Home ಕರಾವಳಿ Archive by category ಉಡುಪಿ (Page 154)

ಕಾಪು ಲೈಟ್ ಹೌಸ್ ಬೀಚ್‌ನಲ್ಲಿ ಗೀತ ಗಾಯನ

ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಕಾಪು ಲೈಟ್ ಹೌಸ್ ಬೀಚ್‌ನಲ್ಲಿ ‘ಕನ್ನಡಕ್ಕಾಗಿ ನಾವು’ ಸಮೂಹ ಗಾಯನ ಅಭಿಯಾನ ಕನ್ನಡದ ಶ್ರೇಷ್ಟತೆಯನ್ನು ಸಾರುವ ಬಾರಿಸು ಕನ್ನಡ ಡಿಂಡಿಮವ, ಜೋಗದ ಸಿರಿ ಬೆಳಕಿನಲ್ಲಿ, ಹುಟ್ಟಿದರೆ ಕನ್ನಡ ನಾಡಿನಲ್ಲಿ ಹುಟ್ಟಬೇಕು ಎಂಬ ಮೂರು ಗೀತೆಗಳನ್ನು ಹಾಡುವ ಮೂಲಕ ಕನ್ನಡಕ್ಕಾಗಿ ನಾವು ಅಭಿಯಾನ ಕಾರ್ಯಕ್ರಮ ನಡೆಯಿತು. ಕಾಪು

ಅಕ್ರಮವಾಗಿ ಸಾಗಿಸುತ್ತಿದ್ದ  ಜಾನುವಾರು ಪತ್ತೆ:ಇಬ್ಬರು ವಶಕ್ಕೆ

ಪೈಶಾಚಿಕ ಕೃತ್ಯವೊಂದರಲ್ಲಿ ವ್ಯವಸ್ಥಿತ ರೀತಿಯಲ್ಲಿ ಟ್ರಕ್ ನಲ್ಲಿ ಕೋಣ, ಎತ್ತು, ಎಮ್ಮೆ ಹೀಗೆ ಹದಿನೇಳು ಜಾನುವಾರುಗಳನ್ನು ಅಡ್ಡಾದಿಡ್ಡಿಯಾಗಿ ತುಂಬಿಸಿಕೊಂಡು ಬರುತ್ತಿರುವ ಮಾಹಿತಿ ಪಡೆದ ಪಡುಬಿದ್ರಿ ಪೊಲೀಸರು ಹೆಜಮಾಡಿ ಟೋಲ್ ಗೇಟ್ ಬಳಿ ತಡೆದು ನಿಲ್ಲಿಸಿದಾಗ ಪ್ರಕರಣ ಬೆಳಕಿಗೆ ಬಂದಿದ್ದು, ಇದರಲ್ಲಿ ಒಂದು ಎತ್ತು ಸಾವನ್ನಪ್ಪಿದ್ದರೆ, ಮತ್ತೊಂದು ಸಾವಿನಂಚಿನಲ್ಲಿದೆ. ಇನ್ನೊಂದು ಕಾರ್ಯಚರಣೆಯ ಸಂದರ್ಭ ಪರಾರಿಯಾಗಿದ್ದು, ಇಬ್ಬರು ಆರೋಪಿಗಳನ್ನು ವಶಕ್ಕೆ

