Home ಕರಾವಳಿ Archive by category ಉಡುಪಿ (Page 165)

ಬೊಮ್ಮಾಯಿ ಪ್ರಮಾಣವಚನ ಸ್ವೀಕಾರ :ಉಡುಪಿಯಲ್ಲಿ ಪಟಾಕಿ ಸಿಡಿಸಿ ಸಂಭ್ರಮ

ಮುಖ್ಯ ಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಪ್ರಮಾಣವಚನ ಸ್ವೀಕಾರಿಸಿದ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದ್ರು, ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರು ನೇತೃತ್ವದಲ್ಲಿ ಉಡುಪಿಯ ಕ್ಲಾಕ್ ಟವರ್ ಬಳಿ ಸೇರಿದ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ,ಜೈಕಾರ ಹಾಕಿ ಸಂಭ್ರಮಿಸಿದರು. ಇನ್ನು ಉಡುಪಿ ಜಿಲ್ಲಾ ಉಸ್ತುವಾರಿ

ಕಾಪು ಹೊಸ ಮಾರಿಯಮ್ಮ ಸನ್ನಿಧಿಯಲ್ಲಿ ಆಟಿ ಮಾರಿಪೂಜೆ

ಕಾಪು ಹೊಸ ಮಾರಿಯಮ್ಮ ದೇವಸ್ಥಾನದಲ್ಲಿ ವಾರ್ಷಿಕ ಆಟಿ ಮಾರಿ ಪೂಜೆಯು ಕೊವೀಡ್ ಸಮಸ್ಯೆಯಿಂದಾಗಿ ಸರಳವಾಗಿ ನಡೆದಿದೆ. ವಾರ್ಷಿಕವಾಗಿ ತುಳು ತಿಂಗಳುಗಳಾದ ಸುಗ್ಗಿ, ಜಾರ್ದೆ ಹಾಗೂ ಆಟಿ ಮಾರಿಪೂಜೆ ನಡೆಯುತ್ತಿದ್ದು, ಈ ಧಾರ್ಮಿಕ ಕಾರ್ಯಕ್ರಮಗಳಿಗೆ ಜಿಲ್ಲೆ ಹೊರಜಿಲ್ಲೆ, ಹೊರ ರಾಜ್ಯ, ದೇಶ ವಿದೇಶಗಳಿಂದಲೂ ಲಕ್ಷಾಂತರ ಭಕ್ತಾಧಿಗಳು ಆಗಮಿಸುತ್ತಿದ್ದು, ಆದರೆ ಈ ಬಾರಿ ಕೋವಿಡ್ ಸಮಸ್ಯೆಯಿಂದಾಗಿ ಸರ್ಕಾರದ ಸೂಚನೆಯಂತೆ ಸರಳವಾಗಿ ನಡೆಯುವುದರಿಂದ ಭಕ್ತಾಧಿಗಳ ಸಂಖ್ಯೆಯೂ ವಿರಳ

ತೆಂಕನಿಡಿಯೂರು : ಗದ್ದೆಗಿಳಿದ ಪ್ರಾಂಶುಪಾಲರು, ಉಪನ್ಯಾಸಕರು, ವಿದ್ಯಾರ್ಥಿಗಳು

ಉಡುಪಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಉಡುಪಿ ಇಲ್ಲಿನ ಪ್ರಾಂಶುಪಾಲರು ಮತ್ತು  ಉಪನ್ಯಾಸಕರು, ವಿದ್ಯಾರ್ಥಿಗಳು ಉಡುಪಿಯ ಕುತ್ಪಾಡಿಯಲ್ಲಿ ಗದ್ದೆಗಿಳಿದು ಕಳೆಕೀಳುವ ಕಾರ್ಯವನ್ನು ನಡೆಸಿದರು. ಕೇದಾರೋತ್ಪನ್ನ ಟ್ರಸ್ಟ್ ಉಡುಪಿಯ 1500 ಎಕ್ರೆ ಹಡಿಲು ಭೂಮಿಯಲ್ಲಿ ಕೃಷಿ ಕಾರ್ಯವನ್ನು ಕೈಗೊಂಡಿದೆ. ಪರಿಸರದ ವಿದ್ಯಾರ್ಥಿಗಳನ್ನು ಬಳಸಿಕೊಂಡು ಅವರಿಗೆ ತರಬೇತಿ ನೀಡುವುದರೊಂದಿಗೆ ಕೃಷಿ ಕಾರ್ಯವನ್ನು ಕೈಗೊಳ್ಳುತ್ತಿದೆ.

