Home Archive by category ರಾಷ್ಟ್ರೀಯ (Page 21)

ನಟಿ ಪೂಜಾ ಹೆಗ್ಡೆಗೆ ಅತ್ಯುತ್ತಮ ನಟಿ ಪ್ರಶಸ್ತಿ

2022 ರ ಪ್ರತಿಷ್ಠಿತ SIIMA ಪ್ರಶಸ್ತಿ ಸಮಾರಂಭದಲ್ಲಿ 2 ಪ್ರಶಸ್ತಿಗಳನ್ನು ಬಹುಭಾಷಾ ನಟಿ ಪೂಜಾ ಹೆಗ್ಡೆ ಅವರಿಗೆ ಲಭಿಸಿದೆ.ಅವರು ಯೂತ್ ಐಕಾನ್ ಆಫ್ ಸೌತ್ ಇಂಡಿಯಾ ಪ್ರಶಸ್ತಿ ಮತ್ತು ಮೋಸ್ಟ್ ಎಲಿಜಿಬಲ್ ಬ್ಯಾಚುಲರ್ ಚಿತ್ರಕ್ಕಾಗಿ ಅತ್ಯುತ್ತಮ ನಟಿ ಪ್ರಶಸ್ತಿಯನ್ನು ಗೆದ್ದಿದ್ದಾರೆ.

ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಭವ್ಯ ಪ್ರತಿಮೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ಅನಾವರಣ

ನವದೆಹಲಿ: ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಭವ್ಯ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ರಾಷ್ಟ್ರ ರಾಜಧಾನಿಯ ಇಂಡಿಯಾ ಗೇಟ್ ಬಳಿ ಅನಾವರಣಗೊಳಿಸಿದರು. 28 ಅಡಿ ಎತ್ತರದ ಜೆಟ್ ಕಪ್ಪು ಗ್ರಾನೈಟ್ ಪ್ರತಿಮೆಯನ್ನು ಇಂಡಿಯಾ ಗೇಟ್ ಬಳಿಯ ಕ್ಯಾನೋಪಿ ಅಡಿಯಲ್ಲಿ ಇರಿಸಲಾಗುವುದು. ನೇತಾಜಿ ಅವರ 125ನೇ ಜನ್ಮ ವರ್ಷಾಚರಣೆ ಅಂಗವಾಗಿ ಈ ವರ್ಷದ ಆರಂಭದಲ್ಲಿ ಪರಾಕ್ರಮ್ ದಿವಸ್ (ಜನವರಿ 23) ರಂದು ನೇತಾಜಿ ಅವರ ಹೊಲೋಗ್ರಾಮ್ ಪ್ರತಿಮೆಯನ್ನು ಅನಾವರಣಗೊಳಿಸಿದ

ಸೆ.2ರಂದು ಪ್ರಧಾನಿ ಮಂಗಳೂರಿಗೆ : ದ.ಕ ಜಿಲ್ಲಾಡಳಿತದಿಂದ ಸಿದ್ಧತೆ

ಪ್ರಧಾನಿ ನರೇಂದ್ರ ಮೋದಿಯವರ ಮಂಗಳೂರು ಭೇಟಿಗೆ ದಕ್ಷಿಣ ಕನ್ನಡ ಜಿಲ್ಲಾಡಳಿತ ವತಿಯಿಂದ ಸಿದ್ಧತೆಗಳು ನಡೆಯುತ್ತಿವೆ. ಪ್ರಧಾನಿಯವರ ಸಮಾವೇಶದ ತಾಣವಾಗಿರುವ ಕೂಳೂರಿನ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಬಿರುಸಿನ ಸಿದ್ಧತೆಗಳು ನಡೆಯುತ್ತಿವೆ. ಸುಮಾರು 2 ಲಕ್ಷ ಮಂದಿ ಕುಳಿತುಕೊಳ್ಳಲು ಸಾಧ್ಯವಾಗು ವಂತಹ ಶೀಟ್‍ಗಳನ್ನು ಅಳವಡಿಸಿ ಬೃಹತ್ ಚಪ್ಪರ ಹಾಕುವ ಕಾಮಗಾರಿ ಭರದಿಂದ ಸಾಗುತ್ತಿದೆ. 20 ಅಡಿ ಎತ್ತರ, 60 ಅಡಿ ಉದ್ದ ಹಾಗೂ 80 ಅಡಿ ಅಗಲದ ಸಭಾವೇದಿಕೆ

