Home ಕರಾವಳಿ Archive by category ಉಡುಪಿ (Page 111)

ಮೂಳೂರು: ಬೈಕ್‌ಗೆ ಟ್ಯಾಂಕರ್ ಢಿಕ್ಕಿ: ಅಪಘಾತದಲ್ಲಿ ಇಬ್ಬರು ಮೃತ್ಯು

ಮೂಳೂರು ವೆಸ್ಟ್ ಕೋಸ್ಟ್ ನರ್ಸರಿ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಟ್ಯಾಂಕರ್ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ಬೈಕ್ ಸವಾರ ಸ್ಥಳದಲ್ಲಿಯೇ ಧಾರುಣವಾಗಿ ಮೃತಪಟ್ಟಿದ್ದು, ಇನ್ನೋರ್ವ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಶನಿವಾರ ಸಂಜೆಯ ವೇಳೆ ನಡೆದಿದೆ. ಪಲ್ಸರ್ ಬೈಕ್ ಮತ್ತು ಟ್ಯಾಂಕರ್ ಉಡುಪಿ ಕಡೆಯಿಂದ ಪಡುಬಿದ್ರಿ ಕಡೆ

ಕಾಪು-ಪಡುಬಿದ್ರಿ ಜಾತ್ರೆಗಳಲ್ಲಿ ಅನ್ಯಧರ್ಮಿಯರಿಗೆ ವ್ಯಾಪಾರಕ್ಕೆ ಅವಕಾಶ ನೀಡದಿರಲು ಮನವಿ

ಕಾಪುವಿನಲ್ಲಿ ನಡೆಯುವ ಮಾರಿಪೂಜೆ ಹಾಗೂ ಪಡುಬಿದ್ರಿ ದೇವಳದಲ್ಲಿ ನಡೆಯುವ ರಥೋತ್ಸವ ಸಂದರ್ಭ ಅನ್ಯಧರ್ಮಿಯರಿಗೆ ವ್ಯಾಪಾರಕ್ಕೆ ಅವಕಾಶ ನೀಡದಂತೆ ದೇವಳಗಳ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪ್ರಶಾಂತ್ ಶೆಟ್ಟಿಯವರಿಗೆ ಬಜರಂಗದಳ ಕಾಪು ಪ್ರಖಂಡ ಸದಸ್ಯರು ಮನವಿ ಸಲ್ಲಿಸಿದ್ದಾರೆ. ದೇಶದ ಕಾನೂನನ್ನು ಹಾಗೂ ಹಿಂದೂ ಸನಾತನ ಧರ್ಮದ ಆಚಾರ-ವಿಚಾರಗಳನ್ನು ಗೌರವಿಸದ ಅನ್ಯಧರ್ಮಿಯರಿಗೆ ಜಾತ್ರಾ ಸಂಧರ್ಭದಲ್ಲಿ ವ್ಯಾಪಾರ ವಹಿವಾಟು ನಡೆಸಲು ಅವಕಾಶ ನೀಡದಂತೆ ಮನವಿಯನ್ನು

ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲಾ ಎಸ್.ಸಿ ಮತ್ತು ಎಸ್.ಟಿ ಸಮಾವೇಶ

ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲಾ ಎಸ್.ಸಿ ಮತ್ತು ಎಸ್.ಟಿ ಸಮಾವೇಶ ಬೈಂದೂರು ಮಂಡಲದ ಹೆಮ್ಮಾಡಿ ಜಯಶ್ರೀ ಸಭಾಂಗಣದಲ್ಲಿ ನಡೆಯಿತು. ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರು ಉದ್ಘಾಟಿಸಿದರು ಈ ಸಂದರ್ಭದಲ್ಲಿ ವೇದಿಕೆಯಲ್ಲಿ sc ಮೋರ್ಚಾ ರಾಜ್ಯ ಕಾರ್ಯದರ್ಶಿ ಮಹೇಂದ್ರ ಕೌತಲ, ವಿಭಾಗ ಪ್ರಭಾರಿ ಉದಯ್ ಕುಮಾರ್ ಶೆಟ್ಟಿ, ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್,ರಾಜ್ಯ sc ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ್ ಬಾಬು, ಜಿಲ್ಲಾ ಪ್ರಧಾನ