ಗುರುದೇವ್ ಆಂಡ್ ಜಿ.ಡಿ. ಗ್ರೂಪ್‌ನ ಜಾಹೀರಾತು ಸಂಸ್ಥೆಯ ನೂತನ ಶಾಖೆ ಆರಂಭ

ಮಂಗಳೂರಿನ ಪ್ರಸಿದ್ಧ ಗುರುದೇವ್ ಆಂಡ್ ಜಿ.ಡಿ. ಗ್ರೂಪ್‌ನ ಜಾಹೀರಾತು ಸಂಸ್ಥೆಯ ನೂತನ ಶಾಖೆಯು ಉಡುಪಿಯ ತೆಂಕಪೇಟೆಯಲ್ಲಿರುವ ಹೆಡ್‌ಪೋಸ್ಟ್ ಆಫೀಸಿನ ಮುಂಭಾಗದಲ್ಲಿರುವ ಶ್ರೀರಾಮ್ ಆರ್ಕೇಡ್ ಕಟ್ಟಡದ ಮೊದಲನೇ ಮಹಡಿಯಲ್ಲಿ ಉದ್ಘಾಟನೆಗೊಂಡಿತ್ತು. ನೂತನ ಶಾಖೆಯ ಉದ್ಘಾಟನೆಯನ್ನು ಉಡುಪಿ ವಿಧಾನಸಭಾ ಕ್ಷೇತ್ರ ಶಾಸಕರಾದರಘುಪತಿ ಭಟ್, ಇವರು ನೇರವೇರಿಸಿದರು. ದೀಪ ಪ್ರಜ್ವಲನ ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷರಾದ

ಪರ್ಕಳದ ಸಣ್ಣಕ್ಕಿಬೆಟ್ಟುವಿನಲ್ಲಿ ಹಡೀಲು ಭೂಮಿಯಲ್ಲಿ ಕೃಷಿ ಆಂದೋಲನ

ಉಡುಪಿಯಲ್ಲಿ “ಹಡೀಲು ಭೂಮಿ ಕೃಷಿ ಆಂದೋಲನ”ದಡಿ ಉಡುಪಿ ನಗರಸಭಾ ವ್ಯಾಪ್ತಿಯ ಹಡಿಲು ಭೂಮಿಗಳ ಕಡೇ ನಾಟಿ ಕಾರ್ಯಕ್ರಮದ ಸಮಾರೋಪ ಸಮಾರಂಭ ನಡೆಯಿತು. ನಾಟಿ ಕಾರ್ಯದಲ್ಲಿ ಪಾಲ್ಗೊಂಡ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾತನಾಡಿ, ಒಬ್ಬ ಜನಪ್ರತಿನಿಧಿ ಕೇವಲ ಮತದ ಲೆಕ್ಕಾಚಾರಗಳನ್ನು ಹಾಕುವುದಲ್ಲ. ವಿಭಿನ್ನವಾದ ಕಾರ್ಯಗಳನ್ನು ಮಾಡಬೇಕು. ಇಂದು ನಶಿಸಿ ಹೋಗುತ್ತಿದ್ದ ಕೃಷಿ ಪರಂಪರೆಯನ್ನು ಉಳಿಸುವ ಕೆಲಸವಾಗಿದೆ. ಕೃಷಿಯ ಮೇಲಿನ ಪ್ರೀತಿ,

