Home ಕರಾವಳಿ Archive by category ಉಡುಪಿ (Page 148)

ಬೈಂದೂರು ಧಾರಾಕಾರ ಮಳೆ : ಸ್ಥಳದಲ್ಲಿ ಬೀಡುಬಿಟ್ಟ ಕಂದಾಯ ಇಲಾಖೆ, ಅಗ್ನಿಶಾಮಕ ದಳ

ಎರಡು ದಿನಗಳಿಂದ ಭಾರಿ ಮಳೆ ಹಿನ್ನೆಲೆ ಉತ್ತರಕನ್ನಡ ಹಾಗೂ ದಕ್ಷಿಣ ಕನ್ನಡದ ಅಂಚಿನಲ್ಲಿರುವ ಶಿರೂರು ಬೈಂದೂರು ಕಳುಹಿತ್ಲು ಕಲ್ಮಕ್ಕಿಯ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ ಯಾವುದೇ ಸಂಪರ್ಕವಿಲ್ಲದೆ ಜನ ಕಂಗೆಟ್ಟಿದ್ದಾರೆ ಭಾರೀ ಮಳೆಯಿಂದಾದ್ದು ರಾತ್ರಿ ಹಲವಾರು ಮನೆಗಳಿಗೆ ನೀರು ನುಗ್ಗಿದೆ ,ರಾಜ್ಯ ಹೆದ್ದಾರಿ ಸಂಪೂರ್ಣ , ಕೆಲವು ಶಾಲೆಯ ಎದುರುಗಡೆ ಮುಳುಗಡೆಯಾಗಿದೆ

ಹಿರಿಯ ಪತ್ರಿಕೋದ್ಯಮಿ ಟಿ. ಮೋಹನ್ ದಾಸ್ ಪೈ ನಿಧನ

ಮಣಿಪಾಲದ ಪೈ ಕುಟುಂಬದ ಹಿರಿಯರಾದ ತೋನ್ಸೆ ಮೋಹನದಾಸ್ ಪೈ (89) ಅಲ್ಪಕಾಲದ ಅಸೌಖ್ಯದಿಂದ ಮಣಿಪಾಲದ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಅವರು ಆಸ್ಪತ್ರೆಯಲ್ಲಿ ಇತ್ತೀಚಿಗೆ ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದರು. ಡಾ. ಟಿಎಂಎ ಪೈ ಪ್ರತಿಷ್ಠಾನ, ಶಿಕ್ಷಣ ಸಂಸ್ಥೆ ಎಂಜಿಎಂ ಕಾಲೇಜಿನ ಟ್ರಸ್ಟಿ, ಸಿಂಡಿಕೇಟ್ ಬ್ಯಾಂಕಿನ ಪೂರ್ವ ರೂಪ ಐಸಿಡಿಎಸ್ ಲಿ., ಮಣಿಪಾಲ್ ಮೀಡಿಯ ನೆಟ್‍ವರ್ಕ್ ಲಿ. ಮೊದಲಾದ ಸಂಸ್ಥೆಗಳ ಅಧ್ಯಕ್ಷರಾಗಿ ಹಲವು ಸಂಸ್ಥೆಗಳ ಬೆಳವಣಿಗೆಗೆ

ಉಡುಪಿ :ಪೂರೈಕೆ ಸ್ಥಗಿತಗೊಳಿಸಿ ಸ್ವಿಗ್ಗಿ ಡೆಲಿವರಿ ಬಾಯ್ಸ್ ಪ್ರತಿಭಟನೆ

ತಮ್ಮ ಸಮಸ್ಯೆಗಳನ್ನು ಬಗೆಹರಿಸದಿರುವ ಉಡುಪಿಯ ಸ್ವಿಗ್ಗಿ ಮೆನೇಜರ್ ವಿರುದ್ದ ಸ್ವಿಗ್ಗಿ ಬಾಯ್ಸ್ ಸಿಡಿದೆದ್ದಿದ್ದಾರೆ .ಉಡುಪಿ ಮಣಿಪಾಲದಲ್ಲಿ ಡೆಲಿವೆರಿ ಮಾಡುತ್ತಿದ್ದ ನೂರಾರು ಡೆಲಿವೆರಿ ಬಾಯ್ಸ್ ಡೆಲಿವೆರಿ ಸ್ಥಗಿತಗೊಳಿಸುವುದರ ಮೂಲಕ ಪ್ರತಿಭಟನೆ ನಡೆಸಿದ್ದಾರೆ.ಕಳೆದ ಮೂರು ವರುಷಗಳಿಂದ ಡೆಲಿವೆರಿ ಬಾಯ್ಸ್ ಗಳು ಹತ್ತಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ಒಬ್ಬ ಅಧಿಕಾರಿಯಿಲ್ಲ.ಉಡುಪಿಗೊಂದು ಕಚೇರಿಯಿಲ್ಲ .ಮೆನೇಜರ್