ಉಚ್ಚಿಲ: ಓವರ್‌ ಟೇಕ್  ಭರದಲ್ಲಿ ಡಿವೈಡರ್ ಮೇಲೇರಿದ ಬಸ್ಸು: ಆಕ್ರೋಶಿತ ಪ್ರಯಾಣಿಕರಿಂದ ಬಸ್ಸಿನ ಗಾಜು ಪುಡಿ

ಎರಡು ಬಸ್ಸುಗಳ ಓವರ್‌ಟೇಕ್ ಭರದಲ್ಲಿ ಬಸ್ಸೊಂದು ಡಿವೈಡರ್ ಮೇಲೇರಿದ ಘಟನೆ ಉಚ್ಚಿಲ ಸಮಿಪದ ಮೂಳೂರು ವೆಸ್ಟ್‌ಕೋಸ್ಟ್ ನರ್ಸರಿ ಬಳಿ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ ೬೬ ರಲ್ಲಿ ಉಡುಪಿ ಕಡೆಯಿಂದ ಮಂಗಳೂರಿನತ್ತ ಚಲಿಸುವ ವಿಶಾಲ್ ಹೆಸರಿನ ಎರಡು ಬಸ್ಸುಗಳು ಓವರ್ಟೇಕ್ ಮಾಡಿಕೊಂಡು ಬಂದು ಮೂಳೂರು ಬಳಿ ಸರ್ವಿಸ್ ರಸ್ತೆಯ ಪಕ್ಕದ ಡಿವೈಡರ್ ಮೇಲೇರಿದೆ.ಘಟನೆಯಿಂದ ಪ್ರಯಾಣಿಕರು ಗಾಯಗೊಂಡಿದ್ದಾರೆ. ಈ ಘಟನೆಯಿಂದ ರೊಚ್ಚಿಗೆದ್ದ ಪ್ರಯಾಣಿಕರು ಬಸ್ಸಿನ ಕಿಟಕಿ ಗಾಜುಗಳನ್ನು

ಜೈ ಭೀಮ್ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾಟಕ್ಕೆ ಚಾಲನೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಗ್ರಾಮ ಶಾಖೆ ಪಡುಬಿದ್ರಿ, ಇದರ ದಶಮಾನೋತ್ಸವ ಅಂಗವಾಗಿ ಮೂರನೇ ವರ್ಷದ ರಾಜ್ಯಮಟ್ಟದ ಜೈ ಭೀಮ್ ಟ್ರೋಫಿ 2023 ಹೆಜಮಾಡಿ ಬಸ್ತಿಪಡ್ಪು ಮೈದಾನದಲ್ಲಿ ಉದ್ಘಾಟನೆಗೊಂಡಿತು. ಅಂಬೇಡ್ಕರ್ ಬಾವಚಿತ್ರಕ್ಕೆ ಹೂ ಹಾರ ಹಾಕುವ ಮೂಲಕ ಜಿಲ್ಲಾ ಶಾಖೆಯ ಪ್ರಧಾನ ಸಂಚಾಲಕ ಸುಂದರ ಮಾಸ್ತರ್ ಉದ್ಘಾಟಿಸಿ ಮಾತನಾಡಿದ ಅವರು, ಅದೇಷ್ಟೋ ಪ್ರತಿಭೆಗಳಿದ್ದರೂ ಅವಕಾಶ ವಂಚಿತವಾಗಿ ಕಮರಿ ಹೋಗುತ್ತಿದೆ. ಆ ನಿಟ್ಟಿನಲ್ಲಿ ಇಂಥಹ ಕ್ರೀಡೆಗಳನ್ನು

ಉಚ್ಚಿಲ : ನಾಮಫಲಕ ಅಳವಡಿಸಿದ್ದರ ವಿರುದ್ಧ ಆಟೋ ಚಾಲಕರ ಗೊಂದಲ ಪೊಲೀಸ್ ಸಮ್ಮುಖದಲ್ಲಿ ನಾಮಫಲಕ ತೆರವು

