Home ಕರಾವಳಿ Archive by category ಉಡುಪಿ

ಮಲ್ಲಾರು ಶ್ರೀ ಧೂಮಾವತಿ ದೈವಸ್ಥಾನಕ್ಕೆ ಗ್ರಾನೈಟ್ ಅಳವಡಿಸಲು 10 ಲಕ್ಷ ರೂಪಾಯಿ ಅನುದಾನ ಮಂಜೂರು

ಮಲ್ಲಾರು ಶ್ರೀ ಧೂಮಾವತಿ ದೈವಸ್ಥಾನದ ಅಂಗಳಕ್ಕೆ ಗ್ರಾನೈಟ್ ಅಳವಡಿಸಲು ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ 10 ಲಕ್ಷ ರೂಪಾಯಿ ಅನುದಾನ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು ಇದರ ಉದ್ಘಾಟನೆಯನ್ನು ಇಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಕಾಪು ಪುರಸಭಾ ಸದಸ್ಯರಾದ ಶೈಲೇಶ್ ಎನ್ ಅಮೀನ್,ಉಮೇಶ್

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ; ಸಮತಾ ಸೈನಿಕ ದಳದಿಂದ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ

ಉಡುಪಿ: ಅಂಬೇಡ್ಕ‌ರ್ ಆವಾಜ್ ಯೋಜನೆಯಲ್ಲಿ ಮನೆ ನಿರ್ಮಾಣಕ್ಕೆ 9 ಲಕ್ಷ, ಬಸವ ಇಂದಿರಾ ಆವಾಜ್ ಯೋಜನೆಯಡಿಯಲ್ಲಿ 5 ಲಕ್ಷ ಸಹಾಯಧನ ನೀಡುವಂತೆ ಒತ್ತಾಯಿಸಿ, ಬ್ರಹ್ಮಾವರದ ಹನೇಹಳ್ಳಿ ಕೃಷ್ಣ ಶೂಟೌಟ್ ಪ್ರಕರಣವನ್ನು ಸಿಓಡಿ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿ ಸಮತಾ ಸೈನಿಕ ದಳದ ವತಿಯಿಂದ ಉಡುಪಿಯಲ್ಲಿ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಯಿತು.ಉಡುಪಿಯ ಅಜ್ಜರಕಾಡು ಹುತಾತ್ಮ ಸ್ಮಾರಕದ ಬಳಿಯಿಂದ ಕಪ್ಪು ಪಟ್ಟಿ ಧರಿಸಿ ಕಾಲ್ನಡಿಗೆ ಮೂಲಕ ಕಾಂಗ್ರೆಸ್‌ ಕಚೇರಿಗೆ ತೆರಳಿದ

ಉಡುಪಿ: ಬೈಕ್ ಅಪಘಾತದಲ್ಲಿ ಸಿಟಿಬಸ್ ಚಾಲಕ ಮೃತ್ಯು

ಉಡುಪಿ: ಕಳೆದ ರಾತ್ರಿ ಉಡುಪಿಯ ಅಂಬಾಗಿಲು- ಪೆರಂಪಳ್ಳಿ ಮುಖ್ಯ ರಸ್ತೆಯಲ್ಲಿ ನಡೆದ ಬೈಕ್ ಅಪಘಾತದಲ್ಲಿ ಸಿಟಿಬಸ್ ಚಾಲಕ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ಬಸ್ ಚಾಲಕ ಸಂದೀಪ್ ಎಂದು ತಿಳಿದುಬಂದಿದೆ. ಇವರು ಉಡುಪಿ ಸಿಟಿ ಬಸ್ ನಲ್ಲಿ ಚಾಲಕರಾಗಿದ್ದ ಇವರು, ಮೂಲತಃ ಸಾಗರ ತಾಲೂಕಿನವರು ಅವಿವಾಹಿತರೆಂದು ತಿಳಿದು ಬಂದಿದೆ.

