Home ಕರಾವಳಿ Archive by category ಉಡುಪಿ (Page 134)

ಬೈಂದೂರು: ಕೋಟಿ ಕಂಠ ಗಾಯನ

ಬೈಂದೂರು : ಇತಿಹಾಸ ಪ್ರಸಿದ್ಧ ಪ್ರವಾಸಿ ತಾಣ ತ್ರಾಸಿ ಮರವಂತೆ ಬೀಚ್ ನಲ್ಲಿ ಕೋಟಿ ಕಂಠ ಗಾಯನ ಶುಕ್ರವಾರ ಕಾರ್ಯಕ್ರಮ ಶಾಸಕ ಬಿ,ಎಮ್ ಸುಕುಮಾರ್ ಶೆಟ್ಟಿ ಮುಂದಾಳತ್ವದಲ್ಲಿ ಕಾರ್ಯಕ್ರಮ ಜರಗಿತು. ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕನ್ನಡ ನೆಲದ ಸಂಸ್ಕೃತಿ ಮತ್ತು ಭಾಷೆಯನ್ನು ಕೋಟಿ ಕಂಠ ಗಾಯನದ ಮೂಲಕ ರಾಜ್ಯ ಹಾಗೂವಿಶ್ವಾದ್ಯಂತ ಆಚರಿಸಲಾಗುತ್ತಿದೆ ನಾಡು ಜಲ, ನೆಲದ ,

ಕರಾವಳಿಯಾದ್ಯಂತ ದೀಪಾವಳಿ ಸಡಗರ : ಕೃಷ್ಣಮಠದಲ್ಲಿ ಬಲೀಂದ್ರ ಪೂಜೆ

ಶ್ರೀಕೃಷ್ಣಮಠದಲ್ಲಿ ದೀಪಾವಳಿಯ ಅಮಾವಾಸ್ಯೆ ಪ್ರಯುಕ್ತ ಸೋಮವಾರ ರಾತ್ರಿ ಪರ್ಯಾಯ ಕೃಷ್ಣಾಪುರ ಮಠದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು, ಕಾಣಿಯೂರು ಮಠದ ಶ್ರೀವಿದ್ಯಾವಲ್ಲಭತೀರ್ಥ ಶ್ರೀಪಾದರು, ಅದಮಾರು ಕಿರಿಯ ಶ್ರೀಈಶಪ್ರಿಯತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಮಠದ ಪುರೋಹಿತರಾದ ಶ್ರೀನಿವಾಸ ಉಪಾಧ್ಯಾಯರು “ಬಲೀಂದ್ರ ಪೂಜೆ” ನಡೆಸಿದರು. ಬಳಿಕ ಪಂಚ ದೀಪ ಪ್ರಜ್ವಲನೆಯೊಂದಿಗೆ ವಾದ್ಯ ಮೇಳ ಸಹಿತ ಶ್ರೀಕೃಷ್ಣ ಮಠದ ಎಲ್ಲ ಪ್ರದೇಶ ಮತ್ತು ಪರ್ಯಾಯ ಕೃಷ್ಣಾಪುರ ಮಠಕ್ಕೂ

ದೀಪಾವಳಿ ಹಬ್ಬದ ಸಡಗರಕ್ಕೆ ಗ್ರಹಣದ ಎಫೆಕ್ಟ್

ದೀಪಾವಳಿ ಹಬ್ಬದ ನಡುವೆಯೇ ಇಂದು ಈ ವರ್ಷದ ಕೊನೆಯ ಸೂರ್ಯಗ್ರಹಣ ಸಂಭವಿಸಲಿದೆ. ಬರೋಬ್ಬರಿ 27 ವರ್ಷಗಳ ಬಳಿಕ ಇದೀಗ ಕೇತುಗ್ರಸ್ತ ಸೂರ್ಯಗ್ರಹಣ ಸಂಭವಿಸಲಿದೆ. ಈ ಸೂರ್ಯಗ್ರಹಣವನ್ನು ಕೇತು ಖಗ್ರಾಸ ಸೂರ್ಯಗ್ರಹಣ, ಖಂಡಗ್ರಾಸ ಸೂರ್ಯಗ್ರಹಣ ಎಂದು ಕೂಡ ಕರೆಯಲಾಗುತ್ತದೆ. ಈ ಗ್ರಹಣ ಭಾರತದ ಹಲವು ಭಾಗಗಳಲ್ಲಿಯೂ ಗೋಚರವಾಗಲಿದೆ. ಬೆಂಗಳೂರು, ದೆಹಲಿ, ಕೊಲ್ಕತ್ತಾ, ಚೆನ್ನೈ, ವಾರಾಣಸಿ, ಮಥುರಾದಲ್ಲಿ ಈ ಗ್ರಹಣವನ್ನು ಕಾಣಬಹುದು. ಸೂರ್ಯ ಗ್ರಹಣ ಎಫೆಕ್ಟ್ ರಸ್ತೆಗಳು

