Home Archive by category ಶೈಕ್ಷಣಿಕ (Page 22)

ನಿಟ್ಟೆ ಇನ್ಸ್ಟಿಟ್ಯೂಟ್ ಆಫ್ ಫಿಸಿಯೋಥೆರಪಿ, ನಿಟ್ಟೆ ವಿಶ್ವ ವಿದ್ಯಾಲಯ ಮತ್ತು ಇಂಟೀ ಇಂಟರ್ನ್ಯಾಷನಲ್ ವಿಶ್ವ ವಿದ್ಯಾಲಯ, ಮಲೇಷ್ಯಾ. ಶೈಕ್ಷಣಿಕ, ಸಂಶೋಧನ ಒಡಂಬಡಿಕೆ ಒಪ್ಪಂದ

ನಿಟ್ಟೆ ಇನ್ಸ್ಟಿಟ್ಯೂಟ್ ಆಫ್ ಫಿಸಿಯೋಥೆರಪಿ,ನಿಟ್ಟೆ ವಿಶ್ವ ವಿದ್ಯಾಲಯ ಮತ್ತು ಇಂಟಿ ವಿಶ್ವ ವಿದ್ಯಾಲಯ ಮಲೇಷಿಯಾ ನಡುವೆ ನೂತನ ಶೈಕ್ಷಣಿಕ ಮತ್ತು ಸಂಶೋಧನ ಒಪ್ಪಂದ ಸಮಾರಂಭ ನಡೆಯಿತು.ತಾರೀಕು ಫೆಬ್ರವರಿ 16 ಬೆಳಗ್ಗೆ 10;30 am ಗಂಟೆಗೇ ಒಪ್ಪಂದ ಸಹಿ ಸಮಾರಂಭ ನಡೆಯಿತು.ಈ ಒಪ್ಪಂದ ಎರಡು ವಿಶ್ವ ವಿದ್ಯಾಲಯ ನಡುವೆ ವಿದ್ಯಾರ್ಥಿ ವಿನಿಮಯ, ಶಿಕ್ಷಕರ ವಿನಿಮಯ, ಹಾಗೂ

ಪತ್ರಿಕೋದ್ಯಮಕ್ಕೆ ವೃತ್ತಿ ಒಲವು ಮುಖ್ಯ

ಉಜಿರೆ ಎಸ್.ಡಿ. ಎಂ ಕಾಲೇಜಿನ ಸ್ನಾತಕೋತ್ತರ ಕೇಂದ್ರದಲ್ಲಿ ಪ್ರಥಮ ವರ್ಷದ ಎಂ.ಸಿ.ಜೆ ವಿದ್ಯಾರ್ಥಿಗಳಿಗೆ ಕಾಲೇಜಿನ ಹಿರಿಯ ವಿದ್ಯಾರ್ಥಿ ಹಾಗೂ ಖ್ಯಾತ ಕ್ರೈಂ ರಿಪೋರ್ಟರ್ ಸುನಿಲ್ ಧರ್ಮಸ್ಥಳ ವೃತ್ತಿ ಕುರಿತು ಮಾರ್ಗದರ್ಶನ ನೀಡಿದರು.ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜ್ಯದ ಪೋಲಿಸ್ ಸ್ತರಗಳು ಮತ್ತು ಅದರೊಳಗಿನ ವಿಭಾಗಗಳ ಕುರಿತು ಸವಿಸ್ತಾರವಾದ ಮಾಹಿತಿಯನ್ನು ನೀಡಿದರು. ಸುದ್ದಿಗಾರ ರಾಗ ಬಯಸುವವರು ಹೇಗೆ ನ್ಯಾಯಾಂಗ ಮತ್ತು ಆಡಳಿತ ವ್ಯವಸ್ಥೆಯ ಬಗ್ಗೆ

