ಉಡುಪಿ: ಕರಾವಳಿ ಭಾಗದಲ್ಲಿ ನಡೆದಿರುವ, ನಡೆಯುತ್ತಿರುವ ಘಟನಾವಳಿಗಳ ಆಧಾರದಲ್ಲಿ ಕೋಮು ಸಂಘರ್ಷಗಳ ತಡೆಗಾಗಿ ವಿಶೇಷ ಕಾರ್ಯಪಡೆಯನ್ನು ರಚಿಸಲಾಗಿದೆ. ಯಾವುದೇ ಜಿಲ್ಲೆಯನ್ನ ಕೋಮು ಸೂಕ್ಷ್ಮ ಪ್ರದೇಶ ಎಂದು ಬಿಂಬಿಸಲು ನಾವು ಇದನ್ನು ಮಾಡಿಲ್ಲ. ಇದರ ಅಗತ್ಯವೂ ಎಲ್ಲೂ ಬರಬಾರದೆಂದು ಈಗಾಗಲೇ ಹೇಳಿದ್ದೇನೆ ಎಂದು ರಾಜ್ಯ ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ.
ಕುಂದಾಪುರ: ಶುಕ್ರವಾರ ನಸುಕಿನ ಜಾವ ಸುರಿದ ಭಾರೀ ಗಾಳಿ-ಮಳೆಗೆ ಬೃಹತ್ ಅರಳಿ ಮರ ಮನೆಯೊಂದರ ಮೇಲೆ ಬಿದ್ದು ಮನೆ ಹಾನಿಯಾದ ಘಟನೆ ಕುಂದಾಪುರ ಪುರಸಭಾ ವ್ಯಾಪ್ತಿಯ ಭಗತ್ ಸಿಂಗ್ ರಸ್ತೆಯಲ್ಲಿನ ಮಠದಬೆಟ್ಟುವಿನಲ್ಲಿ ನಡೆದಿದೆ. ಇಲ್ಲಿನ ನಿವಾಸಿ ವಸಂತಿ ದೇವಾಡಿಗ ಮನೆ ಮೇಲೆ ಮರ ಬಿದ್ದಿದ್ದು, ಮನೆಯ ಸ್ಲ್ಯಾಬ್ ಗೆ ಹಾನಿಯಾಗಿದೆ. ಪಕ್ಕದಲ್ಲೇ ಯಕ್ಷೇಶ್ವರಿ ದೇವಸ್ಥಾನವಿದ್ದು, ದೇವಸ್ಥಾನಕ್ಕೆ ತಾಗಿಕೊಂಡೆ ಮರ ಬಿದ್ದಿದೆ. ಸ್ಲ್ಯಾಬ್ ಮನೆಯಾದ್ದರಿಂದ ಮನೆಯಲ್ಲಿ
ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹಲವರಿಮಠ ಬೈಂದೂರು ವಲಯ ಉಡುಪಿ ಜಿಲ್ಲೆ. ಇಂದು ಶಾಲೆಯಲ್ಲಿ ಹೊಸಕಿರಣ ನ್ಯೂಸ್ ಚಾನೆಲ್ ವತಿಯಿಂದ 21 ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್ ಹಾಗೂ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಕೊಡುಗೆ ನೀಡಿದ ಹೊಸ ಕಿರಣ ನ್ಯೂಸ್ ಚಾನೆಲ್ ಸಂಪಾದಕರಾದ ಕಿರಣ್ ಪೂಜಾರಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಕಾರ್ಯಕ್ರಮವನ್ನು ಸರಳವಾಗಿ ಉದ್ಘಾಟಿಸಿ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಹಾಗು ಸಹಾಯ ಮನೋಭಾವದ ಕುರಿತು ಮಾತನಾಡಿದರು.
ಹೊಸಕಿರಣ ನ್ಯೂಸ್ ಚಾನೆಲ್ ವತಿಯಿಂದ 23 ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್ ಹಾಗೂ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಯಡಮೊಗೆ. ಬೈಂದೂರು ವಲಯ ಉಡುಪಿ ಜಿಲ್ಲೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಕೊಡುಗೆ ನೀಡಿದ ಹೊಸ ಕಿರಣ ನ್ಯೂಸ್ ಚಾನೆಲ್ ಸಂಪಾದಕರಾದ ಶ್ರೀಯುತ ಕಿರಣ್ ಪೂಜಾರಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಕಾರ್ಯಕ್ರಮವನ್ನು ಸರಳವಾಗಿ ಉದ್ಘಾಟಿಸಿ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಹಾಗು ಸಹಾಯ ಮನೋಭಾವದ ಕುರಿತು ಮಾತನಾಡಿದರು.