ಕಾಪು ಠಾಣಾ ವ್ಯಾಪ್ತಿಯಲ್ಲಿ ಸರಣಿ ಕಳ್ಳತನ: ನಗ ನಗದು ದೋಚಿ ಪರಾರಿ

ಕಾಪು ಠಾಣಾ ವ್ಯಾಪ್ತಿಯ ಮೂಳೂರು ಮುಖ್ಯ ರಸ್ತೆಯ ಬಳಿಯ ಮೂರು ಮನೆಗಳಿಗೆ ನುಗ್ಗಿದ ಕಳ್ಳರು ಲಕ್ಷಾಂತರ ಮೌಲ್ಯದ ನಗನಗದು ಕಳವು ಗೈದ ಘಟನೆ ಭಾನುವಾರ ಬೆಳಕಿಗೆ ಬಂದಿದೆ. ಮೂಳೂರು ಈಸ್ಟ್ ವೆಸ್ಟ್ ನರ್ಸರಿ ಸಮೀಪದ ಮಹಮ್ಮದ್ ರಫೀಕ್, ಮಧುರ ಕಾಂಪೌಂಡ್ ನಿವಾಸಿ ಇಬ್ರಾಹಿಂ ಹಾಗೂ ಶಹನಾಜ್ ಎಂಬವರ ಮನೆಗೆ ನುಗ್ಗಿದ ಕಳ್ಳರು ಅಪಾರ ನಗ ಹಾಗೂ ನಗದು ಕಳವು ಗೈದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ ಯಾದರೂ ಮೌಲ್ಯ ಇನ್ನಷ್ಟೇ ತಿಳಿದು ಬರ ಬೇಕಾಗಿದೆ. ಈ ಮೂರೂ ಮನೆ […]

ಪಡುಬಿದ್ರಿಯ ಕಡಲತೀರದಲ್ಲಿ ತೆರವಾಗದ ಟಗ್: ಸ್ಥಳೀಯ ನಿವಾಸಿಗಳಿಗೆ ತೊಂದರೆ

ಕಳೆದ ಚಂಡಮಾರುತದ ಸಂದರ್ಭ ಪಡುಬಿದ್ರಿಯ ಕಡಲತೀರ ಸೇರಿದ ಟಗ್ ತೆರವುಗೊಳಿಸುವಂತೆ ಒತ್ತಾಯಿಸಿದ ಮೀನುಗಾರ ಮುಖಂಡರು ತೆರವುಗೊಳಿಸದಿದ್ದಲ್ಲಿ ಹೋರಾಟದ ಎಚ್ಚರಿಕೆ ನೀಡಿದ್ದರು. ಆದರೆ ಇದುವರೆಗೆ ಟಗ್ ತೆರವು ಕಾರ್ಯಕ್ಕೆ ಮುಂದಾಗಿಲ್ಲ. ಮಂಗಳೂರು ಮೂಲದ ಬಿಲಾಲ್ ಸಂಸ್ಥೆ ಪಲ್ಟಿಯಾಗಿದ್ದ ಟಗ್ ತೆರವುಗೊಳಿಸುವ ಗುತ್ತಿಗೆ ಪಡೆದಿದ್ದರೂ, ಬಹಳಷ್ಟು ದಿನಗಳ ಪ್ರಯತ್ನದ ಬಳಿಕ ವಿಫಲಗೊಂಡು ಮತ್ತೊಂದು ಸಂಸ್ಥೆಯ ಸಹಾಯ ಯಾಚಿಸಿ ಉಡುಪಿ ಜಿಲ್ಲಾಧಿಕಾರಿಗಳ ಉಪಸ್ಥಿತಿಯಲ್ಲಿ ಸಭೆ ನಡೆಸಿ

