ವಿಟ್ಲ :ಮಾರ್ಚ್ 23: ಮಾಣಿ ಪೆರಾಜೆಯ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನರ್ಸರಿ ತರಗತಿಯ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ‘ಲಿಟ್ಲ್ ಪರ್ಲ್ಸ್ ಫೆಸ್ಟ್- 2023-24 ಜರುಗಿತು. ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಅಧ್ಯಕ್ಷೀಯ ನೆಲೆಯಲ್ಲಿ ಮಾತನಾಡಿದ ಬಾಲವಿಕಾಸ ಟ್ರಸ್ಟಿನ ಅಧ್ಯಕ್ಷರಾದ ಪ್ರಹ್ಲಾದ್ ಶೆಟ್ಟಿ ಜೆ ,
ವಿಟ್ಲ: ವಿಟ್ಲ ಪೇಟೆ ಎರಡು ಅಂಗಡಿಗಳಿಗೆ, ವಿಟ್ಲದ ಮೇಗಿನ ಪೇಟೆಯ ಒಂದು ಅಂಗಡಿಗೆ ಶುಕ್ರವಾರ ರಾತ್ರಿ ಕಳ್ಳರು ನುಗ್ಗಿ ಹಣ ಹಾಗೂ ದಿನಸಿ ಸಾಮಾಗ್ರಿ ಕದ್ದೋಯ್ಯಿದಿದ್ದಾರೆ. ಚುನಾವಣೆ ಹಿನ್ನಲೆ ಆಯಕಟ್ಟಿನ ಸ್ಥಳಗಳಲ್ಲಿ ಪೊಲೀಸ್ ನಿಯೋಜನೆಗೊಳಿಸಲಾಗಿದ್ದು, ಅವರು ತಡ ರಾತ್ರಿ ಹೊತ್ತಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರೂ, ಕಳ್ಳರು ಸಲೀಸಾಗಿ ಬಂದು ಕಳ್ಳತನ ನಡೆಸಿ, ಅಷ್ಟೇ ಸಲೀಸಾಗಿ ತಪ್ಪಿಸಿಕೊಂಡಿರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ ವಿಟ್ಲ ಪೊಲೀಸ್
ವಿಟ್ಲ: ಕರ್ಣಾಟಕ ಬ್ಯಾಂಕ್ ಕಿಟಕಿ ಮೂಲಕ ಒಳ ನುಸುಳಿ ಕೋಟ್ಯಾಂತರ ಮೌಲ್ಯದ ನಗದು ಹಾಗೂ ಚಿನ್ನಾಭರಣ ಕಳ್ಳತನ ಮಾಡಿದ ನಾಲ್ಕು ಮಂದಿ ಆರೋಪಿಗಳ ಪೈಕಿ ಮೂವರನ್ನು ಸೋಮವಾರ ಸ್ಥಳ ಮಹಜರಿಗೆ ಅಡ್ಯನಡ್ಕ ಪೊಲೀಸರು ಕರೆದುಕೊಂಡು ಬಂಧಿಸಿದ್ದಾರೆ. ಕಾಸರಗೋಡು ಮೂಲದ ಖಲಂದರ್, ರಫೀಕ್, ಬಾಯಾರು ಮೂಲದ ದಯಾನಂದ ಕಳ್ಳತನದ ಪ್ರಮುಖ ರುವಾರಿಗಳು ಎನ್ನಲಾಗಿದೆ. ಫೆ.೨೮ ರಂದು ಈ ಆರೋಪಿಗಳನ್ನು ಪೊಲಿಸರು ವಶಕ್ಕೆ ಪಡೆಯುವ ಕಾರ್ಯವನ್ನು ಮಾಡಿದ್ದು, ಮಾ.೧೦ರಂದು ಬಂಧನವನ್ನು
ಬೈಂದೂರು ತಾಲೂಕುಗುಡ್ಡೆ ಹೋಟೆಲ್ ಅಯ್ಯಪ್ಪ ಸ್ವಾಮಿ ಮಂದಿರದ ಗುರು ಸ್ವಾಮಿ ಕಾಮೇಶ್ ಹಾಗೂ ಭಕ್ತವೃಂದದವರು ಹೆಮ್ಮುಂಜೆಯಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಸಿಹಿ ತಿಂಡಿ ಹಂಚಿ ರೂಪಾಯಿ ಹತ್ತು ಸಾವಿರದ ನೂರನ್ನು ಶಾಲೆಯ ಕಂಪ್ಯೂಟರ್ ಕ್ಯಾಬಿನ್ ರಚನೆಗೆ ದೇಣಿಗೆಯಾಗಿ ನೀಡಿದರು. ಶಾಲೆಯ ಬಗ್ಗೆ ಇರುವ ಕಾಳಜಿ, ಅಭಿಮಾನ ಹಾಗೂ ಪ್ರೋತ್ಸಾಹವನ್ನು ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ,ಎಸ್.ಎಮ್. ಡಿ .ಸಿ.ಯ ಅಧ್ಯಕ್ಷರು ಹಾಗೂ ಸದಸ್ಯರು ಮತ್ತು ಊರಿನ ಜನತೆ ತಮ್ಮ
