Home ಕರಾವಳಿ Archive by category ಉಡುಪಿ (Page 132)

ಸಿಎಂ ಬದಲಾವಣೆ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ: ಸಚಿವ ಕೋಟ ಶ್ರೀನಿವಾಸ ಪೂಜಾರಿ

ಕುಂದಾಪುರ: ರಾಷ್ಟ್ರಾಧ್ಯಕ್ಷರು ಹಾಗೂ ರಾಜ್ಯಾಧ್ಯಕ್ಷರು ಅಥವಾ ಮುಖ್ಯಮಂತ್ರಿಗಳಲ್ಲಾಗಲಿ ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.ಅವರು ಕುಂದಾಪುರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ನಿನ್ನೆ ಹಿಂದುಳಿದ ವರ್ಗಗಳ ಇಲಾಖೆಯ ಕಾರ್ಯಕ್ರಮದಲ್ಲಿ ದೇವರಾಜು ಅರಸರ ಪ್ರತಿಮೆಗೆ

ಪಡುಬಿದ್ರಿ ಬೀದಿ ವ್ಯಾಪಾರಿಗಳನ್ನು ಮೈದಾನಕ್ಕೆ ಸ್ಥಳಾಂತರಿಸಿದ ಗ್ರಾ.ಪಂ.

ಪಡುಬಿದ್ರಿ ಮಾರುಕಟ್ಟೆ ರಸ್ತೆಯಲ್ಲಿ ನಿರಂತರ ಸಾಮಾಜಿಕ ಅಂತರವಿಲ್ಲದೆ ವ್ಯಾಪಾರ ವಹಿವಾಟು ನಡೆಸುತ್ತಿದ್ದರಿಂದ ಬೀದಿಬದಿ ವ್ಯಾಪಾರಿಗಳನ್ನು ಗ್ರಾ.ಪಂ. ಪಕ್ಕದ ಸರ್ಕಾರಿ ಶಾಲಾ ಮೈದಾನಕ್ಕೆ ಸ್ಥಳಾಂತರಿಸಿದ್ದರೂ.. ಅಂಗಡಿ ಹೊಂದಿರುವ ತರಕಾರಿ ವ್ಯಾಪಾರಿಗಳು ರಸ್ತೆಯಲ್ಲೇ ತರಕಾರಿಗಳನ್ನು ಇಟ್ಟು ವ್ಯಾಪಾರನಡೆಸುತ್ತಿರುವ ಬಗ್ಗೆ ಜನರಿಂದ ಆಕ್ಷೇಪ ವ್ಯಕ್ತವಾಗಿದೆ. ಈ ಬಗ್ಗೆ ಮಾತನಾಡಿದ ಗ್ರಾ.ಪಂ. ಅಧ್ಯಕ್ಷ ರವಿ ಶೆಟ್ಟಿ, ಮುಖ್ಯ ಮಾರುಕಟ್ಟೆಯ ರಸ್ತೆಗೆ ಅಂಟಿಕೊಂಡೇ

ಯಡಮೊಗೆ ಉದಯ್ ಗಾಣಿಗ ಕೊಲೆ ಪ್ರಕರಣ : ಆರೋಪಿಗಳ ರಕ್ಷಣೆಗೆ ಯಾರೂ ಮಧ್ಯಪ್ರವೇಶ ಮಾಡಿಲ್ಲ : ಸಚಿವ ಕೋಟ

ಕುಂದಾಪುರ: ಯಡಮೊಗೆ ಉದಯ್ ಗಾಣಿಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ರಕ್ಷಣೆಗೆ ನಮ್ಮ‌ ಶಾಸಕರಾಗಲಿ, ಸಂಸದರಾಗಲಿ ಮಂತ್ರಿಗಳಾಗಲಿ ಯಾರೂ ಮಧ್ಯಪ್ರವೇಶ ಮಾಡಿಲ್ಲ ಎಂದು ರಾಜ್ಯ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟಪಡಿಸಿದರು. ಉದಯ್ ಗಾಣಿಗ ಕೊಲೆ ಪ್ರಕರಣದ ಆರೋಪಿಗಳಿಗೆ ಬಿಜೆಪಿ‌ ನಾಯಕರು ರಕ್ಷಣೆ ನೀಡುತ್ತಿದ್ದಾರೆ ಎಂಬ ಆರೋಪಗಳಿಗೆ ಅವರು ಕುಂದಾಪುರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.ಕಾನೂನು ಎಲ್ಲರಿಗೂ ಒಂದೇ.