ಪಡುಬಿದ್ರಿ: ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಪಂಚದೈವೀಕ ಸ್ಥಾನ ಅಭಿವೃದ್ಧಿಗೆ ಶಿಲಾನ್ಯಾಸ

ಪಡುಬಿದ್ರಿ:ಸಮಗ್ರ ಜೀರ್ಣೋದ್ಧಾರ ಗೊಳ್ಳುತ್ತಿರುವ ಪಡುಬಿದ್ರಿಯ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನಕ್ಕೆ ಸಂಬಂಧ ಪಟ್ಟಂತೆ ಪಂಚ ದೈವಗಳಿಗೆ ಪಡುಬಿದ್ರಿ ಗಣಪತಿ ಪ್ರೌಢಶಾಲಾ ಹಳೆ ವಿದ್ಯಾರ್ಥಿ ಸಂಘದ ಸಹಭಾಗಿತ್ವದಲ್ಲಿ ದೇಗುಲದ ಪುಷ್ಕರಣೀ ತಟದಲ್ಲಿ ನಿರ್ಮಿಸಲ್ಪಡುವ ಅಂದಾಜು 15 -20 ಲಕ್ಷ ರೂಪಾಯಿ ವೆಚ್ಚದ ನೂತನ ಗುಡಿಗಳ ಕಾಮಗಾರಿಯ ಶಿಲಾನ್ಯಾಸವು ಇಂದು ದಿನಾಂಕ 18 ಬುಧವಾರದಂದು ಜರಗಿತು.ಪಂಚದೈವೀಕ ಸ್ಥಾನದ ಶಿಲಾನ್ಯಾಸದ ಧಾರ್ಮಿಕ ವಿಧಿ ವಿಧಾನಗಳನ್ನು

ತೆಕ್ಕಟ್ಟೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ದುರಂತ: ಆನ್‌ಲೈನ್ ಸರ್ವೀಸ್ ಸೆಂಟರ್ ಭಸ್ಮ: ಲಕ್ಷಾಂತರ ರೂ. ನಷ್ಟ

ಕುಂದಾಪುರ: ಇಲ್ಲಿನ ತೆಕ್ಕಟ್ಟೆ ರಾಷ್ಟ್ರೀಯ ಹೆದ್ದಾರಿ–66ರ ಕನ್ನುಕೆರೆ ಸಮೀಪದ ಶ್ರೀನವಶಕ್ತಿ ಕಲ್ಯಾಣ ಮಂಟಪದಲ್ಲಿ ಕಳೆದ ಒಂದು ವರ್ಷದಿಂದ ಕಾರ್ಯನಿರ್ವಹಿಸುತ್ತಿದ್ದ ‘ಆಶ್ಲೇಷ ಆನ್‌ಲೈನ್ ಸರ್ವೀಸ್ ಸೆಂಟರ್’ ನಲ್ಲಿ ಸೋಮವಾರ (ಫೆ.16) ರಾತ್ರಿ ಸಂಭವಿಸಿದ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ದುರಂತದಿಂದ ಅಂಗಡಿಯಲ್ಲಿದ್ದ ಎಲ್ಲಾ ವಸ್ತುಗಳು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾದವು. ಎಂದಿನಂತೆ ಅಂಗಡಿ ಮಾಲೀಕ ಫಣಿರಾಜ್ ಹತ್ವಾರ್ ಕೊರವಡಿ ಅವರು ರಾತ್ರಿ ಅಂಗಡಿ ಮುಚ್ಚಿ