ಎಸ್ ಡಿ ಎಂ ಕಾಲೇಜಿನ ಎನ್ ಸಿ ಸಿ ನೌಕಾ ವಿಭಾಗದ ಆರು ಕೆಡೆಟ್ ಗಳಿಗೆ ಬಂಗಾರದ ಪದಕ 

ದೆಹಲಿಯಲ್ಲಿ ನಡೆದ 2023 ರ ಗಣರಾಜ್ಯೋತ್ಸವ ಪರೇಡ್ ನಲ್ಲಿ  ಉಜಿರೆ ಎಸ್ ಡಿ ಎಮ್ ಕಾಲೇಜಿನ ನೌಕಾ ವಿಭಾಗದ 6 ಕೆಡೆಟ್ ಗಳು ಶಿಪ್ ಮೊಡೆಲಿಂಗ್ ವಿಭಾಗದಲ್ಲಿ ಬಂಗಾರದ ಪದಕವನ್ನು ಗಳಿಸಿ ಸಂಸ್ಥೆಗೆ ಗೌರವವನ್ನು ತಂದಿದ್ದಾರೆ. ಪಿಓ ಕೆಡೆಟ್  ಶ್ರೀರಾಮ ಮರಾಠೆ  ಮತ್ತು ಪಿಓ ಕೆಡೆಟ್ ಅನನ್ಯಾ ಕೆ.ಪಿ ಇವರು ಪವರ್ ಮಾಡೆಲ್ ವಿಭಾಗದಲ್ಲಿ ಬಂಗಾರದ ಪದಕವನ್ನು ಸಂಪಾದಿಸಿದ್ದಾರೆ. ಇಡೀ ದೇಶದ 17 ಡೈರೆಕ್ಟರೇಟ್ ನವರು ಸಿದ್ಧಪಡಿಸಿ ಪರೀಕ್ಷೆಗೊಳಪಡಿಸಿದ ಈ ಸ್ಪರ್ಧೆಗಳಲ್ಲಿ ಇವರು

ಮಂಗಳೂರು ವಿವಿ: ಮೌಲ್ಯಮಾಪನ ಕುಲಸಚಿವರಾಗಿ ಡಾ. ರಾಜು ಕೃಷ್ಣ ಚಲ್ಲಣ್ಣವರ್ ಅಧಿಕಾರ ಸ್ವೀಕಾರ

ಉಳ್ಳಾಲ: ಮಂಗಳೂರು ವಿಶ್ವವಿದ್ಯಾನಿಲಯದ ನೂತನ ಕುಲಸಚಿವರಾಗಿ (ಮೌಲ್ಯಮಾಪನ) ಅನ್ವಯಿಕ ಸಸ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ. ರಾಜು ಕೃಷ್ಣ ಚಲ್ಲಣ್ಣವರ್ ಗುರುವಾರ ಅಧಿಕಾರ ವಹಿಸಿಕೊಂಡಿದ್ದಾರೆ. ಸರ್ಕಾರದ ಅಧಿಸೂಚನೆಯಂತೆ ಕುಲಸಚಿವ (ಮೌಲ್ಯಮಾಪನ) ರಾಗಿದ್ದ ಪ್ರೊ. ಪಿ ಎಲ್ ಧರ್ಮ ಅವರು ನೂತನ ಕುಲಸಚಿವರಿಗೆ ಅಧಿಕಾರ ಹಸ್ತಾಂತರಿಸಿದರು. ಪ್ರೊ. ಪಿ ಎಲ್ ಧರ್ಮ ಅವರು ಮಂಗಳೂರು ವಿವಿಯ ರಾಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾಗಿ ಮುಂದುವರಿಯಲಿದ್ದಾರೆ. ಅನ್ವಯಿಕ

ಕಡಬದಲ್ಲಿ ಸರಕಾರಿ ಪದವಿ ಕಾಲೇಜು ಆರಂಭಿಸದಿದ್ದರೆ ಪ್ರತಿಭಟನೆ ಎಚ್ಚರಿಕೆ

ಕಡಬ ತಾಲೂಕು ಕೇಂದ್ರವಾಗಿರುವ ಕಡಬದಲ್ಲಿ ಹಲವು ವರ್ಷಗಳ ಬೇಡಿಕೆಯಾಗಿರುವ ಸರಕಾರಿ ಪದವಿ ಕಾಲೇಜು ಆರಂಭಿಸದೇ ಹೋದರೆ ಸ್ಥಳೀಯ ವಿವಿಧ ಸಂಘ ಸಂಸ್ಥೆಗಗಳ ಸಹಕಾರದೊಂದಿಗೆ ಉಗ್ರ ರೀತಿಯಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಕಡಬ ಪದವಿ ಕಾಲೇಜು ಹೋರಾಟ ಸಮಿತಿಯ ಅಧ್ಯಕ್ಷ ವಿಜಯಕುಮಾರ್ ರೈ ಕರ್ಮಾಯಿ ಅವರು ಎಚ್ಚರಿಸಿದ್ದಾರೆ. ಅವರು ಕಡಬದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಕಡಬ ಪರಿಸರದ ಮಕ್ಕಳಿಗೆ ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ಶಿಕ್ಷಣ ಲಭಿಸಬೇಕೆಂಬ