ಅಕ್ರಮವಾಗಿ ಜಾನುವಾರುಗಳ ಸಾಗಾಟ: ಪಡುಬಿದ್ರಿ ಪೊಲೀಸರ ಕಾರ್ಯಾಚರಣೆ

ಎಚ್.ಆರ್.ನೋಂದಾಣಿ ಸಂಖ್ಯೆಯ ಲಾರಿಯೊಂದರಲ್ಲಿ ಹತ್ತಾರು ಕೋಣ, ಎತ್ತು, ಎಮ್ಮೆಗಳನ್ನು ಬೇಕಾಬಿಟ್ಟಿ ತುಂಬಿಸಿಕೊಂಡು ಬರುತ್ತಿದ್ದ ಖಚಿತ ಮಾಹಿತಿ ಪಡೆದ ಪಡುಬಿದ್ರಿ ಪೊಲೀಸರು ಹೆಜಮಾಡಿ ಟೋಲ್ ಪಕ್ಕ ಅಡ್ಡ ಹಾಕಿ ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿಯಿಂದ ಕೇರಳಕ್ಕೆ ಇದನ್ನು ಸಾಗಿಸಲಾಗುತ್ತಿದೆ ಎಂಬುದಾಗಿ ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದ್ದು, ಹುಬ್ಬಳ್ಳಿ ಮೂಲದ ಚಾಲಕ ಹಾಗೂ ಕೇರಳ ಮೂಲದ ಲಾರಿ ಕ್ಲಿನರ್ ಪೊಲೀಸ್ ವಶದಲ್ಲಿದ್ದಾರೆ. ಲಾರಿಯಲ್ಲಿ ಅಡ್ಡಾದಿಡ್ಡಿಯಾಗಿ

ಎರ್ಮಾಳು ಸರ್ಕಾರಿ ಶಾಲೆಯಲ್ಲಿ ಪ್ರಾರಂಭೋತ್ಸವ ಸಂಭ್ರಮ

ತೆಂಕ ಎರ್ಮಾಳು ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ರಾಮದ ವಿವಿಧ ಕ್ಷೇತ್ರದ ಗಣ್ಯರ ಸಮಕ್ಷಮದಲ್ಲಿ ಕರೋನಾ ಬಳಿಕದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಬಹಳ ಅಚ್ಚುಕಟ್ಟಾಗಿ ನಡೆಸಿದ್ದಾರೆ. ಈ ಅದ್ಧೂರಿಯ ಕಾರ್ಯಕ್ರಮ ದ ಮುಂದಾಳತ್ವವನ್ನು ಶಾಲಾ ಹಳೆ ವಿದ್ಯಾರ್ಥಿ ಸಂಘ ಹಾಗೂ ಶಾಲಾಭಿವೃದ್ಧಿ ಸಮಿತಿ ವಹಿಸಿಕೊಂಡಿತ್ತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ ಎಲ್ಲದಡಿ, ಕರೋನಾ ಭೀತಿಯಿಂದ

ಬಾಂಗ್ಲಾದಲ್ಲಿ ಹಿಂದುಗಳ ಮೇಲೆ ನಡೆಯುತ್ತಿರುವ ಹಿಂಸಾಚಾರದ ವಿರುದ್ಧ  ಪ್ರತಿಭಟನೆ 

ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲೆ ನಡೆಯುತ್ತಿರುವ ವ್ಯಾಪಕ ಹಿಂಸಾಚಾರದ ವಿರುದ್ಧ ಪಡುಬಿದ್ರಿ ಮುಖ್ಯಪೇಟೆಯ ಕಾರ್ಕಳ ಸರ್ಕಲ್ ಬಳಿ ನೂರಾರು ಕಾಪು ತಾಲೂಕು ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರಿಂದ ಪ್ರತಿಭಟನೆ ನಡೆಯಿತು. ಈ ಸಂದರ್ಭ ಮಾತನಾಡಿದ ಭೂ ಸುರಕ್ಷಾ ಪ್ರಮುಖ್ ರಮೇಶ್ ಕಲ್ಲೋಟ್ಟೆ ಮಾತನಾಡಿ, ಬಾಂಗ್ಲಾದೇಶಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕೆ ಬಾರತದಲ್ಲಿ ಏಕೆ ಪ್ರತಿಭಟನೆ ನಡೆಸುತ್ತಾರೆ ಎಂಬ ಮಾತು ಕೇಳುತ್ತಿರಬಹುದು. ಈ ಮಾತು ಸತ್ಯ…ಕಾರಣ ಇಷ್ಟೇ

ಹೆಜಮಾಡಿ ಗುಂಡಿ ರಸ್ತೆಯುದ್ಧಕ್ಕೂ ಮೆಸ್ಕಾಂ ಕಂಬಗಳಿಗೆ ಬಳ್ಳಿ ಅಲಂಕಾರ..!