ಉಡುಪಿ: ಮೂರು ನಾಪತ್ತೆ ಪ್ರಕರಣ ದಾಖಲು

ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರತ್ಯೇಕ ಮೂರು ನಾಪತ್ತೆ ಪ್ರಕರಣಗಳು ದಾಖಲಾಗಿವೆ.ಉಡುಪಿ ತಾಲೂಕಿನ ಮೂಡುತೋನ್ಸೆ ಗ್ರಾಮದ ನೇಜಾರು ರಾಜೀವ್ ನಗರದ ನಿವಾಸಿ ಸತೀಶ್ (43) ಕಳೆದ ವರ್ಷದ ಡಿಸೆಂಬರ್‌ನಿಂದ ನಾಪತ್ತೆಯಾಗಿದ್ದಾರೆ. ಕೆಲಸಕ್ಕೆಂದು ಮನೆಯಿಂದ ಹೋದವರು ಮರಳಿ ಬಂದಿಲ್ಲ ಎಂದು ತಿಳಿದುಬಂದಿದೆ. ಅವರು 5 ಅಡಿ 6 ಇಂಚು ಎತ್ತರ, ಎಣ್ಣೆಗಪ್ಪು ಮೈಬಣ್ಣ ಹೊಂದಿದ್ದಾರೆ. ತುಳು, ಕನ್ನಡ ಮತ್ತು ಹಿಂದಿ ಮಾತನಾಡಬಲ್ಲರು. ಈ ವ್ಯಕ್ತಿಯ ಬಗ್ಗೆ

ಮೂಡುಬೆಳ್ಳೆ: ಶ್ರೀ ಮಹಾಲಿಂಗೇಶ್ವರ ಶ್ರೀ ಮಹಾಗಣಪತಿ ಶ್ರೀ ಸೂರ್ಯನಾರಾಯಣ ದೇವಸ್ಥಾನ ಸಹಸ್ರ ಬಿಲ್ವಾರ್ಚನಾ ಪೂಜ ಕಾರ್ಯಕ್ರಮ

ಕಾಪು:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ ) ಬಿ ಸಿ ಟ್ರಸ್ಟ್ ಕಾಪು ತಾಲೂಕು ಘಟಕದ ವತಿಯಿಂದಬೆಳ್ಳಿ ಕಟ್ಟಿಂಗೇರಿ ಕಾರ್ಯಕ್ಷೇತ್ರ ನಿರ್ವಹಿಸುವ ವಲಯದ ಶ್ರೀ ಮಹಾಲಿಂಗೇಶ್ವರ ಶ್ರೀ ಮಹಾಗಣಪತಿ ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲಿಸಹಸ್ರ ಬಿಲ್ವಾರ್ಚನೆ, ಪೂಜ ಕಾರ್ಯಕ್ರಮ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮವು ದಿನಾಂಕ 16/2/2026 ಸೋಮವಾರ ದಂದು ನಡೆಯಿತು. ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ದೇವರಿಗೆ ಸಹಸ್ರ ಬಿಲ್ವಾರ್ಚನೆ, ಪೂಜಾ ವಿಧಿವಿಧಾನಗಳು

ಮಡುಂಬು ಹಿಂದೂ ರುದ್ರಭೂಮಿಯ ಶಿವನ ಮೂರ್ತಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರಿಂದ ಅನಾವರಣ

ಕಾಪು:ಇನ್ನಂಜೆ ಗ್ರಾಮ ಪಂಚಾಯತ್ ಆಶ್ರಯದಲ್ಲಿ ಯುವಸೇನೆ ಮಡುಂಬು ಪ್ರಾಯೋಜಕತ್ವದಲ್ಲಿ ಮಡುಂಬು ಹಿಂದೂ ರುದ್ರಭೂಮಿ ಮುಂಭಾಗಲ್ಲಿ ನಿರ್ಮಿಸಿರುವ ಶಿವನ ಮೂರ್ತಿಯನ್ನು ದಿನಾಂಕ 15-02-2026 ಭಾನುವಾರದಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಇನ್ನಂಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಾಲಿನಿ ಶೆಟ್ಟಿ, ಉಪಾಧ್ಯಕ್ಷರಾದ ಸುರೇಖಾ ಶೆಟ್ಟಿ, ಮಡುಂಬು ಯುವಸೇನೆ ಅಧ್ಯಕ್ಷರಾದ ದೀಪಕ್ ಶೆಟ್ಟಿ, ಇನ್ನಂಜೆ ಗ್ರಾಮ ಪಂಚಾಯತ್ ಮಾಜಿ