ಸೌಹಾರ್ದ ಲಹರಿ : ನೂತನ ಪದಾಧಿಕಾರಿಗಳ ಉದ್ಘಾಟನ ಸಮಾರಂಭ

ಸೌಹಾರ್ದ ಲಹರಿಯ ನೂತನ ಪದಾಧಿಕಾರಿಗಳ ಉದ್ಘಾಟನ ಸಮಾರಂಭವು ಮಾರ್ಕೊ ಪೋಲೊ ಹೋಟೆಲ್ನಲ್ಲಿ ವಿಜೃಂಭಣೆಯಿಂದ ನಡೆಯಿತು. ಸಂಘದ ಗೌರವ ಅಧ್ಯಕ್ಷರು ಶ್ರೀ ದಿನೇಶ್ ಸಿ ದೇವಾಡಿಗ ನೂತನ ಪದಾಧಿಕಾರಿಗಳಿಗೆ ಶುಭಾಶಯ ನೀಡಿದರು. ಸಂಘದ ಗೌರವ ಸಲಹೆಗಾರ ಶ್ರೀ ದಯಾ ಕಿರೋಡಿಯನ್ ಸಂಘದ ನಿರ್ಮಾಣ ಮತ್ತೆ ಸಂಘದ ಪೌಂಡರ್ ಸದಾಶಿವ ದಾಸ್ ಅವರ ಬಗ್ಗೆ ಮಾತಾಡಿ ಸಂಘದ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ಸೂಚಿಸಿದರು. ಸಂಘದ ನಿಕಟ ಪೂರ್ವ ಅಧ್ಯಕ್ಷರು ಶ್ರೀ ಅಶೋಕ್ ಅಂಚನ್, ಶ್ರೀ ರಿಚರ್ಡ್, ಶ್ರೀ

ಬಂಟರ ಸಂಘದ ಅಭಿವೃದ್ಧಿಗೆ ಎಲ್ಲಾ ಬಂಟರು ಮುಂದೆ ಬರಬೇಕು :ಚಂದ್ರಹಾಸ್ ಕೆ. ಶೆಟ್ಟಿ

ಮುಂಬಯಿ, ಆ.22 : ದಿಶಾ ” ಒಂದು ಉತ್ತಮ ಕಾರ್ಯಕ್ರಮ ಬಂಟರ ಸಂಘದ ಪ್ರತಿಯೊಂದು ಕಾರ್ಯಕ್ರಮವು ಹಂತ ಹಂತವಾಗಿ ಬೆಳೆಯುತ್ತಾ ಹೋಗುತ್ತಿದೆ. ನಮ್ಮ ಹಿಂದಿನವರು ಹಾಕಿರುವ ಸದೃಢ ಅಡಿಪಾಯ ಶ್ರೇಯೋಭಿವೃದಿಗೆ ಕಾರಣವಾಗಿದೆ ಇದಕ್ಕೆ ಎಸ್. ಎಂ. ಶೆಟ್ಟಿ ಸ್ಕೂಲ್ ಉದಾಹರಣೆಯಾಗಿದೆ ಎಂದು ಬಂಟರ ಸಂಘ ಮುಂಬಯಿ ಅದ್ಯಕ್ಷ ಚಂದ್ರಹಾಸ್ ಕೆ. ಶೆಟ್ಟಿ ಅವರು ತಿಳಿಸಿದರು. ಆ.21 ರಂದು ಪೊವಾಯಿ ಎಸ್.ಎಂ.ಶೆಟ್ಟಿ ಶಾಲೆಯ ಸಭಗೃಹದಲ್ಲಿ ಬಂಟರ ಸಂಘ ಮುಂಬಯಿ , ಅಂಧೇರಿ – ಬಾಂದ್ರ

