Home ಕರಾವಳಿ Archive by category ಉಡುಪಿ (Page 18)

ಹಳೆಯಂಗಡಿ:ಉಚಿತ ಬೇಸಿಗೆ ಶಿಬಿರ ಚಿಣ್ಣರ ಹಬ್ಬ

ಬ್ರಹ್ಮಶ್ರೀ ನಾರಾಯಣ ಗುರು ಸೇವಾಸಂಘ (ರಿ.) ಎಸ್.ಕೋಡಿ, ತೋಕೂರು, ಬ್ರಹ್ಮಶ್ರೀ ನಾರಾಯಣ ಗುರು ಮಹಿಳಾ ವೇದಿಕೆ, ಬ್ರಹ್ಮಶ್ರೀ ನಾರಾಯಣ ಗುರು ಯುವ ವೇದಿಕೆ- ಇವರ ಸಹಭಾಗಿತ್ವದಲ್ಲಿ ಉಚಿತ ಬೇಸಿಗೆ ಶಿಬಿರ ಚಿಣ್ಣರ ಹಬ್ಬ 2025 ನಡೆಯಲಿದೆ. ಈ ಶಿಬಿರದಲ್ಲಿ ಯೋಗ/ಧ್ಯಾನ,ಶ್ಲೋಕ/ ಭಗವದ್ಗೀತಾ,ಭಜನೆ,ಸಂಗೀತ,ನೃತ್ಯ,ನೀತಿ ಕಥೆಗಳು, ಪೇಪರ್ ಕ್ರಾಫ್ಟ್,ಚಿತ್ರಕಲೆ/ ವರ್ಣ

ಗರುಡ ಗ್ಯಾಂಗಿನ ಆರೋಪಿ ಇಸಾಕ್‌: 9 ದಿನ ಪೋಲಿಸ್ ಕಸ್ಟಡಿಗೆ

ಹಿರಿಯಡ್ಕ ಠಾಣಾ ವ್ಯಾಪ್ತಿಯಲ್ಲಿ ಮಾ.12 ರಂದು ಮಣಿಪಾಲ ಠಾಣಾ ಪೋಲಿಸ್ ನಿರೀಕ್ಷಕ ದೇವರಾಜ್ ಅವರಿಂದ ಕಾಲಿಗೆ ಗುಂಡೇಟು ತಿಂದಿದ್ದ ಗರುಡ ಗ್ಯಾಂಗಿನ ಆರೋಪಿ ಇಸಾಕ್‌ನನ್ನು ಪೋಲಿಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಎ.1 ರವರೆಗೆ ಒಟ್ಟು 9 ದಿನ ಪೋಲಿಸ್ ಕಸ್ಟಡಿಗೆ ನೀಡಿದೆ.ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ರಸ್ತೆಯಲ್ಲಿ ಬೆಂಗಳೂರಿನ ನೆಲಮಂಗಲ ಪೋಲಿಸರಿಂದ ತಪ್ಪಿಸಿಕೊಳ್ಳುವ ವೇಳೆ ಸಾರ್ವಜನಿಕರ ಕಾರು, ಬೈಕ್‌ಗೆ ಗುದ್ದಿದ ಪ್ರಕರಣದಲ್ಲಿ ಆರೋಪಿಯನ್ನು