ಜೈನ್ ವಿವಿಯ ಪ್ರಕರಣ : ಮಂಗಳೂರು ವಿವಿಯಲ್ಲಿ ಎಪಿಎಸ್ಎ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮಂಗಳೂರು ವಿಶ್ವವಿದ್ಯಾನಿಲಯದ ಆವರಣದಲ್ಲಿ ಜೈನ್ ವಿವಿಯ ಪ್ರಕರಣವನ್ನು ಖಂಡಿಸಿ ನಡೆಸಿರುವ ಶಾಂತಿಯುತ ಪ್ರತಿಭಟನೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಸ್ನಾತಕೋತ್ತರ ವಿದ್ಯಾರ್ಥಿಗಳು, ಸಂಶೋಧಕರು ಮತ್ತು ಬೋಧಕ ಹಾಗೂ ಬೋಧಕೇತರ ವರ್ಗದವರು ಬಾಗವಹಿಸಿದರು. ಈ ಶಾಂತಿಯುತ ಪ್ರತಿಭಟನೆಯಲ್ಲಿ ಅಂಬೇಡ್ಕರ್, ಫುಲೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಮೋಹನ್ ಕುಮಾರ್, ಪದಾಧಿಕಾರಿಗಳಾದ ಅವಿನಾಶ್ ಕಾಂಬ್ಳೆ, ವಿಜಯ್ ಕುಮಾರ್, ಗೋವಿಂದ್

ಫೆ.17ರಂದು ಸಂತ ಅಲೋಶಿಯಸ್ ಕಾಲೇಜಿನಲ್ಲಿ”ನಿರುತ್ತಾಯಣ” ಯಕ್ಷರೂಪಕ

ದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯು (NSD) “ಭಾರತ್ ರಂಗ್ ಮಹೋತ್ಸವ್” ಎಂಬ ಹೆಸರಿನಲ್ಲಿ ನಾಟಕೋತ್ಸವವನ್ನು ಪ್ರತೀವರ್ಷ ಆಯೋಜಿಸುತ್ತದೆ. ಈ ಉತ್ಸವದ 22 ನೇ ಆವೃತ್ತಿಯು, ಇದೇ ಫೆಬ್ರವರಿಯ 14 ರಿಂದ ಫೆಬ್ರವರಿ 26 ರವರೆಗೆ ನಡೆಯಲಿದೆ. ಭಾರತದಾದ್ಯಂತ 10 ಸ್ಥಳಗಳಲ್ಲಿ ಪ್ರದರ್ಶಿಸಲು 960 ನಾಟಕಗಳಿಂದ, ಕೇವಲ  77 ನಾಟಕಗಳನ್ನು ಪ್ರಸಕ್ತ ವರ್ಷದಲ್ಲಿ ಆಯ್ಕೆ ಮಾಡಲಾಗಿದೆ. ಇದರಲ್ಲಿ ಅಸ್ತಿತ್ವ ® ಮಂಗಳೂರು ತಂಡದ

ಅಮೃತ ವಿದ್ಯಾಲಯಂನಲ್ಲಿ ಸಾರ್ವಜನಿಕ ಮಕ್ಕಳ ಆರೋಗ್ಯ ಶಿಬಿರ

ಇದೇ ಬರುವ ಆದಿತ್ಯವಾರ ಫೆಬ್ರವರಿ 5ರಂದು ಬೋಳೂರಿನಲ್ಲಿರುವ ಅಮೃತ ವಿದ್ಯಾಲಯಂನ ಆವರಣದಲ್ಲಿ ಸಾರ್ವಜನಿಕ ಮಕ್ಕಳಿಗೆ ಆರೋಗ್ಯ ಶಿಬಿರವನ್ನು ಆಯೋಜಿಸಲಾಗಿದೆ. ಈ ಶಿಬಿರವು ಬೆಳಿಗ್ಗೆ 8.30ರಿಂದ ಅಪರಾಹ್ನ 1.30ರ ವರೆಗೆ ನಡೆಯಲಿದೆ. ಇದೇ ಸಂದರ್ಭದಲ್ಲಿ ಡಾ. ಚಾಂದಿನಿ ವಿಕ್ರಂ ಶೆಟ್ಟಿ ಎಚ್ ಒ ಡಿ, ಶ್ರೀನಿವಾಸ್ ಇನ್ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸಸ್,ಇವರಿಂದ ದಂತ ನೈರ್ಮಲ್ಯದ ಬಗ್ಗೆ ಉಪನ್ಯಾಸ ಮಾಡಲಿದ್ಧಾರೆ. ಸಾರ್ವಜನಿಕರು ಇದರ ಉಪಯೋಗವನ್ನು ಪಡೆಯ ಬೇಕಾಗಿ ವಿನಂತಿ.

ಸಹ್ಯಾದ್ರಿಯಲ್ಲಿ ಔರಾ 2023 – ಫ್ರೆಶರ್ಸ್ ಡೇ ಆಚರಿಸಲಾಯಿತು

ಔರಾ 2023 – ಮಂಗಳೂರಿನ ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್, ಇಂಜಿನಿಯರಿಂಗ್ ಬ್ಯಾಚ್ 2022ರ ಫ್ರೆಶರ್ಸ್ ಡೇ ಅನ್ನು ಫೆಬ್ರವರಿ 7, 2023 ರಂದು ಆಚರಿಸಲಾಯಿತು. ಸಮಾರಂಭದ ಮುಖ್ಯ ಅತಿಥಿಗಳಾಗಿ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ಮತ್ತು ಗ್ಲೋಬಲ್ ಆರ್‌ಎಂಜಿ ಮುಖ್ಯಸ್ಥರಾದ ಶ್ರೀ ಚಕ್ರವರ್ತಿ ಇ.ಎಸ್. ಹಾಗೂ ಗೌರವ ಅತಿಥಿಗಳಾಗಿ ಶ್ರೀ ಎನ್. ಶಶಿಕುಮಾರ್ IPS, DIGP ಮತ್ತು ಪೊಲೀಸ್ ಆಯುಕ್ತರು, ಮಂಗಳೂರು ಇವರುಗಳು ಭಾಗವಹಿಸಿದರು.

ಉಜಿರೆ ಎಸ್.ಡಿ.ಎಂ ಕಾಲೇಜಿಗೆ ನ್ಯಾಕ್ ಅತ್ಯುನ್ನತ ಗ್ರೇಡ್

ಉಜಿರೆ, ಫೆ.7: ರಾಷ್ಟ್ರೀಯ ಮೌಲ್ಯಾಂಕನ ಹಾಗೂ ಮೌಲ್ಯಮಾಪನದ (ನ್ಯಾಕ್) ನಾಲ್ಕನೇ ಆವೃತ್ತಿಯಲ್ಲಿ ಉಜಿರೆ ಶ್ರೀ ಧ.ಮ ಕಾಲೇಜು ಅತ್ಯುನ್ನತ ಗ್ರೇಡ್‍ನೊಂದಿಗೆ ಎ ಪ್ಲಸ್ ಪ್ಲಸ್ (ಂ ++) ವಿಶೇಷ ಮನ್ನಣೆ ಗಳಿಸಿದೆ. ನ್ಯಾಕ್ ಪರಿಶೀಲನೆಯ ಪ್ರಕ್ರಿಯೆಯ ಭಾಗವಾಗಿ ಮೂವರು ತಜ್ಞ ಸದಸ್ಯರ ತಂಡವು ಕಳೆದ ತಿಂಗಳ 30 ಹಾಗೂ 31ರಂದು ಕಾಲೇಜಿಗೆ ಭೇಟಿ ನೀಡಿತ್ತು. ಓರಿಸ್ಸಾದ ಕಲಹಂಡಿ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಸಂಜಯ ಕುಮಾರ್ ಸತಪತಿ ಅಧ್ಯಕ್ಷತೆಯ ನ್ಯಾಕ್