ಈ ಬಾರಿಯ ಧ್ಯಾನ್ಚಂದ್ ಖೇಲ್ ರತ್ನ ಪ್ರಶಸ್ತಿಯನ್ನು ಬ್ಯಾಡ್ಮಿಂಟನ್ ಜೋಡಿ ಸಾತ್ವಿಕ್ ಸಾಯಿರಾಜ್ ಕಿರಣ್ ರೆಡ್ಡಿ ಮತ್ತು ಚಿರಾಗ್ ಶೆಟ್ಟಿಯವರಿಗೆ ನೀಡಲಾಗಿದೆ. ಇದೇ ವೇಳೆ 26 ಮಂದಿ ಕ್ರೀಡಾಳುಗಳಿಗೆ ಅರ್ಜುನ ಪ್ರಶಸ್ತಿ ನೀಡಲಾಗಿದೆ. ಜಮ್ಮು ಕಾಶ್ಮೀರದ ಶೀತಲ್ ದೇವಿ ಕಾಲಿನಿಂದಲೇ ಬಿಲ್ಲೆಳೆದು ಬಾಣ ಬಿಟ್ಟು ಅಂತರರಾಷ್ಟ್ರೀಯ ಸಾಧನೆ ಮಾಡಿದವರು. ಅವರ ಜೊತೆಗೆ
ರಾಮ ಮಂದಿರ ಉದ್ಘಾಟನೆಗೆ ದಯವಿಟ್ಟು ಬರಬೇಡಿ ಎಂದು ರಾಮ ಮಂದಿರ ಹೋರಾಟದ ಪ್ರಮುಖರು ಮತ್ತು ಬಿಜೆಪಿ ನಾಯಕರಾಗಿದ್ದ ಲಾಲ್ ಕೃಷ್ಣ ಅಡ್ವಾಣಿ ಮತ್ತು ಮುರಳಿ ಮನೋಹರ ಜೋಶಿಯವರಿಗೆ ರಾಮ ಮಂದಿರ ಟ್ರಸ್ಟ್. ಇದು ಸ್ವಲ್ಪ ವಿವಾದಕ್ಕೆ ಕಾರಣವಾಗುತ್ತಲೇ ರಾಮ ಮಂದಿರ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ಅವರು ಇಬ್ಬರು ಹಿರಿಯರೂ ವಯೋ ಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಲಕ್ಷಗಟ್ಟಲೆ ಜನರು ಸೇರುವ ತಾಣದಲ್ಲಿ ಅವರನ್ನು ನೋಡಿಕೊಳ್ಳಲು
ಡಿಸೆಂಬರ್ 15ನ್ನು 2005ರಿಂದ ಜಾಗತಿಕ ಟೀಡೇ ಆಗಿ ಭಾರತ ಸಹಿತ ಹಲವು ದೇಶಗಳು ಆಚರಿಸುತ್ತಿವೆ. ಚಾ ಬೆಳೆಗೆ ಪೆÇ್ರೀತ್ಸಾಹ, ಗ್ರಾಹಕರ ಮತ್ತು ಚಾ ಕಾರ್ಮಿಕರ, ಮುಖ್ಯವಾಗಿ ಎಲೆ ಕೊಯ್ವ ಮಹಿಳೆಯರ ಒಳಿತನ್ನು ಹುಡುಕುವುದು ಈ ದಿನಾಚರಣೆಯ ವಿಶೇಷವಾಗಿದೆ. ಬಾಂಗ್ಲಾದೇಶ, ಶ್ರೀಲಂಕಾ, ನೇಪಾಳ, ವಿಯೆಟ್ನಾಂ, ಇಂಡೋನೇಶಿಯಾ, ಕೆನ್ಯಾ, ಮಲಾವಿ, ಮಲೇಶಿಯಾ, ಉಗಾಂಡಾ, ತಾಂಜಾನಿಯಾ, ಭಾರತ ಇವು ಮುಖ್ಯವಾಗಿ ಚಾ ದಿನ ಆಚರಿಸುವ ದೇಶಗಳಾಗಿವೆ.