ಅಬಾಕಸ್ ಸ್ಪರ್ಧೆಯಲ್ಲಿ ಬ್ರಾಹ್ಮಿ ಸಿ. ಶೆಟ್ಟಿ ರಾಜ್ಯ ಚಾಂಪಿಯನ್

ಪಡುಬಿದ್ರಿ:ತುಮಕೂರಿನ ಟಿ.ಆರ್.ಎಸ್. ಅಬಾಕಸ್ ಅಕಾಡೆಮಿ ಆಯೋಜಿಸಿದ್ದ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಬ್ರಾಹ್ಮಿ ಸಿ. ಶೆಟ್ಟಿ ಚಾಂಪಿಯನ್ ಆಗಿ ಸಾಧನೆ ಮಾಡಿದ್ದಾರೆ. ಮಂಗಳೂರಿನ ಸೆಂಟ್ ತೆರೆಸಾ ಶಾಲೆಯ 3ನೇ ತರಗತಿ ವಿದ್ಯಾರ್ಥಿನಿ ಬ್ರಾಹ್ಮಿ ಸಿ. ಶೆಟ್ಟಿ ಅವರು ರಾಜ್ಯಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಚಾಂಪಿಯನ್ ಆಫ್ ಚಾಂಪಿಯನ್ಸ್ ಪದಕ ವಿಜೇತರಾಗಿದ್ದಾರೆ. ಅವರು ಮಂಗಳೂರಿನ ಕದ್ರಿಯ ನಿವಾಸಿಯಾಗಿದ್ದು, ಎರ್ಮಾಳ್ ಎಲ್ಲದಡಿ ಚಂದ್ರಹಾಸ್ ಶೆಟ್ಟಿ ಮತ್ತು ಅಮೃತಾ ಶೆಟ್ಟಿ

ನೇತ್ರ ಜ್ಯೋತಿ ಕಾಲೇಜಿನಲ್ಲಿ ಉಡುಪಿ ಜಿಲ್ಲಾ ಸಿವಿಲ್ ಡಿಫೆನ್ಸ್ ಕಮಾಂಡಿಂಗ್ ಆಫೀಸರ್ ಡಾ. ವಿಜೇಂದ್ರ ಸಿವಿಲ್ ಡಿಫೆನ್ಸ್ ಮಾಹಿತಿ ಕಾರ್ಯಗಾರ

ಉಡುಪಿ:ಉಡುಪಿಯ ಪ್ರತಿಷ್ಠಿತ ನೇತ್ರ ಜ್ಯೋತಿ ಕಾಲೇಜಿನಲ್ಲಿ ಸಿವಿಲ್ ಡಿಫೆನ್ಸ್ ಮಾಹಿತಿ ಕಾರ್ಯಗಾರವನ್ನು ಏರ್ಪಡಿಸಲಾಯಿತು.ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಗಿಮಿಸಿ ಮಾತನಾಡಿದ ಉಡುಪಿ ಜಿಲ್ಲಾ ಸಿವಿಲ್ ಡಿಫೆನ್ಸ್ ಕಮಾಂಡಿಂಗ್ ಆಫೀಸರ್ ಡಾ. ವಿಜೇಂದ್ರರವರು ಸಂಕಷ್ಟದ ಸಮಯದಲ್ಲಿ ಸಾರ್ವಜನಿಕರ ರಕ್ಷಣೆ ಮತ್ತು ಮಾನವೀಯ ಸೇವೆ ಒದಗಿಸುವುದೇ ಸಿವಿಲ್ ಡಿಫೆನ್ಸ್. ಇಂತಹ ಸಮಾಜಮುಖಿ ಕಾರ್ಯಗಳನ್ನು ಮಾಡುವಲ್ಲಿ ವಿಧ್ಯಾರ್ಥಿಗಳು ಮುಂದಾಗಬೇಕು. ಹೆಚ್ಚು ಹೆಚ್ಚು