ಬ್ಲಾಕ್ ಬಸ್ಟರ್ ಚಿತ್ರಗಳ ನಿರ್ಮಾಪಕ ಎ.ಜಿ. ನಡಿಯಾಡ್ ವಾಲಾ ನಿಧನ

ಬಾಲಿವುಡ್ ಬ್ಲಾಕ್ ಬ್ಲಸ್ಟರ್ ಚಿತ್ರಗಳ ನಿರ್ಮಾಪಕ ಹಾಗೂ ಲೋಕೋಪಕಾರಿ ಅಬ್ದುಲ್ ಗಫರ್ ನಾಡಿಯಾಡ್ ವಾಲಾ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಅನಾರೋಗ್ಯದಿಂದಾಗಿ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಮೂವರು ಪುತ್ರಿಯರು ಹಾಗೂ ಮೂವರು ಪುತ್ರರು. ಅಪಾರ ಅಭಿಮಾನಿಗಳನ್ನು ಅವರು ಅಗಲಿದ್ದಾರೆ. ಹೀರಾಪೇರಿ ಮತ್ತು ವೆಲ್ ಕಮ್ ನಂತಹ ಹಾಸ್ಯಮಯ ಚಿತ್ರಗಳನ್ನು ನಿರ್ಮಿಸಿ ಎ.ಜಿ. ನಡಿಯಾಡ್ ವಾಲಾ ಮನೆ ಮಾತಾಗಿದ್ದರು. ಪಠಾಣ್ ಕೆ

ರಾಷ್ಟ್ರ ಮಟ್ಟದ ಛಾಯಾಗ್ರಹಣ ಸ್ಪರ್ಧೆ : ದ.ಕ. ಜಿಲ್ಲೆ ಮೂವರಿಗೆ ಬಹುಮಾನ

ರಾಷ್ಟ್ರ ಮಟ್ಟದ ಛಾಯಾಗ್ರಹಣ ಸ್ಪರ್ಧೆ:ಅವಿಭಜಿತ ದ.ಕ. ಜಿಲ್ಲೆಯ ಮೂವರಿಗೆ ಬಹುಮಾನ ,ಆಂಧ್ರ ಪ್ರದೇಶ ಪೋಟೋಗ್ರಫಿ ಅಕಾಡೆಮಿ ಆಜಾದಿಕಾ ಅಮೃತ್ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ರಾಷ್ಟ್ರ ಮಟ್ಟದ ಛಾಯಾಗ್ರಹಣ ಸ್ಪರ್ಧೆಯಲ್ಲಿ ಕರ್ನಾಟಕದ ಪಂಚ ಛಾಯಾಗ್ರಾಹಕರ ಚಿತ್ರಗಳು ಪ್ರಶಸ್ತಿಗೆ ಆಯ್ಕೆಯಾಗಿದ್ದು ಇವರ ಪೈಕಿ ಮೂವರು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಮೂವರು ಕಳುಹಿಸಿದ ಚಿತ್ರಕ್ಕೆ ಬಹುಮಾನ ಲಭಿಸಿದೆ. ಉದಯವಾಣಿ ಪತ್ರಿಕೆಯ ಹಿರಿಯ ಪತ್ರಿಕಾ ಛಾಯಾಗ್ರಾಹಕ ಆಸ್ಟ್ರೋ