ಆರೆಸ್ಸೆಸ್ ರಾಷ್ಟ್ರೀಯ ಕಚೇರಿ ಇರುವ ನಾಗಪುರ ವಲಯದಲ್ಲಿ ಬಿಜೆಪಿಗೆ ಭಾರೀ ಮುಖಭಂಗವಾಗಿದೆ. ಈ ಜಿಲ್ಲೆಯ ಹದಿಮೂರು ಪಂಚಾಯತು ಸಮಿತಿಗಳಲ್ಲಿ ಒಂಬತ್ತರ ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ.ಮೂರು ಪಂಚಾಯತು ಸಮಿತಿಗಳು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷಕ್ಕೆ ಸಿಕಿದೆ. ಒಂದರಲ್ಲಿ ಶಿವಸೇನೆಯ ಭಿನ್ನಮತೀಯ ಬಣವು ಅಧ್ಯಕ್ಷತೆಯನ್ನು ಗೆದ್ದಿದೆ. ಬಿಜೆಪಿ ಒಂದರಲ್ಲೂ ಅಧ್ಯಕ್ಷ ಸ್ಥಾನ ಗೆಲ್ಲಲು ವಿಫಲವಾಗಿದೆ. ಮೈತ್ರಿ ಕಾರಣಕ್ಕೆ ಎರಡು ಕಡೆ
ಸಂಸತ್ ದಾಳಿಯ ಆರೋಪಿ ಮನೋರಂಜನ್ ವಿವೇಕಾನಂದ, ಭಗತ್ ಸಿಂಗ್ ಮೊದಲಾದವರ ಪುಸ್ತಕ ಹೆಚ್ಚು ಓದುತ್ತಿದ್ದ ಎಂದೂ, ಮನೆಯಲ್ಲಿ ಸಾಕಷ್ಟು ಕ್ರಾಂತಿಕಾರಿಗಳ ಎಡ ಬಲ ವಾದದ ಪುಸ್ತಕಗಳು ದೊರೆತಿರುವುದಾಗಿ ವರದಿಯಾಗಿದೆ. ಹಾಸನ ಜಿಲ್ಲೆಯ ರಾಮನಾಥಪುರ ತಾಲೂಕಿನ ಮಲ್ಲಾಪುರ ಗ್ರಾಮ ಮೂಲದ ದೇವರಾಜೇಗೌಡ, ಶೈಲಜಾ ದಂಪತಿಯ ಮಗ ಮನೋರಂಜನ್. ವಿಕ್ರಾಂತ್ ಉದ್ಯೋಗದ ಬಳಿಕ ದೇವರಾಜೇಗೌಡರು ಕೃಷಿ ಮಾಡುತ್ತಿದ್ದರು. ಮೈಸೂರಿನ ವಿಜಯನಗರದಲ್ಲಿ ಸ್ವಂತ ಕಟ್ಟಿದ ಮನೆಯಲ್ಲಿ ವಾಸವಿದ್ದರು.
ಸೆಪ್ಟೆಂಬರ್ ವಿಶೇಷ ಸಂಸತ್ ಅಧಿವೇಶನದಲ್ಲಿ ಮಹಿಳಾ ಮೀಸಲಾತಿ ಮಸೂದೆ ಸ್ವೀಕಾರದ ವೇಳೆ ಅಟ್ಟಣಿಗೆಯಿಂದ ಕೆಲವರು ಮೋದೀಜಿ ಜೈ ಎಂದು ಕೂಗಿದ್ದರು. ಇದು ಭದ್ರತಾ ಲೋಪ, ನಾಳೆ ಅಟ್ಟಣಿಗೆಯಿಂದ ದಾಳಿ ಆಗಬಹುದು, ಬಾಂಬು ಎಸೆಯಬಹುದು ಎಂದು ಹಲವು ಸಂಸದರು ಆತಂಕ ವ್ಯಕ್ತಪಡಿಸಿದ್ದರು. ಈಗ ಇಬ್ಬರು ಗ್ಯಾಲರಿಯಿಂದ ಲೋಕಸಭೆಯೊಳಕ್ಕೆ ನುಗ್ಗಿ ಬಂದು ಹಾರಿ ಸಿಕ್ಕಿ ಬಿದ್ದಿದ್ದಾರೆ. ಇವರೂ ಬಲಪಂಥೀಯರೆ. ಅವರಲ್ಲಿ ಒಬ್ಬ ಮೈಸೂರಿನ ವಿದ್ಯಾರ್ಥಿ. ಪ್ರೇಕ್ಷಕರ ಗ್ಯಾಲರಿಗೆ ಪಾಸ್ ಮೈಸೂರು
ಸರ್ವಾಧಿಕಾರ ನಿಲ್ಲಿಸಿ, ಅತ್ಯಾಚಾರ ತಡೆಯಿರಿ ಎಂದು ಸಂಸತ್ತಿನ ಹೊರಗಡೆ ಇಬ್ಬರು ಪ್ರತಿಭಟನೆ ನಡೆಸಿದರು. ನೀಲಂ ಎನ್ನುವ ಪ್ರತಿಭಟನೆ ನಡೆಸಿದ ಮಹಿಳೆಯನ್ನು ಪೋಲೀಸರು ಬಂಧಿಸಿದರು. ಅಲ್ಲದೆ ಪ್ರತಿಭಟನೆ ನಡೆಸುತ್ತಿದ್ದ ನೀಲಂ ಅವರ ಸಂಗಾತಿಗಳು ಎನ್ನಲಾದ ಮತ್ತೂ ಮೂವರನ್ನು ಬಂಧಿಸಿರುವುದಾಗಿ ತಿಳಿದು ಬಂದಿದೆ.ಜೈಭೀಮ್, ಜೈ ಭಾರತ್, ವಂದೇ ಮಾತರಂ ಘೋಷಣೆ ಕೂಗುತ್ತಿದ್ದ ಮಹಿಳೆ ನೀಲಂ ಕೇಂದ್ರ ಸರಕಾರದ ಸರ್ವಾಧಿಕಾರಿ ಧೋರಣೆಯನ್ನು ಖಂಡಿಸಿದರು ಮತ್ತು ಸರಕಾರವು ಮಹಿಳೆಯರ