ದೇವಾಡಿಗ ಸಮಾಜದ ಹಿರಿಯ ಮುಂದಾಳು, ಹೋಟೆಲ್ ಉದ್ಯಮಿ ಸೋಮಪ್ಪ ಬಾಬು ದೇವಾಡಿಗ ನಿಧನ

ಶಿರ್ವ : ಮಹಾರಾಷ್ಟ್ರದ ನಾಸಿಕ್‌ನಲ್ಲಿ ಸುಮಾರು 53 ವರ್ಷಗಳಿಂದ ಹೋಟೆಲ್ ಉದ್ಯಮವನ್ನು ನಡೆಸುತ್ತಿದ್ದ ದೇವಾಡಿಗ ಸಮಾಜದ ಹಿರಿಯ ಮುಂದಾಳು,ನಾಸಿಕ್‌ ನ ಶಾರದಾ ಹೋಟೆಲ್ ನ ಮಾಲಕ ಕುತ್ಯಾರು ಕೋರ್ದೊಟ್ಟು ಸೋಮಪ್ಪ ಬಾಬು ದೇವಾಡಿಗ (94) ಅವರು ಅ. 24 ರಂದು ನಾಸಿಕ್‌ ಜಿಲ್ಲೆಯ ದೇವಲಾಲಿಯ ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಪತ್ನಿ,ನಾಲ್ವರು ಪುತ್ರರು ಮತ್ತು ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ ಅವರು ಕುತ್ಯಾರು ಗ್ರಾಮದ ಧಾರ್ಮಿಕ ಮತ್ತು ಸಾಮಾಜಿಕ

ಉಡುಪಿ : ತುಳುನಾಡಿನಲ್ಲಿ ಮತ್ತೊಮ್ಮೆ ತನ್ನ ಕಾರ್ಣಿಕ ತೋರಿಸಿಕೊಟ್ಟ ಕೊರಗಜ್ಜ ಸ್ವಾಮಿ

ತುಳುನಾಡಿನ ಕೊರಗಜ್ಜ ಸ್ವಾಮಿ ಮತ್ತೊಮ್ಮೆ ತನ್ನ ಕಾರ್ಣಿಕವನ್ನು ತೋರಿಸಿಕೊಟ್ಟಿದೆ. ನಂಬಿದವರನ್ನು ಹರಸಿ,ಇಷ್ಟಾರ್ಥಗಳನ್ನು ಈಡೇರಿಸುವ ಕೊರಗಜ್ಜ ಆರಿ ಹೋಗುತ್ತಿದ್ದ ಕುಟುಂಬವೊಂದರ ನಂದದೀಪವನ್ನು ಬೆಳಗಿಸಿಕೊಟ್ಟಿರುವ ಅಪರೂಪದ ಘಟನೆಗೆ ತುಳುನಾಡು ಸಾಕ್ಷಿಯಾಗಿದೆ. ನಾಲ್ಕು ತಿಂಗಳ ಹಸುಕೂಸೊಂದು ಕೊರಗಜ್ಜನ ಕೃಪೆಯಿಂದ ಸಾವನ್ನೇ ಗೆದ್ದು ಬಂದಿದೆ.ಹೌದು ಸಾಗರ ಮೂಲದ ಪುಟ್ಟ ಹೆಣ್ಣು ಮಗುವಿಗೆ ವಿಪರೀತ ಜ್ವರ ಕಂಡು ಬಂದಿತ್ತು.ಎರಡು ದಿನ ಕಳೆದರೂ ಜ್ವರ ಕಡಿಮೆಯಾಗದೇ ಮಗು