ಮಣಿ ಶೆಣೈ ನಿರ್ದೇಶನದ ಮೈ ಡಿಯರ್ ಮೀನಾ ಕಾಮಿಡಿ ತುಳು ಆಲ್ಬಂ ಸಾಂಗ್ ಇತ್ತೀಚೆಗೆ ಶ್ರೀ ಕ್ಷೇತ್ರ ಪೇಟೆಬೆಟ್ಟು ಕಟಪಾಡಿಯಲ್ಲಿ ಅದ್ದೂರಿಯಾಗಿ ಆಕ್ಷನ್ ಕ್ರಿಯೇಷನ್ ಯೂಟ್ಯೂಬ್ ಚಾನೆಲ್ನಲ್ಲಿ ಬಿಡುಗಡೆಗೊಂಡಿತ್ತು. ಈ ಹಾಡಿನಲ್ಲಿ ಗಿಚ್ಚಿ ಗಿಲಿ ಗಿಲಿ ಖ್ಯಾತಿಯ ದೀಕ್ಷಾ ಎಸ್ಎಂ ಬ್ರಹ್ಮಾವರ ಇವರು ಕೇಂದ್ರ ಬಿಂದು ಆಗಿದ್ದು, ಎಏ ಪೇಟೆಬೆಟ್ಟು, ಕೀರ್ತಿ ಕುಮಾರ್ ಬೆಂಗ್ರೆ, ಕಿರಣ್ ಲೂಯಿಸ್, ಹಾಗೂ ಎಲ್ಲಾ ಆಕ್ಷನ್ ಕ್ರಿಯೇಷನ್ ತಂಡದ ಸದಸ್ಯರು ಅಭಿನಯಿಸಿದ್ದಾರೆ. ಮೈ
ವಿಶ್ವಪರಿಸರ ದಿನಾಚರಣೆಯ ಪ್ರಯುಕ್ತ ಉಡುಪಿಯ ಪ್ರತಿಷ್ಠಿತ ನೇತ್ರಜ್ಯೋತಿ ಕಾಲೇಜಿನ ವಿದ್ಯಾರ್ಥಿಗಳಿಂದ ಪ್ರಸಿದ್ಧ ಮಂದಾರ್ತಿಯ ದುರ್ಗಾಪರಮೇಶ್ವರಿ ದೇವಾಲಯದ ಸುತ್ತ ಮುತ್ತಲು ಸ್ವಚ್ಚತಾ ಕಾರ್ಯ ನಡೆಯಿತು. ಸುಮಾರು 50 ವಿದ್ಯಾರ್ಥಿಗಳು ಬಾಗವಹಿಸಿದ್ದು ದೇವಾಲಯದ ಆವರಣದಲ್ಲಿರುವ ಪ್ಲಾಸ್ಟಿಕ್, ಬಾಟಲಿ, ಕಸ ಕಡ್ಡಿಗಳನ್ನು ತೆಗೆದು ಸ್ವಚ್ಛಗೊಳಿಸಿದರು. ನಂತರ ದೇವಾಲಯದ ಅನ್ನದಾನದ ಕೈಂಕರ್ಯದಲ್ಲಿಯೂ ಭಾಗವಹಿಸಿದರು, ಕಾರ್ಯಕ್ರಮದಲ್ಲಿ ಕಾಲೇಜಿನ ಕಾರ್ಡಿನೇಟರ್ ಗಳಾದ ಶ್ರೀ
ಸಿದ್ದಾಪುರದ ಸಾವಯವ ಕೃಷಿ ಪರ ಹಾಗೂ ಸಾರ್ವಜನಿಕ ಮಹಿಳಾ ಮತ್ತು ಮಕ್ಕಳ ಬಗ್ಗೆ ಹೆಚ್ಚು ಒತ್ತು ನೀಡುತ್ತಿರುವ ರಾಜೇಂದ್ರ ಪೂಜಾರಿ ಸಾರಥ್ಯದಲ್ಲಿ ಸಾರ್ವಜನಿಕ ಕಳಾಕಳಿಯ ಭೋಜು ಪೂಜಾರಿ ಚಾರಿಟೇಬಲ್ ಟ್ರಸ್ಟ್. (ರಿ)ಬೆಚ್ಚಳ್ಳಿ ಹೊಸಂಗಡಿಯ ನೋಂದಾಯಿತ ಪ್ರಥಮ ಸಾಲಿನಲ್ಲೇ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಟ್ರಸ್ಟ್ ಆಗಿದೆ. ಇದರ ಪ್ರಥಮ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮವು ದಿನಾಂಕ:15-06-2025ನೇ ಆದಿತ್ಯವಾರ ಬೆಳಿಗ್ಗೆ ಘಂಟೆ 09.00ಕ್ಕೆ ಶ್ರೀ