ಉದಯ್ ಕುಟುಂಬಕ್ಕೆ ನ್ಯಾಯ ಕೊಡಿಸಿ: ಕೆ. ಗೋಪಾಲ ಪೂಜಾರಿ

ಕುಂದಾಪುರ: ಅನ್ಯಾಯಗಳ ವಿರುದ್ದ ಧ್ವನಿ ಎತ್ತುತ್ತಿದ್ದ ಉದಯ್ ಗಾಣಿಗ ಅವರನ್ನು ಕಳೆದ ಕೆಲ ದಿನಗಳಿಂದ ಹೊಂಚು ನಡೆಸಿ ಭೀಕರವಾಗಿ ಕೊಲೆಗೈಯ್ಯಲಾಗಿದೆ. ಉದಯ್ ಕೊಲೆಯಲ್ಲಿ ಭಾಗಿಯಾದ ಎಲ್ಲರಿಗೂ ಶಿಕ್ಷೆಯಾಗಬೇಕು. ಅವರ ಕುಟುಂಬಕ್ಕೆ ಸರ್ಕಾರ ಪರಿಹಾರ ನೀಡಬೇಕು ಎಂದು ಮಾಜಿ ಶಾಸಕ ಕೆ ಗೋಪಾಲ ಪೂಜಾರಿ ಹೇಳಿದರು. ಅವರು ಹೆಮ್ಮಾಡಿ ಸಮೀಪದ ಕಟ್‌ಬೇಲ್ತೂರು ನಿವಾಸದಲ್ಲಿ ಕರೆಯಲಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಕೊಳವೆ ಬಾವಿಗೆ ಎನ್‌ಓಸಿ ಕೊಡಲು ನಿರಾಕರಿಸಲಾಗಿದೆ.

ಕಾರು ಹತ್ತಿಸಿ ಕೊಲೆ: ಬಿಜೆಪಿ ಬೆಂಬಲಿತ ಪಂಚಾಯತ್ ಅಧ್ಯಕ್ಷ ಸೆರೆ

ಕುಂದಾಪುರ: ಯಡಮೊಗೆ ಸಾಮಾಜಿಕ‌ ಕಾರ್ಯಕರ್ತನ ಮೇಲೆ ಕಾರು ಹತ್ತಿಸಿ ಕೊಲೆಗೈದ ಖೇದಕರ ಘಟನೆಗೆ ಸಂಬಂಧಿಸಿದಂತೆ ಆರೋಪಿ ಪಂಚಾಯತ್ ಅಧ್ಯಕ್ಷನನ್ನು ಶಂಕರನಾರಾಯಣ ಪೊಲೀಸರು ಕ್ಷಿಪ್ರಗತಿಯಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶನಿವಾರ ರಾತ್ರಿ ಸಾಮಾಜಿಕ‌ ಕಾರ್ಯಕರ್ತ ಉದಯ್ ಗಾಣಿಗ (45) ಎಂಬವರ ಮೇಲೆ ಅವರ ಮನೆ ಎದುರಿನ‌ ರಸ್ತೆಯಲ್ಲೇ ಕಾರು ಹರಿಸಿ ಅವರನ್ನು ಕೊಲೆಗೈಯ್ಯಲಾಗಿತ್ತು. ಉದಯ್ ಪತ್ನಿ ಕೊಟ್ಟ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡ‌ ಶಂಕರನಾರಾಯಣ ಪೊಲೀಸರು