ಶಿರೂರು : ವಿದ್ಯುತ್ ಅವಘಡ ಉದ್ಯಮಿ, ಸಾಮಾಜಿಕ ಮುಖಂಡ ಸತೀಶ ಪ್ರಭು ಮೃತ್ಯು

ಶಿರೂರು: ಕೃಷಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಣಿ ವಿದ್ಯುತ್ ತಂತಿಗೆ ಸ್ಪರ್ಶಿಸಿ ಅವಘಡ ಸಂಭವಿಸಿದ ಘಟನೆ ಮಂಗಳವಾರ ಬೆಳಿಗ್ಗೆ ಶಿರೂರಿನಲ್ಲಿ ನಡೆದಿದೆ.ಶಿರೂರಿನ ಬಿಜೆಪಿ ಮುಖಂಡ ಉದ್ಯಮಿ,ಜನಾನುರಾಗಿ,ಶಿರೂರು ಸರಕಾರಿ ಪದವಿ ಪೂರ್ವ ಕಾಲೇಜು ಅಭಿವೃದ್ದಿ ಸಮಿತಿ ಕಾರ್ಯಾಧ್ಯಕ್ಷ ಸತೀಶ ಸುಬ್ರಾಯ ಪ್ರಭು (52)ಮ್ರತಪಟ್ಟ ವ್ಯಕ್ತಿಯಾಗಿದ್ದಾರೆ. ಸತೀಶ ಸುಬ್ರಾಯ ಪ್ರಭು ಅವರು, ಪ್ರಗತಿಪರ ಕೃಷಿಕರು, ಶೈಕ್ಷಣಿಕ, ಧಾರ್ಮಿಕ ಸೇರಿದಂತೆ ಎಲ್ಲಾ ಸಾಮಾಜಿಕ

ಕುಂದಾ ಬಾರಂದಾಡಿ ಶ್ರೀ ದುರ್ಗಾಪರಮೇಶ್ವರಿ ದೇವಿ ಸಾನಿಧ್ಯ : ಲೋಕಕಲ್ಯಾಣಾರ್ಥವಾಗಿ ಶತಚಂಡಿಕಾ ಯಾಗ

ಬೈಂದೂರು: ಉಡುಪಿ ಜಿಲ್ಲೆಯ ಕುಂದಾಪುರತಾಲೂಕಿನ ಕುಂದಬಾರಂದಾಡಿ ಗ್ರಾಮದ ಮೂಡಾರೆ ಶ್ರೀದುರ್ಗಾಪರಮೇಶ್ವರಿ ದೇವಿ ಕ್ಷೇತ್ರದಲ್ಲಿ ಊರಿನ ಒಳಿತಿಗಾಗಿ ಹಮ್ಮಿಕೊಳ್ಳಲಾದ ವೇ.ಮೂ ರಾಮಕೃಷ್ಣ ಭಟ್ಟ್ ಶಾರ್ಕೆ ನೇತೃತ್ವದಲ್ಲಿ ಶತಚಂಡಿಕಾ ಯಾಗ ಧಾರ್ಮಿಕ ವಿಧಿವಿಧಾನಗಳೊಂದಿಗೆ ಪೂರ್ಣಾಹುತಿ ಆಗುವುದರ ಮುಖೇನ ಮಂಗಳವಾರ ವಿಜೃಂಭಣೆಯಿಂದ ನಡೆಯಿತು. ದೂರ ದೂರ ಊರಿನಿಂದ ಆಗಮಿಸಿದ ಸಾವಿರಾರು ಭಕ್ತರು ದೇವಿಯ ಅನ್ನ ಪ್ರಸಾದವನ್ನು ಸ್ವೀಕರಿಸಿದರು ಶ್ರೀದೇವಿಯ ಮುಡಿ ಗಂಧ ಪ್ರಸಾದವನ್ನು

ಯುಎಇ ಯಲ್ಲಿ ನಡೆದ ಕಿವುಡರ ಟಿ-20 ಕ್ರಿಕೆಟ್ : ಹುಂಚನಿಯ ಪೃಥ್ವಿರಾಜ್ ಶೆಟ್ಟಿಗೆ ಅದ್ಧೂರಿ ಸ್ವಾಗತ

ಬೈಂದೂರು :ಯು.ಎ.ಇ.ಯಲ್ಲಿ ನಡೆದ ಅಂತಾರಾಷ್ಟ್ರೀಯ ಕಿವುಡರ ಟಿ-20 ಕ್ರಿಕೆಟ್ 2022ರ ಚಾಂಪಿಯನ್ ಶಿಪ್ ಪ್ರಶಸ್ತಿಯನ್ನು ಜಯಿಸಿದ ಕಿವುಡರ ಭಾರತ ಕ್ರಿಕೆಟ್ ತಂಡದ ಸದಸ್ಯ ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಹುಂಚನಿ ಚಿಕ್ಕ ಹಳ್ಳಿಯ ಪ್ರತಿಭೆ ಪ್ರಥ್ವಿರಾಜ್ ಶೆಟ್ಟಿ ಯವರನ್ನು ಕುಂದಾಪುರ ಶಾಸ್ತ್ರೀ ಸರ್ಕಲ್ ವೃತ್ತದಿಂದ ಬೈಂದೂರು ತಾಲೂಕಿನ ಗೋಳಿ ಹೊಳೆ ಗ್ರಾಮದ ವರೆಗೆ ತೆರೆದ ವಾಹನದಲ್ಲಿ ಭವ್ಯ ಮೆರವಣಿಗೆ ಮೂಲಕ ಕರೆತರಲಾಯಿತು, ಬಾಲ್ಯದಲ್ಲೇ ಕ್ರಿಕೆಟ್ ಬಗ್ಗೆ