ಮೀನುಗಾರಿಕೆ ತೆರಳಿದ್ದ ನಾಡದೋಣಿಯ ಇಂಜಿನ್ ನಲ್ಲಿ ತಾಂತ್ರಿಕ ದೋಷ : ಬಂಡೆಗೆ ಬಡಿದ ದೋಣಿ

ಮೀನುಗಾರಿಕೆ ತೆರಳಿದ್ದ ನಾಡದೋಣಿಯ ಇಂಜಿನ್ ನಲ್ಲಿ ತಾಂತ್ರಿಕ ದೋಷ ಉಂಟಾದ ಕಾರಣ ಬಂಡೆಗೆ ಬಡಿದು ದೋಣಿ ಮುಗುಚಿ ಬಿದ್ದು, ಮೀನುಗಾರರು ಪ್ರಾಣಾಪಾಯದಿಂದ ಪಾರಾದ ಘಟನೆ ಉಡುಪಿ ಜಿಲ್ಲೆಯ ಕಾಪು ಲೈಟ್ ಹೌಸ್ ಬಳಿ ನಡೆದಿದೆ. ಇಂದು ಬೆಳಗ್ಗೆ ಐದು ಮಂದಿ ಮೀನುಗಾರರು, ನಾಡದೋಣಿಯಲ್ಲಿ ಕಾಪುವಿನಿಂದ ಮೀನುಗಾರಿಕೆಗೆ ತೆರಳಿದ್ದರು. ಸಮುದ್ರದಲ್ಲಿ ದೋಣಿಯ ಇಂಜಿನ್ ತಾಂತ್ರಿಕ ದೋಷ ಉಂಟಾಗಿ, ಕಾಪು ಲೈಟ್ ಹೌಸ್ ತಲುಪುತ್ತಿದ್ದಂತೆ, ಬಂಡೆಗೆ ಬಡಿದಿದೆ. ಈ ವೇಳೆ ದೋಣಿ ಮಗುಚಿ

ತೆಂಕ ಎರ್ಮಾಳು ಅಟೋ ಚಾಲಕ ಮಾಲಕ ಸಂಘದ ಅಧ್ಯಕ್ಷರಾಗಿ ಮುಕ್ತಾರ್

ಪಡುಬಿದ್ರಿ: ತೆಂಕ ಎರ್ಮಾಳು ಅಟೋ ರಿಕ್ಷಾ ಚಾಲಕ ಮಾಲಕರ ಸಂಘದ ಅಧ್ಯಕ್ಷರಾಗಿ ಮುಕ್ತಾರ್ ಅಹಮದ್ ಆಯ್ಕೆಯಾಗಿದ್ದಾರೆ.ಗೌರವ ಅಧ್ಯಕ್ಷರಾಗಿ ಪತ್ರಕರ್ತ ಸುರೇಶ್ ಎರ್ಮಾಳ್, ಉಪಾಧ್ಯಕ್ಷರಾಗಿ ರಾಜು ಪೂಜಾರಿ, ಕಾರ್ಯದರ್ಶಿಯಾಗಿ ಭರತ್ ಜಿ. ಶೆಟ್ಟಿಗಾರ್, ಕೋಶಾಧಿಕಾರಿಯಾಗಿ ಶೇಕ್ ಲಿಯಾಕತ್, ಉಪ ಕೋಶಾಧಿಕಾರಿಯಾಗಿ ಅಬ್ದುಲ್ ನದೀಮ್ ಇವರನ್ನು ಅಟೋ ರಿಕ್ಷಾ ಚಾಲಕ ಮಾಲಕ ಸಂಘದ ವಾರ್ಷಿಕ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ.

