ಪಂದಿಸಿ ರೈತರ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕವಾಗಿ ಪ್ರಯತ್ನಿಸು ಭರವಸೆ ನೀಡಿದರು.

ಕರ್ನಾಟಕ ಆರ್ಯವೈಶ್ಯ ಅಭಿವೃದ್ಧಿ ನಿಗಮದ ಸಾಲ ಮರುಪಾವತಿ ಮೊಬೈಲ್ ಆಪ್ ಗೆ ಸಿಎಂ ಚಾಲನೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕರ್ನಾಟಕ ರಾಜ್ಯ ಆರ್ಯವೈಶ್ಯ ಅಭಿವೃದ್ಧಿ ನಿಗಮದ ಸಾಲ ಮರುಪಾವತಿ ಮೊಬೈಲ್ ಆಪ್ ಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು ನಿಗಮದ ಸಾಲ ಮರುಪಾವತಿ ಶೇ.90 ರಷ್ಟಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ, ನಿಗಮವನ್ನು ಫೈನಾನ್ಸ್ ಕಾರ್ಪೊರೇಷನ್ ಆಗಿ ಪರಿವರ್ತಿಸಲು ಸಲಹೆ ನೀಡಿದರು. ಆ ಮೂಲಕ ಹೆಚ್ಚಿನ ಸಂಪನ್ಮೂಲ ಕ್ರೋಢೀಕರಿಸಲು ಸಾಧ್ಯವಾಗುವುದು ಹಾಗೂ ಹೆಚ್ಚು ಸಂಖ್ಯೆಯಲ್ಲಿ ಬಡ

ತುಳುವೆರ್ ಕುಡ್ಲ (ರಿ). ನೂತನ ಸಂಘಟನೆಯ “ಲೋಗೋ” ಬಿಡುಗಡೆ

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಇಂದು ವಿಧಾನಸೌಧದ ಮುಖ್ಯಮಂತ್ರಿ ಕಚೇರಿಯಲ್ಲಿ ತುಳುವೆರ್ ಕುಡ್ಲ (ರಿ). ನೂತನ ಸಂಘಟನೆಯ “ಲೋಗೋ”ವನ್ನು ಬಿಡುಗಡೆ ಮಾಡಿದರು. ತುಳುಭಾಷೆಯನ್ನು ಕರ್ನಾಟಕ ರಾಜ್ಯದ ಅಧಿಕೃತ ರಾಜ್ಯಭಾಷೆಯನ್ನಾಗಿ ಘೋಷಣೆ ಮಾಡುವಂತೆ ಮನವಿ ಸಲ್ಲಿಸಲಾಯಿತು ಹಾಗೂ “ತುಳು ಕೆಳಿಂಜ ಭಾರತ” ಎನ್ನುವ ತುಳುನಾಡಿಗೆ ಸಂಬಂಧಪಟ್ಟ ಪುಸ್ತಕವನ್ನು ಕೊಟ್ಟು ಮುಖ್ಯಮಂತ್ರಿಗಳನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಂಗಳೂರು

ಕು. ಅಮನ, ಪ್ರತಿಷ್ಠಿತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ “ಕಿರಿಯ ಕವಯಿತ್ರಿ” ಎಂದು ದಾಖಲೆಗೆ ಸೇರ್ಪಡೆ

ಕು. ಅಮನ, 8 ನೇ ತರಗತಿ, ಬಿಷಪ್ ಕಾಟನ್ ಗಲ್ರ್ಸ್ ಸ್ಕೂಲ್, ಬೆಂಗಳೂರಿನಲ್ಲಿ ಓದುತ್ತಿದ್ದು, ಪ್ರತಿಷ್ಠಿತ ‘ಇಂಡಿಯಾ ಬುಕ್ ಆಫ್ ರೆಕಾಡ್ರ್ಸ್’ ನಲ್ಲಿ “ಕಿರಿಯ ಕವಯಿತ್ರಿ” ಮತ್ತು ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ “ಗ್ರ್ಯಾಂಡ್ ಮಾಸ್ಟರ್” ಆಗಿ ದಾಖಲಾಗಿದೆ. ವಿವರಗಳು ಹೀಗಿವೆ: ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್: ಅತ್ಯಂತ ಕಿರಿಯ ಕವಯಿತ್ರಿ ಎಂಬ ದಾಖಲೆಯನ್ನು ಬೆಂಗಳೂರಿನ ಕು. ಅಮನ (ಜನನ ಜೂನ್ 20, 2008 ರಂದು) ಮಾಡಿದ್ದಾರೆ. ಅವರು 61 ಕವನಗಳ

ಪ್ರಾಧಿಕಾರ ಮತ್ತು ಅಕಾಡೆಮಿಗಳ ಬಲವರ್ಧನೆಗೆ ಕ್ರಮ – ಸಚಿವ ಸುನಿಲ್ ಕುಮಾರ್

ಬೆಂಗಳೂರು :ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಪ್ರಾಧಿಕಾರಗಳು ಮತ್ತು ಅಕಾಡೆಮಿಗಳ ಬಲವರ್ಧನೆಗೆ ಅಗತ್ಯವಾದ ಎಲ್ಲಾ ಕ್ರಮ ಕೈಗೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ,ಜೊತೆಗೆ ಅವು ಹೊಸ ದೃಷ್ಟಿಕೋನದಿಂದ ಕಾರ್ಯಕ್ರಮ ರೂಪಿಸಿ ಜಾರಿಗೆ ತರುವ ಮೂಲಕ ಸಂಸ್ಕೃತಿ ಕಟ್ಟುವ ಕೆಲಸಕ್ಕೆ ತೊಡಗಲು ಬೇಕಾದ ಎಲ್ಲಾ ಸಹಕಾರ ನೀಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಇಂಧನ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ. ಅವರು ಇಂದು ಕನ್ನಡ ಮತ್ತು

ವಕ್ಪ್ ಆಸ್ತಿ ಕಬಳಿಕೆ ಪ್ರಕರಣ ಶೀಘ್ರ ಇತ್ಯರ್ಥಕ್ಕೆ ಕ್ರಮ: ಸಚಿವೆ ಶಶಿಕಲಾ ಜೊಲ್ಲೆ

ಬೆಂಗಳೂರು: ರಾಜ್ಯದ ವಕ್ಫ್ ಆಸ್ತಿ ಕಬಳಿಕೆ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಜರಾಯಿ, ವಕ್ಫ್ ಮತ್ತು ಹಜ್ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. ಗುರುವಾರ ವಿಕಾಸಸೌಧದಲ್ಲಿ ವಕ್ಫ್ ಮತ್ತು ಹಜ್ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ಸಚಿವರು ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮುಜರಾಯಿ ಹಾಗೂ ಹಜ್ ಮತ್ತು ವಕ್ಫ್ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿದ್ದೇನೆ.ರಾಜ್ಯದಲ್ಲಿ ವಕ್ಫ್ 105885 ಎಕರೆ ಜಮೀನು ಗುರುತಿಸಲಾಗಿದೆ.