ಪಡುಬಿದ್ರಿ: ಬಾಡಿಗೆ ಮನೆಗೆ ಕನ್ನ ಹಾಕಿದ ಕಳ್ಳ: ಸ್ಕೂಟರ್ ಬಿಟ್ಟು ಪಲಾಯಣ

ತೆಂಕ ಎರ್ಮಾಳು ಜಂಕ್ಷನ್ ಬಳಿಯ ಬಾಡಿಗೆ ಮನೆಯೊಂದಕ್ಕೆ ಕನ್ನ ಹಾಕಿದ ಕಳ್ಳರು ನಗ, ನಗದು, ಬಟ್ಟೆ, ಪಾತ್ರೆ ಸಹಿತ ಅಕ್ಕಿಯನ್ನೂ ಕದ್ದೋಯ್ಯದಿದ್ದಾರೆ. ಹೆದ್ದಾರಿ ಪಕ್ಕದ ಬಾಡಿಗೆ ರೂಮ್‌ನಲ್ಲಿ ಹಾವೇರಿ ಮೂಲದ ಮಾಸಪ್ಪ ಎಂಬವರ ಕುಟುಂಬ ವಾಸವಾಗಿದ್ದು, ದಸರಾ ಹಬ್ಬಕ್ಕಾಗಿ ಕಳೆದ ಹದಿನೈದು ದಿನಗಳ ಹಿಂದೆ ರೂಮ್‌ಗೆ ಬೀಗ ಹಾಕಿ ಊರಿಗೆ ಹೋಗಿದ್ದು, ಭಾನುವಾರ ಮುಂಜಾನೆ ೫-೩೦ರ ಸುಮಾರಿಗೆ ರೂಮ್ ಕಡೆಗೆ ಬಂದಾಗ ಮಂದ ಬೆಳಕಿನಲ್ಲಿ ಮನೆಮಂದೆ ವ್ಯಕ್ತಿಯೊಬ್ಬರು ನಿಂತಿದ್ದು

ಪಡುಬಿದ್ರಿ ಎಂಡ್ ಪಾಯಿಂಟ್ ಬೀಚ್‍ಗೆ ಮತ್ತೊಮ್ಮೆ “ಬ್ಲೂ ಫ್ಲ್ಯಾಗ್” ಕಿರೀಟ

ಸದಾ ಬದುಕಿನ ಜಂಜಾಟ ಕೆಲಸದ ಒತ್ತಡದ ನಡುವೆಯೂ ‘ಓ ಮನವೇ ರಿಲಾಕ್ಸ್ ಪ್ಲೀಸ್ ‘ ಎನ್ನುವ ಮನಗಳಿಗೆ ಮುದ ನೀಡುವಂತಹ ಬೀಸುವ ತಂಗಾಳಿಯ ಕಡಲ ಅಲೆಗಳ ನರ್ತನ ಮತ್ತೊಂದೆಡೆ ರಮ್ಯ ರಮಣೀಯ ಕಾಮಿನಿ ಹೊಳೆಯ ನಡುವೆ ಪ್ರವಾಸಿಗರನ್ನು ಕೈ ಬೀಸಿ ಸೆಳೆಯುತ್ತಿರುವ ಪ್ರಕೃತಿ ಸೌದರ್ಯದ ಸೊಬಗೇ ಪಡುಬಿದ್ರಿಯ ಎಂಡ್ ಪಾಯಿಂಟ್ ಬ್ಲೂ ಫ್ಲ್ಯಾಗ್ ಬೀಚ್.ಪ್ರವಾಸ್ಯೋದ್ಯಮ ಇಲಾಖೆ ಉಡುಪಿ ಜಿಲ್ಲೆಯ ಪಡುಬಿದ್ರಿ ಎಂಡ್ ಪಾಯಿಂಟ್ ಬ್ಲೂ ಫ್ಲ್ಯಾಗ್ ಬೀಚ್ ಮನಮೋಹಕವಾಗಿ