ಮಲಬಾರ್ ಗೋಲ್ಡ್ & ಡೈಮಂಡ್ಸ್‌ನಿಂದ ಬೆಳ್ಳಿ ಪ್ರದರ್ಶನ ಮತ್ತು ಮಾರಾಟ

ಉಡುಪಿ : ವಿಶ್ವದ ಅತಿದೊಡ್ಡ ಚಿನ್ನ ಮತ್ತು ವಜ್ರದ ರೀಟೇಲ್ ಸಂಸ್ಥೆಗಳಲ್ಲಿ ಒಂದಾಗಿರುವ ಮಲಬಾರ್ ಗೋಲ್ಡ್ & ಡೈಮಂಡ್ಸ್ ಹೆಸರಾಂತ ಶೋರೂಂನಲ್ಲಿ ಹೊಚ್ಚ ಹೊಸದಾದ ಬೆಳ್ಳಿಯ ಆಭರಣದ ಪ್ರದರ್ಶನವನ್ನು ಉದ್ಘಾಟಿಸಲಾಯಿತು. ಜುಲೈ 22 ರಿಂದ 31 ರವರೆಗೆ ನಡೆಯಲಿರುವ ಈ ಪ್ರದರ್ಶನದಲ್ಲಿ ಬೆಳ್ಳಿಯ ಆಭರಣಗಳು ಮತ್ತು ಇತರೆ ಉತ್ಪನ್ನಗಳನ್ನು ಪ್ರದರ್ಶಿಸುತ್ತಿದೆ. ಇದರ ಅನಾವರಣ ಕಾರ್ಯಕ್ರಮವನ್ನು ಮುಖ್ಯ ಅತಿಥಿಗಳಾದ ಶ್ರೀಮತಿ ನಮಿತಾ ಸತೀಶ್ಚಂದ್ರ,ಕುಮಾರಿ ವರ್ಷ ಶೆಟ್ಟಿ ಹಾಗೂ

ಕಾಪು : ರಸ್ತೆ ಹೊಂಡಕ್ಕೆ ಬಿದ್ದು ವಿದ್ಯುತ್ ಕಂಬಕ್ಕೆ ಢಿಕ್ಕಿಯಾದ ಕಾರು

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೊಂಡ ಬಿದ್ದ ಪರಿಣಾಮ ಪದೇ ಪದೇ ಅಪಘಾತಗಳು ಸಂಭವಿಸುತ್ತಲೇ ಇದೆ. ಇಂದು ಹೊಂಡ ತಪ್ಪಿಸಲು ಹೋಗಿ ಕಾರೊಂದು ಡಿವೈಡರ್ ಏರಿ ನಿಂತ ಘಟನೆ ಕಾಪುವಿನಲ್ಲಿ ನಡೆದಿದೆ. ಕಾರೊಂದು ರಸ್ತೆಯ ಹೊಂಡಕ್ಕೆ ಬಿದ್ದು, ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ಕಾರು ಚಾಲಕಿ ಅಪಾಯದಿಂದ ಪಾರಾದ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿ ಮೇಲಿದ್ದ ಹೊಂಡದಲ್ಲಿ ನೀರು ತುಂಬಿ ನಿಯಂತ್ರಣ ತಪ್ಪಿ ಕಾರು ಅಪಘಾತವಾಗಿದೆ.

