ಉಡುಪಿ:ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಉಡುಪಿ ಜಿಲ್ಲೆಯ 5 ಹಿರಿಯ ಸಾಧಕ ಶಿಕ್ಷಕರಿಗೆ ಗೌರವ ಪುರಸ್ಕಾರ 2022 ನೀಡಿ ಗೌರವಿಸಲಾಯಿತು. ಸೆಪ್ಟೆಂಬರ್ 5 ರಂದು ಉಡುಪಿಯ ಮಲಬಾರ್ ಅಂಡ್ ಗೋಲ್ಡ್ ಡೈಮಂಡ್ಸ್ ಶಾಖೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಲಕ್ಷ್ಮೀನಾರಾಯಣ ಭಟ್
ಇದು ಶ್ರೀನಿವಾಸ್ ಗೌಡ್ಲು (ಮಲೆಕುಡಿಯ) ಎಂಬ ಆದಿವಾಸಿ ಯುವಕನೊಬ್ಬನ ದಾರುಣ ಕತೆ ಮಾತ್ರ ಅಲ್ಲ. ಆರೋಗ್ಯ ಕ್ಷೇತ್ರ ವ್ಯಾಪಾರೀಕರಣ ಗೊಂಡಿರುವ ಸಂದರ್ಭದಲ್ಲಿ ಬಡವರು, ಆರ್ಥಿಕವಾಗಿ ಸಬಲರಲ್ಲ ಎಲ್ಲರ ವ್ಯಥೆ. ಶ್ರೀನಿವಾಸ ಗೌಡ್ಲು ಎಂಬ ಆದಿವಾಸಿ ಮಲೆಕುಡಿಯ ಸಮುದಾಯಕ್ಕೆ ಸೇರಿದ ಶೃಂಗೇರಿ ಸಮೀಪದ ಹೊರನಾಡು ನಿವಾಸಿ ತೋಟಗಳಲ್ಲಿ ದುಡಿಯುವ ಕೂಲಿಯಾಳು. 34 ವರ್ಷದ ಇವರು ಕುಟುಂಬದ ಸಂಕಷ್ಟಗಳ ಕಾರಣಕ್ಕಾಗಿ ಇನ್ನೂ ಮದುವೆಯಾಗಿಲ್ಲ.ಮನೆಯಲ್ಲಿ ಕೂಲಿ ಕೆಲಸ ಮಾಡುವ ವೃದ್ದ
ಸುಹಾಸಂ ಉಡುಪಿ, ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು ಘಟಕ ಮತ್ತು ಧಾತ್ರಿ ಪ್ರಕಾಶನ ಇವರ ಜಂಟಿ ಆಶ್ರಯದಲ್ಲಿ, ಸೆಪ್ಟೆಂಬರ್ 03, 2022 ರ ಶನಿವಾರದಂದು ಉಡುಪಿಯ ಕಿದಿಯೂರು ಹೋಟೆಲ್ನ ಅನಂತ ಶಯನ ಹಾಲ್ನಲ್ಲಿ, ಲೇಖಕ ಎಸ್. ಉಮೇಶ್ ರವರ “ಕಾಶ್ಮೀರ್ ಡೈರಿ” ಕೃತಿಯ ಲೋಕಾರ್ಪಣೆ ಕಾರ್ಯಕ್ರಮ ಜರುಗಿತ್ತು. ಈ ಸಮಾರಂಭದಲ್ಲಿ, ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಇದರ ಅಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ ರವರು ಕೃತಿಯನ್ನು
ಉಡುಪಿ ಆದರ್ಶ ಆಸ್ಪತ್ರೆ ಸೂಪರ್ ಸ್ಪೆಷಾಲಿಟಿ ಸೆಂಟರ್ ವತಿಯಿಂದ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಡಾ| ಸರ್ವೆಪಲ್ಲಿ ರಾಧಾಕೃಷ್ಣನ್ರವರ ಜನ್ಮಜಯಂತಿ ಹಾಗೂ ಉಡುಪಿ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ಶಿಕ್ಷಕರಿಗೆ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಹಾಗೂ ಶಿಕ್ಷಕರು ಮತ್ತು ಅವರ ಕುಟುಂಬದವರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರದ ಉದ್ಘಾಟನಾ ಸಮಾರಂಭ
ಹವಾಮಾನ ವೈಪರೀತ್ಯದಿಂದಾಗಿ ಕರಾವಳಿಯಲ್ಲಿ ಸಾಂಕ್ರಾಮಿಕ ರೋಗಗಳ ಸಂಖ್ಯೆಯಲ್ಲಿ ಮತ್ತೆ ಹೆಚ್ಚಳವಾಗುತ್ತಿದೆ. ಕಳೆದ ಕೆಲವು ದಿನಗಳಿಂದ ಶೀತ, ಜ್ವರ, ಗಂಟಲು ನೋವು, ವಾಂತಿ, ಅಲರ್ಜಿಯಿಂದ ವೈದ್ಯರನ್ನು ಸಂಪರ್ಕಿಸುವವರ ಸಂಖ್ಯೆ ಏರಿಕೆಯಾಗುತ್ತಿದೆ. ಇದರ ನಡುವೆ ಸದ್ದಿಲ್ಲದೇ ಇಲಿ ಜ್ವರವೂ ತನ್ನ ಕಬಂಧ ಬಾಹುವನ್ನು ಚಾಚುತ್ತಿದೆ. ಉಡುಪಿ ಜಿಲ್ಲೆಯಲ್ಲಿ ಪ್ರಸ್ತುತ ಮಳೆಗಾಲದಲ್ಲಿ 112 ಮಂದಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 305 ಮಂದಿ ಇಲಿಜ್ವರ ಬಾಧಿತರಾಗಿದ್ದಾರೆ.