ಮನೆ ಮನೆಗೆ ದಿನಸಿ ಸಾಮಾಗ್ರಿ ವಿತರಣೆ : ಉಡುಪಿಯ ಸ್ಪೀಡ್ ಡೆವಿಲ್ಸ್ ಯುವಕರ ತಂಡದ ಕಾರ್ಯ

ಲಾಕ್ ಡೌನ್‍ನಿಂದಾಗಿ ದುಡಿಮೆ ಇಲ್ಲದೇ ಹಲವು ಕುಟುಂಬಗಳು ಸಂಕಷ್ಟದಲ್ಲಿವೆ. ಹೀಗಾಗಿ ಸಂಕಷ್ಟದ ಕುಟುಂಬಗಳ ಹಸಿವು ನೀಗಿಸುವ ಕೆಲಸವನ್ನು ಸದ್ದಿಲದೇ ಮಾಡುತ್ತಿದೆ. ಉಡುಪಿಯ ಸ್ಪೀಡ್ ಡೆವಿಲ್ಸ್ ಎನ್ನುವ ಹೆಸರಿನ ಯುವಕರು ಸಂಕಷ್ಟದಲ್ಲಿ ಕುಟುಂಬಗಳ ಮನೆ ಮನೆಗೆ ತೆರಳಿ ಹಸಿವು ನೀಗಿಸುತ್ತಿದೆ. ಇಡೀ ದೇಶವೇ ಕೊವಿಡ್ ಮಹಾಮಾರಿ ಯಿಂದ ಹಾಕಲಾಗಿರುವ ಲಾಕ್ ಡೌನ್ ಗೆ ತತ್ತರಿಸಿ ಹೋಗಿದೆ.ದುಡಿಮೆಯಿಲ್ಲದೇ ಜನ ಹಸಿವಿನಿಂದ ಸಂಕಷ್ಟದಲ್ಲಿದ್ದಾರೆ.ಒಂದೊತ್ತು ಊಟಕ್ಕೂ

ಹೆಜಮಾಡಿಯಲ್ಲಿ ಆಕ್ಸಿಜನ್ ಗಾಳಿಗೆ ಬಿಡಲಾಯಿತೇ..!: ವೀಡಿಯೋ ವೈರಲ್

ಆಂಧ್ರಪ್ರದೇಶ ನೋಂದಾಯಿತ ಸಂಖ್ಯೆಯ ಟ್ಯಾಂಕರೊಂದರಲ್ಲಿದ್ದ ಆಕ್ಸಿಜನನ್ನು ಹೆಜಮಾಡಿ ಬಳಿ ಗಾಳಿಗೆ ಬಿಡುತ್ತಿದ್ದ ವಿಡಿಯೋ ಸಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹೆಜಮಾಡಿಯ ಡಾಬದ ಬಳಿ ಲಾರಿಗಡ್ಡವಾಗಿ ನಿಂತು ಆಕ್ಸಿಜನ್ ತುಂಬಿತ್ತು ಎನ್ನಲಾದ ಟ್ಯಾಂಕರ್‌ನಿಂದ ಅದರ ನಿರ್ವಾಹಕ, ಚಾಲಕರೇ ಆಕ್ಸಿಜನ್ ಗಾಳಿಗೆ ಬಿಟ್ಟಿದ್ದು ಇದನ್ನು ಕಂಡ ಸ್ಥಳೀಯ ಬಾಲಕರು ಮೊಬೈಲ್ ಮೂಲಕ ಚಿತ್ರೀಕರಣ ಮಾಡಿದಾಗ ಅವರನ್ನು ಮಾಡದಂತೆ ಗದರಿಸಿದ್ದಾರೆ ಎನ್ನಲಾಗಿದೆ. ವಾಹನದ ಸಂಪೂರ್ಣ ಮಾಹಿತಿಯೂ

ಉಡುಪಿಯಲ್ಲಿ ಭಾರೀ ಮಳೆ: ನೀರಲ್ಲಿ ಮುಳುಗಿದ ಹತ್ತಾರು ಬೈಕ್, ಕಾರುಗಳು

ಉಡುಪಿಯಲ್ಲಿ ನಿನ್ನೆ ರಾತ್ರಿಯಿಂದ ಸುರಿಯುತ್ತಿರುವ ಭಾರೀ ಮಳೆ ಸುರಿಯುತ್ತಿದ್ದು ಬಿಗ್ ಬಜಾರ್ ಪಾರ್ಕಿಂಗ್ ಪ್ರದೇಶಕ್ಕೆ ಮಳೆ ನೀರು ನುಗ್ಗಿದೆ. ಮಳೆ ನೀರಲ್ಲಿ ಹತ್ತಾರು ಬೈಕ್ ಕಾರುಗಳು ಮುಳುಗಿದ ಘಟನೆ ನಡೆದಿದೆ.   ನಿನ್ನೆ ತಡರಾತ್ರಿಯಿಂದ ಉಡುಪಿ ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ, ಬಿಗ್ ಬಜಾರ್ ಕಟ್ಟಡದ ಪಾರ್ಕಿಂಗ್ ಪ್ರದೇಶ ಸಂಪೂರ್ಣ ಜಲಾವೃತಗೊಂಡಿದೆ. ಕಟ್ಟಡದ ನೆಲ ಮಳಿಗೆಗೆ ಮಳೆ ನೀರು ತುಂಬಿ ಕೊಂಡ ಪರಿಣಾಮ ಪಾರ್ಕಿಂಗ್ ಮಾಡಲಾಗಿದ್ದ,ಆರು