ಅತೀ ದೊಡ್ಡ ವ್ಯಾಪ್ತಿ ಹೊಂದಿರುವ ಪಡುಬಿದ್ರಿ ಮೆಸ್ಕಾಂ ಕಛೇರಿಗೆ ಶಾಶ್ವತ ಶಾಖಾಧಿಕಾರಿ ಇಲ್ಲದೆ, ವ್ಯವಸ್ಥೆಗಳು ಹಾಳಾಗುತ್ತಿದ್ದು ಇದಕ್ಕೆ ಸಾಕ್ಷಿಯೋ ಎಂಬಂತೆ ಹೆಜಮಾಡಿ ಗುಂಡಿ ರಸ್ತೆಯುದ್ಧಕ್ಕೂ ಮೆಸ್ಕಾಂ ವಿದ್ಯುತ್ ಕಂಬ ತಂತಿಗಳಿಗೆ ಬಳ್ಳಿ ಸುತ್ತಿಕೊಂಡು ಅಪಾಯದ ಸ್ಥಿತಿ ನಿರ್ಮಾಣಗೊಂಡಿದೆ. ಪಡುಬಿದ್ರಿ ಮೆಸ್ಕಾಂ ಕಛೇರಿ ವ್ಯಾಪ್ತಿ ಬಹಳಷ್ಟು ವಿಸ್ತೀರ್ಣ ಇದ್ದು ಇಲ್ಲಿ ಸಮಸ್ಯೆ ತುಂಬಿ ತುಳುಕುತ್ತಿದೆ. ಈ ಬಗ್ಗೆ ಪ್ರತೀ ಗ್ರಾಮಸಭೆಗಳಲ್ಲೂ ಸಭೆಗೆ ಮಾಹಿತಿ ನೀಡಲು

ಅಕಾಲಿಕ ಮಳೆಯಿಂದಾಗಿ ಎಲ್ಲೆಡೆ ಭತ್ತದ ಪೈರುಗಳ ನಾಶ-ಅಪಾರ ಬೆಳೆ ಹಾನಿ

ಅಕಾಲಿಕ ಮಳೆಯಿಂದಾಗಿ ಬೈಲು ಸಾಲಿನ ಭತ್ತದ ಗದ್ದೆಗಳಲ್ಲಿ ಮಳೆ ನೀರು ಸಂಗ್ರಹವಾಗಿದ್ದು ಕಾಪು ತಾಲೂಕಿನ ವಿವಿಧೆಡೆ ಬೆಳೆದು ನಿಂತ ಭತ್ತದ ಪೈರುಗಳು ಗದ್ದೆಯಲ್ಲಿ ನಾಶಗೊಂಡ ಪರಿಣಾಮ ರೈತರು ಲಕ್ಷಾಂತರ ರೂಪಾಯಿ ಮೌಲ್ಯದ ಬೆಳೆ ಹಾನಿ ಭೀತಿಯನ್ನು ಎದುರಿಸುವಂತಾಗಿದೆ. ಕರಾವಳಿಯಲ್ಲಿ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಭತ್ತದ ಗದ್ದೆಗಳಲ್ಲಿ ಬೆಳೆದು ನಿಂತಿರುವ ಪೈರುಗಳು ಮಕಾಡೆ ಮಲಗಿದ್ದು ಇದರಿಂದಾಗಿ ಭತ್ತದ ಕೃಷಿಕರು ತಾವು ಕಷ್ಟಪಟ್ಟು ಬೆಳೆಸಿದ