ಕೆಲ ಅಟೋ ರಿಕ್ಷಾ ಚಾಲಕರು ಅಟೋ ನಿಲ್ದಾಣ ಎಂಬ ನಾಮಫಲಕ ಅಳವಡಿಸಿದರ ವಿರುದ್ಧ ಆಕ್ರೋಶಗೊಂಡ ಉಚ್ಚಿಲ ಅಟೋ ಯೂನಿಯನ್ ಸದಸ್ಯರು ಪ್ರತಿಭಟಿಸಿ ಪೆÇಲೀಸ್ ಸಮುಖದಲ್ಲಿ ಬೋರ್ಡ್ ತೆರವುಗೊಳಿಸಲಾಯಿತು.ಉಚ್ಚಿಲ ಅಟೋ ಯೂನಿಯನ್ ಪ್ರಮುಖರಾದ ಸಿರಾಜ್ ಉಚ್ಚಿಲ ಮಾಹಿತಿ ನೀಡಿ, ಯೂನಿಯನ್‍ಗೆ ಸೇರದ ಕೆಲವು ಮಂದಿ ಹಾಗೂ ನೆರೆಯ ಊರಿನ ಕೆಲವು ಅಟೋ ಚಾಲಕರು ಸೇರಿ ಯಾವುದೇ ಪರವಾನಗೆ ಪಡೆಯದೆ ಏಕಾಏಕಿ ಮಹಾಲಕ್ಷ್ಮೀ ದೇವಳದ ಬಳಿಯ ಫುಟ್ ಫಾತ್ ನಲ್ಲಿ ಬೊರ್ಡ್ ನೆಟ್ಟಿದ್ದು, ಈ ಬಗ್ಗೆ

ಹೆಜಮಾಡಿ : ಪ್ರಜ್ಞಾಹೀನ ಸ್ಥಿತಿಯಲ್ಲಿ ಮಹಿಳೆ ಪತ್ತೆ

ಸುಮಾರು 35ವರ್ಷ ವಯಸ್ಸಿನ ಮಹಿಳೆಯೋರ್ವರು ಹೆಜಮಾಡಿ ಪೆಟ್ರೋಲ್ ಬಂಕ್ ಬಳಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.ಸ್ಥಳೀಯರ ಮಾಹಿತಿಯಂತೆ ಹೆಜಮಾಡಿ ಗ್ರಾ.ಪಂ. ಅಧ್ಯಕ್ಷ ಪಾಂಡುರಂಗ ಕರ್ಕೇರ, ಸದಸ್ಯ ಪ್ರಾಣೇಶ್ ಹೆಜಮಾಡಿ ಸ್ಥಳಕ್ಕೆ ಬಂದು ಪರಿಶೀಲಿಸಿ ಪಡುಬಿದ್ರಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾನಸಿಕ ಸೀಮಿತ ಕಳೆದು ಕೊಂಡಿರ ಬಹುದೇ ಇಲ್ಲ ನಶೆಯಿಂದ ಬಿದ್ದಿರ ಬಹುದೇ ಎಂಬ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಬಂದ ಪಡುಬಿದ್ರಿ ಪೊಲೀಸರು ಅಟೋ ರಿಕ್ಷಾದ

ಬೈಂದೂರು ತಾಲೂಕು ಆಡಳಿತ ಸೌಧದ ನೂತನ ಕಟ್ಟಡ ಉದ್ಘಾಟನೆ

ಬೈಂದೂರು: ಬೈಂದೂರು ತಾಲೂಕು ಆಡಳಿತ ಸೌಧದ ನೂತನ ಕಟ್ಟಡ ಉದ್ಘಾಟನೆ ಸಮಾರಂಭ ಬೈಂದೂರಿನಲ್ಲಿ ನಡೆಯಿತು. ಸಂಸದ ಬಿ. ವೈ ರಾಘವೇಂದ್ರ ಅವರು ನೂತನ ಆಡಳಿತ ಸೌಧದ ನೂತನ ಕಟ್ಟಡ ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ತಾಲೂಕು ಘೋಷಷಣೆಯಾದ ಬಳಿಕ ಬೈಂದೂರು ತಾಲೂಕು ಕೇಂದ್ರಕ್ಕೆ ಅವಶ್ಯಕತೆಯಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ಪ್ರಮುಖ ಜವಬ್ದಾರಿಯಾಗಿರುತ್ತದೆ.ಹೀಗಾಗಿ ಬೈಂದೂರು ಅಭಿವೃದ್ದಿ ಬಗ್ಗೆ ವಿಶೇಷ ಆಸಕ್ತಿ ವಹಿಸಿ ಹತ್ತು ಕೋಟಿ ಅನುದಾನದ