ಕುಡಿದ ಮತ್ತಿನಲ್ಲಿ ಕಾರನ್ನು ಹಿಮ್ಮುಖವಾಗಿ ನಿರ್ಲಕ್ಷ್ಯತನದಿಂದ ಚಲಾಯಿಸಿದ ಪರಿಣಾಮ ಓರ್ವ ಗಾಯಗೊಂಡು, ಎರಡು ಕಾರುಗಳು ಜಖಂಗೊಂಡಿರುವ ಘಟನೆ ಮಣಿಪಾಲದ ಕಾಯಿನ್ ಸರ್ಕಲ್ ಬಳಿ ಶನಿವಾರ ತಡರಾತ್ರಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಅಪಘಾತ ಪಡಿಸಿದ ಕಾರು ಚಾಲಕ ಸುಹಾಸ್ ಹಾಗೂ ಆತನ ಕಾರನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಇವರು ತನ್ನ ಸ್ನೇಹಿತರೊಂದಿಗೆ ಮಣಿಪಾಲದ ಕಾಯಿನ್ ಸರ್ಕಲ್ ಬಳಿಯ ಬ್ಯಾರೆಲ್ಸ್ ಪಬ್ಗೆ ಬಂದಿದ್ದು, ಅಲ್ಲಿ ಮದ್ಯ ಸೇವಿಸಿ
ಕಾಪು :ಪುರಾಸಭಾ ವ್ಯಾಪ್ತಿಯ ಮಲ್ಲಾರಿನ ಬಾಡಿಗೆ ಮನೆಯಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಅನಾರೋಗ್ಯ ಪೀಡಿತ ವಯೋವೃದ್ದೆಯ ನೋವಿಗೆ ಸ್ಪಂದಿಸುವ ಮೂಲಕ ಯುವಕರು ಮಾದರಿಯಾಗಿದ್ದಾರೆ. ಕೊಂಬಗುಡ್ಡೆ ಪ್ರಶಾಂತ್ ಪೂಜಾರಿ, ಪುರಸಭಾ ಸದಸ್ಯ ಉಮೇಶ್ ಪೂಜಾರಿ, ಶಿವಾನಂದ ಪೂಜಾರಿ ಸಹಿತ ಯುವಕರ ತಂಡ ಒಂಟಿ ಮಹಿಳೆಯ ಅನಾರೋಗ್ಯ ಪರಿಸ್ಥಿತಿಯನ್ನು ಕಂಡು ಆಸ್ಪತ್ರೆಗೆ ದಾಖಲಿಸಿದ್ದಾರೆ. ಕಳೆದ ಹಲವು ವರ್ಷಗಳಿಂದ ಕುಟುಂಬ ವರ್ಗದಿಂದ ದೂರವಾಗಿದ್ದ ಲೀಲಾ ಪೂಜಾರ್ತಿ ತೀವ್ರ ಅನಾರೋಗ್ಯದಿಂದ
ಸಂಗೀತ ಭಾರತಿ ಟ್ರಸ್ಟ್ (ರಿ.) ಕುಂದಾಪುರ ಮತ್ತು ಚಿರಂತನ ಚ್ಯಾರಿಟೇಬಲ್ ಟ್ರಸ್ಟ್, ಸುರತ್ಕಲ್ ಇವರ ಸಂಯುಕ್ತ ಆಶ್ರಯದಲ್ಲಿ ಸೆಪ್ಟೆಂಬರ್ 04, ಬೆಳಗ್ಗೆ 09:30ರಿಂದ ಸಂಜೆ 07:00 ರವರೆಗೆ ಹಿಂದುಸ್ಥಾನಿ ಯುವ ಶಾಸ್ತ್ರೀಯ ಸಂಗೀತೋತ್ಸವ “ಅಮೃತಭಾರತಿಗೆ ಸಂಗೀತದಾರತಿ” ಕಾರ್ಯಕ್ರಮ ಕುಂದಾಪುರದ ರಂಗ ಅಧ್ಯಯನ ಕೇಂದ್ರದಲ್ಲಿ ನಡೆಯಲಿದೆ. ಉದಯೋನ್ಮುಖ ಸಂಗೀತ ಕಲಾವಿದರಿಗೆ ಹಾಗೂ ಕಲೆ, ಸಂಸ್ಕೃತಿ, ಸಂಗೀತಕ್ಕೆ ಹೆಚ್ಚಿನ ಉತ್ತೇಜನ ನೀಡಲೆಂದು ರೂಪಿಸಿದ ಈ
ಉಡುಪಿ ಕಡೆಯಿಂದ ಮಂಗಳೂರು ಕಡೆ ಪ್ರಯಾಣಿಸುವ ಘನ ವಾಹನಗಳ ಸಹಿತ ಗೂಡ್ಸ್ ವಾಹನಗಳಿಗೆ ಪ್ರವೇಶ ನಿರಾಕರಿಸಿ ಕಾರ್ಕಳ ರಸ್ತೆಯಾಗಿ ಪ್ರಯಾಣ ಮುಂದುವರಿಸಲು ಪೊಲೀಸರು ಸೂಚನೆ ನೀಡಿದ್ದರೂ ಸುತ್ತು ಬಳಸಿ ಹೋಗುವುದನ್ನು ತಪ್ಪಿಸಲು ಬ್ರಹತ್ ಟ್ರಕ್ ಗಳು ಕಾರ್ಕಳ ರಸ್ತೆಯುದ್ಧಕ್ಕೂ ಹೆದ್ದಾರಿಗಂಟಿಕೊಂಡೇ ನಿಂತಿರುವುದರಿಂದ ಮತ್ತೊಂದು ಸಮಸ್ಯೆ ಸೃಷ್ಠಿಗೆ ಸಿದ್ದತೆ ನಡೆಸಿದಂತ್ತಿದೆ.ಮುಂಜಾನೆ ಆರು ಗಂಟೆಯಿಂದ ಸಂಜೆ ಆರರ ವರಗೆ ಈ ಪ್ರಕೃಯೆ ನಡೆಯಲಿರುವುದರಿಂದ ಪಡುಬಿದ್ರಿ
ಉಡುಪಿ: ನಗರದ ಕಿನ್ನಿಮೂಲ್ಕಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ಮೀನು ಮಾರಾಟ ಶೆಡ್ ನ್ನು ನೆಲಸಮಗೊಳಿಸಿದ ಪ್ರಕರಣ ಇವತ್ತು ನಗರಸಭೆಯಲ್ಲಿ ಪ್ರತಿಧ್ವನಿಸಿತು.ಕೆಲಹೊತ್ತು ಆಡಳಿತ ಪಕ್ಷ ಬಿಜೆಪಿ ಮತ್ತು ಕಾಂಗ್ರೆಸ್ ಸದಸ್ಯರ ಜಟಾಪಟಿಗೂ ಕಾರಣವಾಯಿತು.ಕೊನೆಗೆ ಮೀನು ಮಾರಾಟ ಶೆಡ್ ನ್ನು ಅನಧಿಕೃತವಾಗಿ ಮೀನುಗಾರ ಮಹಿಳೆಯರಿಗೆ ಕಟ್ಟಿಸಿ ಕೊಟ್ಟ ಕಾಂಗ್ರೆಸ್ ನಗರಸಭಾ ಸದಸ್ಯೆ ಅಮೃತಾ ಕೃಷ್ಣಮೂರ್ತಿ ಮತ್ತು ರಮೇಶ್ ಕಾಂಚನ್ ಸಭೆಯಲ್ಲೇ ವಿಷಾದ ವ್ಯಕ್ತಪಡಿಸಿದರು. ಐದು ದಿನಗಳ




