ಪಡುಬಿದ್ರಿ ಬಾಲ ಗಣಪತಿಯ ಅಂತಿಮ ಶೋಭಾಯಾತ್ರೆಗೆ ಕ್ಷಣಗಣನೆ

ಪಡುಬಿದ್ರಿಯ ಇತಿಹಾಸ ಪ್ರಸಿದ್ಧ ಬಾಲಗಣಪತಿ(ಗುಡ್ಡೆ ಗಣಪತಿ) ದೇವರ ವಾರ್ಷಿಕ ಶೋಭಾಯಾತ್ರೆಗೆ ಕ್ಷಣ ಗಣನೆ ಆರಂಭಗೊಂಡಿದೆ. ಗಣೇಶ ಚೌತಿಯ ದಿನದಂದ್ದು ಪ್ರತಿಷ್ಠಾಪನೆಗೊಂಡು ನವರಾತ್ರಿ ಸಂದರ್ಭ ತಾಯಿ ಶಾರದೆಯ ಒಂಭತ್ತು ದಿನಗಳ ಭವ್ಯ ಪೂಜಾ ಕೈಂಕರ್ಯಗಳನ್ನು ವೀಕ್ಷಿಸಿ ಎಲ್ಲಾ ಕಡೆಗಳಲ್ಲೂ ಶಾರದೆ ವಿಸರ್ಜನಾ ಕಾರ್ಯಕ್ರಮ ನಡೆದರೆ ಇಲ್ಲಿ ಮಾತ್ರ ಬಾಲಗಣೇಶನ ವಿಸರ್ಜನಾ ಮೆರವಣಿಗೆ ನಡೆಯುತ್ತಿದೆ. ಈ ಪುಣ್ಯಕ್ಷೇತ್ರದ ವಿಶೇಷತೆ ಏನೆಂದರೆ ಇಂದು ಬೃಹತ್ ಕಟ್ಟಡ ಹೊಂದಿದ

ಕಾಪು ಮಾರಿಗುಡಿ ದೇವಸ್ಥಾನದಲ್ಲಿ ಮಹಾಚಂಡಿಕಾಯಾಗ

ಇತಿಹಾಸ ಪ್ರಸಿದ್ಧ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಶರನ್ನವರಾತ್ರಿಯ ಪ್ರಯುಕ್ತ ಮಹಾಚಂಡಿಕಾಯಾಗ, ಪೂರ್ಣಾಹುತಿ ಮತ್ತು ಭೂರಿ ಭೋಜನ ಸಂಪನ್ನಗೊಂಡಿತು. ಹೊಸ ಮಾರಿಗುಡಿಯ ಪಧಾನ ತಂತ್ರಿಗಳಾದ ರಾಘವೇಂದ್ರ ತಂತ್ರಿ ಕೊರಂಗ್ರಪಾಡಿ ಇವರ ಮಾರ್ಗದರ್ಶನದಲ್ಲಿ ಪಧಾನ ಅರ್ಚಕ ಶ್ರೀನಿವಾಸ ತಂತ್ರಿಯವರ ನೇತೃತ್ವದಲ್ಲಿ ಮಹಾ ಚಂಡಿಕಾಯಾಗದ ಧಾರ್ಮಿಕ ವಿಧಿ ವಿಧಾನಗಳು ಜರಗಿದವು. ಚಂಡಿಕಾಯಾಗ, ಪೂರ್ಣಾಹುತಿಯೊಂದಿಗೆ ಸುವಾಸಿನಿ ಪೂಜೆ, ನವಗ್ರಹ ಪೂಜೆ ಹಾಗೂ ವಿಷ್ಣು ಪೂಜೆ

ಅದಮಾರು ಪದವಿ ಕಾಲೇಜಿಗೆ ಸಿಎಂ ಅವರಿಂದ ಶಿಲಾನ್ಯಾಸ

ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಅದಮಾರಿನಲ್ಲಿ ಮಾತೃ ಸಂಸ್ಥೆಯ ಅಧ್ಯಕ್ಷ ವಿಶ್ವಪ್ರೀಯ ತೀರ್ಥರ ಸಮಕ್ಷಮದಲ್ಲಿ ನೆರವೇರಿಸಿದ್ದಾರೆ. ಆರಂಭದಲ್ಲಿ ಅದ್ಧೂರಿಯಾಗಿ ಮುಖ್ಯಮಂತ್ರಿಗಳನ್ನು ಶಿಲಾನ್ಯಾಸ ಪ್ರದೇಶಕ್ಕೆ ಬರಮಾಡಿಕೊಳ್ಳಲಾಯಿತು. ಶಿಲಾನ್ಯಾಸ ಸಹಿತ ನಾಮಫಲಕ ಅನಾವರಣದ ಬಳಿಕ ವಿದ್ಯಾಸಂಸ್ಥೆಯ ರಾಜ್ ಕಿರಣ್ ರಂಗಮಂಟಪದಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮುಖ್ಯ ಅಥಿತಿಗಳಾಗಿ ರಾಜ್ಯ ಸಚಿವರುಗಳಾದ ಕೋಟ