ಬುಧವಾರ ಡಿಸೆಂಬರ್ 13ರಂದು ಲೋಕಸಭೆಯೊಳಕ್ಕೆ ಇಬ್ಬರು ಅಪರಿಚಿತರು ಪ್ರವೇಶ ಪಡೆದಿದ್ದುದು ಸ್ವಲ್ಪ ಕಾಲ ಸಂಸದರು ಕಕ್ಕಾಬಿಕ್ಕಿಯಾಗಿ ಎದ್ದೋಡುವಂತೆ ಮಾಡಿತು. ಆದರೆ ಅವರನ್ನು ಅಲ್ಲೇ ಸೆರೆ ಹಿಡಿಯಲಾಯಿತು. ಅವರು ಗ್ಯಾಲರಿಗೆ ಪಾಸ್ ಪಡೆದು ಅಲ್ಲಿಂದ ಲೋಕಸಭೆಯೊಳಕ್ಕೆ ಇಳಿದಿರುವುದಾಗಿ ತಿಳಿದು ಬಂದಿದೆ. ಲೋಕ ಸಭೆಯ ಕಲಾಪ ನಡೆಯುತ್ತಿದ್ದಾಗಲೇ ಈ ಇಬ್ಬರು ಅಪರಿಚಿತರು ನುಗ್ಗಿ ಕೂಗಾಡಿದ್ದು ಇಡೀ ಸಂಸತ್ತು ಎದ್ದು ಭಯಭೀತವಾಯಿತು. ಸ್ಪೀಕರ್ ಓಂ ಬಿರ್ಲಾ ಕೂಡಲೆ ಸ್ಥಾನದಿಂದ
ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನನ್ನ ಮೇಲೆ ಹಲ್ಲೆಗೆ ಸಂಚು ನಡೆಸಿದ್ದಾರೆ ಎಂದು ಕೇರಳದ ರಾಜ್ಯಪಾಲರಾದ ಆರಿಫ್ ಮೊಹಮದ್ ಖಾನ್ ಆರೋಪ ಮಾಡಿದ್ದಾರೆ. ದಿಲ್ಲಿಗೆ ಹೊರಟಿದ್ದ ರಾಜ್ಯಪಾಲರನ್ನು ವಿಮಾನ ನಿಲ್ದಾಣದ ಬಳಿ ತಡೆದ ಸಿಪಿಎಂ ಪಕ್ಷದ ವಿದ್ಯಾರ್ಥಿ ಘಟಕವಾದ ಎಸ್ಎಫ್ಐನವರು ರಾಜ್ಯಪಾಲರಿಗೆ ಕಪ್ಪು ಬಾವುಟ ಪ್ರದರ್ಶನ ಮಾಡಿದ್ದಾರೆ. ಕೂಡಲೆ ರಾಜ್ಯಪಾಲ ಆರಿಫ್ ಖಾನ್ ಅವರು ಸ್ಥಳಕ್ಕೆ ಬಂದ ಮಾಧ್ಯಮದವರಿಗೆ ನೀಡಿದ ಮಾಹಿತಿ ಇದು. ಮುಖ್ಯಮಂತ್ರಿ ಪಿಣರಾಯಿ
ತೀರ್ಪು ಕೇಂದ್ರ ಸರಕಾರದ ಪರ ಆದ ಮತ್ತು ಚುನಾವಣೆ ನಡೆಸಲು ಇನ್ನೂ ಹತ್ತು ತಿಂಗಳಷ್ಟು ಕಾಲಾವಕಾಶ ಕೊಟ್ಟಿರುವುದು ಜಮ್ಮು ಮತ್ತು ಕಾಶ್ಮೀರದ ರಾಜಕೀಯ ನಾಯಕರಿಗೆ ತೃಪ್ತಿ ತಂದಿಲ್ಲ. ಮತ್ತೆ ಬಂಧಿಸಿ ಗೃಹ ಬಂಧನದಲ್ಲಿ ಇಡುವಂತೆ ಮಾಜೀ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಒತ್ತಾಯಿಸಿದರು.ಆದರೆ ಲೆಫ್ಟಿನೆಂಟ್ ಗವರ್ನರ್ ಅದಕ್ಕೆ ಸಮ್ಮತಿಸಿಲ್ಲ. ಕಾಶ್ಮೀರದ ಎಲ್ಲ ಕಡೆ ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ ಉಸಿರು ಕಟ್ಟಿಸುವಂತಿದೆ. ನನ್ನನ್ನೂ ಬಂಧನದಲ್ಲಿಡಿ ಎಂದು ಮೆಹಬೂಬಾ