ಇಂದು ಜಂತುಹುಳ ನಿವಾರಣ ದಿನಾಚರಣೆ

ಪ್ರತೀ ವರ್ಷ, ವರ್ಷಕ್ಕೆ ಎರಡು ಬಾರಿ ರಾಷ್ಟ್ರೀಯ ಜಂತುಹುಳ ನಿವಾರಣಾ ದಿನಾಚರಣೆ. ಹೊಟ್ಟೆ ಹುಳಗಳ ನಿರ್ಮೂಲನೆಗಾಗಿ ಸರಕಾರವು ರಾಷ್ಟ್ರೀಯ ಜಂತುಹುಳ ನಿವಾರಣಾ ದಿನವನ್ನು ಆಚರಿಸುತ್ತದೆ. ಈ ವರ್ಷ ಆಗಸ್ಟ್‌ 10ರಂದು 1ರಿಂದ 19 ವರ್ಷ ವಯಸ್ಸಿನ ಎಲ್ಲ ಮಕ್ಕಳು ಹಾಗೂ ಹದಿಹರೆಯದವರಿಗೆ ಆರೋಗ್ಯ ಕಾರ್ಯಕರ್ತರು, ಶಾಲಾ ಶಿಕ್ಷಕರು ಮತ್ತುಅಂಗನವಾಡಿ ಕಾರ್ಯಕರ್ತೆಯರು ಜಂತು ಹುಳ ನಿವಾರಣೆಗಾಗಿ, ವಯಸ್ಸಿಗೆ ಅನುಗುಣವಾಗಿ ಸೂಕ್ತ ಪ್ರಮಾಣದ ಡೋಸೇಜ್‌ ಪ್ರಕಾರ ಅಲ್ಬೆಂಡಜೋಲ್‌

‘ಹರ್ ಘರ್ ತಿರಂಗಾ’ ಅಭಿಯಾನ : ಉಡುಪಿ ಶಾಸಕ ಕೆ.ರಘುಪತಿ ಭಟ್ ಚಾಲನೆ

ದೇಶದ ‘ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆ’ಯ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಕರೆಯಂತೆ ‘ಹರ್ ಘರ್ ತಿರಂಗಾ’ ಅಭಿಯಾನದಡಿ ಮನೆ ಮನೆಗಳಲ್ಲಿ ತ್ರಿವರ್ಣ ಧ್ವಜವನ್ನು ಅರಳಿಸುವ ನಿಟ್ಟಿನಲ್ಲಿ ಉಡುಪಿಯ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದ ಪ್ರಮುಖರಾದ ಎ.ಪುಂಡಲೀಕ ಕಾಮತ್ ರವರಿಗೆ ಉಡುಪಿ ಶಾಸಕ ಕೆ.ರಘುಪತಿ ಭಟ್ ರಾಷ್ಟ್ರ ಧ್ವಜವನ್ನು ಹಸ್ತಾಂತರಿಸಿ ಆಗಸ್ಟ್ 13ರ ಮುಂಜಾನೆಯಿಂದ ಆಗಸ್ಟ್ 15ರ ಸಂಜೆಯ ತನಕ ದೇವಸ್ಥಾನ, ಸಂಘ-ಸಂಸ್ಥೆಗಳು

13ರಿಂದ ಎಲ್ಲಾ ಸರ್ಕಾರಿ ಕಚೇರಿಗಳ ಮೇಲೆ ರಾಷ್ಟ್ರಧ್ವಜಾರೋಣಕ್ಕೆ ಸೂಚನೆ

ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಇದೇ ಆಗಸ್ಟ್ 13 ರಿಂದ 15 ರವರೆಗೆ ಹರ್ ಘರ್ ತಿರಂಗ ಕಾರ್ಯಕ್ರಮದಡಿ ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳ ಕಟ್ಟಡಗಳ ಮೇಲೆ ಕಡ್ಡಾಯವಾಗಿ ರಾಷ್ಟ್ರಧ್ವಜವನ್ನು ಹಾರಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್ ಅವರು ಸಂಬಂಧಿಸಿದ ಎಲ್ಲಾ ಇಲಾಖೆಗಳ ಮುಖ್ಯಸ್ಥರುಗಳಿಗೆ ನಿರ್ದೇಶನ ನೀಡಿದರು. ಅವರು ಆ.1ರ ಸೋಮವಾರ ನಗರದ ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ಹರ್ ಘರ್