ಅಜ್ಜಿಗೆ ಮನೆ ಕಟ್ಟಿ ಕೊಡಲು ಮುಂದಾದ : ಪೆರ್ಡೂರಿನ “ವಿ ಲವ್ ಹ್ಯೂಮನಿಟಿ ಯುವಕರ ತಂಡ

ಮುತ್ತಜ್ಜಿ ….ಮುಗ್ಗ ಮನಸ್ಸಿನ ಈ ಬಡ ಅಜ್ಜಿ ಉಡುಪಿಯ ಪೆರ್ಡೂರು ಬಳಿ ಪಾಡಿಗಾರದ ನಿವಾಸಿ.ಕಳೆದ ಇಪ್ಪತು ವರ್ಷಗಳಿಂದ ಅಜ್ಜಿ ಬದುಕುತ್ತಿರುವ ಮನೆಯನ್ನ ಕಂಡ್ರೆ… ನಿಜಕ್ಕೂ ನೀವು ಮರುಕ ಪಡ್ತೀರಾ.ನಾಲ್ಕು ಕಂಬಗಳಿಗೆ, ಸಿಮೆಂಟ್ ಶೀಟು ಹಾಕಿ, ತೆಂಗಿನ ಗರಿಗಳಿಂದ ಮುಚ್ಚಿದ ಈ ಹಳೆ ಸೂರಲ್ಲಿಯೇ ತನ್ನ ಬದುಕು ಕಳೆದಿದ್ದಾರೆ. ವಯಸ್ಸಾದ ಅಜ್ಜಿಗೆ ಹಿಂದು… ಮುಂದು ಅಂತಾ ಯಾರು ಇಲ್ಲ.ಇರುವ ಒಬ್ಬ ಮಗನೂ ಯಾವುದೇ ಪ್ರಯೋಜನಕ್ಕಿಲ್ಲ. ಪ್ರತಿ ಬಾರಿಯೂ ಬೀಸುವ

ಕುಂದಾಪುರ ಜೆಸಿಐ ಮತ್ತು ರೆಡ್‍ಕ್ರಾಸ್ ಸಂಸ್ಥೆ : ಬಡವರಿಗೆ ಊಟದ ವ್ಯವಸ್ಥೆ

ಉಡುಪಿ ಜಿಲ್ಲೆ ಕುಂದಾಪುರ ತಾಲೂಕು ಜೆ.ಸಿ.ಐ ಕುಂದಾಪುರ ಸಿಟಿ ವತಿಯಿಂದ ಲಾಕ್ ಡೌನ್ ಸಂದರ್ಭದಲ್ಲಿ ಕುಂದಾಪುರ ಪರಿಸರದಲ್ಲಿ ಪ್ರತಿದಿನ ಸುಮಾರು 200 ಕ್ಕಿಂತಲೂ ಹೆಚ್ಚು ಕೊವೀಡ್ ವಾರಿಯರ್ಸ್, ನಿರ್ಗತಿಕರು ಹಾಗೂ ಭಿಕ್ಷುಕರಿಗೆ ಊಟವನ್ನು ನೀಡುತಿದ್ದು ಇವರ ಈ ಕಾರ್ಯಕ್ಕೆ ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆ ಕೂಡ ಹಲವು ದಿನಗಳ ಪ್ರಾಯೋಜಕತ್ವವನ್ನು ನೀಡಿದೆ.  ಕಳೆದ ಬಾರಿಯೂ ಕೂಡ ಲಾಕ ಡೌನ್ ಸಂದರ್ಭದಲ್ಲಿ ಸುಮಾರು 40ಕ್ಕಿಂತ ಹೆಚ್ಚು ದಿನಗಳಲ್ಲಿಯೂ ಊಟವನ್ನು ನೀಡಿ