ಉಡುಪಿ : ಗುಜರಿ ಅಂಗಡಿಯಲ್ಲಿ ಭಾರೀ ಅಗ್ನಿ ಅವಘಡ

ಉಡುಪಿ: ಉಡುಪಿ ನಗರದ ಕಿನ್ನಿಮೂಲ್ಕಿ ಸ್ವಾಗತ ಗೋಪುರ ಸಮೀಪದ ಗುಜರಿ ಅಂಗಡಿಯೊಂದರಲ್ಲಿ ತಡರಾತ್ರಿ ಅಗ್ನಿ ಅವಘಡ ಸಂಭವಿಸಿದೆ. ತಡರಾತ್ರಿ ಸುಮಾರು 12 ಗಂಟೆ ಹೊತ್ತಿಗೆ ಬೆಂಕಿ ಹೊತ್ತಿಕೊಂಡಿದ್ದು ತಕ್ಷಣ ಉಡುಪಿ ಮತ್ತು ಮಲ್ಪೆಯ ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಯಿತು.ಅಂಗಡಿಯಲ್ಲಿ ಬೃಹತ್ ಪ್ರಮಾಣದ ಪ್ಲಾಸ್ಟಿಕ್ ದಾಸ್ತಾನು ಮತ್ತು ಕಚ್ಚಾ ವಸ್ತುಗಳಿದ್ದವು. ಪ್ಲಾಸ್ಟಿಕ್ ಜೊತೆಗೆ ಗುಜರಿ ಸಾಮಾನುಗಳು, ಕಚ್ಚಾ ತೈಲಗಳು ಕ್ಷಣಾರ್ಧದಲ್ಲಿ

ಪಡುಬಿದ್ರಿ ಇನ್ನರ್ ವ್ಹೀಲ್ ಕ್ಲಬ್‍ನಿಂದ, ನಿಟ್ಟೂರು ಅನಾಥ ಧಾಮದ ಮಕ್ಕಳಿಗೆ ಅಗತ್ಯ ವಸ್ತುಗಳ ಪೂರೈಕೆ

ಪಡುಬಿದ್ರಿ ಇನ್ನರ್ ವ್ಹೀಲ್ ಕ್ಲಬ್ ತನ್ನ ಸದಸ್ಯರೊಡಗೂಡಿ ಮಹಿಳಾ ದಿನಾಚರಣೆಯ ಅಂಗವಾಗಿ ಉಡುಪಿ ನಿಟ್ಟೂರಿನ ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖಾ ಆಶ್ರಯದ ರಾಜ್ಯ ಮಹಿಳಾ ನಿಲಯಕ್ಕೆ ಭೇಟಿನೀಡಿ ಮಕ್ಕಳಿಗೆ ಬೇಕಾದ ಅಗತ್ಯ ವಸ್ತುಗಳನ್ನು ಪೂರೈಸುವ ಮೂಲಕ ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿಯುವ ಕಾರ್ಯವನ್ನು ನಡೆಸುವ ಮೂಲಕ ಇತರ ಸಂಘ ಸಂಸ್ಥೆಗಳಿಗೆ ಪ್ರೇರಣೆಯಾಗಿದ್ದಾರೆ .ಉಡುಪಿಯ ಮಹಿಳಾ ನಿಲಯಕ್ಕೆ ಭೇಟಿ ನೀಡಿದ ಇನ್ನರ್ ವ್ಹೀಲ್ ಸದಸ್ಯರು, ಸರಳ ಕಾರ್ಯಕ್ರಮ ನಡೆಸಿ ಮಕ್ಕಳ