ಕಾಪುವಿನಲ್ಲಿ ಹಿರಿಯ ನಾಯಕ ಆಸ್ಕರ್ ಚೇತರಿಕೆಗಾಗಿ ವಿಶೇಷ ಪ್ರಾರ್ಥನೆ

  ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ, ಮಾಜಿ ಕೇಂದ್ರ ಸಚಿವ ಹಾಗೂ ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಅವರ ಆರೋಗ್ಯ ಚೇತರಿಕೆಗಾಗಿ ಹಾರೈಸಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಅವರ ನೇತೃತ್ವದಲ್ಲಿ ಕಾಪು ತಾಲೂಕಿನ ವಿವಿಧ ಧಾರ್ಮಿಕ ಕೇಂದ್ರಗಳಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು. ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನ, ಪೊಲಿಪು ಜಾಮಿಯಾ ಮಸೀದಿ, ಉದ್ಯಾವರ ಚರ್ಚ್, ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರ, ಉದ್ಯಾವರ ಮಹಾಗಣಪತಿ ದೇವಸ್ಥಾನ ಸಹಿತವಾಗಿ ವಿವಿಧ

ಕಾಪು : ಗಾಯಗೊಂಡ ರಾಷ್ಟ್ರ ಪಕ್ಷಿಯನ್ನು ರಕ್ಷಿಸಿದ ಯುವಕರು

ಕಾಲಿಗೆ ಗಾಯಗೊಂಡು ತೀವ್ರ ಅಸ್ವಸ್ಥಗೊಂಡ ಗಂಡು ನವಿಲೊಂದನ್ನು ಕಾಪುವಿನ ಯುವಕರು ರಕ್ಷಿಸಿ, ಪ್ರಾಥಮಿಕ ಚಿಕಿತ್ಸೆ ನೀಡಿ ಅರಣ್ಯಾಧಿಕಾರಿಯವರಿಗೆ ಒಪ್ಪಿಸಿದ ಘಟನೆ ನಡೆದಿದೆ. ಮೂಳೂರು ಬಳಿ ಕಾಲಿಗೆ ತೀವ್ರ ಗಾಯಗೊಂಡ ಸ್ಥಿತಿಯಲ್ಲಿದ್ದ ಗಂಡು ನವಿಲನ್ನು ಕಾಪುವಿನ ಪ್ರಶಾಂತ್ ಪೂಜಾರಿ ಹಾಗೂ ಶಿವಾನಂದ ಪೂಜಾರಿ ಅವರು ಗುರುವಾರ ರಾತ್ರಿ ತಮ್ಮ ಮನೆಗೆ ತಂದು ಆರೈಕೆ ಮಾಡಿದ್ದರು. ಆರೈಕೆಯೊಂದಿಗೆ ಚೇತರಿಕೆಗೊಂಡ ನವಿಲನ್ನು ಅರಣ್ಯ ಅಧಿಕಾರಿ ಮಂಜುನಾಥ್ ಅವರಿಗೆ

ಉಡುಪಿಯ ಪೆರ್ಣಂಕಿಲದಲ್ಲಿ ಬೋನಿಗೆ ಬಿದ್ದ ಚಿರತೆ

ಪೆರ್ಣಂಕಿಲದಲ್ಲಿ ಗ್ರಾಮಸ್ಥರನ್ನು ಬಹು ದಿನಗಳಿಂದ ಕಾಡುತ್ತಿದ್ದ ಚಿರತೆ ಕೊನೆಗೂ ಬೋನಿಗೆ ಬಿದ್ದಿದೆ. ಗ್ರಾಮದಲ್ಲಿ ಆಗಾಗ್ಗೆ ಕಾಣಿಸಿಕೊಳ್ಳುತ್ತಿದ್ದ ಚಿರತೆ ಕಳೆದ ರಾತ್ರಿ ಪೆರ್ಣಂಕಿಲದ ಗುಂಡುಪಾದೆ ಎಂಬಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಇರಿಸಿದ್ದ ಬೋನಿಗೆ ಬಿದ್ದಿದೆ. ಚಿರತೆಯನ್ನು ಸೆರೆ ಹಿಡಿಯಲು ಗುಂಡುಪಾದೆಯ ಅಶೋಕ್ ನಾಯಕ್ ಎಂಬವರ ತೋಟದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಬೋನು ಇರಿಸಿದ್ದರು. ಕಳೆದ ರಾತ್ರಿ ಚಿರತೆ ಇದರೊಳಗೆ ಸೆರೆಯಾಗಿದೆ. ಇಂದು ಬೆಳಗ್ಗೆ