ಮಲ್ಪೆ: ಪ್ರಚೋದನಕಾರಿ ಭಾಷಣ:ಹಿಂದೂ ಯುವಸೇನೆಯ ಮಾಜಿ ಜಿಲ್ಲಾಧ್ಯಕ್ಷನ ವಿರುದ್ಧ ಸುಮೊಟೋ ಪ್ರಕರಣ

ಮಲ್ಪೆ ಬಂದರಿನಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಮೀನುಗಾರರ ಬಂಧನ ವಿರೋಧಿಸಿ ಮಾ 22ರಂದು ಪ್ರತಿಭಟನಾ ಸಭೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಹಿಂದೂ ಯುವಸೇನೆಯ ಮಾಜಿ ಜಿಲ್ಲಾಧ್ಯಕ್ಷ ಮಂಜುಕೊಳ ವಿರುದ್ಧ ಸುಮೊಟೋ ಪ್ರಕರಣ ದಾಖಲಾಗಿದೆ. ದಯಮಾಡಿ ಬಂಧಿತ ನಾಲ್ಕು ಮಹಿಳೆಯರನ್ನು ಬಿಡಬೇಕು ಎಂದ ವೇದಿಕೆ ಮಂಜು ಕೊಳ ಭಾಷಣ ಮಾಡುವ ನೆಪದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆಗಟ್ಟುವ ಮಾತನಾಡುತ್ತಾ ಸಾರ್ವಜನಿಕರಿಂದ ಇಂತಹ ಅಪರಾಧ ಮಾಡಿಸಲು

ಹಂಪ ನಾಗರಾಜಯ್ಯರಿಗೆ ಗೌರವ:ರಾಷ್ಟ್ರಕವಿ ಗೋವಿಂದ ಪೈ ಪ್ರಶಸ್ತಿ ಪ್ರದಾನ

ಉಡುಪಿಯ ಗೋವಿಂದ ಪೈ ಸಂಶೋಧನಾ ಕೇಂದ್ರದ ಆವರಣದಲ್ಲಿ ಹಿರಿಯ ಸಂಶೋಧಕ ಹಂಪ ನಾಗರಾಜಯ್ಯ ಅವರಿಗೆ ಗೋವಿಂದ ಪೈ ಸಂಶೋಧನಾ ಪ್ರಶಸ್ತಿ ಸಂದಿತು. ಅರುವತ್ತು ವರುಷಗಳ ಹಿಂದೆ ಗೋವಿಂದ ಪೈಗಳ ಗ್ರಂಥ ಭಂಡಾರವನ್ನು ಎಂಜಿಎಂ ಕಾಲೇಜಿಗೆ ತಂದು ಅವರ ಹೆಸರಿನ ಸಂಶೋಧನಾ ಕೇಂದ್ರ ಸ್ಥಾಪಿಸಲಾಗಿತ್ತು. ಅಲ್ಲಿನ ಹಲವು ಸಂಶೋಧನೆಗಳ ನಡುವೆ ಪೈಗಳ ಕೃತಿ ಸಂಪುಟವನ್ನು ಸಹ ತರಲಾಗಿತ್ತು. ಇಂದು ಎರಡನೆಯ ಸಂಪುಟ ಬಿಡುಗಡೆ ಆಯಿತು. ಈ ಸಂದರ್ಭದಲ್ಲಿ ಹಂಪನಾ ಅವರನ್ನು ಪ್ರಶಸ್ತಿ ನೀಡಿ

ಕಾರ್ಕಳ: ಮೇ 10ರಂದು ನವೋದಯ ಸ್ವಸಹಾಯ ಸಂಘದ ರಜತ ಮಹೋತ್ಸವ

ಕಾರ್ಕಳ :ನವೋದಯ ಸ್ವಸಹಾಯ ಸಂಘದ ರಜತ  ಮಹೋತ್ಸವವು ಮೇ ೧೦ ರಂದು ಮಂಗಳೂರಿನ  ನೆಹರು ಮೈದಾನದಲ್ಲಿ ನಡೆಯಲಿರುವುದು ಎಂದು ಹಿರಿಯ ಸಹಕಾರಿ ದುರೀಣ, ನವೋದಯ ಚಾರಿಟೇಬಲ್ ಟ್ರಸ್ಟ್ ಹಾಗೂ ದ.ಕ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್ .ರಾಜೇಂದ್ರ ಕುಮಾರ್ ತಿಳಿಸಿದರು. ಕಾರ್ಕಳದ ದಾನಶಾಲೆ ಬಾಹುಬಲಿ ಪ್ರವಚನ ಮಂದಿರದಲ್ಲಿ ನಡೆದ ನವೋದಯ ಸ್ವಸಹಾಯ ಸಂಘದ ರಜತ  ಮಹೋತ್ಸವ ಪೂರ್ವಭಾವಿ ಸಭೆಯಲ್ಲಿ ಈ ವಿಷಯ ತಿಳಿಸಿದರು. ಕಾರ್ಕಳದಲ್ಲೆ ಪ್ರಾರಂಭಗೊಂಡ ಈ