ವಿಟ್ಲ : ಜನವರಿ 26 : ಮಾಣಿ ಪೆರಾಜೆಯ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವದ ಆಚರಣೆ ನಡೆಯಿತು. ಈ ಸಂದರ್ಭದಲ್ಲಿ ಬಾಲವಿಕಾಸ ಟ್ರಸ್ಟಿನ ಅಧ್ಯಕ್ಷರಾದ ಪ್ರಹ್ಲಾದ ಶೆಟ್ಟಿ ಜೆ ಧ್ವಜಾರೋಹಣವನ್ನು ನೆರವೇರಿಸಿದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಗಣ್ಯರು ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ನಂತರ ಸಭಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಕಾರ್ಯಕ್ರಮದ
ವಿಟ್ಲ: ಪುಣಚ ಸಮೀಪದ ತೋರಣಕಟ್ಟೆಯಲ್ಲಿ ಪಾಳು ಬಾವಿಯೊಂದಕ್ಕೆ ನರಿ ಬಿದ್ದಿದ್ದು, ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳೀಯರ ನೆರವಿನೊಂದಿಗೆ ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ನಿರುಪಯುಕ್ತವಾದ ಬಾವಿಯ ಒಳಗೆ ಆಹಾರ ಅರಸಿಕೊಂಡು ಬಂದ ನರಿ ಬಿದ್ದಿದ್ದು, ಅದರ ಕೂಗು ಕೇಳಿ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿಯನ್ನು ನೀಡಿದ್ದಾರೆ. ಸಹಾಯಕ ವಲಯ ಅರಣ್ಯಾಧಿಕಾರಿ ಸೀತಾರಾಮ ನೇತೃತ್ವದಲ್ಲಿ ಸ್ಥಳೀಯ ನಿವಾಸಿ ವಾಮನ್ ನಾಯಕ್ ಎಂಬರು ಬಾವಿಗೆ ಇಳಿದು ನರಿಯನ್ನು ಗೋಣಿಗೆ
ವಿಟ್ಲ: ಚಾಲಕನ ನಿಯಂತ್ರಣ ಕಳೆದುಕೊಂಡ ಕೋಳಿ ಸಾಗಾಟದ ಲಾರಿ ರಸ್ತೆಗೆ ಪಲ್ಟಿ ಹೊಡೆದ ಘಟನೆ ವಿಟ್ಲ-ಸಾಲೆತ್ತೂರು ರಸ್ತೆಯ ರಾಧಾಕಟ್ಟೆ ಎಂಬಲ್ಲಿ ನಡೆದಿದೆ.ವಿಟ್ಲ ಕಡೆಯಿಂದ ಸಾಲೆತ್ತೂರು ಕಡೆಗೆ ಕೋಳಿ ಸಾಗಾಟ ಮಾಡುತ್ತಿದ್ದ ಲಾರಿ ಚಲಿಸುತ್ತಿದ್ದ ರಸ್ತೆಗೆ ಉರುಳಿದೆ. ಘಟನೆ ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಕೋಳಿಗಳು ರಸ್ತೆಗೆ ಉರುಳಿ ಬಿದ್ದಿದ್ದು, ಅದನ್ನು ಬೇರೆ ವಾಹನಕ್ಕೆ ತುಂಬಿಸಲಾಗಿದೆ.