ಕಡಲ್ಕೊರೆತ, ಸೌಪರ್ಣಿಕಾ ನದಿ ನೆರೆಹಾವಳಿ : ಸಂಕಷ್ಟ ನಿವಾರಣೆಗೆ ವರಾಹ ದೇವರಲ್ಲಿ ಪ್ರಾರ್ಥನೆ

ಬೈಂದೂರು: ಬೈಂದೂರು ಕ್ಷೇತ್ರದ ವ್ಯಾಪ್ತಿಯಲ್ಲಿ ವಿಪರೀತ ರಕ್ಕಸ ಅಲೆಗಳ ಕಡಲ್ಕೊರೆತ ಸೌಪರ್ಣಿಕಾ ನದಿಯ ನೆರೆಹಾವಳಿ ಹಾಗೂ ರಾಷ್ಟ್ರೀಯ ಹೆದ್ದಾರಿಯಲ್ಲಿ ಪದೇ ಪದೇ ಅಪಘಾತವಾಗಿ ಸಾಕಷ್ಟು ಮುಗ್ಧ ಜೀವಗಳು ಮತ್ತು ಜಾನುವಾರುಗಳು ದಿನದಿಂದ ದಿನಕ್ಕೆ ಸಾವನ್ನಪ್ಪುತ್ತಿವೆ. ಅಪಘಾತಗಳು ಹೆಚ್ಚುತ್ತಿರುವುದರಿಂದ ಜನರು ಭೀತರಾಗಿದ್ದು ಸಂಕಷ್ಟದ ನಿವಾರಣೆಗೆ ಜುಲೈ 28ರಂದು ನಡೆಯುವ ಬೃಹತ್ ಜಾತ್ರಾ ಮಹೋತ್ಸವದಲ್ಲಿ ಮಾರಸ್ವಾಮಿ ವರಾಹ ದೇವರಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡುವುದರ

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಸುಧಾರಿತ ಇಮ್ಯುನೊ ವಿಶ್ಲೇಷಕ ಯಂತ್ರದ ಉದ್ಘಾಟನೆ

ಮಣಿಪಾಲ, 21 ಜುಲೈ 2022: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಜೀವರಸಾಯನಶಾಸ್ತ್ರ ಪ್ರಯೋಗಾಲಯದಲ್ಲಿ ಸುಧಾರಿತ ಇಮ್ಯುನೊ ವಿಶ್ಲೇಷಕ ಕೋಬಾಸ್ ಇ 801 ಯಂತ್ರವನ್ನು ಉದ್ಘಾಟಿಸಲಾಯಿತು. ಪ್ರಯೋಗಾಲಯದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಸುಧಾರಿತ ಯಂತ್ರವನ್ನು ಕೆಎಂಸಿ ಡೀನ್ ಡಾ ಶರತ್ ಕುಮಾರ್ ರಾವ್ , ಮಣಿಪಾಲದ ಬೋಧನಾ ಆಸ್ಪತೆಗಳ ಮುಖ್ಯ ನಿರ್ವಹಣಾಧಿಕಾರಿ ಡಾ ಆನಂದ್ ವೇಣುಗೋಪಾಲ್ ಮತ್ತು ಮುಖ್ಯ ವೈದ್ಯಕೀಯ ಅಧೀಕ್ಷಕರಾದ ಡಾ ಅವಿನಾಶ್ ಶೆಟ್ಟಿ ಉದ್ಘಾಟಿಸಿದರು . ರೋಶ್

ಜೈವಿಕ ಸರಪಳಿಯನ್ನು ಸಂರಕ್ಷಿಸೋಣ : ಡಾ|| ಚೂಂತಾರು

ನಿರಂತರವಾಗಿ ಪರಿಸರದ ಮೇಲೆ ಉಂಟಾಗುತ್ತಿರುವ ದೌರ್ಜನ್ಯದಿಂದಾಗಿ ಪರಿಸರದಲ್ಲಿ ಬದುಕು ಕಟ್ಟಿಕೊಂಡಿರುವ ಜೀವ ಸಂಕುಲಗಳು ನಾಶವಾಗಿ, ಪರಿಸರದ ಸಮತೋಲನ ತಪ್ಪಿ ಹೋಗುತ್ತಿದೆ. ಜೈವಿಕ ಸರಪಳಿ ನಾಶವಾಗಿ ಹಲವಾರು ವಿರಳ ಗಿಡ ಸಸ್ಯಗಳು ಮತ್ತು ಪ್ರಾಣಿ ಸಂಕುಲಗಳು ನಾಶವಾಗಿ ಹೋಗುತ್ತಿದೆ. ಈ ನಿಟ್ಟಿನಲ್ಲಿ ನಾವೆಲ್ಲಾ ಕೂಡಲೇ ಎಚ್ಚೆತ್ತುಕೊಂಡು ಗಿಡಗಳನ್ನು ನೆಟ್ಟು ಮರಗಳನ್ನು ಪೋಷಿಸಿ ಪರಿಸರವನ್ನು ರಕ್ಷಿಸಬೇಕು. ಹಾಗಾದರೆ ಮಾತ್ರ ನಾಡು ಸಮೃದ್ಧವಾಗಿ ಕಾಲ ಕಾಲಕ್ಕೆ ಮಳೆ,