ವಿಶ್ವಾಸ್ ವಿ.ಅಮೀನ್ ಸಾರಥ್ಯದಲ್ಲಿ ರಾಗ್ ರಂಗ್ ಕಲ್ಚರಲ್ & ಸ್ಪೋರ್ಟ್ಸ್ ಕ್ಲಬ್ ವತಿಯಿಂದ “ಸ್ಟಾರ್ ನೃೆಟ್” ಸಾಂಸ್ಕೃತಿಕ ಕಾರ್ಯಕ್ರಮ

ಪಡುಬಿದ್ರಿ ರಾಗ್ ರಾಂಗ್ ಕಲ್ಚರಲ್ ಕ್ಲಬ್ (ರಿ) ವತಿಯಿಂದ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜಾತ್ರಾ ಮಹೋತ್ಸವದ ಅಂಗವಾಗಿ 20 ನೇ ವರ್ಷದ ” ಸ್ಟಾರ್ ನೃೆಟ್” ಸಾಂಸ್ಕೃತಿಕ ಕಾರ್ಯಕ್ರಮವು ವಿಶ್ವಾಸ್ ವಿ.ಅಮೀನ್ ಸಾರಥ್ಯದಲ್ಲಿ ಮಾರ್ಚ್ 21 ರಂದು ರಾತ್ರಿ 8:00 ಗಂಟೆಗೆ ದೇವಸ್ಥಾನದ ವಠಾರದಲ್ಲಿ ಅದ್ದೂರಿ ವೇದಿಕೆಯಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಗಣ್ಯಾತೀ ಗಣ್ಯರು ಹಾಗು ಕನ್ನಡ ಮತ್ತು ತುಳು ಚಿತ್ರರಂಗದ ಖ್ಯಾತ ನಟ ನಟಿಯರು ಭಾಗವಹಿಸಲಿದ್ದು, ವಿವಿಧ

ಹೆಮ್ಮಾಡಿ ಸೇವಂತಿಗೆಗೆ ಸರಕುಗಳ ಭೌಗೋಳಿಕ ಮಾನ್ಯತೆ ದೊರಕಿಸಲು ತಳಿ ವೈಶಿಷ್ಟ್ಯ ತೆ ಅಧ್ಯಯನ ಕ್ರಮದ ಪರಿಶೀಲನೆ:ಶಾಸಕ ಗಂಟಿಹೊಳೆಯವರ ಪ್ರಶ್ನೆಗೆ ತೋಟಗಾರಿಕಾ ಸಚಿವ ಉತ್ತರ

ಬೆಂಗಳೂರಿನಲ್ಲಿ ನಡೆಯುತ್ತಿರುವ ಬಜೆಟ್ ಅಧಿವೇಶನದಲ್ಲಿ ಬೈಂದೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಈ ಬಾರಿ ಪ್ರತಿಕೂಲ ಹವಾಮಾನ ಪರಿಸ್ಥಿತಿಯಿಂದ ರೈತರಿಗೆ ಸಂಕಷ್ಟ ಉಂಟಾಗಿರುವ ವಿಚಾರ ಹಾಗೂ ಹೆಮ್ಮಾಡಿ ಸೇವಂತಿಗೆ ಬೆಳೆಗಾರರ ಸಂಕಷ್ಟ ನಿವಾರಣೆಗೆ ಸರಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಉತ್ತರಿಸಿದ ರಾಜ್ಯ ತೋಟಗಾರಿಕಾ ಸಚಿವರಾದ ಶ್ರೀ ಎಸ್ ಎಸ್

ಹೆಮ್ಮಾಡಿ : ಸ್ಕೂಟಿಗೆ ಕಾರು ಡಿಕ್ಕಿ- ಮಕ್ಕಳಿಬ್ಬರು ಪಾರು

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಆರಾಟೆ ಕಡೆಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಸ್ಕೂಟಿಗೆ ಹೆಮ್ಮಾಡಿ ಹೇಮಾಪುರ ಮಠದ ಸಮಿಪ ಅದೆ ಮಾರ್ಗದಲ್ಲಿಸಾಗುತ್ತಿದ್ದ ಕಾರು ಡಿಕ್ಕಿ ಹೊಡೆದ ಪರಿಣಾಮ ನಿಯಂತ್ರಣ ಕಳೆದು ಕೊಂಡ ಸ್ಕೂಟಿ ಪಲ್ಟಿಯಾಗಿ ಹೆದ್ದಾರಿ ಬದಿಯಲ್ಲಿ ನಿಂತು ಕೊಂಡಿದ್ದ ಲಾರಿ ಅಡಿಗೆ ಸಿಲುಕಿದ ಘಟನೆ ನಡೆದಿದೆ. ಅಪಘಾತದಲ್ಲಿ ಸ್ಕೂಟಿಯಲ್ಲಿ ಚಲಿಸುತ್ತಿದ್ದ ಮಹಿಳೆ ಸಹಿತ ಮಕ್ಕಳಿಬ್ಬರಿಗೆ ಗಾಯವಾಗಿದ್ದು ಪಾರಾಗಿದ್ದಾರೆ.

ಸುಬ್ರಹ್ಮಣ್ಯ : ಚಲನಚಿತ್ರ ನಟ ಪ್ರಭುದೇವ್ ಕುಕ್ಕೆ ಸುಬ್ರಹ್ಮಣ್ಯ ಭೇಟಿ

ಚಲನಚಿತ್ರರಂಗದ ಖ್ಯಾತ ನಟ ಪ್ರಭುದೇವ ಕುಟುಂಬ ಸಮೇತ ಇಂದು ಶನಿವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವಳದಲ್ಲಿ ಮಹಾಭಿಷೇಕ ಪೂಜೆಯಲ್ಲಿ ಪಾಲ್ಗೊಂಡರು. ಪ್ರಭುದೇವ್ ಪತ್ನಿ ಹಾಗೂ ಕುಟುಂಬ ವರ್ಗದವರು ಮಹಾಭಿಷೇಕ ಪೂಜೆಯನ್ನು ನೆರವೇರಿಸಿ ಶ್ರೀ ದೇವರ ಮುಖ್ಯ ಅರ್ಚಕರಿಂದ ಪ್ರಸಾದ ಸ್ವೀಕರಿಸಿದರು. ತದನಂತರ ದೇವಳದ ಕಚೇರಿಯಲ್ಲಿ ಕಾರ್ಯನಿರ್ವಾಹಕ ಅಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಅವರು ಪ್ರಭುದೇವ ದಂಪತಿ ಯವರನ್ನು ಶಾಲು ಹೊಂದಿಸಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ನಟ ಪ್ರೇಮ್ ಹಾಗೂ ನಟಿ ಶರಣ್ಯ ಶೆಟ್ಟಿ ಭೇಟಿ

ಖ್ಯಾತ ನಟ ನೆನಪಿರಲಿ ಖ್ಯಾತಿಯ ಪ್ರೇಮ್ ಹಾಗೂ ನಟಿ ಶರಣ್ಯಶೆಟ್ಟಿ ಅವರು ಇಂದು ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದರು. ಪ್ರಾತ:ಕಾಲದಿ ಉಡುಪಿ ಶ್ರೀ ಕೃಷ್ಣನ ವಿಶ್ವರೂಪದರ್ಶನ ಪಡೆದು ಪರ್ಯಾಯ ಪುತ್ತಿಗೆ ಶ್ರೀ ಶ್ರೀ ಸುಗುಣೇಂದ್ರತೀರ್ಥರಿಂದ ಕೋಟಿಗೀತಾಲೇಖನ ಯಜ್ಞ ದೀಕ್ಷೆ ಸ್ವೀಕರಿಸಿ ತೆರಳಿದರು.