ವಿಟ್ಲ : ಮಾಣಿ ಪೆರಾಜೆಯ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ಅತ್ಯoತ ಸಂಭ್ರಮದಿಂದ ಆಚರಿಸಲಾಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಹ್ಲಾದ್ ಶೆಟ್ಟಿ ಜೆ ಇವರು ಮಾತನಾಡಿ, “ಸತತ ಪ್ರಯತ್ನದಿಂದ ಸಾಧನೆ ಸಾಧ್ಯ. ಮಕ್ಕಳ ದಿನಾಚರಣೆ ಎಂಬುದು ಒಂದು ಸಾಮೂಹಿಕ ಹುಟ್ಟುಹಬ್ಬ. ಪಂಡಿತ್ ಜವಾಹರ್ ಲಾಲ್ ನೆಹರೂರವರ ಜೀವನಾದರ್ಶಗಳನ್ನು ಮಕ್ಕಳು ಮೈಗೂಡಿಸಿಕೊಂಡಾಗ ಮಕ್ಕಳ ದಿನದ
ವಿಟ್ಲ: ಉಡುಪಿ ಕಾಸರಗೋಡು 400 ಕೆ ವಿ. ವಿದ್ಯುತ್ ಪ್ರಸರಣ ಕಾಮಗಾರಿಯನ್ನು ಮತ್ತೆ ವಿಟ್ಲದಲ್ಲಿ ಆರಂಭಿಸಲು ಪ್ರಯತ್ನಿಸಿದ್ದು ಇದನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ತಿಳಿಸಿದರು. ವಿಟ್ಲದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯುಕೆಟಿಎಲ್ ಗುತ್ತಿಗೆ ನೀಡಿ ಸ್ಟರ್ಲೈಟ್ ಕಂಪೆನಿ ಸ್ಥಳ ಸರ್ವೇ ಮೂಲಕ ವಿದ್ಯುತ್ ಲೈನ್ ಅಳವಡಿಕೆಯ ಕಾರ್ಯಾರಂಭಕ್ಕೆ ಮುಂದಾಗಿದೆ ಇದನ್ನು ವಿರೋಧಿಸುವುದಾಗಿ ತಿಳಿಸಿದರು. ಯೋಜನೆ ಕೇಂದ್ರ
ವಿಟ್ಲ : ಬೈಕ್ ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಚಂದಳಿಕೆ ಸಿಪಿಸಿಆರ್ ಐ ಎಂಬಲ್ಲಿ ನಡೆದಿದೆ. ಬೊಳಂತಿಮೊಗರು ನಿವಾಸಿ ಬೈಕ್ ಸವಾರ ಅಬ್ದುಲ್ ಆಸೀಫ್ ಗಂಭೀರ ಗಾಯಗೊಂಡಿದ್ದು, ಮಂಗಳೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಹ ಸವಾರ ಇಮ್ರಾನ್ ಅಪಾಯದಿಂದ ಪಾರಾಗಿದ್ದಾರೆ. ಇವರು ವಿಟ್ಲ ಕಡೆಯಿಂದ ಕಂಬಳಬೆಟ್ಟು ಕಡೆಗೆ ತೆರಳುತ್ತಿದ್ದಾಗ ಹಿಂಬದಿಯಿಂದ ಬಂದ ಟಿಪ್ಪರ್ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ.