Home Archive by category ಹಾನಿ (Page 4)

ರಸ್ತೆ ಅಪಘಾತದಿಂದ ಪ್ರಾಣ ಕಳೆದುಕೊಂಡ ಗೆಳೆಯನ ಸಾವಿಗೆ ನ್ಯಾಯ ಸಿಗುವಂತೆ ಪ್ರತಿಭಟನೆ

ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ರಸ್ತೆ ಅಪಘಾತದಿಂದ ಪ್ರಾಣ ಕಳೆದುಕೊಂಡ ಆತ್ಮೀಯ ಗೆಳೆಯನ ಸಾವಿಗೆ ನ್ಯಾಯ ಕೊಡುವಂತೆ ಆಗ್ರಹಿಸಿ ಆತನ ಗೆಳೆಯನೊಬ್ಬ ನಗರದ ಲಾಲ್ ಬಾಗ್ ನಲ್ಲಿರುವ ಮಂಗಳೂರು ಮಹಾನಗರಪಾಲಿಕೆ ಕಚೇರಿ ಎದುರು ಒಂಟಿಯಾಗಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.ನಂತೂರಿನಿಂದ ಬಿಕರ್ಣಕಟ್ಟೆ ಕಡೆಗೆ ಕೈನೆಟಿಕ್ ಸ್ಕೂಟರ್ ನಲ್ಲಿ ತೆರಳುತ್ತಿದ್ದ

ಸ್ಕೂಟರ್‍ಗೆ ಟ್ಯಾಂಕರ್ ಢಿಕ್ಕಿ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತ್ಯು

ಕಾಪು ಕಡೆಯಿಂದ ಬರುತ್ತಿದ್ದ ಸ್ಕೂಟರ್ ಗೆ ಹಿಂದಿನಿಂದ ಬಂದ ಟ್ಯಾಂಕರ್ ಡಿಕ್ಜಿಯಾದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಉದ್ಯಾವರ ಸೇತುವೆ ಮೇಲೆ ನಡೆದಿದೆ. ಸ್ಕೂಟರ್ ಸವಾರ ಮಲ್ಲಾರು ಕೋಟೆ ರೋಡ್ ನಿವಾಸಿ ಜಾಫರ್ ಎಂಬವರ ಪುತ್ರ ಕಟಪಾಡಿ ಚಪ್ಪಲಿ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದ ಯುವಕ ಅಲ್ಪಾಜ್ (17). ಈತ ತನ್ನ ಸಹಪಾಠಿಯೊಂದಿಗೆ ಉಡುಪಿ ಕಡೆಗೆ ಸ್ಕೂಟರ್ ನಲ್ಲಿ ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಅಪಘಾತ ವೇಳೆ ಹಿಂಬದಿ ಸವಾರ ಸ್ಕೂಟರಿಂದ

ಪಡುಬಿದ್ರಿ : ಪೆಟ್ ಶೋಪ್ ನಲ್ಲಿ ವಿದ್ಯುತ್ ಆಕಸ್ಮಿಕ ಸುಟ್ಟು ಕರಕಲಾದ ಹಕ್ಕಿ , ಮೀನು

ವಿದ್ಯುತ್ ಅವಘಢದಿಂದ ಮುಚ್ಚಿದ ಅಂಗಡಿಯ ಒಳಗೆ ಬೆಂಕಿ ಕಾಣಿಸಿಕೊಂಡು ಅಕ್ವೇರಿಯಂಗಳ ಸಹಿತ ವಿವಿಧ ಜಾತಿಗಳ ಹಕ್ಕಿ ಸಹಿತ ವಿವಿಧ ಜಾತಿಗಳ ಮೀನುಗಳು ಬೆಂಕಿಯಲ್ಲಿ ಸಿಲುಕಿ ಭಸ್ಮವಾದ ಘಟನೆ ನಡೆದಿದೆ. ಘಟನೆಯಿಂದ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ. ಪಡುಬಿದ್ರಿ ಮುಖ್ಯ ಮಾರುಕಟ್ಟೆ ರಸ್ತೆಯ ಪೊಲೀಸ್ ಠಾಣಾ ಸಮೀಪದ ಗ್ರಾ.ಪಂ. ಕಟ್ಟಡದ ಅವಿಘ್ನ ಅಕ್ವೇರಿಯಂ ಮಾರಾಟದಂಗಡಿಯಲ್ಲಿ ಮುಂಜಾನೆ ಹೊಗೆ ಕಾಣಿಸಿಕೊಂಡಿದ್ದು ಇದನ್ನು ಕಂಡ ಸಾರ್ವಜನಿಕರು ಪೆÇಲೀಸರಿಗೆ ಮಾಹಿತಿ

ಕುಂದಾಪುರ : ಸೌಪರ್ಣಿಕ ನದಿಯ ನೀರಿನ ಮಟ್ಟ ಹೆಚ್ಚಳ

ಕುಂದಾಪುರ: ಎರಡು ಮೂರು ದಿನಗಳಿಂದ ಎಡಬಿಡದೇ ಸುರಿಯುತ್ತಿರುವ ಭಾರಿ ಮಳೆಯಿಂದ ಸೌಪರ್ಣಿಕ ನದಿ ನೀರಿನ ಮಟ್ಟ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನದಿಯ ಸಮೀಪದಲ್ಲಿರುವ ಊರುಗಳಾದ ಸಾಲ್ಬುಡ-ನಾವುಂದ ಬಡಾಕೆರೆ, ಮರವಂತೆ, ಚಿಕ್ಕಳ್ಳಿ, ಪಡುಕೋಣೆ, ಅರೆಹೊಳೆ ಮುಂತಾದ ಪ್ರದೇಶಗಳು ಮುಳುಗಡೆ ಭೀತಿಯಲ್ಲಿದೆ. ಅಲ್ಲದೆ ಸಾವಿರಾರು ಎಕರೆ ಕೃಷಿ ಭೂಮಿಗಳು ನೆರೆಯಿಂದ ಸಂಪೂರ್ಣ ಜಲಾವೃತವಾಗಿದೆ. ಕುಡಿಯುವ ನೀರಿಗೆ ಜನರ ಆಹಾಕಾರ ಉಂಟಾಗಿದೆ. ನೆರೆ ನೀರು ಜೊತೆ ಕೆಲವೊಂದು ಹಾವುಗಳು

ಆಯತಪ್ಪಿ ನದಿಗೆ ಬಿದ್ದ ವಿದ್ಯಾರ್ಥಿನಿಗೆ ಶೋಧ

ಬೈಂದೂರು : ಸೋಮವಾರ ಸಂಜೆ ಶಾಲೆಯಿಂದ ಮನೆಗೆ ವಾಪಾಸ್ಸಾಗುವಾಗ ಕಾಲುಸಂಕದಿಂದ ಆಕಸ್ಮಿಕ ಕಾಲು ಜಾರಿ ಹರಿಯುವ ನದಿಗೆ ಬಿದ್ದು ನಾಪತ್ತೆದ ಬೈಂದೂರು ತಾಲೂಕು ಕಾಲ್ತೋಡು ಗ್ರಾಮದ ಚಪ್ಪರಿಕೆ ಸರಕಾರಿ ಹಿ.ಪ್ರಾ.ಶಾಲೆಯ ಎರಡನೇ ತರಗತಿ ವಿದ್ಯಾರ್ಥಿನಿ ಸನ್ನಿಧಿ ಮೃತದೇಹ ಮಂಗಳವಾರ ಸಂಜೆ 6 ಗಂಟೆ ತನಕ ಪತ್ತೆಯಾಗಿಲ್ಲ. ಸನ್ನಿಧಿ ಮೃತದೇಹ ಪತ್ತೆಗೆ ಅಗ್ನಿಶಾಮಕ ದಳ, ಪೊಲೀಸರು, ಸ್ಥಳೀಯರು, ಈಜುಪಟುಗಳು ಹಾಗೂ ಮುಳುಗು ತಜ್ಞರು ನಿರಂತರವಾಗಿ ಶೋಧ ಕಾರ್ಯದಲ್ಲಿ

ಕಾಲು ಸಂಕದಿಂದ ಬಿದ್ದು ಸನ್ನಿದಿ ನೀರುಪಾಲು

ಬೈಂದೂರು: ಶಾಲೆ ಬಿಟ್ಟು ಮನೆಗೆ ಬರುತ್ತಿದ್ದ ವೇಳೆ ಕಾಲುಸಂಕ ದಾಟುವಾಗ ಆಯತಪ್ಪಿ 2ನೇ ತರಗತಿಯ ವಿದ್ಯಾರ್ಥಿನಿ ನೀರುಪಾಲಾದ ಘಟನೆ ಕಾಲ್ತೋಡು ಗ್ರಾಮದಲ್ಲಿ ನಡೆದಿದೆ. ಬೊಳಂಬಳ್ಳಿಯ ಮಕ್ಕಿಮನೆ ಮನೆ ಪ್ರದೀಪ್ ಪೂಜಾರಿ ಹಾಗೂ ಸುಮಿತ್ರಾ ಅವರ ಪುತ್ರಿ 7ವರ್ಷ ನೀರು ಪಾಲಾಗಿದ್ದು ಹುಡುಕಾಟ ತೀವ್ರಗೊಂಡಿದೆ.ಸ.ಹಿ.ಪ್ರಾ ಶಾಲೆ ಚಪ್ಪರಿಕೆಯಲ್ಲಿ 2ನೇ ತರಗತಿಯಲ್ಲಿ ಓದುತ್ತಿರುವ ಸನ್ನಿಧಿ ಸೋಮವಾರ ಸಂಜೆ ಶಾಲೆಬಿಟ್ಟು ಮನೆಗೆ ಬರುವಾಗ ಬೀಜಮಕ್ಕಿ ಎಂಬಲ್ಲಿ ಕಾಲು ಸಂಕವಿದ್ದು ಈ

ವಿಟ್ಲ: ಕಣಜದ ಹುಳುವಿನಿಂದ ದಾಳಿಗೊಳಗಾಗಿದ್ದ ವ್ಯಕ್ತಿ ಮೃತ್ಯು

ವಿಟ್ಲ: ಕಣಜದ ಹುಳುಗಳು ದಾಳಿ ನಡೆಸಿ ಹಿನ್ನೆಲೆ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಮೃತರನ್ನು ಮಾಣಿಲ ಗ್ರಾಮದ ಪಕಳಕುಂಜ ನಿವಾಸಿ ಶ್ರೀಕೃಷ್ಣ ನಾಯಕ್(50) ಎಂದು ಗುರುತಿಸಲಾಗಿದೆ. ಕೃಷ್ಣ ರವರ ಮೇಲೆ ನಿನ್ನೆ ಸಂಜೆ ವೇಳೆ ಪೆರುವಾಯಿ ಸಮೀಪ ಕಣಜದ ಹುಳುಗಳು ದಾಳಿ ನಡೆಸಿದ್ದು, ಗಂಭೀರ ಗಾಯಗೊಂಡಿದ್ದ ಅವರನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆದರೇ ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ

ಕೊಯನಾಡು ಬಳಿಯ ಮಾಣಿ – ಮೈಸೂರು ಹೆದ್ದಾರಿಯಲ್ಲಿ ಬಿರುಕು

ಕೊಡಗು ಸಂಪಾಜೆ ಗ್ರಾಮದ ಕೊಯನಾಡು ಬಳಿಯಲ್ಲಿ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ರಸ್ತೆಯ ಮಧ್ಯೆ ಭಾರೀ ಪ್ರಮಾಣದಲ್ಲಿ ಬಿರುಕು ಉಂಟಾಗಿದ್ದು, ಮಾಣಿ-ಮೈಸೂರು ಸಂಪರ್ಕ ಕಡಿತಗೊಳ್ಳುವ ಆತಂಕ ಸೃಷ್ಠಿಯಾಗಿದೆ. ಕೊಡಗು ಜಿಲ್ಲೆಯ ಕೆಲವೆಡೆ ಧಾರಾಕಾರವಾಗಿ ಮಳೆ ಸುರಿದಿದೆ. ಸದ್ಯ ಮುಂಜಾಗರೂಕತೆಯ ಕ್ರಮವಾಗಿ ಈ ಹೆದ್ದಾರಿಯಲ್ಲಿ ಘನ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹೆದ್ದಾರಿಯ ಸ್ಥಿತಿಯನ್ನು ಪರಿಶೀಲನೆ

ಸುಳ್ಯ ಮತ್ತು ಕಡಬ ತಾಲೂಕು ಭಾರೀ ಮಳೆ : ಜಿಲ್ಲಾಧಿಕಾರಿ ಭೇಟಿ

ನಿನ್ನೆ ಸುರಿದ ಮಳೆಯಿಂದಾಗಿ ಹಾನಿಗೊಳಗಾದ ಸುಳ್ಯ ಹಾಗೂ ಕಡಬ ತಾಲೂಕುಗಳಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ರಾತ್ರಿ ಗುಡ್ಡ ಕುಸಿದು ಇಬ್ಬರು ಮಕ್ಕಳು ಮೃತಪಟ್ಟ ಸುಬ್ರಹ್ಮಣ್ಯ ಸಮೀಪದ ಪರ್ವತಮಿಖಿ ಘಟನಾ ಸ್ಥಳಕ್ಕೂ ಜಿಲ್ಲಾಧಿಕಾರಿ ಭೇಟಿ ನೀಡಿದರು. ಅಧಿಕಾರಿಗಳು, ಸ್ಥಳೀಯಾಡಳಿತ ಅಧಿಕಾರಿಗಕಳಿಂದ ಮಾಹಿತಿ ಪಡೆದರು. ಪುತ್ತೂರು ಎಸಿ ಗಿರೀಶ್ ನಂದನ್, ತಹಶೀಲ್ದಾರ್ ಅನಂತಶಂಕರ, ಕಂದಾಯ ನಿರೀಕ್ಷಕ ಅವಿನ್ ರಂಗತ್ತಮಲೆ,

ಏನೆಕಲ್ಲು: ಮಳೆಯ ಅವಾಂತರ: ದೇವಸ್ಥಾನದ ಕಾಂಪೌಂಡ್ ಕುಸಿತ

ನಿನ್ನೆ ಸುರಿದ ಭಾರೀ ಮಳೆಗೆ ಯೇನೆಕಲ್ಲು ಶ್ರೀ ಶಂಖಪಾಲ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಮುಂಭಾಗದಲ್ಲಿ ಹರಿಯುವ ಹೊಳೆಯಲ್ಲಿ ನೀರಿನ ಮಟ್ಟ ಹೆಚ್ಚಾಗಿ ನೀರು ದೇವಾಲಯದ ಒಳಂಗಾಣಕ್ಕೆ ಆವರಿಸಿತ್ತು. ನೀರಿನೊಂದಿಗೆ ಮಣ್ಣು ಹರಿದು ಬಂದು ದೇವಸ್ಥಾನದ ಒಳಾಂಗಣ ಮತ್ತು ಪರಿಸರ ಕೆಸರುಮಯವಾಗಿದೆ. ನೀರಿನಲ್ಲಿ ತೇಲಿಕೊಂಡು ಬಂದ ದೊಡ್ಡ ಗಾತ್ರದ ಮರದ ದಿಮ್ಮಿ ಹೊರಾಂಗಣದ ಕಾಂಪೌಂಡ್ ಬಳಿ ನಿಂತಿದೆ. ಕಾಂಪೌಂಡ್ ಕುಸಿದುಬಿದ್ದು ಅಪಾರ ನಷ್ಟ ಉಂಟಾಗಿರುವುದಾಗಿ ತಿಳಿದುಬಂದಿದೆ.