ಕರ್ಣಾಟಕ ರಕ್ಷಣಾ ವೇದಿಕೆ ಉಡುಪಿ ಜಿಲ್ಲೆ ಕಾರ್ಕಳ ತಾಲೂಕು ಘಟಕದ ವತಿಯಿಂದ ಜಿಲ್ಲಾಧ್ಯಕ್ಷರಾದ ಅ. ರಾ. ಪ್ರಭಾಕರ್ ಪೂಜಾರಿ ಅವರ ಆದೇಶದಂತೆ ಕಾರ್ಕಳ ತಾಲೂಕು ಘಟಕದ ವತಿಯಿಂದ ಕಾರ್ಕಳ ಎಎಸ್ಪಿ ಡಾ. ಹರ್ಷಪ್ರಿಯಂವದಾ ಹಾಗೂನಗರ ಠಾಣಾಧಿಕಾರಿಗಳಾದ ಪ್ರಸನ್ನ ಮತ್ತು ಠಾಣಾಧಿಕಾರಿ ಸಂದೀಪ್ ಅವರನ್ನು ಭೇಟಿಯಾಗಿ,ಕಾರ್ಕಳ ತಾಲೂಕಿನಲ್ಲಿ ಸುವ್ಯವಸ್ಥೆ ಯನ್ನು ಕಾಪಾಡುವಂತೆ, ಅಕ್ರಮ ವ್ಯವಹಾರಗಳಿಗೆ ಕಡಿವಾಣ ಹಾಕಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಕಳ ತಾಲೂಕು ಘಟಕದ
ಉಡುಪಿಯ ಪ್ರತಿಷ್ಠಿತ ನೇತ್ರಜ್ಯೋತಿ ಕಾಲೇಜಿನಲ್ಲಿ ವಿಶ್ವಪರಿಸರ ದಿನಾಚರಣೆಯನ್ನು ವಿದ್ಯಾರ್ಥಿಗಳಿಗೆ ಗಿಡ ನೀಡುವ ಮೂಲಕ ವಿಶಿಷ್ಟವಾಗಿ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅಥಿತಿಗಳಾಗಿ ಆಗಮಿಸಿದ ಉಡುಪಿಯ ಉಪವಲಯ ಅರಣ್ಯಾಧಿಕಾರಿಗಳಾದ ಶ್ರೀ ಶಿವಾನಂದ ರವರು ಮಾತನಾಡಿ, ವಿಶ್ವಪರಿಸರ ದಿನಾಚರಣೆಯ ಉದ್ದೇಶ, ಪರಿಸರ ರಕ್ಷಣೆ ಮಾಡುವಲ್ಲಿ ವಿದ್ಯಾರ್ಥಿಗಳ ಪಾತ್ರದ ಬಗ್ಗೆ ತಿಳಿಸಿದರು. ಇನ್ನೊರ್ವ ಅತಿಥಿ ಶ್ರೀ ದೇವರಾಜ್ ಪಣ ಬೀಟ್ ಫಾರೆಸ್ಟರ್ ಉಡುಪಿ ಇವರು ಮಾತನಾಡಿ
ಕರ್ನಾಟಕ ಪತ್ರಕರ್ತರ ಸಂಘ (ರಿ) ಉಡುಪಿ ಜಿಲ್ಲಾ ಘಟಕದ ವತಿಯಿಂದ ಉಡುಪಿ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯವರಾಗಿರುವ ಶ್ರೀ ಹರಿರಾಂ ಶಂಕರ್ ಅವರನ್ನು ಜಿಲ್ಲೆಗೆ ಸ್ವಾಗತಿಸುವ ಮೂಲಕ ಗೌರವಿಸಲಾಯಿತು. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಯನ್ನು ಬಲಪಡಿಸಿ ಶಾಂತಿ ಕಾಪಾಡುವಂತೆ, ಅಕ್ರಮ ವ್ಯವಹಾರಗಳಿಗೆ ಕಡಿವಾಣ ಹಾಕಬೇಕೆಂದು ಕರ್ನಾಟಕ ಪತ್ರಕರ್ತರ ಸಂಘ ದ ವತಿಯಿಂದ ವಿನಂತಿಸಲಾಯಿತು.ಕರ್ನಾಟಕ ಪತ್ರಕರ್ತರ ಸಂಘ ದ ಜಿಲ್ಲಾಧ್ಯಕ್ಷರಾದ ಕಿರಣ್ ಪೂಜಾರಿ,




























